Homeಚಳವಳಿಪಠ್ಯದಲ್ಲಿ ಜಾತಿ, ಪಕ್ಷ ರಾಜಕಾರಣ ಹೆಡೆಯಾಡಬಾರದು: ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳ ಆಕ್ರೋಶ

ಪಠ್ಯದಲ್ಲಿ ಜಾತಿ, ಪಕ್ಷ ರಾಜಕಾರಣ ಹೆಡೆಯಾಡಬಾರದು: ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳ ಆಕ್ರೋಶ

ತಕ್ಷಣ ಇಡೀ ಪಠ್ಯವನ್ನೇ ತಡೆಹಿಡಿದು ಎಲ್ಲಿಯೂ ದೋಷವಾಗದಂತೆ ಪರಿಷ್ಕರಣೆ ಮಾಡಬೇಕು. ಇಲ್ಲವೇ ಹಿಂದಿನ ಪಠ್ಯವನ್ನೇ ಮುಂದುವರಿಸಬೇಕು. ಇಲ್ಲದಿದ್ದರೆ ನಾಡಿನಾದ್ಯಂತ ಹೋರಾಟ ನಡೆಯುವುದು ಅನಿವಾರ್ಯ

- Advertisement -
- Advertisement -

ಪಠ್ಯ ಪುಸ್ತಕ ಪುನರ್ ಪರಿಷ್ಕರಣೆಗೆ ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು ಆಕ್ರೋಶ ವ್ಯಕ್ತಪಡಿಸಿದ್ದರು, ಪಠ್ಯದಲ್ಲಿ ಜಾತಿ, ಪಕ್ಷ ರಾಜಕಾರಣ ಹೆಡೆಯಾಡಬಾರದು ಎಂದು ಆಗ್ರಹಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಪತ್ರ ಬರೆದಿರುವ ಅವರು, “ಪಠ್ಯದಲ್ಲಿ ಸಾಕಷ್ಟು ಬದಲಾವಣೆ ಮಾಡಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಪರಿಶೀಲಿಸೋಣ ಎಂದರೆ ಎಲ್ಲಿಯೂ ಪಠ್ಯ ಪುಸ್ತಕಗಳೇ ಸಿಗುತ್ತಿಲ್ಲ. ಶಾಲೆ ಆರಂಭವಾಗಿ 15 ದಿನ ಕಳೆದರೂ ಮಕ್ಕಳಿಗೆ ಪುಸ್ತಕ ಸಿಕ್ಕಿಲ. ಹೀಗಾದಾಗ ಶಿಕ್ಷಕರು ಹೇಗೆ ಪಾಠ ಮಾಡಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈಗಿನ ಪಠ್ಯ ಪರಿಷ್ಕರಣೆಯ ಸಮಿತಿಯಲ್ಲಿ ಒಂದು ವರ್ಗಕ್ಕೆ ಸೇರಿರುವವರೆ ಇರುವುದು ಸರಿಯಲ್ಲ. ಬದಲಿಗೆ ಶಿಕ್ಷಣ ಕ್ಷೇತ್ರದಲ್ಲಿ ದುಡಿದವರು, ಶಿಕ್ಷಣ ತಜ್ಞರು, ಸಾಮಾಜಿಕ ಕಾಳಜಿಯುಳ್ಳ ದೂರದೃಷ್ಟಿಯುಳ್ಳವರು ಸಮಿತಿಯಲ್ಲಿ ಇರಬೇಕಾಗಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.

9ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಬಸವಣ್ಣನವರ ಪಾಠದಲ್ಲಿ ನೈಜ ವಿಚಾರಗಳನ್ನು ಕಿತ್ತುಹಾಕಿ ಸುಳ್ಳುಗಳನ್ನು ಬಿತ್ತಲಾಗಿದೆ ಎಂದು ಸ್ವಾಮೀಜಿಗಳು ದೂರಿದ್ದಾರೆ. ಕಳೆದ ವರ್ಷದ ಪಾಠದಲ್ಲಿ “ಮಧ್ಯಕಾಲದ ಕರ್ನಾಟಕದ ಸಮಾಜವನ್ನು ಸುಧಾರಿಸಲು ಹೋರಾಡಿದ ಆದ್ಯ ಪ್ರವರ್ತಕರಲ್ಲಿ ಬಸವೇಶ್ವರರು ಒಬ್ಬರಾಗಿದ್ದಾರೆ. ವೈದಿಕ ಮೂಲ ಧರ್ಮದಲ್ಲಿ ಬೇರೂರಿದ್ದ ಅಸಂಖ್ಯ ಧಾರ್ಮಿಕ ಆಚರಣಾ ವಿಧಿ ವಿಧಾನಗಳನ್ನು ಬದಿಗೊತ್ತಿ ಮಾನವೀಯ ಮೌಲ್ಯ ಆಧಾರಿತ ಸರಳ ವೀರಶೈವ ಸಿದ್ಧಾಂತವನ್ನು ಬಸವೇಶ್ವರರು ಹಾಗೂ ಅವರ ಅನುಯಾಯಿಗಳಾದ ಪ್ರಚಾರಪಡಿಸಿದರು. ‘ಜಾತಿವ್ಯವಸ್ಥೆಯ ಕಡುವಿರೋಧಿಯಾಗಿದ್ದ ಬಸವೇಶ್ವರರು ತಮ್ಮ ಉಪನಯನದ ನಂತರ ಯಜ್ಞೋಪವೀತವನ್ನು ಕಿತ್ತೆಸೆದು ಕೂಡಲಸಂಗಮಕ್ಕೆ ನಡೆದರು. “ಉನ್ನತಾಧಿಕಾರದಲ್ಲಿದ್ದರೂ ಹಣ, ಅಧಿಕಾರ, ಅಧಿಪತ್ಯ ಇವ್ಯಾವುದರಿಂದಲೂ ಇವರು ವಿಚಲಿತರಾಗಲಿಲ್ಲ. ತಮ್ಮ ಇಡೀ ಜೀವನವನ್ನು ಸಮಾಜ ಮತ್ತು ಧರ್ಮದಲ್ಲಿನ ಅನಿಷ್ಟ ಪದ್ಧತಿಗಳನ್ನು ತೊಡೆದುಹಾಕಲು ಮೀಸಲಿರಿಸಿದರು. ಸಮಾಜ, ಧರ್ಮದ ಪುನಶ್ಚತನಕ್ಕೆ ಟೊಂಕಕಟ್ಟಿದರು’. ‘ಸ್ವಾವಲಂಬನೆಯ ತತ್ವವನ್ನು, ‘ದೇಹವೇ ದೇಗುಲ’, ‘ಈ ಬಗೆಯ ಸಂವೇದನೆಗಳು ಇಂದಿಗೂ ನಮ್ಮ ಸಮಾಜಕ್ಕೆ ದಾರಿದೀಪಗಳಾಗಿವೆ’,`ಅವರು ಸರಳ ಕನ್ನಡವನ್ನು ಬಳಸುವ ಮೂಲಕ ತಮ್ಮ ಚಳವಳಿಯನ್ನು ಜನಮುಖಿಯಾಗಿಸಿದರು. ಇಂಥ ಅನೇಕ ಮಹತ್ವದ ಅಂಶಗಳನ್ನೇ ತೆಗೆದುಹಾಕಿ ತಮಗೆ ಬೇಕಾದಂತೆ ತಿರುಚಿದ್ದಾರೆ. ಬಸವಣ್ಣನವರ ಮತ್ತು ಅವರು ಪ್ರತಿಪಾದಿಸಿದ ಲಿಂಗಾಯತ ಧರ್ಮದ ಬಗ್ಗೆ ತಪ್ಪು ಅಭಿಪ್ರಾಯ ಬರುವಂತೆ ಮಾಡಿದ್ದಾರೆ” ಎಂದು ಶ್ರೀಗಳು ಕಿಡಿಕಾರಿದ್ದಾರೆ.

ಮುಂದುವರಿದು ಈ ಬದಲಾವಣೆ ನಿಜಕ್ಕೂ ಖಂಡನಾರ್ಹ. ಬಸವಣ್ಣನವರ ಶುದ್ಧ, ಪಾರದರ್ಶಕ ಬದುಕಿಗೆ ಕಳಂಕ ತಂದಂತೆ, ‘ವಚನಕಾರರು ವೀರಶೈವ ಮತವನ್ನು ಸುಧಾರಿಸಿದರು’ ಎನ್ನುವುದು ಶುದ್ಧ ಸುಳ್ಳು. ಅವರು ‘ಲಿಂಗಾಯತ ಧರ್ಮವನ್ನು ಜಾರಿಯಲ್ಲಿ ತಂದರು’ ಎಂದಾಗಬೇಕಿತ್ತು. ಇಂತಹ ಹಲವು ದೋಷಗಳಾಗಿವೆ. ಆದುದರಿಂದ ತಕ್ಷಣ ಇಡೀ ಪಠ್ಯವನ್ನೇ ತಡೆಹಿಡಿದು ಎಲ್ಲಿಯೂ ದೋಷವಾಗದಂತೆ ಪರಿಷ್ಕರಣೆ ಮಾಡಬೇಕು. ಇಲ್ಲವೇ ಹಿಂದಿನ ಪಠ್ಯವನ್ನೇ ಮುಂದುವರಿಸಬೇಕು. ಈ ಬಗ್ಗೆ ಕೂಡಲೇ ಕ್ರಮ ಜರುಗಿಸದಿದ್ದರೆ ನಾಡಿನಾದ್ಯಂತ ಹೋರಾಟ ನಡೆಯುವುದು ಅನಿವಾರ್ಯವಾಗಬಹುದು ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಪಠ್ಯದಲ್ಲಿ ನನ್ನ ಕವಿತೆಯನ್ನೂ ಕೈಬಿಡಿ: ಶಿಕ್ಷಣ ಸಚಿವರಿಗೆ ಎಸ್‌.ಜಿ.ಸಿದ್ದರಾಮಯ್ಯ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...