Homeಅಂಕಣಗಳುಸಮಿತಿಯಿಂದ ರೈತ ಹೋರಾಟಕ್ಕೆ ಪರಿಹಾರ ಅಸಾಧ್ಯ, ಬೇಡಿಕೆಗಳಿಗೆ ಒಪ್ಪುವುದೊಂದೇ ದಾರಿ: ಎಚ್ ಎಸ್ ದೊರೆಸ್ವಾಮಿ

ಸಮಿತಿಯಿಂದ ರೈತ ಹೋರಾಟಕ್ಕೆ ಪರಿಹಾರ ಅಸಾಧ್ಯ, ಬೇಡಿಕೆಗಳಿಗೆ ಒಪ್ಪುವುದೊಂದೇ ದಾರಿ: ಎಚ್ ಎಸ್ ದೊರೆಸ್ವಾಮಿ

ರೈತರ ಮತ್ತು ಸರ್ಕಾರದ ಉದ್ದೇಶಗಳೇ ಬೇರೆಯಾಗಿರುವುದರಿಂದ ಸಮಿತಿಯೊಂದಕ್ಕೆ ಹೇಗೆ ಈ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯವಾಗುತ್ತದೆ? ಸರ್ಕಾರ ಈ ಶಾಸನಗಳಲ್ಲಿ ಕೆಲವು ತಿದ್ದುಪಡಿಗಳನ್ನು ಈಗಾಗಲೇ ಸೂಚಿಸಿವೆ. ಇದಕ್ಕೆ ರೈತರು ವಿರೋಧ ಮಾಡಿದ್ದಾರೆ. ಸರ್ಕಾರಕ್ಕೆ ಇದು ಅರಿವಾಗಿದೆ. ಪರಿಸ್ಥಿತಿ ಹೀಗಿರುವಾಗ ಯಾವ ಸಮಿತಿ ತಾನೇ ಈ ಸಮಸ್ಯೆಯನ್ನು ಬಗೆಹರಿಸಬಲ್ಲದು? ಸರ್ಕಾರ ತನ್ನ ನಿಲುವನ್ನು ಬದಲಾಯಿಸುವುದೊಂದೇ ಇರುವ ರಾಜಮಾರ್ಗ.

- Advertisement -
- Advertisement -

ದೆಹಲಿಯ ಗಡಿಗಳಲ್ಲಿ ರೈತ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಈ ಸಂದರ್ಭದಲ್ಲಿ ಸರ್ವೋಚ್ಚ ನ್ಯಾಯಾಲಯ ಮಧ್ಯಪ್ರವೇಶಿಸಿ, ಒಂದು ಸಮಿತಿ ರಚಿಸುವ ಮೂಲಕ ರೈತರ ಬೇಡಿಕೆಗಳನ್ನು ವಿಶ್ಲೇಷಿಸಿ, ಶಾಂತಿಯುತವಾಗಿ ಸಮಸ್ಯೆ ಬಗೆಹರಿಸಿ ಕೊಡಿ ಎಂದು ಮೋದಿ ಸರ್ಕಾರಕ್ಕೆ ಸಲಹೆ ಕೊಟ್ಟಿದೆ. ಸಮಿತಿ ರಚಿಸುವುದರಿಂದ ಈ ಜಟಿಲ ಪ್ರಶ್ನೆ ಬಗೆಹರಿಯುವಂತೆ ಕಾಣುತ್ತಿಲ್ಲ.

ರೈತರ ಮತ್ತು ಸರ್ಕಾರದ ಉದ್ದೇಶಗಳೇ ಬೇರೆಯಾಗಿರುವುದರಿಂದ ಸಮಿತಿಯೊಂದಕ್ಕೆ ಹೇಗೆ ಈ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯವಾಗುತ್ತದೆ? ಸರ್ಕಾರ ಈ ಶಾಸನಗಳಲ್ಲಿ ಕೆಲವು ತಿದ್ದುಪಡಿಗಳನ್ನು ಈಗಾಗಲೇ ಸೂಚಿಸಿವೆ. ಇದಕ್ಕೆ ರೈತರು ವಿರೋಧ ಮಾಡಿದ್ದಾರೆ. ಸರ್ಕಾರಕ್ಕೆ ಇದು ಅರಿವಾಗಿದೆ. ಪರಿಸ್ಥಿತಿ ಹೀಗಿರುವಾಗ ಯಾವ ಸಮಿತಿ ತಾನೇ ಈ ಸಮಸ್ಯೆಯನ್ನು ಬಗೆಹರಿಸಬಲ್ಲದು? ಸರ್ಕಾರ ತನ್ನ ನಿಲುವನ್ನು ಬದಲಾಯಿಸುವುದೊಂದೇ ಇರುವ ರಾಜಮಾರ್ಗ. ಆರ್‌ಎಸ್‌ಎಸ್‌ನ ಭಾರತ ಕಿಸಾನ್ ಸಂಘ ತಾನು ರೈತರ ಪರ ಎಂದು ಘೋಷಣೆ ಮಾಡಿ ನಾಟಕವಾಡುತ್ತಿದೆ. ಅದರ ಪ್ರೇರಣೆಯಿಂದಲೇ ಮೋದಿ ಇಂತಹ ಘೋರ ಕಾನೂನುಗಳನ್ನು ರಚಿಸುತ್ತಿರುವುದು ಎಂಬುದು ಪ್ರಪಂಚಕ್ಕೆ ಗೊತ್ತಿದೆ. ಆ ದೃಷ್ಟಿಯಿಂದ ಇದೂ ಒಂದು ದೆವ್ವದ ಬಾಯಿಂದ ಬಂದ ಭಗವದ್ಗೀತೆಯೇ ಸರಿ.

ಕಾಂಗ್ರೆಸ್‌ಗೆ ಇಂತಹ ಬಿಗಡಾಯಿಸಿದ ಸ್ಥಿತಿಯಲ್ಲಿ ಹೇಗೆ ತನ್ನ ಕಾರ್ಯನಿರ್ವಹಿಸಬೇಕು ಎಂದು ತಿಳಿದಿತ್ತು. ಇಂತಹ ಅನೇಕ ಸಂದರ್ಭಗಳು ನಿರ್ಮಾಣವಾಗಿದ್ದ ಮತ್ತು ಅವುಗಳನ್ನು ಚಾಕಚಕ್ಯತೆಯಿಂದ ಪರಿಹರಿಸಿದ ಅನೇಕ ನಿದರ್ಶನಗಳಿವೆ. ಈಗ ಮೋದಿ ಸರ್ಕಾರಕ್ಕೆ ಸಲಹೆ ನೀಡುವವರಿಗೆ ಅಂತಹ ಯೋಗ್ಯತೆ ಇಲ್ಲ ಅಥವಾ ಉದ್ದೇಶಪೂರ್ವಕವಾಗಿ ಈ ೩ ಮಸೂದೆಗಳನ್ನು ಜಾರಿಗೆ ತರಲಾಗಿವೆ.

ಚುನಾವಣೆಗಳಲ್ಲಿ ಗೆಲವು ಸಾಧಿಸುವ ತಂತ್ರ ತಿಳಿದ ಮಾತ್ರಕ್ಕೆ ನೀವು Democratic ಆಗಿಬಿಡುವುದಿಲ್ಲ ಈ ಬಗೆಯ ಮಸೂದೆಗಳನ್ನು ಮಂಡಿಸುವುದಕ್ಕೆ ಮುಂಚೆ ಸಾರ್ವಜನಿಕರ ಅಭಿಪ್ರಾಯ ಪಡೆಯಬೇಕೆಂಬ ಕಾಳಜಿಯೇ ನಿಮಗಿಲ್ಲ. ಈ ಕಾಯ್ದೆಯಿಂದ ಯಾರಿಗೆ ನೇರವಾಗಿ ಸಮಸ್ಯೆ ಉಂಟಾಗುವುದೋ, ಅವರ ಅನುಭವಪೂರ್ಣ ಸಲಹೆಯನ್ನು ಪಡೆಯುವ ದೊಡ್ಡತನವೂ ನಿಮಗಿಲ್ಲ. ಅವರು ನೀಡುವ ಅನುಭವ ಜನ್ಯವಾದ ಸಲಹೆಗಳನ್ನು ಪಡೆದು ಒಂದು ಒಳ್ಳೆಯ ಕಾನೂನು ರಚಿಸಬೇಕೆಂಬ ತವಕವೂ ನಿಮಗಿಲ್ಲ. ದೇಶವನ್ನು ಬಂಡವಾಳಗಾರರ ವಶಕ್ಕೆ ಒಪ್ಪಿಸಬಯಸುವ ನಿಮಗೆ ಆತ್ಮಸಾಕ್ಷಿ ಇರಲು ಸಾಧ್ಯವಿಲ್ಲ.

PC : India Legal

ಮೋದಿಯವರು ಜಮೀನು ಮತ್ತು ವ್ಯವಸಾಯ ಮತ್ತು ಮಾರುಕಟ್ಟೆಗೆ ಸಂಬಂಧಪಟ್ಟಂತೆ 3 ಉಗ್ರ ಕಾಯ್ದೆಗಳನ್ನು ಆರ್ಡಿನೆಸ್ಸ್ ಮುಖಾಂತರ ಜಾರಿಗೆ ತಂದು ಆ ನಂತರ ಪಾರ್ಲಿಮೆಂಟಿನ ಕಾನೂನು ಕಟ್ಟಲೆಗಳನ್ನು ಧಿಕ್ಕರಿಸಿ, ಕಾನೂನುಗಳನ್ನಾಗಿ ಪರಿವರ್ತಿಸಲಾಯಿತು. ವ್ಯವಸಾಯ ಭೂಮಿಯನ್ನು ಕಾರ್ಪೊರೆಟ್ ಕಂಪನಿಗಳ ವಶ ಮಾಡುವುದು, ರೈತರನ್ನು ಕೂಲಿಗಳಾಗಿ ಪರಿವರ್ತಿಸಿ, ಕಾರ್ಪೊರೆಟ್‌ಗಳಿಗೆ ಬೇಕಾದ ಬೆಳೆ ಬೆಳೆದುಕೊಡಲು ಅವಕಾಶ ಮಾಡಿಕೊಡಲಾಯಿತು. ರೈತರ ಹಿತದೃಷ್ಟಿಯಿಂದ ರಚಿಸಿರುವ ಮಾರ್ಕೆಟ್ ಯಾರ್ಡ್‌ಗಳನ್ನು ಮುಚ್ಚಿಸುವುದು, ರೈತರು ಕೂಲಿಯಾಳುಗಳಾಗಿ ಬೆಳೆದ ಬೆಳೆಯನ್ನೆಲ್ಲ ವಶಕ್ಕೆ ತೆಗೆದುಕೊಳ್ಳುವುದು, ರೈಲ್ವೆ ನಿಲ್ದಾಣಗಳ ಸಮೀಪ ಗೋಡೌನ್‌ಗಳನ್ನು ಮಾಡಿಕೊಂಡು ಗೂಡ್ಸ್ ರೈಲಿನ ಮೂಲಕ ಅವುಗಳನ್ನು ತಮಗೆ ಮಾರುಕಟ್ಟೆ ಇರುವ ಸ್ಥಳಗಳಿಗೆ ರವಾನಿಸುವುದು, ಅವುಗಳನ್ನು ದುಬಾರಿ ಬೆಲೆಗೆ ಮಾರಿಕೊಳ್ಳುವುದು ಈ ರೀತಿ ಕಾರ್ಪೊರೆಟ್ ಕಂಪನಿಗಳ ಹಿತದೃಷ್ಟಿಯಿಂದ ರೈತರನ್ನು ನಾಶ ಮಾಡುವ ದುರುದ್ದೇಶ ಮೋದಿಯವರ ಸರ್ಕಾರದ್ದು. ಆ ಮೂಲಕ ಭಾರತವನ್ನು ಬಂಡವಾಳಶಾಹಿ ರಾಷ್ಟ್ರವನ್ನಾಗಿ ಪರಿವರ್ತಿಸುವುದು ಅವರ ದುರಾಲೋಚನೆ.

ಪಂಜಾಬ್ ಮತ್ತು ಹರಿಯಾಣದ 30ಸಾವಿರಕ್ಕಿಂತಲೂ ಹೆಚ್ಚು ರೈತರು ಸರ್ಕಾರದ ವಿರುದ್ಧ ಶಾಂತಿಯುತ ದಂಗೆ ಎದ್ದಿರುವುದು ಸ್ವಾಭಾವಿಕವಾಗಿಯೇ ಇದೆ. ಕಡಿಮೆ ದರದಲ್ಲಿ ಪ್ರಯಾಣಿಸುತ್ತಿದ್ದ ಭಾರತೀಯ ಮಧ್ಯಮವರ್ಗದ ಹಾಗೂ ಬಡವರ ಅನುಕೂಲಕ್ಕಾಗಿ ನಿರ್ಮಿತವಾದ ರೈಲ್ವೆಯನ್ನು ಬಿಡಿಬಿಡಿಯಾಗಿ ಬಂಡವಾಳಶಾಹಿಗಳಿಗೆ ವಹಿಸತಕ್ಕ ಹುನ್ನಾರವೂ ಇದರಲ್ಲಿದೆ. ರೈಲ್ವೆ ವ್ಯವಸ್ಥೆ ಈ ಬಂಡವಾಳಶಾಹಿಗಳ ಕೈಗೆ ಹೋಗುತ್ತಿರುವುದರಿಂದ ತಾವು ನಿರ್ವಹಿಸುವ ಗೋಡೌನ್‌ಗಳಿಂದ ಉಚಿತವಾಗಿ ಗೂಡ್ಸ್ ಬೋಗಿಗಳಲ್ಲಿ ಕೃಷಿ ಉತ್ಪನ್ನಗಳನ್ನು ತುಂಬಿ ಸಾಗಿಸಲೂ ಅವಕಾಶ ಕಲ್ಪಿಸಿಕೊಡಲಾಗಿದೆ. ವ್ಯವಸಾಯಗಾರನ ಭೂಮಿ ಕಿತ್ತುಕೊಂಡು ಅವನನ್ನು ಬಂಡವಾಳಶಾಹಿಯ ಗುಲಾಮನನ್ನಾಗಿ ಮಾಡಿ ಅವನು ಬೆಳೆದು ಕೊಟ್ಟ ಆಹಾರ ಪದಾರ್ಥಗಳನ್ನು ಸಾಗಿಸುವ ಖರ್ಚನ್ನು ಉಳಿಸಿ ಈ ಧೂರ್ತರ ಕಿಸೆ ತುಂಬುವ ಯೋಜನೆ ಇದು.

ಕೇಂದ್ರ ಸರ್ಕಾರದ ಈ ವರ್ಷದ ಹಣಕಾಸಿನ ಪರಿಸ್ಥಿತಿ ತಿಳಿಯಬೇಕು. ಆರ್ಥಿಕಸ್ಥಿತಿ ಬಹಳ ಬಿಗಡಾಯಿಸಿದೆ. ಹಣಕಾಸಿನ ಸಚಿವಾಲಯದ ಮಾತನ್ನು ನಂಬುವುದಾದರೆ ಆಹಾರ ಧಾನ್ಯಗಳನ್ನು ಕೊಳ್ಳಲು ಸರ್ಕಾರದ ಬಳಿ ಹಣವಿಲ್ಲ. ಫುಡ್ ಕಾರ್ಪೊರೇಶನ್ ಇಂಡಿಯಾಗೆ ಈಗಾಗಲೇ ಕೊಟ್ಟಿರುವ ಸಾಲದ ಮೊತ್ತ 2.65 ಲಕ್ಷ ಕೋಟಿ. ಆದರೆ ಜನರಿಗೆ ಆಹಾರ ಒದಗಿಸುವುದು ಕಾನೂನು ರೀತ್ಯಾ ಸರ್ಕಾರದ ಜವಾಬ್ದಾರಿ. ಹಣದ ಕೊರತೆ ಇದೆ ಎಂದು ಈ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವೇ ಇಲ್ಲ. ಈ ನ್ಯಾಯಬದ್ಧ ಜವಾಬ್ದಾರಿಯನ್ನು ಕಾರ್ಪೊರೇಟ್ ಸಂಸ್ಥೆಗಳಿಗೆ, ಖಾಸಗಿಯವರಿಗೆ ವಹಿಸಿಕೊಡಲು ಬರುವುದೇ! ಗಂಭೀರವಾಗಿ ವಿಚಾರ ಮಾಡಬೇಕಾದ ಜಟಿಲ ಪ್ರಶ್ನೆ ಇದು.


ಇದನ್ನೂ ಓದಿ: ಟ್ರ್ಯಾಕ್ಟರ್ ರ್‍ಯಾಲಿ: ದಿಟ್ಟ ರೈತ ಹೋರಾಟದ ಗಮನಸೆಳೆದ 10 ಫೋಟೊಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮತ ಉಳಿಸಿ ಎಂದು ಜನ ಬೇಡಿಕೊಳ್ಳುವಂತೆ ಮಾಡಬೇಡಿ’: ಇದು ನನ್ನ ವೈಯಕ್ತಿಕ ಸಮಸ್ಯೆ ಅಲ್ಲ, ಇಡೀ ದೇಶದ ಸಮಸ್ಯೆ: ಬಹುಭಾಷಾ ನಟ ಪ್ರಕಾಶ್ ರಾಜ್

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವಿಧಾನದ ಬಗ್ಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಕರೆದಿದ್ದ ಮಹತ್ವದ ಪತ್ರಿಕಾಗೋಷ್ಠಿ ಆಗಸ್ಟ್ 14, 2026ರಂದು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ...

‘ನಲ್ಸಾರ್’ ವಿದ್ಯಾರ್ಥಿಗಳ ವೃತ್ತಿಜೀವನಕ್ಕೆ ಅಡ್ಡಬಂದ BCI ನಡೆಗೆ CJI ಗರಂ

ಹೈದರಾಬಾದ್‌ನ 'ನಲ್ಸಾರ್' (NALSAR) ಕಾನೂನು ವಿಶ್ವವಿದ್ಯಾಲಯದ ಪದವೀಧರರ ಸನ್ನದು (ಎನ್‌ರೋಲ್‌ಮೆಂಟ್) ನೋಂದಣಿಯನ್ನು ಅಮಾನತಿನಲ್ಲಿಡುವಂತೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ನೀಡಿದ್ದ ವಿವಾದಾತ್ಮಕ ನಿರ್ದೇಶನದ ವಿರುದ್ಧ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್,...

ಉತ್ತರ ಪ್ರದೇಶದಲ್ಲಿ ಮುಸ್ಲಿಮರ ಮೇಲಿನ ದೌರ್ಜನ್ಯ: ಯೋಗಿ ಆದಿತ್ಯನಾಥ್ ಸೇರಿ 8 ಅಧಿಕಾರಿಗಳ ನಿರ್ಬಂಧಕ್ಕೆ ಕೆನಡಾ ಮಾನವ ಹಕ್ಕುಗಳ ಸಂಸ್ಥೆ ಆಗ್ರಹ

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ನಿರಂತರವಾಗಿ ನಡೆಸಲಾಗುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ರಾಜ್ಯ ಬೆಂಬಲಿತ ದೌರ್ಜನ್ಯಗಳನ್ನು ಖಂಡಿಸಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಎಂಟು ಪ್ರಮುಖ...

SIR: ಬೆಂಗಳೂರಿನ ಸರ್ವಜ್ಞನಗರದ ಒಂದೇ ಬೂತ್‌ನಲ್ಲಿ ಶೇ.93.71ರಷ್ಟು ಮತದಾರರ ಹೆಸರು ನಾಪತ್ತೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಹೆಸರಿನಲ್ಲಿ ರಾಜಧಾನಿ ಬೆಂಗಳೂರಿನ ಸರ್ವಜ್ಞನಗರ ಕ್ಷೇತ್ರದ ಒಂದೇ ಮತಗಟ್ಟೆಯಲ್ಲಿ ಬರೋಬ್ಬರಿ ಶೇ. 93.71ರಷ್ಟು ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ತೆಗೆಯಲಾಗಿದೆ ಎಂಬ ಆಘಾತಕಾರಿ ಸಂಗತಿಯೊಂದು...

ASDDO ಪಟ್ಟಿ ಸಾರ್ವಜನಿಕ ಪ್ರಕಟಣೆ ಬಗ್ಗೆ ಚುನಾವಣಾ ಆಯೋಗ ನಿರ್ಲಕ್ಷ್ಯ! ಆರೋಪ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬರೋಬ್ಬರಿ 1.08 ಕೋಟಿ ಮತದಾರರ ಹೆಸರನ್ನು ಎಎಸ್‌ಡಿಡಿಒ (ASDDO) ಪಟ್ಟಿಗೆ ಸೇರಿಸಿ ಆತಂಕ ಸೃಷ್ಟಿಸಿದ್ದ ಚುನಾವಣಾ ಆಯೋಗ, ಈಗ ಆ ಪಟ್ಟಿಯ ಸಾರ್ವಜನಿಕ ಪ್ರಕಟಣೆಯ...

SIR: 62 ವರ್ಷದ ಜೀವಂತ ವ್ಯಕ್ತಿಯನ್ನು ‘ಮೃತ’ ಎಂದು ಪಟ್ಟಿ ಮಾಡಿದ ಆಯೋಗದ ಕುತಂತ್ರ ಬಯಲು

ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ ಆಶಯಕ್ಕೇ ಮಾರಕವಾಗಿ ಪರಿಣಮಿಸುತ್ತಿದೆ. ದೋಷಮುಕ್ತ ಪಟ್ಟಿ ಸಿದ್ಧಪಡಿಸುವ ನೆಪದಲ್ಲಿ ಚುನಾವಣಾ ಆಯೋಗವು ಬರೋಬ್ಬರಿ 1.08 ಕೋಟಿ ಮತದಾರರನ್ನು...

‘ಸಿದ್ದಾರ್ಥ ವಿಹಾರ ಟ್ರಸ್ಟ್’ ನ ದಾಖಲೆ ನೀಡುತ್ತೇನೆ: ಆರ್‌ಎಸ್‌ಎಸ್, ರಾಮಮಂದಿರದ ಲೆಕ್ಕ ನೀಡಲು ಸಿದ್ಧವಿದ್ದೀರಾ?: ಬಿಜೆಪಿ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಸವಾಲು

ಬೆಂಗಳೂರು: ‘ಸಿದ್ದಾರ್ಥ ವಿಹಾರ ಟ್ರಸ್ಟ್‌’ ವಿರುದ್ಧ ಭೂ ಅಕ್ರಮದ ಆರೋಪ ಮಾಡಿ ತಮ್ಮ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇರ...

ಕ್ಯೂಬಾ ಎಂದರೆ ಫಿಡೆಲ್, ಅಮೆರಿಕದ ಕುತಂತ್ರದ ವಿರುದ್ಧ ಪುಟ್ಟ ರಾಷ್ಟ್ರ ಕ್ಯೂಬಾದ ಸುದೀರ್ಘ ಕ್ರಾಂತಿ

ಆಗಸ್ಟ್ 13, 2026 ರಂದು ಕ್ಯೂಬಾ ತನ್ನ ಕ್ರಾಂತಿಕಾರಿ ನಾಯಕ, ಕಮಾಂಡರ್-ಇನ್-ಚೀಫ್ ಫಿಡೆಲ್ ಕ್ಯಾಸ್ಟ್ರೋ ರೂಜ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದೆ. ಐದು ದಶಕಗಳ ಕಾಲ ದೇಶವನ್ನು ಮುನ್ನಡೆಸಿದ ನಾಯಕನ ಶಾಶ್ವತ ಸಿದ್ಧಾಂತಗಳು...

‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ: ಚಾಲ್ತಿಯಲ್ಲಿರುವ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸರ್ಕಾರಕ್ಕೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಒತ್ತಾಯ

ಬೆಂಗಳೂರು: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಜಾತಿ ತಾರತಮ್ಯ, ಕಿರುಕುಳ ಹಾಗೂ ವಂಚನೆಯನ್ನು ತಡೆಗಟ್ಟಲು ಅತ್ಯಂತ ನಿರ್ಣಾಯಕವಾಗಿರುವ 'ಕರ್ನಾಟಕ ರೋಹಿತ್ ವೇಮುಲಾ...

SIR: ತೆಲಂಗಾಣ ಸರ್ಕಾರ ಮತದಾರರಿಗೆ ನೀಡಿದ್ದ FRC ಯನ್ನು , ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೆಲಂಗಾಣ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದ್ದ ‘ಫ್ಯಾಮಿಲಿ ರಿಜಿಸ್ಟರ್ ಸರ್ಟಿಫಿಕೇಟ್’ (FRC) ಅನ್ನು ಮತದಾರರ ದಾಖಲೆಯನ್ನಾಗಿ ಸ್ವೀಕರಿಸಲು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. FRC...