Homeಅಂಕಣಗಳುಸಮಿತಿಯಿಂದ ರೈತ ಹೋರಾಟಕ್ಕೆ ಪರಿಹಾರ ಅಸಾಧ್ಯ, ಬೇಡಿಕೆಗಳಿಗೆ ಒಪ್ಪುವುದೊಂದೇ ದಾರಿ: ಎಚ್ ಎಸ್ ದೊರೆಸ್ವಾಮಿ

ಸಮಿತಿಯಿಂದ ರೈತ ಹೋರಾಟಕ್ಕೆ ಪರಿಹಾರ ಅಸಾಧ್ಯ, ಬೇಡಿಕೆಗಳಿಗೆ ಒಪ್ಪುವುದೊಂದೇ ದಾರಿ: ಎಚ್ ಎಸ್ ದೊರೆಸ್ವಾಮಿ

ರೈತರ ಮತ್ತು ಸರ್ಕಾರದ ಉದ್ದೇಶಗಳೇ ಬೇರೆಯಾಗಿರುವುದರಿಂದ ಸಮಿತಿಯೊಂದಕ್ಕೆ ಹೇಗೆ ಈ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯವಾಗುತ್ತದೆ? ಸರ್ಕಾರ ಈ ಶಾಸನಗಳಲ್ಲಿ ಕೆಲವು ತಿದ್ದುಪಡಿಗಳನ್ನು ಈಗಾಗಲೇ ಸೂಚಿಸಿವೆ. ಇದಕ್ಕೆ ರೈತರು ವಿರೋಧ ಮಾಡಿದ್ದಾರೆ. ಸರ್ಕಾರಕ್ಕೆ ಇದು ಅರಿವಾಗಿದೆ. ಪರಿಸ್ಥಿತಿ ಹೀಗಿರುವಾಗ ಯಾವ ಸಮಿತಿ ತಾನೇ ಈ ಸಮಸ್ಯೆಯನ್ನು ಬಗೆಹರಿಸಬಲ್ಲದು? ಸರ್ಕಾರ ತನ್ನ ನಿಲುವನ್ನು ಬದಲಾಯಿಸುವುದೊಂದೇ ಇರುವ ರಾಜಮಾರ್ಗ.

- Advertisement -
- Advertisement -

ದೆಹಲಿಯ ಗಡಿಗಳಲ್ಲಿ ರೈತ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಈ ಸಂದರ್ಭದಲ್ಲಿ ಸರ್ವೋಚ್ಚ ನ್ಯಾಯಾಲಯ ಮಧ್ಯಪ್ರವೇಶಿಸಿ, ಒಂದು ಸಮಿತಿ ರಚಿಸುವ ಮೂಲಕ ರೈತರ ಬೇಡಿಕೆಗಳನ್ನು ವಿಶ್ಲೇಷಿಸಿ, ಶಾಂತಿಯುತವಾಗಿ ಸಮಸ್ಯೆ ಬಗೆಹರಿಸಿ ಕೊಡಿ ಎಂದು ಮೋದಿ ಸರ್ಕಾರಕ್ಕೆ ಸಲಹೆ ಕೊಟ್ಟಿದೆ. ಸಮಿತಿ ರಚಿಸುವುದರಿಂದ ಈ ಜಟಿಲ ಪ್ರಶ್ನೆ ಬಗೆಹರಿಯುವಂತೆ ಕಾಣುತ್ತಿಲ್ಲ.

ರೈತರ ಮತ್ತು ಸರ್ಕಾರದ ಉದ್ದೇಶಗಳೇ ಬೇರೆಯಾಗಿರುವುದರಿಂದ ಸಮಿತಿಯೊಂದಕ್ಕೆ ಹೇಗೆ ಈ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯವಾಗುತ್ತದೆ? ಸರ್ಕಾರ ಈ ಶಾಸನಗಳಲ್ಲಿ ಕೆಲವು ತಿದ್ದುಪಡಿಗಳನ್ನು ಈಗಾಗಲೇ ಸೂಚಿಸಿವೆ. ಇದಕ್ಕೆ ರೈತರು ವಿರೋಧ ಮಾಡಿದ್ದಾರೆ. ಸರ್ಕಾರಕ್ಕೆ ಇದು ಅರಿವಾಗಿದೆ. ಪರಿಸ್ಥಿತಿ ಹೀಗಿರುವಾಗ ಯಾವ ಸಮಿತಿ ತಾನೇ ಈ ಸಮಸ್ಯೆಯನ್ನು ಬಗೆಹರಿಸಬಲ್ಲದು? ಸರ್ಕಾರ ತನ್ನ ನಿಲುವನ್ನು ಬದಲಾಯಿಸುವುದೊಂದೇ ಇರುವ ರಾಜಮಾರ್ಗ. ಆರ್‌ಎಸ್‌ಎಸ್‌ನ ಭಾರತ ಕಿಸಾನ್ ಸಂಘ ತಾನು ರೈತರ ಪರ ಎಂದು ಘೋಷಣೆ ಮಾಡಿ ನಾಟಕವಾಡುತ್ತಿದೆ. ಅದರ ಪ್ರೇರಣೆಯಿಂದಲೇ ಮೋದಿ ಇಂತಹ ಘೋರ ಕಾನೂನುಗಳನ್ನು ರಚಿಸುತ್ತಿರುವುದು ಎಂಬುದು ಪ್ರಪಂಚಕ್ಕೆ ಗೊತ್ತಿದೆ. ಆ ದೃಷ್ಟಿಯಿಂದ ಇದೂ ಒಂದು ದೆವ್ವದ ಬಾಯಿಂದ ಬಂದ ಭಗವದ್ಗೀತೆಯೇ ಸರಿ.

ಕಾಂಗ್ರೆಸ್‌ಗೆ ಇಂತಹ ಬಿಗಡಾಯಿಸಿದ ಸ್ಥಿತಿಯಲ್ಲಿ ಹೇಗೆ ತನ್ನ ಕಾರ್ಯನಿರ್ವಹಿಸಬೇಕು ಎಂದು ತಿಳಿದಿತ್ತು. ಇಂತಹ ಅನೇಕ ಸಂದರ್ಭಗಳು ನಿರ್ಮಾಣವಾಗಿದ್ದ ಮತ್ತು ಅವುಗಳನ್ನು ಚಾಕಚಕ್ಯತೆಯಿಂದ ಪರಿಹರಿಸಿದ ಅನೇಕ ನಿದರ್ಶನಗಳಿವೆ. ಈಗ ಮೋದಿ ಸರ್ಕಾರಕ್ಕೆ ಸಲಹೆ ನೀಡುವವರಿಗೆ ಅಂತಹ ಯೋಗ್ಯತೆ ಇಲ್ಲ ಅಥವಾ ಉದ್ದೇಶಪೂರ್ವಕವಾಗಿ ಈ ೩ ಮಸೂದೆಗಳನ್ನು ಜಾರಿಗೆ ತರಲಾಗಿವೆ.

ಚುನಾವಣೆಗಳಲ್ಲಿ ಗೆಲವು ಸಾಧಿಸುವ ತಂತ್ರ ತಿಳಿದ ಮಾತ್ರಕ್ಕೆ ನೀವು Democratic ಆಗಿಬಿಡುವುದಿಲ್ಲ ಈ ಬಗೆಯ ಮಸೂದೆಗಳನ್ನು ಮಂಡಿಸುವುದಕ್ಕೆ ಮುಂಚೆ ಸಾರ್ವಜನಿಕರ ಅಭಿಪ್ರಾಯ ಪಡೆಯಬೇಕೆಂಬ ಕಾಳಜಿಯೇ ನಿಮಗಿಲ್ಲ. ಈ ಕಾಯ್ದೆಯಿಂದ ಯಾರಿಗೆ ನೇರವಾಗಿ ಸಮಸ್ಯೆ ಉಂಟಾಗುವುದೋ, ಅವರ ಅನುಭವಪೂರ್ಣ ಸಲಹೆಯನ್ನು ಪಡೆಯುವ ದೊಡ್ಡತನವೂ ನಿಮಗಿಲ್ಲ. ಅವರು ನೀಡುವ ಅನುಭವ ಜನ್ಯವಾದ ಸಲಹೆಗಳನ್ನು ಪಡೆದು ಒಂದು ಒಳ್ಳೆಯ ಕಾನೂನು ರಚಿಸಬೇಕೆಂಬ ತವಕವೂ ನಿಮಗಿಲ್ಲ. ದೇಶವನ್ನು ಬಂಡವಾಳಗಾರರ ವಶಕ್ಕೆ ಒಪ್ಪಿಸಬಯಸುವ ನಿಮಗೆ ಆತ್ಮಸಾಕ್ಷಿ ಇರಲು ಸಾಧ್ಯವಿಲ್ಲ.

PC : India Legal

ಮೋದಿಯವರು ಜಮೀನು ಮತ್ತು ವ್ಯವಸಾಯ ಮತ್ತು ಮಾರುಕಟ್ಟೆಗೆ ಸಂಬಂಧಪಟ್ಟಂತೆ 3 ಉಗ್ರ ಕಾಯ್ದೆಗಳನ್ನು ಆರ್ಡಿನೆಸ್ಸ್ ಮುಖಾಂತರ ಜಾರಿಗೆ ತಂದು ಆ ನಂತರ ಪಾರ್ಲಿಮೆಂಟಿನ ಕಾನೂನು ಕಟ್ಟಲೆಗಳನ್ನು ಧಿಕ್ಕರಿಸಿ, ಕಾನೂನುಗಳನ್ನಾಗಿ ಪರಿವರ್ತಿಸಲಾಯಿತು. ವ್ಯವಸಾಯ ಭೂಮಿಯನ್ನು ಕಾರ್ಪೊರೆಟ್ ಕಂಪನಿಗಳ ವಶ ಮಾಡುವುದು, ರೈತರನ್ನು ಕೂಲಿಗಳಾಗಿ ಪರಿವರ್ತಿಸಿ, ಕಾರ್ಪೊರೆಟ್‌ಗಳಿಗೆ ಬೇಕಾದ ಬೆಳೆ ಬೆಳೆದುಕೊಡಲು ಅವಕಾಶ ಮಾಡಿಕೊಡಲಾಯಿತು. ರೈತರ ಹಿತದೃಷ್ಟಿಯಿಂದ ರಚಿಸಿರುವ ಮಾರ್ಕೆಟ್ ಯಾರ್ಡ್‌ಗಳನ್ನು ಮುಚ್ಚಿಸುವುದು, ರೈತರು ಕೂಲಿಯಾಳುಗಳಾಗಿ ಬೆಳೆದ ಬೆಳೆಯನ್ನೆಲ್ಲ ವಶಕ್ಕೆ ತೆಗೆದುಕೊಳ್ಳುವುದು, ರೈಲ್ವೆ ನಿಲ್ದಾಣಗಳ ಸಮೀಪ ಗೋಡೌನ್‌ಗಳನ್ನು ಮಾಡಿಕೊಂಡು ಗೂಡ್ಸ್ ರೈಲಿನ ಮೂಲಕ ಅವುಗಳನ್ನು ತಮಗೆ ಮಾರುಕಟ್ಟೆ ಇರುವ ಸ್ಥಳಗಳಿಗೆ ರವಾನಿಸುವುದು, ಅವುಗಳನ್ನು ದುಬಾರಿ ಬೆಲೆಗೆ ಮಾರಿಕೊಳ್ಳುವುದು ಈ ರೀತಿ ಕಾರ್ಪೊರೆಟ್ ಕಂಪನಿಗಳ ಹಿತದೃಷ್ಟಿಯಿಂದ ರೈತರನ್ನು ನಾಶ ಮಾಡುವ ದುರುದ್ದೇಶ ಮೋದಿಯವರ ಸರ್ಕಾರದ್ದು. ಆ ಮೂಲಕ ಭಾರತವನ್ನು ಬಂಡವಾಳಶಾಹಿ ರಾಷ್ಟ್ರವನ್ನಾಗಿ ಪರಿವರ್ತಿಸುವುದು ಅವರ ದುರಾಲೋಚನೆ.

ಪಂಜಾಬ್ ಮತ್ತು ಹರಿಯಾಣದ 30ಸಾವಿರಕ್ಕಿಂತಲೂ ಹೆಚ್ಚು ರೈತರು ಸರ್ಕಾರದ ವಿರುದ್ಧ ಶಾಂತಿಯುತ ದಂಗೆ ಎದ್ದಿರುವುದು ಸ್ವಾಭಾವಿಕವಾಗಿಯೇ ಇದೆ. ಕಡಿಮೆ ದರದಲ್ಲಿ ಪ್ರಯಾಣಿಸುತ್ತಿದ್ದ ಭಾರತೀಯ ಮಧ್ಯಮವರ್ಗದ ಹಾಗೂ ಬಡವರ ಅನುಕೂಲಕ್ಕಾಗಿ ನಿರ್ಮಿತವಾದ ರೈಲ್ವೆಯನ್ನು ಬಿಡಿಬಿಡಿಯಾಗಿ ಬಂಡವಾಳಶಾಹಿಗಳಿಗೆ ವಹಿಸತಕ್ಕ ಹುನ್ನಾರವೂ ಇದರಲ್ಲಿದೆ. ರೈಲ್ವೆ ವ್ಯವಸ್ಥೆ ಈ ಬಂಡವಾಳಶಾಹಿಗಳ ಕೈಗೆ ಹೋಗುತ್ತಿರುವುದರಿಂದ ತಾವು ನಿರ್ವಹಿಸುವ ಗೋಡೌನ್‌ಗಳಿಂದ ಉಚಿತವಾಗಿ ಗೂಡ್ಸ್ ಬೋಗಿಗಳಲ್ಲಿ ಕೃಷಿ ಉತ್ಪನ್ನಗಳನ್ನು ತುಂಬಿ ಸಾಗಿಸಲೂ ಅವಕಾಶ ಕಲ್ಪಿಸಿಕೊಡಲಾಗಿದೆ. ವ್ಯವಸಾಯಗಾರನ ಭೂಮಿ ಕಿತ್ತುಕೊಂಡು ಅವನನ್ನು ಬಂಡವಾಳಶಾಹಿಯ ಗುಲಾಮನನ್ನಾಗಿ ಮಾಡಿ ಅವನು ಬೆಳೆದು ಕೊಟ್ಟ ಆಹಾರ ಪದಾರ್ಥಗಳನ್ನು ಸಾಗಿಸುವ ಖರ್ಚನ್ನು ಉಳಿಸಿ ಈ ಧೂರ್ತರ ಕಿಸೆ ತುಂಬುವ ಯೋಜನೆ ಇದು.

ಕೇಂದ್ರ ಸರ್ಕಾರದ ಈ ವರ್ಷದ ಹಣಕಾಸಿನ ಪರಿಸ್ಥಿತಿ ತಿಳಿಯಬೇಕು. ಆರ್ಥಿಕಸ್ಥಿತಿ ಬಹಳ ಬಿಗಡಾಯಿಸಿದೆ. ಹಣಕಾಸಿನ ಸಚಿವಾಲಯದ ಮಾತನ್ನು ನಂಬುವುದಾದರೆ ಆಹಾರ ಧಾನ್ಯಗಳನ್ನು ಕೊಳ್ಳಲು ಸರ್ಕಾರದ ಬಳಿ ಹಣವಿಲ್ಲ. ಫುಡ್ ಕಾರ್ಪೊರೇಶನ್ ಇಂಡಿಯಾಗೆ ಈಗಾಗಲೇ ಕೊಟ್ಟಿರುವ ಸಾಲದ ಮೊತ್ತ 2.65 ಲಕ್ಷ ಕೋಟಿ. ಆದರೆ ಜನರಿಗೆ ಆಹಾರ ಒದಗಿಸುವುದು ಕಾನೂನು ರೀತ್ಯಾ ಸರ್ಕಾರದ ಜವಾಬ್ದಾರಿ. ಹಣದ ಕೊರತೆ ಇದೆ ಎಂದು ಈ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವೇ ಇಲ್ಲ. ಈ ನ್ಯಾಯಬದ್ಧ ಜವಾಬ್ದಾರಿಯನ್ನು ಕಾರ್ಪೊರೇಟ್ ಸಂಸ್ಥೆಗಳಿಗೆ, ಖಾಸಗಿಯವರಿಗೆ ವಹಿಸಿಕೊಡಲು ಬರುವುದೇ! ಗಂಭೀರವಾಗಿ ವಿಚಾರ ಮಾಡಬೇಕಾದ ಜಟಿಲ ಪ್ರಶ್ನೆ ಇದು.


ಇದನ್ನೂ ಓದಿ: ಟ್ರ್ಯಾಕ್ಟರ್ ರ್‍ಯಾಲಿ: ದಿಟ್ಟ ರೈತ ಹೋರಾಟದ ಗಮನಸೆಳೆದ 10 ಫೋಟೊಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...