Homeಮುಖಪುಟಪಂಡಿತ್‌ ವಿವಾದ: ಭಾಗವತ್ ಹೇಳಿಕೆ ಬಳಿಕ ‘ಶ್ರೇಣೀಕೃತ ಜಾತಿ ವ್ಯವಸ್ಥೆ’ ಸಮರ್ಥಿಸಿದ ಸ್ವಾಮೀಜಿಗಳು

ಪಂಡಿತ್‌ ವಿವಾದ: ಭಾಗವತ್ ಹೇಳಿಕೆ ಬಳಿಕ ‘ಶ್ರೇಣೀಕೃತ ಜಾತಿ ವ್ಯವಸ್ಥೆ’ ಸಮರ್ಥಿಸಿದ ಸ್ವಾಮೀಜಿಗಳು

- Advertisement -
- Advertisement -

ಜಾತಿ ವ್ಯವಸ್ಥೆಯನ್ನು ಪಂಡಿತರು ಸೃಷ್ಟಿಸಿದ್ದಾರೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ ಬಳಿಕ, ಹಿಂದೂ ಧಾರ್ಮಿಕ ಮುಖಂಡರು ಜಾತಿ ವ್ಯವಸ್ಥೆಯನ್ನು ಸಮರ್ಥಿಸಿ, ಬ್ರಾಹ್ಮಣರ ಮೇಲರಿಮೆಯನ್ನು ಪ್ರದರ್ಶಿಸುತ್ತಿದ್ದಾರೆ.

ಭಕ್ತಿ ಕವಿ ಸಂತ ರವಿದಾಸ್ ಅವರ ಜಯಂತಿಯ ಸ್ಮರಣಾರ್ಥ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಭಾಗವತ್, “ಜಾತಿ ವಿಭಜನೆಯ ವ್ಯವಸ್ಥೆಯನ್ನು ಪಂಡಿತರು ಸೃಷ್ಟಿಸಿದ್ದಾರೆ” ಎಂದು ಹೇಳಿದ್ದರು.

ಸಂತ ರವಿದಾಸ್ ಅವರು ದೇವರು ಕುರಿತು ಹೇಳಿರುವುದನ್ನು ಉಲ್ಲೇಖಿಸಿ ಭಾಗವತ್ ಭಾಷಣ ಮಾಡಿದ್ದರು. “ನಾನು (ದೇವರು) ಎಲ್ಲಾ ಜೀವಿಗಳಲ್ಲಿ ಇದ್ದೇನೆ. ಹೆಸರು ಅಥವಾ ಬಣ್ಣ ಯಾವುದೇ ಇರಲಿ, ಎಲ್ಲರಿಗೂ ಒಂದೇ ಸಾಮರ್ಥ್ಯ, ಒಂದೇ ಗೌರವವಿದೆ. ಎಲ್ಲಾ ನನ್ನ ಸ್ವಂತದ್ದು. ಯಾರೂ ಮೇಲು ಅಥವಾ ಕೀಳು ಅಲ್ಲ. ಶಾಸ್ತ್ರಗಳ ಆಧಾರದ ಮೇಲೆ ಪಂಡಿತರು ಹೇಳುವುದು ಸುಳ್ಳು. ಮೇಲು-ಕೀಳು ಎಂಬ ಈ ಕಲ್ಪನೆಯಲ್ಲಿ ಸಿಲುಕಿ ದಾರಿ ತಪ್ಪಿದ್ದೇವೆ. ಈ ಭ್ರಮೆಯನ್ನು ತೊಲಗಿಸಬೇಕು”- ಎಂದು ಭಾಗವತ್ ಹೇಳಿದ್ದರು.

ಕೆಲವು ದಿನಗಳ ನಂತರ ಆರ್‌ಎಸ್‌ಎಸ್ ಪ್ರತಿಕ್ರಿಯಿಸಿ, ಭಾಗವತ್ ಅವರು ಮಠಾಠಿ ಮೇಲ್ವರ್ಗದ ಹಿಂದೂಗಳನ್ನು ಗುರಿಯಾಗಿಸಿಕೊಂಡು ಮಾತನಾಡಿಲ್ಲ ಎಂದು ತಿಳಿಸಿತು. ಭಾಗವತ್ ಅವರು ಬಳಸಿದ ‘ಪಂಡಿತ್‌’ ಎಂಬ ಪದವು ‘ವಿದ್ವಾಂಸರು’ ಎಂಬ ಅರ್ಥವನ್ನು ಹೊಂದಿದೆ ಹೊರತು, ‘ಬ್ರಾಹ್ಮಣರು’ ಎಂದಲ್ಲ ಎಂಬುದು ಆರ್‌ಎಸ್‌ಎಸ್‌ ನೀಡಿದ ಸಮರ್ಥನೆ.

ಭಾಗವತ್‌ ಅವರ ಹೇಳಿಕೆಗೆ ಸಂಬಂಧಿಸಿದಂತೆ ಪುರಿ ಶಂಕರಾಚಾರ್ಯರಾದ ನಿಶ್ಚಲಾನಂದ ಸರಸ್ವತಿ ಅವರಲ್ಲಿ ಭಕ್ತರೊಬ್ಬರು ಪ್ರಶ್ನಿಸಿದಾಗ ಸ್ವಾಮೀಜಿಯವರು ಜಾತಿ ವ್ಯವಸ್ಥೆಯನ್ನು ಸಮರ್ಥಿಸಿದ್ದು, ಭಾಗವತ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

“ಮೊದಲ ಬ್ರಾಹ್ಮಣನ ಹೆಸರು ಬ್ರಹ್ಮಜಿ. ನೀವು ಧರ್ಮಗ್ರಂಥಗಳನ್ನು ಅಧ್ಯಯನ ಮಾಡಬೇಕು. ಪ್ರಪಂಚದ ಎಲ್ಲಾ ಶಾಸ್ತ್ರಗಳು ಮತ್ತು ಕಲೆಗಳನ್ನು ಬ್ರಾಹ್ಮಣರು ಮಾತ್ರ ವಿವರಿಸುತ್ತಾರೆ. ಶಿಕ್ಷಣ, ರಕ್ಷಣೆ ಮತ್ತು ಇತರ ಸೇವೆಗಳು ಯಾವಾಗಲೂ ಸಮತೋಲನದಲ್ಲಿರಬೇಕು. ನಾವು ಸನಾತನ ವ್ಯವಸ್ಥೆಯನ್ನು ಒಪ್ಪಿಕೊಳ್ಳದಿದ್ದರೆ, ಆಗ ಅಲ್ಲಿ ಯಾವ ವ್ಯವಸ್ಥೆ ಇರಬೇಕು?” ಎಂದು ಪ್ರಶ್ನಿಸಿದ್ದಾರೆ ನಿಶ್ಚಲಾನಂದ ಸರಸ್ವತಿ.

“ಆರ್‌ಎಸ್‌ಎಸ್‌ಗೆ ಸ್ವಂತ ಜ್ಞಾನವಿಲ್ಲ. ಜಾತಿ ವ್ಯವಸ್ಥೆಯನ್ನು ಪಂಡಿತರು ಸೃಷ್ಟಿಸಿದ್ದಾರೆಯೇ ಹೊರತು ಮೂರ್ಖರಿಂದಲ್ಲ. ಇಂದಿಗೂ ಜನರು ಪ್ರಪಂಚದ ಸಮಸ್ಯೆಗಳನ್ನು ಪರಿಹರಿಸಲು ಭಾರತದ ಬ್ರಾಹ್ಮಣರ ಬಳಿಗೆ ಬರುತ್ತಾರೆ” ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಸನಾತನ ಸಮಾಜದ ರಚನೆಯ ಅನುಪಸ್ಥಿತಿಯಲ್ಲಿ, ಯುಎಸ್ ಮತ್ತು ಫ್ರಾನ್ಸ್‌ನಂತಹ ಪಾಶ್ಚಿಮಾತ್ಯ ದೇಶಗಳಲ್ಲಿ “ಪರ್ಯಾಯ ಜಾತಿ ಶ್ರೇಣಿಯನ್ನು ಸೃಷ್ಟಿಸುವ ಅಗತ್ಯವಿದೆ” ಎಂದು ಕರೆ ನೀಡಿದ್ದಾರೆ.

ಭಾಗವತ್ ಅವರ ಹೇಳಿಕೆಗಳ ವಿರುದ್ಧ ಟೀಕೆಗಳು ವ್ಯಕ್ತವಾದ ಬಳಿಕ, ಆರ್‌ಎಸ್‌ಎಸ್ ಸ್ಪಷ್ಟೀಕರಣ ನೀಡಿ ಡ್ಯಾಮೇಜ್‌ ಕಂಟ್ರೋಲ್‌ ಮಾಡಲು ಮುಂದಾಯಿತು. “ಭಾಗವತ್ ಅವರ ಮಾತುಗಳನ್ನು ಮಾಧ್ಯಮಗಳು ತಪ್ಪಾಗಿ ವರದಿ ಮಾಡಿವೆ. ಭಾಗವತ್ ಅವರು ಬಳಸಿದ ‘ಪಂಡಿತ್‌’ ಎಂಬ ಪದವು ‘ವಿದ್ವಾಂಸರು’ ಎಂಬ ಅರ್ಥವನ್ನು ಹೊಂದಿದೆಯೇ ಹೊರತು, ‘ಬ್ರಾಹ್ಮಣರು’ ಎಂದಲ್ಲ” ಎಂದಿದೆ ಆರ್‌ಎಸ್‌ಎಸ್‌.

ಇದನ್ನೂ ಓದಿರಿ: ‘ನ್ಯಾಯಾಂಗದ ಸ್ವಾತಂತ್ರ್ಯಕ್ಕೆ ದೊಡ್ಡ ಅಪಾಯ’: ಮಾಜಿ ನ್ಯಾಯಾಧೀಶರನ್ನು ರಾಜ್ಯಪಾಲರನ್ನಾಗಿಸಿದ್ದಕ್ಕೆ ಕಾಂಗ್ರೆಸ್ ಪ್ರತಿಕ್ರಿಯೆ

ಭಾಗವತ್ ಅವರ ಹೇಳಿಕೆಗಳು ಮತ್ತು ಆರ್‌ಎಸ್‌ಎಸ್‌ ನಂತರ ನೀಡಿದ ಸ್ಪಷ್ಟೀಕರಣಕ್ಕೆ ಪ್ರತಿಕ್ರಿಯಿಸಿದ ದ್ವಾರಕಾ ಪೀಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ್, “ಭಾಗವತ್ ಅವರು ತಡವಾಗಿ ಅಪಾರ ಬುದ್ಧಿವಂತಿಕೆಯನ್ನು ಸಂಪಾದಿಸಿದ್ದಾರೆ. ನೀವು ಸಂಶೋಧನೆ ಮಾಡಿದ್ದೀರಾ?… ಭಗವದ್ಗೀತೆಯಲ್ಲಿ ಶ್ರೀಕೃಷ್ಣನು ನಾಲ್ಕು ವರ್ಣಗಳನ್ನು ಸೃಷ್ಟಿಸಿದನೆಂದು ನಾವು ಓದಿದ್ದೇವೆ. ದೇವರು ಇದನ್ನು (ಜಾತಿ ವ್ಯವಸ್ಥೆ) ಸೃಷ್ಟಿಸಿಲ್ಲ, ಅವುಗಳನ್ನು ಪಂಡಿತರು ನಿರ್ಮಿಸಿದ್ದಾರೆ ಎಂದು ಭಾಗವತ್ ಹೇಳುತ್ತಿದ್ದಾರೆ. ಈಗವರು ‘ಪಂಡಿತ್’ ಎಂದರೆ ‘ವಿದ್ವಾಂಸರು’ ಹೊರತು ‘ಬ್ರಾಹ್ಮಣ’ ಅಲ್ಲ ಎನ್ನುತ್ತಿದ್ದಾರೆ. ವಿದ್ವಾಂಸರು ಏನಾದರೂ ಹೇಳಿದ್ದರೆ ನೀವು ಅದನ್ನು ಏಕೆ ನಿರಾಕರಿಸುತ್ತೀರಿ?” ಎಂದು ಕೇಳಿದ್ದಾರೆ.

ವಿವಾದಾತ್ಮಕ ಹಾಗೂ ದ್ವೇಷ ಭಾಷಣಗಳಿಗೆ ಹೆಸರಾದ ದಾಸ್ನಾ ದೇವಸ್ಥಾನದ ಯತಿ ನರಸಿಂಹಾನಂದ್ ಮತ್ತು ತಪಸ್ವಿ ಚಾವ್ನಿಯ ಮಹಂತ್ ಪರಮಹಂಸ ದಾಸ್ ಅವರು ಭಾಗವತ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ದೇಶವಿರೋಧಿ ಶಕ್ತಿಗಳು ಹಿಂದೂಗಳ ನಡುವೆ ಭಿನ್ನಾಭಿಪ್ರಾಯವನ್ನು ಸೃಷ್ಟಿಸಲು ಪಿತೂರಿ ನಡೆಸುತ್ತವೆ. ಆದರೆ ಕೆಲವು ಹಿಂದೂಗಳು ಅವರ ಪಿತೂರಿಯನ್ನು ಅರ್ಥಮಾಡಿಕೊಳ್ಳುವುದಿಲ್ಲ” ಎಂದು ಹೇಳಿಕೆಗಳನ್ನು ನೀಡಿದ್ದಾರೆ.

ವರದಿ ಕೃಪೆ: ದಿ ವೈರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...