Homeಚಳವಳಿಪಠ್ಯದಲ್ಲಿ ಜಾತಿ, ಪಕ್ಷ ರಾಜಕಾರಣ ಹೆಡೆಯಾಡಬಾರದು: ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳ ಆಕ್ರೋಶ

ಪಠ್ಯದಲ್ಲಿ ಜಾತಿ, ಪಕ್ಷ ರಾಜಕಾರಣ ಹೆಡೆಯಾಡಬಾರದು: ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳ ಆಕ್ರೋಶ

ತಕ್ಷಣ ಇಡೀ ಪಠ್ಯವನ್ನೇ ತಡೆಹಿಡಿದು ಎಲ್ಲಿಯೂ ದೋಷವಾಗದಂತೆ ಪರಿಷ್ಕರಣೆ ಮಾಡಬೇಕು. ಇಲ್ಲವೇ ಹಿಂದಿನ ಪಠ್ಯವನ್ನೇ ಮುಂದುವರಿಸಬೇಕು. ಇಲ್ಲದಿದ್ದರೆ ನಾಡಿನಾದ್ಯಂತ ಹೋರಾಟ ನಡೆಯುವುದು ಅನಿವಾರ್ಯ

- Advertisement -
- Advertisement -

ಪಠ್ಯ ಪುಸ್ತಕ ಪುನರ್ ಪರಿಷ್ಕರಣೆಗೆ ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು ಆಕ್ರೋಶ ವ್ಯಕ್ತಪಡಿಸಿದ್ದರು, ಪಠ್ಯದಲ್ಲಿ ಜಾತಿ, ಪಕ್ಷ ರಾಜಕಾರಣ ಹೆಡೆಯಾಡಬಾರದು ಎಂದು ಆಗ್ರಹಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಪತ್ರ ಬರೆದಿರುವ ಅವರು, “ಪಠ್ಯದಲ್ಲಿ ಸಾಕಷ್ಟು ಬದಲಾವಣೆ ಮಾಡಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಪರಿಶೀಲಿಸೋಣ ಎಂದರೆ ಎಲ್ಲಿಯೂ ಪಠ್ಯ ಪುಸ್ತಕಗಳೇ ಸಿಗುತ್ತಿಲ್ಲ. ಶಾಲೆ ಆರಂಭವಾಗಿ 15 ದಿನ ಕಳೆದರೂ ಮಕ್ಕಳಿಗೆ ಪುಸ್ತಕ ಸಿಕ್ಕಿಲ. ಹೀಗಾದಾಗ ಶಿಕ್ಷಕರು ಹೇಗೆ ಪಾಠ ಮಾಡಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈಗಿನ ಪಠ್ಯ ಪರಿಷ್ಕರಣೆಯ ಸಮಿತಿಯಲ್ಲಿ ಒಂದು ವರ್ಗಕ್ಕೆ ಸೇರಿರುವವರೆ ಇರುವುದು ಸರಿಯಲ್ಲ. ಬದಲಿಗೆ ಶಿಕ್ಷಣ ಕ್ಷೇತ್ರದಲ್ಲಿ ದುಡಿದವರು, ಶಿಕ್ಷಣ ತಜ್ಞರು, ಸಾಮಾಜಿಕ ಕಾಳಜಿಯುಳ್ಳ ದೂರದೃಷ್ಟಿಯುಳ್ಳವರು ಸಮಿತಿಯಲ್ಲಿ ಇರಬೇಕಾಗಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.

9ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಬಸವಣ್ಣನವರ ಪಾಠದಲ್ಲಿ ನೈಜ ವಿಚಾರಗಳನ್ನು ಕಿತ್ತುಹಾಕಿ ಸುಳ್ಳುಗಳನ್ನು ಬಿತ್ತಲಾಗಿದೆ ಎಂದು ಸ್ವಾಮೀಜಿಗಳು ದೂರಿದ್ದಾರೆ. ಕಳೆದ ವರ್ಷದ ಪಾಠದಲ್ಲಿ “ಮಧ್ಯಕಾಲದ ಕರ್ನಾಟಕದ ಸಮಾಜವನ್ನು ಸುಧಾರಿಸಲು ಹೋರಾಡಿದ ಆದ್ಯ ಪ್ರವರ್ತಕರಲ್ಲಿ ಬಸವೇಶ್ವರರು ಒಬ್ಬರಾಗಿದ್ದಾರೆ. ವೈದಿಕ ಮೂಲ ಧರ್ಮದಲ್ಲಿ ಬೇರೂರಿದ್ದ ಅಸಂಖ್ಯ ಧಾರ್ಮಿಕ ಆಚರಣಾ ವಿಧಿ ವಿಧಾನಗಳನ್ನು ಬದಿಗೊತ್ತಿ ಮಾನವೀಯ ಮೌಲ್ಯ ಆಧಾರಿತ ಸರಳ ವೀರಶೈವ ಸಿದ್ಧಾಂತವನ್ನು ಬಸವೇಶ್ವರರು ಹಾಗೂ ಅವರ ಅನುಯಾಯಿಗಳಾದ ಪ್ರಚಾರಪಡಿಸಿದರು. ‘ಜಾತಿವ್ಯವಸ್ಥೆಯ ಕಡುವಿರೋಧಿಯಾಗಿದ್ದ ಬಸವೇಶ್ವರರು ತಮ್ಮ ಉಪನಯನದ ನಂತರ ಯಜ್ಞೋಪವೀತವನ್ನು ಕಿತ್ತೆಸೆದು ಕೂಡಲಸಂಗಮಕ್ಕೆ ನಡೆದರು. “ಉನ್ನತಾಧಿಕಾರದಲ್ಲಿದ್ದರೂ ಹಣ, ಅಧಿಕಾರ, ಅಧಿಪತ್ಯ ಇವ್ಯಾವುದರಿಂದಲೂ ಇವರು ವಿಚಲಿತರಾಗಲಿಲ್ಲ. ತಮ್ಮ ಇಡೀ ಜೀವನವನ್ನು ಸಮಾಜ ಮತ್ತು ಧರ್ಮದಲ್ಲಿನ ಅನಿಷ್ಟ ಪದ್ಧತಿಗಳನ್ನು ತೊಡೆದುಹಾಕಲು ಮೀಸಲಿರಿಸಿದರು. ಸಮಾಜ, ಧರ್ಮದ ಪುನಶ್ಚತನಕ್ಕೆ ಟೊಂಕಕಟ್ಟಿದರು’. ‘ಸ್ವಾವಲಂಬನೆಯ ತತ್ವವನ್ನು, ‘ದೇಹವೇ ದೇಗುಲ’, ‘ಈ ಬಗೆಯ ಸಂವೇದನೆಗಳು ಇಂದಿಗೂ ನಮ್ಮ ಸಮಾಜಕ್ಕೆ ದಾರಿದೀಪಗಳಾಗಿವೆ’,`ಅವರು ಸರಳ ಕನ್ನಡವನ್ನು ಬಳಸುವ ಮೂಲಕ ತಮ್ಮ ಚಳವಳಿಯನ್ನು ಜನಮುಖಿಯಾಗಿಸಿದರು. ಇಂಥ ಅನೇಕ ಮಹತ್ವದ ಅಂಶಗಳನ್ನೇ ತೆಗೆದುಹಾಕಿ ತಮಗೆ ಬೇಕಾದಂತೆ ತಿರುಚಿದ್ದಾರೆ. ಬಸವಣ್ಣನವರ ಮತ್ತು ಅವರು ಪ್ರತಿಪಾದಿಸಿದ ಲಿಂಗಾಯತ ಧರ್ಮದ ಬಗ್ಗೆ ತಪ್ಪು ಅಭಿಪ್ರಾಯ ಬರುವಂತೆ ಮಾಡಿದ್ದಾರೆ” ಎಂದು ಶ್ರೀಗಳು ಕಿಡಿಕಾರಿದ್ದಾರೆ.

ಮುಂದುವರಿದು ಈ ಬದಲಾವಣೆ ನಿಜಕ್ಕೂ ಖಂಡನಾರ್ಹ. ಬಸವಣ್ಣನವರ ಶುದ್ಧ, ಪಾರದರ್ಶಕ ಬದುಕಿಗೆ ಕಳಂಕ ತಂದಂತೆ, ‘ವಚನಕಾರರು ವೀರಶೈವ ಮತವನ್ನು ಸುಧಾರಿಸಿದರು’ ಎನ್ನುವುದು ಶುದ್ಧ ಸುಳ್ಳು. ಅವರು ‘ಲಿಂಗಾಯತ ಧರ್ಮವನ್ನು ಜಾರಿಯಲ್ಲಿ ತಂದರು’ ಎಂದಾಗಬೇಕಿತ್ತು. ಇಂತಹ ಹಲವು ದೋಷಗಳಾಗಿವೆ. ಆದುದರಿಂದ ತಕ್ಷಣ ಇಡೀ ಪಠ್ಯವನ್ನೇ ತಡೆಹಿಡಿದು ಎಲ್ಲಿಯೂ ದೋಷವಾಗದಂತೆ ಪರಿಷ್ಕರಣೆ ಮಾಡಬೇಕು. ಇಲ್ಲವೇ ಹಿಂದಿನ ಪಠ್ಯವನ್ನೇ ಮುಂದುವರಿಸಬೇಕು. ಈ ಬಗ್ಗೆ ಕೂಡಲೇ ಕ್ರಮ ಜರುಗಿಸದಿದ್ದರೆ ನಾಡಿನಾದ್ಯಂತ ಹೋರಾಟ ನಡೆಯುವುದು ಅನಿವಾರ್ಯವಾಗಬಹುದು ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಪಠ್ಯದಲ್ಲಿ ನನ್ನ ಕವಿತೆಯನ್ನೂ ಕೈಬಿಡಿ: ಶಿಕ್ಷಣ ಸಚಿವರಿಗೆ ಎಸ್‌.ಜಿ.ಸಿದ್ದರಾಮಯ್ಯ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...