Homeಚಳವಳಿಪಠ್ಯದಲ್ಲಿ ಜಾತಿ, ಪಕ್ಷ ರಾಜಕಾರಣ ಹೆಡೆಯಾಡಬಾರದು: ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳ ಆಕ್ರೋಶ

ಪಠ್ಯದಲ್ಲಿ ಜಾತಿ, ಪಕ್ಷ ರಾಜಕಾರಣ ಹೆಡೆಯಾಡಬಾರದು: ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳ ಆಕ್ರೋಶ

ತಕ್ಷಣ ಇಡೀ ಪಠ್ಯವನ್ನೇ ತಡೆಹಿಡಿದು ಎಲ್ಲಿಯೂ ದೋಷವಾಗದಂತೆ ಪರಿಷ್ಕರಣೆ ಮಾಡಬೇಕು. ಇಲ್ಲವೇ ಹಿಂದಿನ ಪಠ್ಯವನ್ನೇ ಮುಂದುವರಿಸಬೇಕು. ಇಲ್ಲದಿದ್ದರೆ ನಾಡಿನಾದ್ಯಂತ ಹೋರಾಟ ನಡೆಯುವುದು ಅನಿವಾರ್ಯ

- Advertisement -
- Advertisement -

ಪಠ್ಯ ಪುಸ್ತಕ ಪುನರ್ ಪರಿಷ್ಕರಣೆಗೆ ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು ಆಕ್ರೋಶ ವ್ಯಕ್ತಪಡಿಸಿದ್ದರು, ಪಠ್ಯದಲ್ಲಿ ಜಾತಿ, ಪಕ್ಷ ರಾಜಕಾರಣ ಹೆಡೆಯಾಡಬಾರದು ಎಂದು ಆಗ್ರಹಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಪತ್ರ ಬರೆದಿರುವ ಅವರು, “ಪಠ್ಯದಲ್ಲಿ ಸಾಕಷ್ಟು ಬದಲಾವಣೆ ಮಾಡಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಪರಿಶೀಲಿಸೋಣ ಎಂದರೆ ಎಲ್ಲಿಯೂ ಪಠ್ಯ ಪುಸ್ತಕಗಳೇ ಸಿಗುತ್ತಿಲ್ಲ. ಶಾಲೆ ಆರಂಭವಾಗಿ 15 ದಿನ ಕಳೆದರೂ ಮಕ್ಕಳಿಗೆ ಪುಸ್ತಕ ಸಿಕ್ಕಿಲ. ಹೀಗಾದಾಗ ಶಿಕ್ಷಕರು ಹೇಗೆ ಪಾಠ ಮಾಡಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈಗಿನ ಪಠ್ಯ ಪರಿಷ್ಕರಣೆಯ ಸಮಿತಿಯಲ್ಲಿ ಒಂದು ವರ್ಗಕ್ಕೆ ಸೇರಿರುವವರೆ ಇರುವುದು ಸರಿಯಲ್ಲ. ಬದಲಿಗೆ ಶಿಕ್ಷಣ ಕ್ಷೇತ್ರದಲ್ಲಿ ದುಡಿದವರು, ಶಿಕ್ಷಣ ತಜ್ಞರು, ಸಾಮಾಜಿಕ ಕಾಳಜಿಯುಳ್ಳ ದೂರದೃಷ್ಟಿಯುಳ್ಳವರು ಸಮಿತಿಯಲ್ಲಿ ಇರಬೇಕಾಗಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.

9ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಬಸವಣ್ಣನವರ ಪಾಠದಲ್ಲಿ ನೈಜ ವಿಚಾರಗಳನ್ನು ಕಿತ್ತುಹಾಕಿ ಸುಳ್ಳುಗಳನ್ನು ಬಿತ್ತಲಾಗಿದೆ ಎಂದು ಸ್ವಾಮೀಜಿಗಳು ದೂರಿದ್ದಾರೆ. ಕಳೆದ ವರ್ಷದ ಪಾಠದಲ್ಲಿ “ಮಧ್ಯಕಾಲದ ಕರ್ನಾಟಕದ ಸಮಾಜವನ್ನು ಸುಧಾರಿಸಲು ಹೋರಾಡಿದ ಆದ್ಯ ಪ್ರವರ್ತಕರಲ್ಲಿ ಬಸವೇಶ್ವರರು ಒಬ್ಬರಾಗಿದ್ದಾರೆ. ವೈದಿಕ ಮೂಲ ಧರ್ಮದಲ್ಲಿ ಬೇರೂರಿದ್ದ ಅಸಂಖ್ಯ ಧಾರ್ಮಿಕ ಆಚರಣಾ ವಿಧಿ ವಿಧಾನಗಳನ್ನು ಬದಿಗೊತ್ತಿ ಮಾನವೀಯ ಮೌಲ್ಯ ಆಧಾರಿತ ಸರಳ ವೀರಶೈವ ಸಿದ್ಧಾಂತವನ್ನು ಬಸವೇಶ್ವರರು ಹಾಗೂ ಅವರ ಅನುಯಾಯಿಗಳಾದ ಪ್ರಚಾರಪಡಿಸಿದರು. ‘ಜಾತಿವ್ಯವಸ್ಥೆಯ ಕಡುವಿರೋಧಿಯಾಗಿದ್ದ ಬಸವೇಶ್ವರರು ತಮ್ಮ ಉಪನಯನದ ನಂತರ ಯಜ್ಞೋಪವೀತವನ್ನು ಕಿತ್ತೆಸೆದು ಕೂಡಲಸಂಗಮಕ್ಕೆ ನಡೆದರು. “ಉನ್ನತಾಧಿಕಾರದಲ್ಲಿದ್ದರೂ ಹಣ, ಅಧಿಕಾರ, ಅಧಿಪತ್ಯ ಇವ್ಯಾವುದರಿಂದಲೂ ಇವರು ವಿಚಲಿತರಾಗಲಿಲ್ಲ. ತಮ್ಮ ಇಡೀ ಜೀವನವನ್ನು ಸಮಾಜ ಮತ್ತು ಧರ್ಮದಲ್ಲಿನ ಅನಿಷ್ಟ ಪದ್ಧತಿಗಳನ್ನು ತೊಡೆದುಹಾಕಲು ಮೀಸಲಿರಿಸಿದರು. ಸಮಾಜ, ಧರ್ಮದ ಪುನಶ್ಚತನಕ್ಕೆ ಟೊಂಕಕಟ್ಟಿದರು’. ‘ಸ್ವಾವಲಂಬನೆಯ ತತ್ವವನ್ನು, ‘ದೇಹವೇ ದೇಗುಲ’, ‘ಈ ಬಗೆಯ ಸಂವೇದನೆಗಳು ಇಂದಿಗೂ ನಮ್ಮ ಸಮಾಜಕ್ಕೆ ದಾರಿದೀಪಗಳಾಗಿವೆ’,`ಅವರು ಸರಳ ಕನ್ನಡವನ್ನು ಬಳಸುವ ಮೂಲಕ ತಮ್ಮ ಚಳವಳಿಯನ್ನು ಜನಮುಖಿಯಾಗಿಸಿದರು. ಇಂಥ ಅನೇಕ ಮಹತ್ವದ ಅಂಶಗಳನ್ನೇ ತೆಗೆದುಹಾಕಿ ತಮಗೆ ಬೇಕಾದಂತೆ ತಿರುಚಿದ್ದಾರೆ. ಬಸವಣ್ಣನವರ ಮತ್ತು ಅವರು ಪ್ರತಿಪಾದಿಸಿದ ಲಿಂಗಾಯತ ಧರ್ಮದ ಬಗ್ಗೆ ತಪ್ಪು ಅಭಿಪ್ರಾಯ ಬರುವಂತೆ ಮಾಡಿದ್ದಾರೆ” ಎಂದು ಶ್ರೀಗಳು ಕಿಡಿಕಾರಿದ್ದಾರೆ.

ಮುಂದುವರಿದು ಈ ಬದಲಾವಣೆ ನಿಜಕ್ಕೂ ಖಂಡನಾರ್ಹ. ಬಸವಣ್ಣನವರ ಶುದ್ಧ, ಪಾರದರ್ಶಕ ಬದುಕಿಗೆ ಕಳಂಕ ತಂದಂತೆ, ‘ವಚನಕಾರರು ವೀರಶೈವ ಮತವನ್ನು ಸುಧಾರಿಸಿದರು’ ಎನ್ನುವುದು ಶುದ್ಧ ಸುಳ್ಳು. ಅವರು ‘ಲಿಂಗಾಯತ ಧರ್ಮವನ್ನು ಜಾರಿಯಲ್ಲಿ ತಂದರು’ ಎಂದಾಗಬೇಕಿತ್ತು. ಇಂತಹ ಹಲವು ದೋಷಗಳಾಗಿವೆ. ಆದುದರಿಂದ ತಕ್ಷಣ ಇಡೀ ಪಠ್ಯವನ್ನೇ ತಡೆಹಿಡಿದು ಎಲ್ಲಿಯೂ ದೋಷವಾಗದಂತೆ ಪರಿಷ್ಕರಣೆ ಮಾಡಬೇಕು. ಇಲ್ಲವೇ ಹಿಂದಿನ ಪಠ್ಯವನ್ನೇ ಮುಂದುವರಿಸಬೇಕು. ಈ ಬಗ್ಗೆ ಕೂಡಲೇ ಕ್ರಮ ಜರುಗಿಸದಿದ್ದರೆ ನಾಡಿನಾದ್ಯಂತ ಹೋರಾಟ ನಡೆಯುವುದು ಅನಿವಾರ್ಯವಾಗಬಹುದು ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಪಠ್ಯದಲ್ಲಿ ನನ್ನ ಕವಿತೆಯನ್ನೂ ಕೈಬಿಡಿ: ಶಿಕ್ಷಣ ಸಚಿವರಿಗೆ ಎಸ್‌.ಜಿ.ಸಿದ್ದರಾಮಯ್ಯ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...