Homeಮುಖಪುಟಪಂಡಿತ್‌ ವಿವಾದ: ಭಾಗವತ್ ಹೇಳಿಕೆ ಬಳಿಕ ‘ಶ್ರೇಣೀಕೃತ ಜಾತಿ ವ್ಯವಸ್ಥೆ’ ಸಮರ್ಥಿಸಿದ ಸ್ವಾಮೀಜಿಗಳು

ಪಂಡಿತ್‌ ವಿವಾದ: ಭಾಗವತ್ ಹೇಳಿಕೆ ಬಳಿಕ ‘ಶ್ರೇಣೀಕೃತ ಜಾತಿ ವ್ಯವಸ್ಥೆ’ ಸಮರ್ಥಿಸಿದ ಸ್ವಾಮೀಜಿಗಳು

- Advertisement -
- Advertisement -

ಜಾತಿ ವ್ಯವಸ್ಥೆಯನ್ನು ಪಂಡಿತರು ಸೃಷ್ಟಿಸಿದ್ದಾರೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ ಬಳಿಕ, ಹಿಂದೂ ಧಾರ್ಮಿಕ ಮುಖಂಡರು ಜಾತಿ ವ್ಯವಸ್ಥೆಯನ್ನು ಸಮರ್ಥಿಸಿ, ಬ್ರಾಹ್ಮಣರ ಮೇಲರಿಮೆಯನ್ನು ಪ್ರದರ್ಶಿಸುತ್ತಿದ್ದಾರೆ.

ಭಕ್ತಿ ಕವಿ ಸಂತ ರವಿದಾಸ್ ಅವರ ಜಯಂತಿಯ ಸ್ಮರಣಾರ್ಥ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಭಾಗವತ್, “ಜಾತಿ ವಿಭಜನೆಯ ವ್ಯವಸ್ಥೆಯನ್ನು ಪಂಡಿತರು ಸೃಷ್ಟಿಸಿದ್ದಾರೆ” ಎಂದು ಹೇಳಿದ್ದರು.

ಸಂತ ರವಿದಾಸ್ ಅವರು ದೇವರು ಕುರಿತು ಹೇಳಿರುವುದನ್ನು ಉಲ್ಲೇಖಿಸಿ ಭಾಗವತ್ ಭಾಷಣ ಮಾಡಿದ್ದರು. “ನಾನು (ದೇವರು) ಎಲ್ಲಾ ಜೀವಿಗಳಲ್ಲಿ ಇದ್ದೇನೆ. ಹೆಸರು ಅಥವಾ ಬಣ್ಣ ಯಾವುದೇ ಇರಲಿ, ಎಲ್ಲರಿಗೂ ಒಂದೇ ಸಾಮರ್ಥ್ಯ, ಒಂದೇ ಗೌರವವಿದೆ. ಎಲ್ಲಾ ನನ್ನ ಸ್ವಂತದ್ದು. ಯಾರೂ ಮೇಲು ಅಥವಾ ಕೀಳು ಅಲ್ಲ. ಶಾಸ್ತ್ರಗಳ ಆಧಾರದ ಮೇಲೆ ಪಂಡಿತರು ಹೇಳುವುದು ಸುಳ್ಳು. ಮೇಲು-ಕೀಳು ಎಂಬ ಈ ಕಲ್ಪನೆಯಲ್ಲಿ ಸಿಲುಕಿ ದಾರಿ ತಪ್ಪಿದ್ದೇವೆ. ಈ ಭ್ರಮೆಯನ್ನು ತೊಲಗಿಸಬೇಕು”- ಎಂದು ಭಾಗವತ್ ಹೇಳಿದ್ದರು.

ಕೆಲವು ದಿನಗಳ ನಂತರ ಆರ್‌ಎಸ್‌ಎಸ್ ಪ್ರತಿಕ್ರಿಯಿಸಿ, ಭಾಗವತ್ ಅವರು ಮಠಾಠಿ ಮೇಲ್ವರ್ಗದ ಹಿಂದೂಗಳನ್ನು ಗುರಿಯಾಗಿಸಿಕೊಂಡು ಮಾತನಾಡಿಲ್ಲ ಎಂದು ತಿಳಿಸಿತು. ಭಾಗವತ್ ಅವರು ಬಳಸಿದ ‘ಪಂಡಿತ್‌’ ಎಂಬ ಪದವು ‘ವಿದ್ವಾಂಸರು’ ಎಂಬ ಅರ್ಥವನ್ನು ಹೊಂದಿದೆ ಹೊರತು, ‘ಬ್ರಾಹ್ಮಣರು’ ಎಂದಲ್ಲ ಎಂಬುದು ಆರ್‌ಎಸ್‌ಎಸ್‌ ನೀಡಿದ ಸಮರ್ಥನೆ.

ಭಾಗವತ್‌ ಅವರ ಹೇಳಿಕೆಗೆ ಸಂಬಂಧಿಸಿದಂತೆ ಪುರಿ ಶಂಕರಾಚಾರ್ಯರಾದ ನಿಶ್ಚಲಾನಂದ ಸರಸ್ವತಿ ಅವರಲ್ಲಿ ಭಕ್ತರೊಬ್ಬರು ಪ್ರಶ್ನಿಸಿದಾಗ ಸ್ವಾಮೀಜಿಯವರು ಜಾತಿ ವ್ಯವಸ್ಥೆಯನ್ನು ಸಮರ್ಥಿಸಿದ್ದು, ಭಾಗವತ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

“ಮೊದಲ ಬ್ರಾಹ್ಮಣನ ಹೆಸರು ಬ್ರಹ್ಮಜಿ. ನೀವು ಧರ್ಮಗ್ರಂಥಗಳನ್ನು ಅಧ್ಯಯನ ಮಾಡಬೇಕು. ಪ್ರಪಂಚದ ಎಲ್ಲಾ ಶಾಸ್ತ್ರಗಳು ಮತ್ತು ಕಲೆಗಳನ್ನು ಬ್ರಾಹ್ಮಣರು ಮಾತ್ರ ವಿವರಿಸುತ್ತಾರೆ. ಶಿಕ್ಷಣ, ರಕ್ಷಣೆ ಮತ್ತು ಇತರ ಸೇವೆಗಳು ಯಾವಾಗಲೂ ಸಮತೋಲನದಲ್ಲಿರಬೇಕು. ನಾವು ಸನಾತನ ವ್ಯವಸ್ಥೆಯನ್ನು ಒಪ್ಪಿಕೊಳ್ಳದಿದ್ದರೆ, ಆಗ ಅಲ್ಲಿ ಯಾವ ವ್ಯವಸ್ಥೆ ಇರಬೇಕು?” ಎಂದು ಪ್ರಶ್ನಿಸಿದ್ದಾರೆ ನಿಶ್ಚಲಾನಂದ ಸರಸ್ವತಿ.

“ಆರ್‌ಎಸ್‌ಎಸ್‌ಗೆ ಸ್ವಂತ ಜ್ಞಾನವಿಲ್ಲ. ಜಾತಿ ವ್ಯವಸ್ಥೆಯನ್ನು ಪಂಡಿತರು ಸೃಷ್ಟಿಸಿದ್ದಾರೆಯೇ ಹೊರತು ಮೂರ್ಖರಿಂದಲ್ಲ. ಇಂದಿಗೂ ಜನರು ಪ್ರಪಂಚದ ಸಮಸ್ಯೆಗಳನ್ನು ಪರಿಹರಿಸಲು ಭಾರತದ ಬ್ರಾಹ್ಮಣರ ಬಳಿಗೆ ಬರುತ್ತಾರೆ” ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಸನಾತನ ಸಮಾಜದ ರಚನೆಯ ಅನುಪಸ್ಥಿತಿಯಲ್ಲಿ, ಯುಎಸ್ ಮತ್ತು ಫ್ರಾನ್ಸ್‌ನಂತಹ ಪಾಶ್ಚಿಮಾತ್ಯ ದೇಶಗಳಲ್ಲಿ “ಪರ್ಯಾಯ ಜಾತಿ ಶ್ರೇಣಿಯನ್ನು ಸೃಷ್ಟಿಸುವ ಅಗತ್ಯವಿದೆ” ಎಂದು ಕರೆ ನೀಡಿದ್ದಾರೆ.

ಭಾಗವತ್ ಅವರ ಹೇಳಿಕೆಗಳ ವಿರುದ್ಧ ಟೀಕೆಗಳು ವ್ಯಕ್ತವಾದ ಬಳಿಕ, ಆರ್‌ಎಸ್‌ಎಸ್ ಸ್ಪಷ್ಟೀಕರಣ ನೀಡಿ ಡ್ಯಾಮೇಜ್‌ ಕಂಟ್ರೋಲ್‌ ಮಾಡಲು ಮುಂದಾಯಿತು. “ಭಾಗವತ್ ಅವರ ಮಾತುಗಳನ್ನು ಮಾಧ್ಯಮಗಳು ತಪ್ಪಾಗಿ ವರದಿ ಮಾಡಿವೆ. ಭಾಗವತ್ ಅವರು ಬಳಸಿದ ‘ಪಂಡಿತ್‌’ ಎಂಬ ಪದವು ‘ವಿದ್ವಾಂಸರು’ ಎಂಬ ಅರ್ಥವನ್ನು ಹೊಂದಿದೆಯೇ ಹೊರತು, ‘ಬ್ರಾಹ್ಮಣರು’ ಎಂದಲ್ಲ” ಎಂದಿದೆ ಆರ್‌ಎಸ್‌ಎಸ್‌.

ಇದನ್ನೂ ಓದಿರಿ: ‘ನ್ಯಾಯಾಂಗದ ಸ್ವಾತಂತ್ರ್ಯಕ್ಕೆ ದೊಡ್ಡ ಅಪಾಯ’: ಮಾಜಿ ನ್ಯಾಯಾಧೀಶರನ್ನು ರಾಜ್ಯಪಾಲರನ್ನಾಗಿಸಿದ್ದಕ್ಕೆ ಕಾಂಗ್ರೆಸ್ ಪ್ರತಿಕ್ರಿಯೆ

ಭಾಗವತ್ ಅವರ ಹೇಳಿಕೆಗಳು ಮತ್ತು ಆರ್‌ಎಸ್‌ಎಸ್‌ ನಂತರ ನೀಡಿದ ಸ್ಪಷ್ಟೀಕರಣಕ್ಕೆ ಪ್ರತಿಕ್ರಿಯಿಸಿದ ದ್ವಾರಕಾ ಪೀಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ್, “ಭಾಗವತ್ ಅವರು ತಡವಾಗಿ ಅಪಾರ ಬುದ್ಧಿವಂತಿಕೆಯನ್ನು ಸಂಪಾದಿಸಿದ್ದಾರೆ. ನೀವು ಸಂಶೋಧನೆ ಮಾಡಿದ್ದೀರಾ?… ಭಗವದ್ಗೀತೆಯಲ್ಲಿ ಶ್ರೀಕೃಷ್ಣನು ನಾಲ್ಕು ವರ್ಣಗಳನ್ನು ಸೃಷ್ಟಿಸಿದನೆಂದು ನಾವು ಓದಿದ್ದೇವೆ. ದೇವರು ಇದನ್ನು (ಜಾತಿ ವ್ಯವಸ್ಥೆ) ಸೃಷ್ಟಿಸಿಲ್ಲ, ಅವುಗಳನ್ನು ಪಂಡಿತರು ನಿರ್ಮಿಸಿದ್ದಾರೆ ಎಂದು ಭಾಗವತ್ ಹೇಳುತ್ತಿದ್ದಾರೆ. ಈಗವರು ‘ಪಂಡಿತ್’ ಎಂದರೆ ‘ವಿದ್ವಾಂಸರು’ ಹೊರತು ‘ಬ್ರಾಹ್ಮಣ’ ಅಲ್ಲ ಎನ್ನುತ್ತಿದ್ದಾರೆ. ವಿದ್ವಾಂಸರು ಏನಾದರೂ ಹೇಳಿದ್ದರೆ ನೀವು ಅದನ್ನು ಏಕೆ ನಿರಾಕರಿಸುತ್ತೀರಿ?” ಎಂದು ಕೇಳಿದ್ದಾರೆ.

ವಿವಾದಾತ್ಮಕ ಹಾಗೂ ದ್ವೇಷ ಭಾಷಣಗಳಿಗೆ ಹೆಸರಾದ ದಾಸ್ನಾ ದೇವಸ್ಥಾನದ ಯತಿ ನರಸಿಂಹಾನಂದ್ ಮತ್ತು ತಪಸ್ವಿ ಚಾವ್ನಿಯ ಮಹಂತ್ ಪರಮಹಂಸ ದಾಸ್ ಅವರು ಭಾಗವತ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ದೇಶವಿರೋಧಿ ಶಕ್ತಿಗಳು ಹಿಂದೂಗಳ ನಡುವೆ ಭಿನ್ನಾಭಿಪ್ರಾಯವನ್ನು ಸೃಷ್ಟಿಸಲು ಪಿತೂರಿ ನಡೆಸುತ್ತವೆ. ಆದರೆ ಕೆಲವು ಹಿಂದೂಗಳು ಅವರ ಪಿತೂರಿಯನ್ನು ಅರ್ಥಮಾಡಿಕೊಳ್ಳುವುದಿಲ್ಲ” ಎಂದು ಹೇಳಿಕೆಗಳನ್ನು ನೀಡಿದ್ದಾರೆ.

ವರದಿ ಕೃಪೆ: ದಿ ವೈರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...