Homeಅಂಕಣಗಳುಸಮಿತಿಯಿಂದ ರೈತ ಹೋರಾಟಕ್ಕೆ ಪರಿಹಾರ ಅಸಾಧ್ಯ, ಬೇಡಿಕೆಗಳಿಗೆ ಒಪ್ಪುವುದೊಂದೇ ದಾರಿ: ಎಚ್ ಎಸ್ ದೊರೆಸ್ವಾಮಿ

ಸಮಿತಿಯಿಂದ ರೈತ ಹೋರಾಟಕ್ಕೆ ಪರಿಹಾರ ಅಸಾಧ್ಯ, ಬೇಡಿಕೆಗಳಿಗೆ ಒಪ್ಪುವುದೊಂದೇ ದಾರಿ: ಎಚ್ ಎಸ್ ದೊರೆಸ್ವಾಮಿ

ರೈತರ ಮತ್ತು ಸರ್ಕಾರದ ಉದ್ದೇಶಗಳೇ ಬೇರೆಯಾಗಿರುವುದರಿಂದ ಸಮಿತಿಯೊಂದಕ್ಕೆ ಹೇಗೆ ಈ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯವಾಗುತ್ತದೆ? ಸರ್ಕಾರ ಈ ಶಾಸನಗಳಲ್ಲಿ ಕೆಲವು ತಿದ್ದುಪಡಿಗಳನ್ನು ಈಗಾಗಲೇ ಸೂಚಿಸಿವೆ. ಇದಕ್ಕೆ ರೈತರು ವಿರೋಧ ಮಾಡಿದ್ದಾರೆ. ಸರ್ಕಾರಕ್ಕೆ ಇದು ಅರಿವಾಗಿದೆ. ಪರಿಸ್ಥಿತಿ ಹೀಗಿರುವಾಗ ಯಾವ ಸಮಿತಿ ತಾನೇ ಈ ಸಮಸ್ಯೆಯನ್ನು ಬಗೆಹರಿಸಬಲ್ಲದು? ಸರ್ಕಾರ ತನ್ನ ನಿಲುವನ್ನು ಬದಲಾಯಿಸುವುದೊಂದೇ ಇರುವ ರಾಜಮಾರ್ಗ.

- Advertisement -
- Advertisement -

ದೆಹಲಿಯ ಗಡಿಗಳಲ್ಲಿ ರೈತ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಈ ಸಂದರ್ಭದಲ್ಲಿ ಸರ್ವೋಚ್ಚ ನ್ಯಾಯಾಲಯ ಮಧ್ಯಪ್ರವೇಶಿಸಿ, ಒಂದು ಸಮಿತಿ ರಚಿಸುವ ಮೂಲಕ ರೈತರ ಬೇಡಿಕೆಗಳನ್ನು ವಿಶ್ಲೇಷಿಸಿ, ಶಾಂತಿಯುತವಾಗಿ ಸಮಸ್ಯೆ ಬಗೆಹರಿಸಿ ಕೊಡಿ ಎಂದು ಮೋದಿ ಸರ್ಕಾರಕ್ಕೆ ಸಲಹೆ ಕೊಟ್ಟಿದೆ. ಸಮಿತಿ ರಚಿಸುವುದರಿಂದ ಈ ಜಟಿಲ ಪ್ರಶ್ನೆ ಬಗೆಹರಿಯುವಂತೆ ಕಾಣುತ್ತಿಲ್ಲ.

ರೈತರ ಮತ್ತು ಸರ್ಕಾರದ ಉದ್ದೇಶಗಳೇ ಬೇರೆಯಾಗಿರುವುದರಿಂದ ಸಮಿತಿಯೊಂದಕ್ಕೆ ಹೇಗೆ ಈ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯವಾಗುತ್ತದೆ? ಸರ್ಕಾರ ಈ ಶಾಸನಗಳಲ್ಲಿ ಕೆಲವು ತಿದ್ದುಪಡಿಗಳನ್ನು ಈಗಾಗಲೇ ಸೂಚಿಸಿವೆ. ಇದಕ್ಕೆ ರೈತರು ವಿರೋಧ ಮಾಡಿದ್ದಾರೆ. ಸರ್ಕಾರಕ್ಕೆ ಇದು ಅರಿವಾಗಿದೆ. ಪರಿಸ್ಥಿತಿ ಹೀಗಿರುವಾಗ ಯಾವ ಸಮಿತಿ ತಾನೇ ಈ ಸಮಸ್ಯೆಯನ್ನು ಬಗೆಹರಿಸಬಲ್ಲದು? ಸರ್ಕಾರ ತನ್ನ ನಿಲುವನ್ನು ಬದಲಾಯಿಸುವುದೊಂದೇ ಇರುವ ರಾಜಮಾರ್ಗ. ಆರ್‌ಎಸ್‌ಎಸ್‌ನ ಭಾರತ ಕಿಸಾನ್ ಸಂಘ ತಾನು ರೈತರ ಪರ ಎಂದು ಘೋಷಣೆ ಮಾಡಿ ನಾಟಕವಾಡುತ್ತಿದೆ. ಅದರ ಪ್ರೇರಣೆಯಿಂದಲೇ ಮೋದಿ ಇಂತಹ ಘೋರ ಕಾನೂನುಗಳನ್ನು ರಚಿಸುತ್ತಿರುವುದು ಎಂಬುದು ಪ್ರಪಂಚಕ್ಕೆ ಗೊತ್ತಿದೆ. ಆ ದೃಷ್ಟಿಯಿಂದ ಇದೂ ಒಂದು ದೆವ್ವದ ಬಾಯಿಂದ ಬಂದ ಭಗವದ್ಗೀತೆಯೇ ಸರಿ.

ಕಾಂಗ್ರೆಸ್‌ಗೆ ಇಂತಹ ಬಿಗಡಾಯಿಸಿದ ಸ್ಥಿತಿಯಲ್ಲಿ ಹೇಗೆ ತನ್ನ ಕಾರ್ಯನಿರ್ವಹಿಸಬೇಕು ಎಂದು ತಿಳಿದಿತ್ತು. ಇಂತಹ ಅನೇಕ ಸಂದರ್ಭಗಳು ನಿರ್ಮಾಣವಾಗಿದ್ದ ಮತ್ತು ಅವುಗಳನ್ನು ಚಾಕಚಕ್ಯತೆಯಿಂದ ಪರಿಹರಿಸಿದ ಅನೇಕ ನಿದರ್ಶನಗಳಿವೆ. ಈಗ ಮೋದಿ ಸರ್ಕಾರಕ್ಕೆ ಸಲಹೆ ನೀಡುವವರಿಗೆ ಅಂತಹ ಯೋಗ್ಯತೆ ಇಲ್ಲ ಅಥವಾ ಉದ್ದೇಶಪೂರ್ವಕವಾಗಿ ಈ ೩ ಮಸೂದೆಗಳನ್ನು ಜಾರಿಗೆ ತರಲಾಗಿವೆ.

ಚುನಾವಣೆಗಳಲ್ಲಿ ಗೆಲವು ಸಾಧಿಸುವ ತಂತ್ರ ತಿಳಿದ ಮಾತ್ರಕ್ಕೆ ನೀವು Democratic ಆಗಿಬಿಡುವುದಿಲ್ಲ ಈ ಬಗೆಯ ಮಸೂದೆಗಳನ್ನು ಮಂಡಿಸುವುದಕ್ಕೆ ಮುಂಚೆ ಸಾರ್ವಜನಿಕರ ಅಭಿಪ್ರಾಯ ಪಡೆಯಬೇಕೆಂಬ ಕಾಳಜಿಯೇ ನಿಮಗಿಲ್ಲ. ಈ ಕಾಯ್ದೆಯಿಂದ ಯಾರಿಗೆ ನೇರವಾಗಿ ಸಮಸ್ಯೆ ಉಂಟಾಗುವುದೋ, ಅವರ ಅನುಭವಪೂರ್ಣ ಸಲಹೆಯನ್ನು ಪಡೆಯುವ ದೊಡ್ಡತನವೂ ನಿಮಗಿಲ್ಲ. ಅವರು ನೀಡುವ ಅನುಭವ ಜನ್ಯವಾದ ಸಲಹೆಗಳನ್ನು ಪಡೆದು ಒಂದು ಒಳ್ಳೆಯ ಕಾನೂನು ರಚಿಸಬೇಕೆಂಬ ತವಕವೂ ನಿಮಗಿಲ್ಲ. ದೇಶವನ್ನು ಬಂಡವಾಳಗಾರರ ವಶಕ್ಕೆ ಒಪ್ಪಿಸಬಯಸುವ ನಿಮಗೆ ಆತ್ಮಸಾಕ್ಷಿ ಇರಲು ಸಾಧ್ಯವಿಲ್ಲ.

PC : India Legal

ಮೋದಿಯವರು ಜಮೀನು ಮತ್ತು ವ್ಯವಸಾಯ ಮತ್ತು ಮಾರುಕಟ್ಟೆಗೆ ಸಂಬಂಧಪಟ್ಟಂತೆ 3 ಉಗ್ರ ಕಾಯ್ದೆಗಳನ್ನು ಆರ್ಡಿನೆಸ್ಸ್ ಮುಖಾಂತರ ಜಾರಿಗೆ ತಂದು ಆ ನಂತರ ಪಾರ್ಲಿಮೆಂಟಿನ ಕಾನೂನು ಕಟ್ಟಲೆಗಳನ್ನು ಧಿಕ್ಕರಿಸಿ, ಕಾನೂನುಗಳನ್ನಾಗಿ ಪರಿವರ್ತಿಸಲಾಯಿತು. ವ್ಯವಸಾಯ ಭೂಮಿಯನ್ನು ಕಾರ್ಪೊರೆಟ್ ಕಂಪನಿಗಳ ವಶ ಮಾಡುವುದು, ರೈತರನ್ನು ಕೂಲಿಗಳಾಗಿ ಪರಿವರ್ತಿಸಿ, ಕಾರ್ಪೊರೆಟ್‌ಗಳಿಗೆ ಬೇಕಾದ ಬೆಳೆ ಬೆಳೆದುಕೊಡಲು ಅವಕಾಶ ಮಾಡಿಕೊಡಲಾಯಿತು. ರೈತರ ಹಿತದೃಷ್ಟಿಯಿಂದ ರಚಿಸಿರುವ ಮಾರ್ಕೆಟ್ ಯಾರ್ಡ್‌ಗಳನ್ನು ಮುಚ್ಚಿಸುವುದು, ರೈತರು ಕೂಲಿಯಾಳುಗಳಾಗಿ ಬೆಳೆದ ಬೆಳೆಯನ್ನೆಲ್ಲ ವಶಕ್ಕೆ ತೆಗೆದುಕೊಳ್ಳುವುದು, ರೈಲ್ವೆ ನಿಲ್ದಾಣಗಳ ಸಮೀಪ ಗೋಡೌನ್‌ಗಳನ್ನು ಮಾಡಿಕೊಂಡು ಗೂಡ್ಸ್ ರೈಲಿನ ಮೂಲಕ ಅವುಗಳನ್ನು ತಮಗೆ ಮಾರುಕಟ್ಟೆ ಇರುವ ಸ್ಥಳಗಳಿಗೆ ರವಾನಿಸುವುದು, ಅವುಗಳನ್ನು ದುಬಾರಿ ಬೆಲೆಗೆ ಮಾರಿಕೊಳ್ಳುವುದು ಈ ರೀತಿ ಕಾರ್ಪೊರೆಟ್ ಕಂಪನಿಗಳ ಹಿತದೃಷ್ಟಿಯಿಂದ ರೈತರನ್ನು ನಾಶ ಮಾಡುವ ದುರುದ್ದೇಶ ಮೋದಿಯವರ ಸರ್ಕಾರದ್ದು. ಆ ಮೂಲಕ ಭಾರತವನ್ನು ಬಂಡವಾಳಶಾಹಿ ರಾಷ್ಟ್ರವನ್ನಾಗಿ ಪರಿವರ್ತಿಸುವುದು ಅವರ ದುರಾಲೋಚನೆ.

ಪಂಜಾಬ್ ಮತ್ತು ಹರಿಯಾಣದ 30ಸಾವಿರಕ್ಕಿಂತಲೂ ಹೆಚ್ಚು ರೈತರು ಸರ್ಕಾರದ ವಿರುದ್ಧ ಶಾಂತಿಯುತ ದಂಗೆ ಎದ್ದಿರುವುದು ಸ್ವಾಭಾವಿಕವಾಗಿಯೇ ಇದೆ. ಕಡಿಮೆ ದರದಲ್ಲಿ ಪ್ರಯಾಣಿಸುತ್ತಿದ್ದ ಭಾರತೀಯ ಮಧ್ಯಮವರ್ಗದ ಹಾಗೂ ಬಡವರ ಅನುಕೂಲಕ್ಕಾಗಿ ನಿರ್ಮಿತವಾದ ರೈಲ್ವೆಯನ್ನು ಬಿಡಿಬಿಡಿಯಾಗಿ ಬಂಡವಾಳಶಾಹಿಗಳಿಗೆ ವಹಿಸತಕ್ಕ ಹುನ್ನಾರವೂ ಇದರಲ್ಲಿದೆ. ರೈಲ್ವೆ ವ್ಯವಸ್ಥೆ ಈ ಬಂಡವಾಳಶಾಹಿಗಳ ಕೈಗೆ ಹೋಗುತ್ತಿರುವುದರಿಂದ ತಾವು ನಿರ್ವಹಿಸುವ ಗೋಡೌನ್‌ಗಳಿಂದ ಉಚಿತವಾಗಿ ಗೂಡ್ಸ್ ಬೋಗಿಗಳಲ್ಲಿ ಕೃಷಿ ಉತ್ಪನ್ನಗಳನ್ನು ತುಂಬಿ ಸಾಗಿಸಲೂ ಅವಕಾಶ ಕಲ್ಪಿಸಿಕೊಡಲಾಗಿದೆ. ವ್ಯವಸಾಯಗಾರನ ಭೂಮಿ ಕಿತ್ತುಕೊಂಡು ಅವನನ್ನು ಬಂಡವಾಳಶಾಹಿಯ ಗುಲಾಮನನ್ನಾಗಿ ಮಾಡಿ ಅವನು ಬೆಳೆದು ಕೊಟ್ಟ ಆಹಾರ ಪದಾರ್ಥಗಳನ್ನು ಸಾಗಿಸುವ ಖರ್ಚನ್ನು ಉಳಿಸಿ ಈ ಧೂರ್ತರ ಕಿಸೆ ತುಂಬುವ ಯೋಜನೆ ಇದು.

ಕೇಂದ್ರ ಸರ್ಕಾರದ ಈ ವರ್ಷದ ಹಣಕಾಸಿನ ಪರಿಸ್ಥಿತಿ ತಿಳಿಯಬೇಕು. ಆರ್ಥಿಕಸ್ಥಿತಿ ಬಹಳ ಬಿಗಡಾಯಿಸಿದೆ. ಹಣಕಾಸಿನ ಸಚಿವಾಲಯದ ಮಾತನ್ನು ನಂಬುವುದಾದರೆ ಆಹಾರ ಧಾನ್ಯಗಳನ್ನು ಕೊಳ್ಳಲು ಸರ್ಕಾರದ ಬಳಿ ಹಣವಿಲ್ಲ. ಫುಡ್ ಕಾರ್ಪೊರೇಶನ್ ಇಂಡಿಯಾಗೆ ಈಗಾಗಲೇ ಕೊಟ್ಟಿರುವ ಸಾಲದ ಮೊತ್ತ 2.65 ಲಕ್ಷ ಕೋಟಿ. ಆದರೆ ಜನರಿಗೆ ಆಹಾರ ಒದಗಿಸುವುದು ಕಾನೂನು ರೀತ್ಯಾ ಸರ್ಕಾರದ ಜವಾಬ್ದಾರಿ. ಹಣದ ಕೊರತೆ ಇದೆ ಎಂದು ಈ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವೇ ಇಲ್ಲ. ಈ ನ್ಯಾಯಬದ್ಧ ಜವಾಬ್ದಾರಿಯನ್ನು ಕಾರ್ಪೊರೇಟ್ ಸಂಸ್ಥೆಗಳಿಗೆ, ಖಾಸಗಿಯವರಿಗೆ ವಹಿಸಿಕೊಡಲು ಬರುವುದೇ! ಗಂಭೀರವಾಗಿ ವಿಚಾರ ಮಾಡಬೇಕಾದ ಜಟಿಲ ಪ್ರಶ್ನೆ ಇದು.


ಇದನ್ನೂ ಓದಿ: ಟ್ರ್ಯಾಕ್ಟರ್ ರ್‍ಯಾಲಿ: ದಿಟ್ಟ ರೈತ ಹೋರಾಟದ ಗಮನಸೆಳೆದ 10 ಫೋಟೊಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...