Homeಅಂಕಣಗಳುಸಮಿತಿಯಿಂದ ರೈತ ಹೋರಾಟಕ್ಕೆ ಪರಿಹಾರ ಅಸಾಧ್ಯ, ಬೇಡಿಕೆಗಳಿಗೆ ಒಪ್ಪುವುದೊಂದೇ ದಾರಿ: ಎಚ್ ಎಸ್ ದೊರೆಸ್ವಾಮಿ

ಸಮಿತಿಯಿಂದ ರೈತ ಹೋರಾಟಕ್ಕೆ ಪರಿಹಾರ ಅಸಾಧ್ಯ, ಬೇಡಿಕೆಗಳಿಗೆ ಒಪ್ಪುವುದೊಂದೇ ದಾರಿ: ಎಚ್ ಎಸ್ ದೊರೆಸ್ವಾಮಿ

ರೈತರ ಮತ್ತು ಸರ್ಕಾರದ ಉದ್ದೇಶಗಳೇ ಬೇರೆಯಾಗಿರುವುದರಿಂದ ಸಮಿತಿಯೊಂದಕ್ಕೆ ಹೇಗೆ ಈ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯವಾಗುತ್ತದೆ? ಸರ್ಕಾರ ಈ ಶಾಸನಗಳಲ್ಲಿ ಕೆಲವು ತಿದ್ದುಪಡಿಗಳನ್ನು ಈಗಾಗಲೇ ಸೂಚಿಸಿವೆ. ಇದಕ್ಕೆ ರೈತರು ವಿರೋಧ ಮಾಡಿದ್ದಾರೆ. ಸರ್ಕಾರಕ್ಕೆ ಇದು ಅರಿವಾಗಿದೆ. ಪರಿಸ್ಥಿತಿ ಹೀಗಿರುವಾಗ ಯಾವ ಸಮಿತಿ ತಾನೇ ಈ ಸಮಸ್ಯೆಯನ್ನು ಬಗೆಹರಿಸಬಲ್ಲದು? ಸರ್ಕಾರ ತನ್ನ ನಿಲುವನ್ನು ಬದಲಾಯಿಸುವುದೊಂದೇ ಇರುವ ರಾಜಮಾರ್ಗ.

- Advertisement -
- Advertisement -

ದೆಹಲಿಯ ಗಡಿಗಳಲ್ಲಿ ರೈತ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಈ ಸಂದರ್ಭದಲ್ಲಿ ಸರ್ವೋಚ್ಚ ನ್ಯಾಯಾಲಯ ಮಧ್ಯಪ್ರವೇಶಿಸಿ, ಒಂದು ಸಮಿತಿ ರಚಿಸುವ ಮೂಲಕ ರೈತರ ಬೇಡಿಕೆಗಳನ್ನು ವಿಶ್ಲೇಷಿಸಿ, ಶಾಂತಿಯುತವಾಗಿ ಸಮಸ್ಯೆ ಬಗೆಹರಿಸಿ ಕೊಡಿ ಎಂದು ಮೋದಿ ಸರ್ಕಾರಕ್ಕೆ ಸಲಹೆ ಕೊಟ್ಟಿದೆ. ಸಮಿತಿ ರಚಿಸುವುದರಿಂದ ಈ ಜಟಿಲ ಪ್ರಶ್ನೆ ಬಗೆಹರಿಯುವಂತೆ ಕಾಣುತ್ತಿಲ್ಲ.

ರೈತರ ಮತ್ತು ಸರ್ಕಾರದ ಉದ್ದೇಶಗಳೇ ಬೇರೆಯಾಗಿರುವುದರಿಂದ ಸಮಿತಿಯೊಂದಕ್ಕೆ ಹೇಗೆ ಈ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯವಾಗುತ್ತದೆ? ಸರ್ಕಾರ ಈ ಶಾಸನಗಳಲ್ಲಿ ಕೆಲವು ತಿದ್ದುಪಡಿಗಳನ್ನು ಈಗಾಗಲೇ ಸೂಚಿಸಿವೆ. ಇದಕ್ಕೆ ರೈತರು ವಿರೋಧ ಮಾಡಿದ್ದಾರೆ. ಸರ್ಕಾರಕ್ಕೆ ಇದು ಅರಿವಾಗಿದೆ. ಪರಿಸ್ಥಿತಿ ಹೀಗಿರುವಾಗ ಯಾವ ಸಮಿತಿ ತಾನೇ ಈ ಸಮಸ್ಯೆಯನ್ನು ಬಗೆಹರಿಸಬಲ್ಲದು? ಸರ್ಕಾರ ತನ್ನ ನಿಲುವನ್ನು ಬದಲಾಯಿಸುವುದೊಂದೇ ಇರುವ ರಾಜಮಾರ್ಗ. ಆರ್‌ಎಸ್‌ಎಸ್‌ನ ಭಾರತ ಕಿಸಾನ್ ಸಂಘ ತಾನು ರೈತರ ಪರ ಎಂದು ಘೋಷಣೆ ಮಾಡಿ ನಾಟಕವಾಡುತ್ತಿದೆ. ಅದರ ಪ್ರೇರಣೆಯಿಂದಲೇ ಮೋದಿ ಇಂತಹ ಘೋರ ಕಾನೂನುಗಳನ್ನು ರಚಿಸುತ್ತಿರುವುದು ಎಂಬುದು ಪ್ರಪಂಚಕ್ಕೆ ಗೊತ್ತಿದೆ. ಆ ದೃಷ್ಟಿಯಿಂದ ಇದೂ ಒಂದು ದೆವ್ವದ ಬಾಯಿಂದ ಬಂದ ಭಗವದ್ಗೀತೆಯೇ ಸರಿ.

ಕಾಂಗ್ರೆಸ್‌ಗೆ ಇಂತಹ ಬಿಗಡಾಯಿಸಿದ ಸ್ಥಿತಿಯಲ್ಲಿ ಹೇಗೆ ತನ್ನ ಕಾರ್ಯನಿರ್ವಹಿಸಬೇಕು ಎಂದು ತಿಳಿದಿತ್ತು. ಇಂತಹ ಅನೇಕ ಸಂದರ್ಭಗಳು ನಿರ್ಮಾಣವಾಗಿದ್ದ ಮತ್ತು ಅವುಗಳನ್ನು ಚಾಕಚಕ್ಯತೆಯಿಂದ ಪರಿಹರಿಸಿದ ಅನೇಕ ನಿದರ್ಶನಗಳಿವೆ. ಈಗ ಮೋದಿ ಸರ್ಕಾರಕ್ಕೆ ಸಲಹೆ ನೀಡುವವರಿಗೆ ಅಂತಹ ಯೋಗ್ಯತೆ ಇಲ್ಲ ಅಥವಾ ಉದ್ದೇಶಪೂರ್ವಕವಾಗಿ ಈ ೩ ಮಸೂದೆಗಳನ್ನು ಜಾರಿಗೆ ತರಲಾಗಿವೆ.

ಚುನಾವಣೆಗಳಲ್ಲಿ ಗೆಲವು ಸಾಧಿಸುವ ತಂತ್ರ ತಿಳಿದ ಮಾತ್ರಕ್ಕೆ ನೀವು Democratic ಆಗಿಬಿಡುವುದಿಲ್ಲ ಈ ಬಗೆಯ ಮಸೂದೆಗಳನ್ನು ಮಂಡಿಸುವುದಕ್ಕೆ ಮುಂಚೆ ಸಾರ್ವಜನಿಕರ ಅಭಿಪ್ರಾಯ ಪಡೆಯಬೇಕೆಂಬ ಕಾಳಜಿಯೇ ನಿಮಗಿಲ್ಲ. ಈ ಕಾಯ್ದೆಯಿಂದ ಯಾರಿಗೆ ನೇರವಾಗಿ ಸಮಸ್ಯೆ ಉಂಟಾಗುವುದೋ, ಅವರ ಅನುಭವಪೂರ್ಣ ಸಲಹೆಯನ್ನು ಪಡೆಯುವ ದೊಡ್ಡತನವೂ ನಿಮಗಿಲ್ಲ. ಅವರು ನೀಡುವ ಅನುಭವ ಜನ್ಯವಾದ ಸಲಹೆಗಳನ್ನು ಪಡೆದು ಒಂದು ಒಳ್ಳೆಯ ಕಾನೂನು ರಚಿಸಬೇಕೆಂಬ ತವಕವೂ ನಿಮಗಿಲ್ಲ. ದೇಶವನ್ನು ಬಂಡವಾಳಗಾರರ ವಶಕ್ಕೆ ಒಪ್ಪಿಸಬಯಸುವ ನಿಮಗೆ ಆತ್ಮಸಾಕ್ಷಿ ಇರಲು ಸಾಧ್ಯವಿಲ್ಲ.

PC : India Legal

ಮೋದಿಯವರು ಜಮೀನು ಮತ್ತು ವ್ಯವಸಾಯ ಮತ್ತು ಮಾರುಕಟ್ಟೆಗೆ ಸಂಬಂಧಪಟ್ಟಂತೆ 3 ಉಗ್ರ ಕಾಯ್ದೆಗಳನ್ನು ಆರ್ಡಿನೆಸ್ಸ್ ಮುಖಾಂತರ ಜಾರಿಗೆ ತಂದು ಆ ನಂತರ ಪಾರ್ಲಿಮೆಂಟಿನ ಕಾನೂನು ಕಟ್ಟಲೆಗಳನ್ನು ಧಿಕ್ಕರಿಸಿ, ಕಾನೂನುಗಳನ್ನಾಗಿ ಪರಿವರ್ತಿಸಲಾಯಿತು. ವ್ಯವಸಾಯ ಭೂಮಿಯನ್ನು ಕಾರ್ಪೊರೆಟ್ ಕಂಪನಿಗಳ ವಶ ಮಾಡುವುದು, ರೈತರನ್ನು ಕೂಲಿಗಳಾಗಿ ಪರಿವರ್ತಿಸಿ, ಕಾರ್ಪೊರೆಟ್‌ಗಳಿಗೆ ಬೇಕಾದ ಬೆಳೆ ಬೆಳೆದುಕೊಡಲು ಅವಕಾಶ ಮಾಡಿಕೊಡಲಾಯಿತು. ರೈತರ ಹಿತದೃಷ್ಟಿಯಿಂದ ರಚಿಸಿರುವ ಮಾರ್ಕೆಟ್ ಯಾರ್ಡ್‌ಗಳನ್ನು ಮುಚ್ಚಿಸುವುದು, ರೈತರು ಕೂಲಿಯಾಳುಗಳಾಗಿ ಬೆಳೆದ ಬೆಳೆಯನ್ನೆಲ್ಲ ವಶಕ್ಕೆ ತೆಗೆದುಕೊಳ್ಳುವುದು, ರೈಲ್ವೆ ನಿಲ್ದಾಣಗಳ ಸಮೀಪ ಗೋಡೌನ್‌ಗಳನ್ನು ಮಾಡಿಕೊಂಡು ಗೂಡ್ಸ್ ರೈಲಿನ ಮೂಲಕ ಅವುಗಳನ್ನು ತಮಗೆ ಮಾರುಕಟ್ಟೆ ಇರುವ ಸ್ಥಳಗಳಿಗೆ ರವಾನಿಸುವುದು, ಅವುಗಳನ್ನು ದುಬಾರಿ ಬೆಲೆಗೆ ಮಾರಿಕೊಳ್ಳುವುದು ಈ ರೀತಿ ಕಾರ್ಪೊರೆಟ್ ಕಂಪನಿಗಳ ಹಿತದೃಷ್ಟಿಯಿಂದ ರೈತರನ್ನು ನಾಶ ಮಾಡುವ ದುರುದ್ದೇಶ ಮೋದಿಯವರ ಸರ್ಕಾರದ್ದು. ಆ ಮೂಲಕ ಭಾರತವನ್ನು ಬಂಡವಾಳಶಾಹಿ ರಾಷ್ಟ್ರವನ್ನಾಗಿ ಪರಿವರ್ತಿಸುವುದು ಅವರ ದುರಾಲೋಚನೆ.

ಪಂಜಾಬ್ ಮತ್ತು ಹರಿಯಾಣದ 30ಸಾವಿರಕ್ಕಿಂತಲೂ ಹೆಚ್ಚು ರೈತರು ಸರ್ಕಾರದ ವಿರುದ್ಧ ಶಾಂತಿಯುತ ದಂಗೆ ಎದ್ದಿರುವುದು ಸ್ವಾಭಾವಿಕವಾಗಿಯೇ ಇದೆ. ಕಡಿಮೆ ದರದಲ್ಲಿ ಪ್ರಯಾಣಿಸುತ್ತಿದ್ದ ಭಾರತೀಯ ಮಧ್ಯಮವರ್ಗದ ಹಾಗೂ ಬಡವರ ಅನುಕೂಲಕ್ಕಾಗಿ ನಿರ್ಮಿತವಾದ ರೈಲ್ವೆಯನ್ನು ಬಿಡಿಬಿಡಿಯಾಗಿ ಬಂಡವಾಳಶಾಹಿಗಳಿಗೆ ವಹಿಸತಕ್ಕ ಹುನ್ನಾರವೂ ಇದರಲ್ಲಿದೆ. ರೈಲ್ವೆ ವ್ಯವಸ್ಥೆ ಈ ಬಂಡವಾಳಶಾಹಿಗಳ ಕೈಗೆ ಹೋಗುತ್ತಿರುವುದರಿಂದ ತಾವು ನಿರ್ವಹಿಸುವ ಗೋಡೌನ್‌ಗಳಿಂದ ಉಚಿತವಾಗಿ ಗೂಡ್ಸ್ ಬೋಗಿಗಳಲ್ಲಿ ಕೃಷಿ ಉತ್ಪನ್ನಗಳನ್ನು ತುಂಬಿ ಸಾಗಿಸಲೂ ಅವಕಾಶ ಕಲ್ಪಿಸಿಕೊಡಲಾಗಿದೆ. ವ್ಯವಸಾಯಗಾರನ ಭೂಮಿ ಕಿತ್ತುಕೊಂಡು ಅವನನ್ನು ಬಂಡವಾಳಶಾಹಿಯ ಗುಲಾಮನನ್ನಾಗಿ ಮಾಡಿ ಅವನು ಬೆಳೆದು ಕೊಟ್ಟ ಆಹಾರ ಪದಾರ್ಥಗಳನ್ನು ಸಾಗಿಸುವ ಖರ್ಚನ್ನು ಉಳಿಸಿ ಈ ಧೂರ್ತರ ಕಿಸೆ ತುಂಬುವ ಯೋಜನೆ ಇದು.

ಕೇಂದ್ರ ಸರ್ಕಾರದ ಈ ವರ್ಷದ ಹಣಕಾಸಿನ ಪರಿಸ್ಥಿತಿ ತಿಳಿಯಬೇಕು. ಆರ್ಥಿಕಸ್ಥಿತಿ ಬಹಳ ಬಿಗಡಾಯಿಸಿದೆ. ಹಣಕಾಸಿನ ಸಚಿವಾಲಯದ ಮಾತನ್ನು ನಂಬುವುದಾದರೆ ಆಹಾರ ಧಾನ್ಯಗಳನ್ನು ಕೊಳ್ಳಲು ಸರ್ಕಾರದ ಬಳಿ ಹಣವಿಲ್ಲ. ಫುಡ್ ಕಾರ್ಪೊರೇಶನ್ ಇಂಡಿಯಾಗೆ ಈಗಾಗಲೇ ಕೊಟ್ಟಿರುವ ಸಾಲದ ಮೊತ್ತ 2.65 ಲಕ್ಷ ಕೋಟಿ. ಆದರೆ ಜನರಿಗೆ ಆಹಾರ ಒದಗಿಸುವುದು ಕಾನೂನು ರೀತ್ಯಾ ಸರ್ಕಾರದ ಜವಾಬ್ದಾರಿ. ಹಣದ ಕೊರತೆ ಇದೆ ಎಂದು ಈ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವೇ ಇಲ್ಲ. ಈ ನ್ಯಾಯಬದ್ಧ ಜವಾಬ್ದಾರಿಯನ್ನು ಕಾರ್ಪೊರೇಟ್ ಸಂಸ್ಥೆಗಳಿಗೆ, ಖಾಸಗಿಯವರಿಗೆ ವಹಿಸಿಕೊಡಲು ಬರುವುದೇ! ಗಂಭೀರವಾಗಿ ವಿಚಾರ ಮಾಡಬೇಕಾದ ಜಟಿಲ ಪ್ರಶ್ನೆ ಇದು.


ಇದನ್ನೂ ಓದಿ: ಟ್ರ್ಯಾಕ್ಟರ್ ರ್‍ಯಾಲಿ: ದಿಟ್ಟ ರೈತ ಹೋರಾಟದ ಗಮನಸೆಳೆದ 10 ಫೋಟೊಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....

SIR ಅಕ್ರಮದ ವಿರುದ್ಧ ಅನಿರ್ದಿಷ್ಟಾವಧಿ ಹೋರಾಟದ ಎಚ್ಚರಿಕೆ: ಆ.15ಕ್ಕೆ ‘ಮತದಾರರ ಹಕ್ಕು ಪ್ರತಿಪಾದನಾ ದಿನ’

ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಲ್ಲಿ ಲಕ್ಷಾಂತರ ಅರ್ಹ ನಾಗರಿಕರು ಮತದಾನದ ಹಕ್ಕಿನಿಂದ ವಂಚಿತರಾಗುವ ಭೀತಿ ಎದುರಾಗಿದೆ ಎಂದು ‘SIR ವಿರೋಧಿ ಜಾತ್ಯತೀತ ಪಕ್ಷಗಳು ಹಾಗೂ ಜನಪರ ಸಂಘಟನೆಗಳ ಒಕ್ಕೂಟ’...

ಶಾಖಾಪುರ ದಲಿತರ ಮೇಲಿನ ಹಲ್ಲೆ ಪ್ರಕರಣ: ಸಿಎಂ, ಗೃಹ ಸಚಿವರಿಗೆ ಪತ್ರ, ಅಗ್ನಿವೀರನ ಬೆನ್ನಿಗೆ ನಿಂತ ಭಾರತೀಯ ಸೇನೆ

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಾಖಾಪುರ ಗ್ರಾಮದಲ್ಲಿ ದಲಿತ ಸಮುದಾಯದವರ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಭಾರತೀಯ ಸೇನೆ ತೀವ್ರವಾಗಿ ಪರಿಗಣಿಸಿದೆ. ದೇಶದ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಗ್ನಿವೀರ ಯೋಧ ಶಿವಕುಮಾರ್ ತಳವಾರ...

RSS ಇತಿಹಾಸ ಜಾಲಾಡ್ತಿದೆ ಸರ್ಕಾರ: ಸಚಿವ ಪ್ರಿಯಾಂಕ್ ಖರ್ಗೆ

ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ವಿರುದ್ಧ ಯಾವುದೇ ಕಾನೂನಾತ್ಮಕ ಕ್ರಮ ಕೈಗೊಳ್ಳುವ ಮುನ್ನ ರಾಜ್ಯ ಸರ್ಕಾರವು ಸಂಘಟನೆಯ ಸಂಪೂರ್ಣ ಇತಿಹಾಸ ಹಾಗೂ ಹಿನ್ನೆಲೆಯನ್ನು ಕೂಲಂಕಷವಾಗಿ ಅಧ್ಯಯನ ನಡೆಸುತ್ತಿದೆ ಎಂದು ಗೃಹ ಸಚಿವ ಪ್ರಿಯಾಂಕ್...