Homeಅಂಕಣಗಳುಸಮಿತಿಯಿಂದ ರೈತ ಹೋರಾಟಕ್ಕೆ ಪರಿಹಾರ ಅಸಾಧ್ಯ, ಬೇಡಿಕೆಗಳಿಗೆ ಒಪ್ಪುವುದೊಂದೇ ದಾರಿ: ಎಚ್ ಎಸ್ ದೊರೆಸ್ವಾಮಿ

ಸಮಿತಿಯಿಂದ ರೈತ ಹೋರಾಟಕ್ಕೆ ಪರಿಹಾರ ಅಸಾಧ್ಯ, ಬೇಡಿಕೆಗಳಿಗೆ ಒಪ್ಪುವುದೊಂದೇ ದಾರಿ: ಎಚ್ ಎಸ್ ದೊರೆಸ್ವಾಮಿ

ರೈತರ ಮತ್ತು ಸರ್ಕಾರದ ಉದ್ದೇಶಗಳೇ ಬೇರೆಯಾಗಿರುವುದರಿಂದ ಸಮಿತಿಯೊಂದಕ್ಕೆ ಹೇಗೆ ಈ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯವಾಗುತ್ತದೆ? ಸರ್ಕಾರ ಈ ಶಾಸನಗಳಲ್ಲಿ ಕೆಲವು ತಿದ್ದುಪಡಿಗಳನ್ನು ಈಗಾಗಲೇ ಸೂಚಿಸಿವೆ. ಇದಕ್ಕೆ ರೈತರು ವಿರೋಧ ಮಾಡಿದ್ದಾರೆ. ಸರ್ಕಾರಕ್ಕೆ ಇದು ಅರಿವಾಗಿದೆ. ಪರಿಸ್ಥಿತಿ ಹೀಗಿರುವಾಗ ಯಾವ ಸಮಿತಿ ತಾನೇ ಈ ಸಮಸ್ಯೆಯನ್ನು ಬಗೆಹರಿಸಬಲ್ಲದು? ಸರ್ಕಾರ ತನ್ನ ನಿಲುವನ್ನು ಬದಲಾಯಿಸುವುದೊಂದೇ ಇರುವ ರಾಜಮಾರ್ಗ.

- Advertisement -
- Advertisement -

ದೆಹಲಿಯ ಗಡಿಗಳಲ್ಲಿ ರೈತ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಈ ಸಂದರ್ಭದಲ್ಲಿ ಸರ್ವೋಚ್ಚ ನ್ಯಾಯಾಲಯ ಮಧ್ಯಪ್ರವೇಶಿಸಿ, ಒಂದು ಸಮಿತಿ ರಚಿಸುವ ಮೂಲಕ ರೈತರ ಬೇಡಿಕೆಗಳನ್ನು ವಿಶ್ಲೇಷಿಸಿ, ಶಾಂತಿಯುತವಾಗಿ ಸಮಸ್ಯೆ ಬಗೆಹರಿಸಿ ಕೊಡಿ ಎಂದು ಮೋದಿ ಸರ್ಕಾರಕ್ಕೆ ಸಲಹೆ ಕೊಟ್ಟಿದೆ. ಸಮಿತಿ ರಚಿಸುವುದರಿಂದ ಈ ಜಟಿಲ ಪ್ರಶ್ನೆ ಬಗೆಹರಿಯುವಂತೆ ಕಾಣುತ್ತಿಲ್ಲ.

ರೈತರ ಮತ್ತು ಸರ್ಕಾರದ ಉದ್ದೇಶಗಳೇ ಬೇರೆಯಾಗಿರುವುದರಿಂದ ಸಮಿತಿಯೊಂದಕ್ಕೆ ಹೇಗೆ ಈ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯವಾಗುತ್ತದೆ? ಸರ್ಕಾರ ಈ ಶಾಸನಗಳಲ್ಲಿ ಕೆಲವು ತಿದ್ದುಪಡಿಗಳನ್ನು ಈಗಾಗಲೇ ಸೂಚಿಸಿವೆ. ಇದಕ್ಕೆ ರೈತರು ವಿರೋಧ ಮಾಡಿದ್ದಾರೆ. ಸರ್ಕಾರಕ್ಕೆ ಇದು ಅರಿವಾಗಿದೆ. ಪರಿಸ್ಥಿತಿ ಹೀಗಿರುವಾಗ ಯಾವ ಸಮಿತಿ ತಾನೇ ಈ ಸಮಸ್ಯೆಯನ್ನು ಬಗೆಹರಿಸಬಲ್ಲದು? ಸರ್ಕಾರ ತನ್ನ ನಿಲುವನ್ನು ಬದಲಾಯಿಸುವುದೊಂದೇ ಇರುವ ರಾಜಮಾರ್ಗ. ಆರ್‌ಎಸ್‌ಎಸ್‌ನ ಭಾರತ ಕಿಸಾನ್ ಸಂಘ ತಾನು ರೈತರ ಪರ ಎಂದು ಘೋಷಣೆ ಮಾಡಿ ನಾಟಕವಾಡುತ್ತಿದೆ. ಅದರ ಪ್ರೇರಣೆಯಿಂದಲೇ ಮೋದಿ ಇಂತಹ ಘೋರ ಕಾನೂನುಗಳನ್ನು ರಚಿಸುತ್ತಿರುವುದು ಎಂಬುದು ಪ್ರಪಂಚಕ್ಕೆ ಗೊತ್ತಿದೆ. ಆ ದೃಷ್ಟಿಯಿಂದ ಇದೂ ಒಂದು ದೆವ್ವದ ಬಾಯಿಂದ ಬಂದ ಭಗವದ್ಗೀತೆಯೇ ಸರಿ.

ಕಾಂಗ್ರೆಸ್‌ಗೆ ಇಂತಹ ಬಿಗಡಾಯಿಸಿದ ಸ್ಥಿತಿಯಲ್ಲಿ ಹೇಗೆ ತನ್ನ ಕಾರ್ಯನಿರ್ವಹಿಸಬೇಕು ಎಂದು ತಿಳಿದಿತ್ತು. ಇಂತಹ ಅನೇಕ ಸಂದರ್ಭಗಳು ನಿರ್ಮಾಣವಾಗಿದ್ದ ಮತ್ತು ಅವುಗಳನ್ನು ಚಾಕಚಕ್ಯತೆಯಿಂದ ಪರಿಹರಿಸಿದ ಅನೇಕ ನಿದರ್ಶನಗಳಿವೆ. ಈಗ ಮೋದಿ ಸರ್ಕಾರಕ್ಕೆ ಸಲಹೆ ನೀಡುವವರಿಗೆ ಅಂತಹ ಯೋಗ್ಯತೆ ಇಲ್ಲ ಅಥವಾ ಉದ್ದೇಶಪೂರ್ವಕವಾಗಿ ಈ ೩ ಮಸೂದೆಗಳನ್ನು ಜಾರಿಗೆ ತರಲಾಗಿವೆ.

ಚುನಾವಣೆಗಳಲ್ಲಿ ಗೆಲವು ಸಾಧಿಸುವ ತಂತ್ರ ತಿಳಿದ ಮಾತ್ರಕ್ಕೆ ನೀವು Democratic ಆಗಿಬಿಡುವುದಿಲ್ಲ ಈ ಬಗೆಯ ಮಸೂದೆಗಳನ್ನು ಮಂಡಿಸುವುದಕ್ಕೆ ಮುಂಚೆ ಸಾರ್ವಜನಿಕರ ಅಭಿಪ್ರಾಯ ಪಡೆಯಬೇಕೆಂಬ ಕಾಳಜಿಯೇ ನಿಮಗಿಲ್ಲ. ಈ ಕಾಯ್ದೆಯಿಂದ ಯಾರಿಗೆ ನೇರವಾಗಿ ಸಮಸ್ಯೆ ಉಂಟಾಗುವುದೋ, ಅವರ ಅನುಭವಪೂರ್ಣ ಸಲಹೆಯನ್ನು ಪಡೆಯುವ ದೊಡ್ಡತನವೂ ನಿಮಗಿಲ್ಲ. ಅವರು ನೀಡುವ ಅನುಭವ ಜನ್ಯವಾದ ಸಲಹೆಗಳನ್ನು ಪಡೆದು ಒಂದು ಒಳ್ಳೆಯ ಕಾನೂನು ರಚಿಸಬೇಕೆಂಬ ತವಕವೂ ನಿಮಗಿಲ್ಲ. ದೇಶವನ್ನು ಬಂಡವಾಳಗಾರರ ವಶಕ್ಕೆ ಒಪ್ಪಿಸಬಯಸುವ ನಿಮಗೆ ಆತ್ಮಸಾಕ್ಷಿ ಇರಲು ಸಾಧ್ಯವಿಲ್ಲ.

PC : India Legal

ಮೋದಿಯವರು ಜಮೀನು ಮತ್ತು ವ್ಯವಸಾಯ ಮತ್ತು ಮಾರುಕಟ್ಟೆಗೆ ಸಂಬಂಧಪಟ್ಟಂತೆ 3 ಉಗ್ರ ಕಾಯ್ದೆಗಳನ್ನು ಆರ್ಡಿನೆಸ್ಸ್ ಮುಖಾಂತರ ಜಾರಿಗೆ ತಂದು ಆ ನಂತರ ಪಾರ್ಲಿಮೆಂಟಿನ ಕಾನೂನು ಕಟ್ಟಲೆಗಳನ್ನು ಧಿಕ್ಕರಿಸಿ, ಕಾನೂನುಗಳನ್ನಾಗಿ ಪರಿವರ್ತಿಸಲಾಯಿತು. ವ್ಯವಸಾಯ ಭೂಮಿಯನ್ನು ಕಾರ್ಪೊರೆಟ್ ಕಂಪನಿಗಳ ವಶ ಮಾಡುವುದು, ರೈತರನ್ನು ಕೂಲಿಗಳಾಗಿ ಪರಿವರ್ತಿಸಿ, ಕಾರ್ಪೊರೆಟ್‌ಗಳಿಗೆ ಬೇಕಾದ ಬೆಳೆ ಬೆಳೆದುಕೊಡಲು ಅವಕಾಶ ಮಾಡಿಕೊಡಲಾಯಿತು. ರೈತರ ಹಿತದೃಷ್ಟಿಯಿಂದ ರಚಿಸಿರುವ ಮಾರ್ಕೆಟ್ ಯಾರ್ಡ್‌ಗಳನ್ನು ಮುಚ್ಚಿಸುವುದು, ರೈತರು ಕೂಲಿಯಾಳುಗಳಾಗಿ ಬೆಳೆದ ಬೆಳೆಯನ್ನೆಲ್ಲ ವಶಕ್ಕೆ ತೆಗೆದುಕೊಳ್ಳುವುದು, ರೈಲ್ವೆ ನಿಲ್ದಾಣಗಳ ಸಮೀಪ ಗೋಡೌನ್‌ಗಳನ್ನು ಮಾಡಿಕೊಂಡು ಗೂಡ್ಸ್ ರೈಲಿನ ಮೂಲಕ ಅವುಗಳನ್ನು ತಮಗೆ ಮಾರುಕಟ್ಟೆ ಇರುವ ಸ್ಥಳಗಳಿಗೆ ರವಾನಿಸುವುದು, ಅವುಗಳನ್ನು ದುಬಾರಿ ಬೆಲೆಗೆ ಮಾರಿಕೊಳ್ಳುವುದು ಈ ರೀತಿ ಕಾರ್ಪೊರೆಟ್ ಕಂಪನಿಗಳ ಹಿತದೃಷ್ಟಿಯಿಂದ ರೈತರನ್ನು ನಾಶ ಮಾಡುವ ದುರುದ್ದೇಶ ಮೋದಿಯವರ ಸರ್ಕಾರದ್ದು. ಆ ಮೂಲಕ ಭಾರತವನ್ನು ಬಂಡವಾಳಶಾಹಿ ರಾಷ್ಟ್ರವನ್ನಾಗಿ ಪರಿವರ್ತಿಸುವುದು ಅವರ ದುರಾಲೋಚನೆ.

ಪಂಜಾಬ್ ಮತ್ತು ಹರಿಯಾಣದ 30ಸಾವಿರಕ್ಕಿಂತಲೂ ಹೆಚ್ಚು ರೈತರು ಸರ್ಕಾರದ ವಿರುದ್ಧ ಶಾಂತಿಯುತ ದಂಗೆ ಎದ್ದಿರುವುದು ಸ್ವಾಭಾವಿಕವಾಗಿಯೇ ಇದೆ. ಕಡಿಮೆ ದರದಲ್ಲಿ ಪ್ರಯಾಣಿಸುತ್ತಿದ್ದ ಭಾರತೀಯ ಮಧ್ಯಮವರ್ಗದ ಹಾಗೂ ಬಡವರ ಅನುಕೂಲಕ್ಕಾಗಿ ನಿರ್ಮಿತವಾದ ರೈಲ್ವೆಯನ್ನು ಬಿಡಿಬಿಡಿಯಾಗಿ ಬಂಡವಾಳಶಾಹಿಗಳಿಗೆ ವಹಿಸತಕ್ಕ ಹುನ್ನಾರವೂ ಇದರಲ್ಲಿದೆ. ರೈಲ್ವೆ ವ್ಯವಸ್ಥೆ ಈ ಬಂಡವಾಳಶಾಹಿಗಳ ಕೈಗೆ ಹೋಗುತ್ತಿರುವುದರಿಂದ ತಾವು ನಿರ್ವಹಿಸುವ ಗೋಡೌನ್‌ಗಳಿಂದ ಉಚಿತವಾಗಿ ಗೂಡ್ಸ್ ಬೋಗಿಗಳಲ್ಲಿ ಕೃಷಿ ಉತ್ಪನ್ನಗಳನ್ನು ತುಂಬಿ ಸಾಗಿಸಲೂ ಅವಕಾಶ ಕಲ್ಪಿಸಿಕೊಡಲಾಗಿದೆ. ವ್ಯವಸಾಯಗಾರನ ಭೂಮಿ ಕಿತ್ತುಕೊಂಡು ಅವನನ್ನು ಬಂಡವಾಳಶಾಹಿಯ ಗುಲಾಮನನ್ನಾಗಿ ಮಾಡಿ ಅವನು ಬೆಳೆದು ಕೊಟ್ಟ ಆಹಾರ ಪದಾರ್ಥಗಳನ್ನು ಸಾಗಿಸುವ ಖರ್ಚನ್ನು ಉಳಿಸಿ ಈ ಧೂರ್ತರ ಕಿಸೆ ತುಂಬುವ ಯೋಜನೆ ಇದು.

ಕೇಂದ್ರ ಸರ್ಕಾರದ ಈ ವರ್ಷದ ಹಣಕಾಸಿನ ಪರಿಸ್ಥಿತಿ ತಿಳಿಯಬೇಕು. ಆರ್ಥಿಕಸ್ಥಿತಿ ಬಹಳ ಬಿಗಡಾಯಿಸಿದೆ. ಹಣಕಾಸಿನ ಸಚಿವಾಲಯದ ಮಾತನ್ನು ನಂಬುವುದಾದರೆ ಆಹಾರ ಧಾನ್ಯಗಳನ್ನು ಕೊಳ್ಳಲು ಸರ್ಕಾರದ ಬಳಿ ಹಣವಿಲ್ಲ. ಫುಡ್ ಕಾರ್ಪೊರೇಶನ್ ಇಂಡಿಯಾಗೆ ಈಗಾಗಲೇ ಕೊಟ್ಟಿರುವ ಸಾಲದ ಮೊತ್ತ 2.65 ಲಕ್ಷ ಕೋಟಿ. ಆದರೆ ಜನರಿಗೆ ಆಹಾರ ಒದಗಿಸುವುದು ಕಾನೂನು ರೀತ್ಯಾ ಸರ್ಕಾರದ ಜವಾಬ್ದಾರಿ. ಹಣದ ಕೊರತೆ ಇದೆ ಎಂದು ಈ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವೇ ಇಲ್ಲ. ಈ ನ್ಯಾಯಬದ್ಧ ಜವಾಬ್ದಾರಿಯನ್ನು ಕಾರ್ಪೊರೇಟ್ ಸಂಸ್ಥೆಗಳಿಗೆ, ಖಾಸಗಿಯವರಿಗೆ ವಹಿಸಿಕೊಡಲು ಬರುವುದೇ! ಗಂಭೀರವಾಗಿ ವಿಚಾರ ಮಾಡಬೇಕಾದ ಜಟಿಲ ಪ್ರಶ್ನೆ ಇದು.


ಇದನ್ನೂ ಓದಿ: ಟ್ರ್ಯಾಕ್ಟರ್ ರ್‍ಯಾಲಿ: ದಿಟ್ಟ ರೈತ ಹೋರಾಟದ ಗಮನಸೆಳೆದ 10 ಫೋಟೊಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...