Homeಚಳವಳಿಪಠ್ಯದಲ್ಲಿ ಜಾತಿ, ಪಕ್ಷ ರಾಜಕಾರಣ ಹೆಡೆಯಾಡಬಾರದು: ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳ ಆಕ್ರೋಶ

ಪಠ್ಯದಲ್ಲಿ ಜಾತಿ, ಪಕ್ಷ ರಾಜಕಾರಣ ಹೆಡೆಯಾಡಬಾರದು: ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳ ಆಕ್ರೋಶ

ತಕ್ಷಣ ಇಡೀ ಪಠ್ಯವನ್ನೇ ತಡೆಹಿಡಿದು ಎಲ್ಲಿಯೂ ದೋಷವಾಗದಂತೆ ಪರಿಷ್ಕರಣೆ ಮಾಡಬೇಕು. ಇಲ್ಲವೇ ಹಿಂದಿನ ಪಠ್ಯವನ್ನೇ ಮುಂದುವರಿಸಬೇಕು. ಇಲ್ಲದಿದ್ದರೆ ನಾಡಿನಾದ್ಯಂತ ಹೋರಾಟ ನಡೆಯುವುದು ಅನಿವಾರ್ಯ

- Advertisement -
- Advertisement -

ಪಠ್ಯ ಪುಸ್ತಕ ಪುನರ್ ಪರಿಷ್ಕರಣೆಗೆ ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು ಆಕ್ರೋಶ ವ್ಯಕ್ತಪಡಿಸಿದ್ದರು, ಪಠ್ಯದಲ್ಲಿ ಜಾತಿ, ಪಕ್ಷ ರಾಜಕಾರಣ ಹೆಡೆಯಾಡಬಾರದು ಎಂದು ಆಗ್ರಹಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಪತ್ರ ಬರೆದಿರುವ ಅವರು, “ಪಠ್ಯದಲ್ಲಿ ಸಾಕಷ್ಟು ಬದಲಾವಣೆ ಮಾಡಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಪರಿಶೀಲಿಸೋಣ ಎಂದರೆ ಎಲ್ಲಿಯೂ ಪಠ್ಯ ಪುಸ್ತಕಗಳೇ ಸಿಗುತ್ತಿಲ್ಲ. ಶಾಲೆ ಆರಂಭವಾಗಿ 15 ದಿನ ಕಳೆದರೂ ಮಕ್ಕಳಿಗೆ ಪುಸ್ತಕ ಸಿಕ್ಕಿಲ. ಹೀಗಾದಾಗ ಶಿಕ್ಷಕರು ಹೇಗೆ ಪಾಠ ಮಾಡಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈಗಿನ ಪಠ್ಯ ಪರಿಷ್ಕರಣೆಯ ಸಮಿತಿಯಲ್ಲಿ ಒಂದು ವರ್ಗಕ್ಕೆ ಸೇರಿರುವವರೆ ಇರುವುದು ಸರಿಯಲ್ಲ. ಬದಲಿಗೆ ಶಿಕ್ಷಣ ಕ್ಷೇತ್ರದಲ್ಲಿ ದುಡಿದವರು, ಶಿಕ್ಷಣ ತಜ್ಞರು, ಸಾಮಾಜಿಕ ಕಾಳಜಿಯುಳ್ಳ ದೂರದೃಷ್ಟಿಯುಳ್ಳವರು ಸಮಿತಿಯಲ್ಲಿ ಇರಬೇಕಾಗಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.

9ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಬಸವಣ್ಣನವರ ಪಾಠದಲ್ಲಿ ನೈಜ ವಿಚಾರಗಳನ್ನು ಕಿತ್ತುಹಾಕಿ ಸುಳ್ಳುಗಳನ್ನು ಬಿತ್ತಲಾಗಿದೆ ಎಂದು ಸ್ವಾಮೀಜಿಗಳು ದೂರಿದ್ದಾರೆ. ಕಳೆದ ವರ್ಷದ ಪಾಠದಲ್ಲಿ “ಮಧ್ಯಕಾಲದ ಕರ್ನಾಟಕದ ಸಮಾಜವನ್ನು ಸುಧಾರಿಸಲು ಹೋರಾಡಿದ ಆದ್ಯ ಪ್ರವರ್ತಕರಲ್ಲಿ ಬಸವೇಶ್ವರರು ಒಬ್ಬರಾಗಿದ್ದಾರೆ. ವೈದಿಕ ಮೂಲ ಧರ್ಮದಲ್ಲಿ ಬೇರೂರಿದ್ದ ಅಸಂಖ್ಯ ಧಾರ್ಮಿಕ ಆಚರಣಾ ವಿಧಿ ವಿಧಾನಗಳನ್ನು ಬದಿಗೊತ್ತಿ ಮಾನವೀಯ ಮೌಲ್ಯ ಆಧಾರಿತ ಸರಳ ವೀರಶೈವ ಸಿದ್ಧಾಂತವನ್ನು ಬಸವೇಶ್ವರರು ಹಾಗೂ ಅವರ ಅನುಯಾಯಿಗಳಾದ ಪ್ರಚಾರಪಡಿಸಿದರು. ‘ಜಾತಿವ್ಯವಸ್ಥೆಯ ಕಡುವಿರೋಧಿಯಾಗಿದ್ದ ಬಸವೇಶ್ವರರು ತಮ್ಮ ಉಪನಯನದ ನಂತರ ಯಜ್ಞೋಪವೀತವನ್ನು ಕಿತ್ತೆಸೆದು ಕೂಡಲಸಂಗಮಕ್ಕೆ ನಡೆದರು. “ಉನ್ನತಾಧಿಕಾರದಲ್ಲಿದ್ದರೂ ಹಣ, ಅಧಿಕಾರ, ಅಧಿಪತ್ಯ ಇವ್ಯಾವುದರಿಂದಲೂ ಇವರು ವಿಚಲಿತರಾಗಲಿಲ್ಲ. ತಮ್ಮ ಇಡೀ ಜೀವನವನ್ನು ಸಮಾಜ ಮತ್ತು ಧರ್ಮದಲ್ಲಿನ ಅನಿಷ್ಟ ಪದ್ಧತಿಗಳನ್ನು ತೊಡೆದುಹಾಕಲು ಮೀಸಲಿರಿಸಿದರು. ಸಮಾಜ, ಧರ್ಮದ ಪುನಶ್ಚತನಕ್ಕೆ ಟೊಂಕಕಟ್ಟಿದರು’. ‘ಸ್ವಾವಲಂಬನೆಯ ತತ್ವವನ್ನು, ‘ದೇಹವೇ ದೇಗುಲ’, ‘ಈ ಬಗೆಯ ಸಂವೇದನೆಗಳು ಇಂದಿಗೂ ನಮ್ಮ ಸಮಾಜಕ್ಕೆ ದಾರಿದೀಪಗಳಾಗಿವೆ’,`ಅವರು ಸರಳ ಕನ್ನಡವನ್ನು ಬಳಸುವ ಮೂಲಕ ತಮ್ಮ ಚಳವಳಿಯನ್ನು ಜನಮುಖಿಯಾಗಿಸಿದರು. ಇಂಥ ಅನೇಕ ಮಹತ್ವದ ಅಂಶಗಳನ್ನೇ ತೆಗೆದುಹಾಕಿ ತಮಗೆ ಬೇಕಾದಂತೆ ತಿರುಚಿದ್ದಾರೆ. ಬಸವಣ್ಣನವರ ಮತ್ತು ಅವರು ಪ್ರತಿಪಾದಿಸಿದ ಲಿಂಗಾಯತ ಧರ್ಮದ ಬಗ್ಗೆ ತಪ್ಪು ಅಭಿಪ್ರಾಯ ಬರುವಂತೆ ಮಾಡಿದ್ದಾರೆ” ಎಂದು ಶ್ರೀಗಳು ಕಿಡಿಕಾರಿದ್ದಾರೆ.

ಮುಂದುವರಿದು ಈ ಬದಲಾವಣೆ ನಿಜಕ್ಕೂ ಖಂಡನಾರ್ಹ. ಬಸವಣ್ಣನವರ ಶುದ್ಧ, ಪಾರದರ್ಶಕ ಬದುಕಿಗೆ ಕಳಂಕ ತಂದಂತೆ, ‘ವಚನಕಾರರು ವೀರಶೈವ ಮತವನ್ನು ಸುಧಾರಿಸಿದರು’ ಎನ್ನುವುದು ಶುದ್ಧ ಸುಳ್ಳು. ಅವರು ‘ಲಿಂಗಾಯತ ಧರ್ಮವನ್ನು ಜಾರಿಯಲ್ಲಿ ತಂದರು’ ಎಂದಾಗಬೇಕಿತ್ತು. ಇಂತಹ ಹಲವು ದೋಷಗಳಾಗಿವೆ. ಆದುದರಿಂದ ತಕ್ಷಣ ಇಡೀ ಪಠ್ಯವನ್ನೇ ತಡೆಹಿಡಿದು ಎಲ್ಲಿಯೂ ದೋಷವಾಗದಂತೆ ಪರಿಷ್ಕರಣೆ ಮಾಡಬೇಕು. ಇಲ್ಲವೇ ಹಿಂದಿನ ಪಠ್ಯವನ್ನೇ ಮುಂದುವರಿಸಬೇಕು. ಈ ಬಗ್ಗೆ ಕೂಡಲೇ ಕ್ರಮ ಜರುಗಿಸದಿದ್ದರೆ ನಾಡಿನಾದ್ಯಂತ ಹೋರಾಟ ನಡೆಯುವುದು ಅನಿವಾರ್ಯವಾಗಬಹುದು ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಪಠ್ಯದಲ್ಲಿ ನನ್ನ ಕವಿತೆಯನ್ನೂ ಕೈಬಿಡಿ: ಶಿಕ್ಷಣ ಸಚಿವರಿಗೆ ಎಸ್‌.ಜಿ.ಸಿದ್ದರಾಮಯ್ಯ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...