Homeಮುಖಪುಟಪಂಡಿತ್‌ ವಿವಾದ: ಭಾಗವತ್ ಹೇಳಿಕೆ ಬಳಿಕ ‘ಶ್ರೇಣೀಕೃತ ಜಾತಿ ವ್ಯವಸ್ಥೆ’ ಸಮರ್ಥಿಸಿದ ಸ್ವಾಮೀಜಿಗಳು

ಪಂಡಿತ್‌ ವಿವಾದ: ಭಾಗವತ್ ಹೇಳಿಕೆ ಬಳಿಕ ‘ಶ್ರೇಣೀಕೃತ ಜಾತಿ ವ್ಯವಸ್ಥೆ’ ಸಮರ್ಥಿಸಿದ ಸ್ವಾಮೀಜಿಗಳು

- Advertisement -
- Advertisement -

ಜಾತಿ ವ್ಯವಸ್ಥೆಯನ್ನು ಪಂಡಿತರು ಸೃಷ್ಟಿಸಿದ್ದಾರೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ ಬಳಿಕ, ಹಿಂದೂ ಧಾರ್ಮಿಕ ಮುಖಂಡರು ಜಾತಿ ವ್ಯವಸ್ಥೆಯನ್ನು ಸಮರ್ಥಿಸಿ, ಬ್ರಾಹ್ಮಣರ ಮೇಲರಿಮೆಯನ್ನು ಪ್ರದರ್ಶಿಸುತ್ತಿದ್ದಾರೆ.

ಭಕ್ತಿ ಕವಿ ಸಂತ ರವಿದಾಸ್ ಅವರ ಜಯಂತಿಯ ಸ್ಮರಣಾರ್ಥ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಭಾಗವತ್, “ಜಾತಿ ವಿಭಜನೆಯ ವ್ಯವಸ್ಥೆಯನ್ನು ಪಂಡಿತರು ಸೃಷ್ಟಿಸಿದ್ದಾರೆ” ಎಂದು ಹೇಳಿದ್ದರು.

ಸಂತ ರವಿದಾಸ್ ಅವರು ದೇವರು ಕುರಿತು ಹೇಳಿರುವುದನ್ನು ಉಲ್ಲೇಖಿಸಿ ಭಾಗವತ್ ಭಾಷಣ ಮಾಡಿದ್ದರು. “ನಾನು (ದೇವರು) ಎಲ್ಲಾ ಜೀವಿಗಳಲ್ಲಿ ಇದ್ದೇನೆ. ಹೆಸರು ಅಥವಾ ಬಣ್ಣ ಯಾವುದೇ ಇರಲಿ, ಎಲ್ಲರಿಗೂ ಒಂದೇ ಸಾಮರ್ಥ್ಯ, ಒಂದೇ ಗೌರವವಿದೆ. ಎಲ್ಲಾ ನನ್ನ ಸ್ವಂತದ್ದು. ಯಾರೂ ಮೇಲು ಅಥವಾ ಕೀಳು ಅಲ್ಲ. ಶಾಸ್ತ್ರಗಳ ಆಧಾರದ ಮೇಲೆ ಪಂಡಿತರು ಹೇಳುವುದು ಸುಳ್ಳು. ಮೇಲು-ಕೀಳು ಎಂಬ ಈ ಕಲ್ಪನೆಯಲ್ಲಿ ಸಿಲುಕಿ ದಾರಿ ತಪ್ಪಿದ್ದೇವೆ. ಈ ಭ್ರಮೆಯನ್ನು ತೊಲಗಿಸಬೇಕು”- ಎಂದು ಭಾಗವತ್ ಹೇಳಿದ್ದರು.

ಕೆಲವು ದಿನಗಳ ನಂತರ ಆರ್‌ಎಸ್‌ಎಸ್ ಪ್ರತಿಕ್ರಿಯಿಸಿ, ಭಾಗವತ್ ಅವರು ಮಠಾಠಿ ಮೇಲ್ವರ್ಗದ ಹಿಂದೂಗಳನ್ನು ಗುರಿಯಾಗಿಸಿಕೊಂಡು ಮಾತನಾಡಿಲ್ಲ ಎಂದು ತಿಳಿಸಿತು. ಭಾಗವತ್ ಅವರು ಬಳಸಿದ ‘ಪಂಡಿತ್‌’ ಎಂಬ ಪದವು ‘ವಿದ್ವಾಂಸರು’ ಎಂಬ ಅರ್ಥವನ್ನು ಹೊಂದಿದೆ ಹೊರತು, ‘ಬ್ರಾಹ್ಮಣರು’ ಎಂದಲ್ಲ ಎಂಬುದು ಆರ್‌ಎಸ್‌ಎಸ್‌ ನೀಡಿದ ಸಮರ್ಥನೆ.

ಭಾಗವತ್‌ ಅವರ ಹೇಳಿಕೆಗೆ ಸಂಬಂಧಿಸಿದಂತೆ ಪುರಿ ಶಂಕರಾಚಾರ್ಯರಾದ ನಿಶ್ಚಲಾನಂದ ಸರಸ್ವತಿ ಅವರಲ್ಲಿ ಭಕ್ತರೊಬ್ಬರು ಪ್ರಶ್ನಿಸಿದಾಗ ಸ್ವಾಮೀಜಿಯವರು ಜಾತಿ ವ್ಯವಸ್ಥೆಯನ್ನು ಸಮರ್ಥಿಸಿದ್ದು, ಭಾಗವತ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

“ಮೊದಲ ಬ್ರಾಹ್ಮಣನ ಹೆಸರು ಬ್ರಹ್ಮಜಿ. ನೀವು ಧರ್ಮಗ್ರಂಥಗಳನ್ನು ಅಧ್ಯಯನ ಮಾಡಬೇಕು. ಪ್ರಪಂಚದ ಎಲ್ಲಾ ಶಾಸ್ತ್ರಗಳು ಮತ್ತು ಕಲೆಗಳನ್ನು ಬ್ರಾಹ್ಮಣರು ಮಾತ್ರ ವಿವರಿಸುತ್ತಾರೆ. ಶಿಕ್ಷಣ, ರಕ್ಷಣೆ ಮತ್ತು ಇತರ ಸೇವೆಗಳು ಯಾವಾಗಲೂ ಸಮತೋಲನದಲ್ಲಿರಬೇಕು. ನಾವು ಸನಾತನ ವ್ಯವಸ್ಥೆಯನ್ನು ಒಪ್ಪಿಕೊಳ್ಳದಿದ್ದರೆ, ಆಗ ಅಲ್ಲಿ ಯಾವ ವ್ಯವಸ್ಥೆ ಇರಬೇಕು?” ಎಂದು ಪ್ರಶ್ನಿಸಿದ್ದಾರೆ ನಿಶ್ಚಲಾನಂದ ಸರಸ್ವತಿ.

“ಆರ್‌ಎಸ್‌ಎಸ್‌ಗೆ ಸ್ವಂತ ಜ್ಞಾನವಿಲ್ಲ. ಜಾತಿ ವ್ಯವಸ್ಥೆಯನ್ನು ಪಂಡಿತರು ಸೃಷ್ಟಿಸಿದ್ದಾರೆಯೇ ಹೊರತು ಮೂರ್ಖರಿಂದಲ್ಲ. ಇಂದಿಗೂ ಜನರು ಪ್ರಪಂಚದ ಸಮಸ್ಯೆಗಳನ್ನು ಪರಿಹರಿಸಲು ಭಾರತದ ಬ್ರಾಹ್ಮಣರ ಬಳಿಗೆ ಬರುತ್ತಾರೆ” ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಸನಾತನ ಸಮಾಜದ ರಚನೆಯ ಅನುಪಸ್ಥಿತಿಯಲ್ಲಿ, ಯುಎಸ್ ಮತ್ತು ಫ್ರಾನ್ಸ್‌ನಂತಹ ಪಾಶ್ಚಿಮಾತ್ಯ ದೇಶಗಳಲ್ಲಿ “ಪರ್ಯಾಯ ಜಾತಿ ಶ್ರೇಣಿಯನ್ನು ಸೃಷ್ಟಿಸುವ ಅಗತ್ಯವಿದೆ” ಎಂದು ಕರೆ ನೀಡಿದ್ದಾರೆ.

ಭಾಗವತ್ ಅವರ ಹೇಳಿಕೆಗಳ ವಿರುದ್ಧ ಟೀಕೆಗಳು ವ್ಯಕ್ತವಾದ ಬಳಿಕ, ಆರ್‌ಎಸ್‌ಎಸ್ ಸ್ಪಷ್ಟೀಕರಣ ನೀಡಿ ಡ್ಯಾಮೇಜ್‌ ಕಂಟ್ರೋಲ್‌ ಮಾಡಲು ಮುಂದಾಯಿತು. “ಭಾಗವತ್ ಅವರ ಮಾತುಗಳನ್ನು ಮಾಧ್ಯಮಗಳು ತಪ್ಪಾಗಿ ವರದಿ ಮಾಡಿವೆ. ಭಾಗವತ್ ಅವರು ಬಳಸಿದ ‘ಪಂಡಿತ್‌’ ಎಂಬ ಪದವು ‘ವಿದ್ವಾಂಸರು’ ಎಂಬ ಅರ್ಥವನ್ನು ಹೊಂದಿದೆಯೇ ಹೊರತು, ‘ಬ್ರಾಹ್ಮಣರು’ ಎಂದಲ್ಲ” ಎಂದಿದೆ ಆರ್‌ಎಸ್‌ಎಸ್‌.

ಇದನ್ನೂ ಓದಿರಿ: ‘ನ್ಯಾಯಾಂಗದ ಸ್ವಾತಂತ್ರ್ಯಕ್ಕೆ ದೊಡ್ಡ ಅಪಾಯ’: ಮಾಜಿ ನ್ಯಾಯಾಧೀಶರನ್ನು ರಾಜ್ಯಪಾಲರನ್ನಾಗಿಸಿದ್ದಕ್ಕೆ ಕಾಂಗ್ರೆಸ್ ಪ್ರತಿಕ್ರಿಯೆ

ಭಾಗವತ್ ಅವರ ಹೇಳಿಕೆಗಳು ಮತ್ತು ಆರ್‌ಎಸ್‌ಎಸ್‌ ನಂತರ ನೀಡಿದ ಸ್ಪಷ್ಟೀಕರಣಕ್ಕೆ ಪ್ರತಿಕ್ರಿಯಿಸಿದ ದ್ವಾರಕಾ ಪೀಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ್, “ಭಾಗವತ್ ಅವರು ತಡವಾಗಿ ಅಪಾರ ಬುದ್ಧಿವಂತಿಕೆಯನ್ನು ಸಂಪಾದಿಸಿದ್ದಾರೆ. ನೀವು ಸಂಶೋಧನೆ ಮಾಡಿದ್ದೀರಾ?… ಭಗವದ್ಗೀತೆಯಲ್ಲಿ ಶ್ರೀಕೃಷ್ಣನು ನಾಲ್ಕು ವರ್ಣಗಳನ್ನು ಸೃಷ್ಟಿಸಿದನೆಂದು ನಾವು ಓದಿದ್ದೇವೆ. ದೇವರು ಇದನ್ನು (ಜಾತಿ ವ್ಯವಸ್ಥೆ) ಸೃಷ್ಟಿಸಿಲ್ಲ, ಅವುಗಳನ್ನು ಪಂಡಿತರು ನಿರ್ಮಿಸಿದ್ದಾರೆ ಎಂದು ಭಾಗವತ್ ಹೇಳುತ್ತಿದ್ದಾರೆ. ಈಗವರು ‘ಪಂಡಿತ್’ ಎಂದರೆ ‘ವಿದ್ವಾಂಸರು’ ಹೊರತು ‘ಬ್ರಾಹ್ಮಣ’ ಅಲ್ಲ ಎನ್ನುತ್ತಿದ್ದಾರೆ. ವಿದ್ವಾಂಸರು ಏನಾದರೂ ಹೇಳಿದ್ದರೆ ನೀವು ಅದನ್ನು ಏಕೆ ನಿರಾಕರಿಸುತ್ತೀರಿ?” ಎಂದು ಕೇಳಿದ್ದಾರೆ.

ವಿವಾದಾತ್ಮಕ ಹಾಗೂ ದ್ವೇಷ ಭಾಷಣಗಳಿಗೆ ಹೆಸರಾದ ದಾಸ್ನಾ ದೇವಸ್ಥಾನದ ಯತಿ ನರಸಿಂಹಾನಂದ್ ಮತ್ತು ತಪಸ್ವಿ ಚಾವ್ನಿಯ ಮಹಂತ್ ಪರಮಹಂಸ ದಾಸ್ ಅವರು ಭಾಗವತ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ದೇಶವಿರೋಧಿ ಶಕ್ತಿಗಳು ಹಿಂದೂಗಳ ನಡುವೆ ಭಿನ್ನಾಭಿಪ್ರಾಯವನ್ನು ಸೃಷ್ಟಿಸಲು ಪಿತೂರಿ ನಡೆಸುತ್ತವೆ. ಆದರೆ ಕೆಲವು ಹಿಂದೂಗಳು ಅವರ ಪಿತೂರಿಯನ್ನು ಅರ್ಥಮಾಡಿಕೊಳ್ಳುವುದಿಲ್ಲ” ಎಂದು ಹೇಳಿಕೆಗಳನ್ನು ನೀಡಿದ್ದಾರೆ.

ವರದಿ ಕೃಪೆ: ದಿ ವೈರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...