Homeಅಂಕಣಗಳುಸಮಿತಿಯಿಂದ ರೈತ ಹೋರಾಟಕ್ಕೆ ಪರಿಹಾರ ಅಸಾಧ್ಯ, ಬೇಡಿಕೆಗಳಿಗೆ ಒಪ್ಪುವುದೊಂದೇ ದಾರಿ: ಎಚ್ ಎಸ್ ದೊರೆಸ್ವಾಮಿ

ಸಮಿತಿಯಿಂದ ರೈತ ಹೋರಾಟಕ್ಕೆ ಪರಿಹಾರ ಅಸಾಧ್ಯ, ಬೇಡಿಕೆಗಳಿಗೆ ಒಪ್ಪುವುದೊಂದೇ ದಾರಿ: ಎಚ್ ಎಸ್ ದೊರೆಸ್ವಾಮಿ

ರೈತರ ಮತ್ತು ಸರ್ಕಾರದ ಉದ್ದೇಶಗಳೇ ಬೇರೆಯಾಗಿರುವುದರಿಂದ ಸಮಿತಿಯೊಂದಕ್ಕೆ ಹೇಗೆ ಈ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯವಾಗುತ್ತದೆ? ಸರ್ಕಾರ ಈ ಶಾಸನಗಳಲ್ಲಿ ಕೆಲವು ತಿದ್ದುಪಡಿಗಳನ್ನು ಈಗಾಗಲೇ ಸೂಚಿಸಿವೆ. ಇದಕ್ಕೆ ರೈತರು ವಿರೋಧ ಮಾಡಿದ್ದಾರೆ. ಸರ್ಕಾರಕ್ಕೆ ಇದು ಅರಿವಾಗಿದೆ. ಪರಿಸ್ಥಿತಿ ಹೀಗಿರುವಾಗ ಯಾವ ಸಮಿತಿ ತಾನೇ ಈ ಸಮಸ್ಯೆಯನ್ನು ಬಗೆಹರಿಸಬಲ್ಲದು? ಸರ್ಕಾರ ತನ್ನ ನಿಲುವನ್ನು ಬದಲಾಯಿಸುವುದೊಂದೇ ಇರುವ ರಾಜಮಾರ್ಗ.

- Advertisement -
- Advertisement -

ದೆಹಲಿಯ ಗಡಿಗಳಲ್ಲಿ ರೈತ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಈ ಸಂದರ್ಭದಲ್ಲಿ ಸರ್ವೋಚ್ಚ ನ್ಯಾಯಾಲಯ ಮಧ್ಯಪ್ರವೇಶಿಸಿ, ಒಂದು ಸಮಿತಿ ರಚಿಸುವ ಮೂಲಕ ರೈತರ ಬೇಡಿಕೆಗಳನ್ನು ವಿಶ್ಲೇಷಿಸಿ, ಶಾಂತಿಯುತವಾಗಿ ಸಮಸ್ಯೆ ಬಗೆಹರಿಸಿ ಕೊಡಿ ಎಂದು ಮೋದಿ ಸರ್ಕಾರಕ್ಕೆ ಸಲಹೆ ಕೊಟ್ಟಿದೆ. ಸಮಿತಿ ರಚಿಸುವುದರಿಂದ ಈ ಜಟಿಲ ಪ್ರಶ್ನೆ ಬಗೆಹರಿಯುವಂತೆ ಕಾಣುತ್ತಿಲ್ಲ.

ರೈತರ ಮತ್ತು ಸರ್ಕಾರದ ಉದ್ದೇಶಗಳೇ ಬೇರೆಯಾಗಿರುವುದರಿಂದ ಸಮಿತಿಯೊಂದಕ್ಕೆ ಹೇಗೆ ಈ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯವಾಗುತ್ತದೆ? ಸರ್ಕಾರ ಈ ಶಾಸನಗಳಲ್ಲಿ ಕೆಲವು ತಿದ್ದುಪಡಿಗಳನ್ನು ಈಗಾಗಲೇ ಸೂಚಿಸಿವೆ. ಇದಕ್ಕೆ ರೈತರು ವಿರೋಧ ಮಾಡಿದ್ದಾರೆ. ಸರ್ಕಾರಕ್ಕೆ ಇದು ಅರಿವಾಗಿದೆ. ಪರಿಸ್ಥಿತಿ ಹೀಗಿರುವಾಗ ಯಾವ ಸಮಿತಿ ತಾನೇ ಈ ಸಮಸ್ಯೆಯನ್ನು ಬಗೆಹರಿಸಬಲ್ಲದು? ಸರ್ಕಾರ ತನ್ನ ನಿಲುವನ್ನು ಬದಲಾಯಿಸುವುದೊಂದೇ ಇರುವ ರಾಜಮಾರ್ಗ. ಆರ್‌ಎಸ್‌ಎಸ್‌ನ ಭಾರತ ಕಿಸಾನ್ ಸಂಘ ತಾನು ರೈತರ ಪರ ಎಂದು ಘೋಷಣೆ ಮಾಡಿ ನಾಟಕವಾಡುತ್ತಿದೆ. ಅದರ ಪ್ರೇರಣೆಯಿಂದಲೇ ಮೋದಿ ಇಂತಹ ಘೋರ ಕಾನೂನುಗಳನ್ನು ರಚಿಸುತ್ತಿರುವುದು ಎಂಬುದು ಪ್ರಪಂಚಕ್ಕೆ ಗೊತ್ತಿದೆ. ಆ ದೃಷ್ಟಿಯಿಂದ ಇದೂ ಒಂದು ದೆವ್ವದ ಬಾಯಿಂದ ಬಂದ ಭಗವದ್ಗೀತೆಯೇ ಸರಿ.

ಕಾಂಗ್ರೆಸ್‌ಗೆ ಇಂತಹ ಬಿಗಡಾಯಿಸಿದ ಸ್ಥಿತಿಯಲ್ಲಿ ಹೇಗೆ ತನ್ನ ಕಾರ್ಯನಿರ್ವಹಿಸಬೇಕು ಎಂದು ತಿಳಿದಿತ್ತು. ಇಂತಹ ಅನೇಕ ಸಂದರ್ಭಗಳು ನಿರ್ಮಾಣವಾಗಿದ್ದ ಮತ್ತು ಅವುಗಳನ್ನು ಚಾಕಚಕ್ಯತೆಯಿಂದ ಪರಿಹರಿಸಿದ ಅನೇಕ ನಿದರ್ಶನಗಳಿವೆ. ಈಗ ಮೋದಿ ಸರ್ಕಾರಕ್ಕೆ ಸಲಹೆ ನೀಡುವವರಿಗೆ ಅಂತಹ ಯೋಗ್ಯತೆ ಇಲ್ಲ ಅಥವಾ ಉದ್ದೇಶಪೂರ್ವಕವಾಗಿ ಈ ೩ ಮಸೂದೆಗಳನ್ನು ಜಾರಿಗೆ ತರಲಾಗಿವೆ.

ಚುನಾವಣೆಗಳಲ್ಲಿ ಗೆಲವು ಸಾಧಿಸುವ ತಂತ್ರ ತಿಳಿದ ಮಾತ್ರಕ್ಕೆ ನೀವು Democratic ಆಗಿಬಿಡುವುದಿಲ್ಲ ಈ ಬಗೆಯ ಮಸೂದೆಗಳನ್ನು ಮಂಡಿಸುವುದಕ್ಕೆ ಮುಂಚೆ ಸಾರ್ವಜನಿಕರ ಅಭಿಪ್ರಾಯ ಪಡೆಯಬೇಕೆಂಬ ಕಾಳಜಿಯೇ ನಿಮಗಿಲ್ಲ. ಈ ಕಾಯ್ದೆಯಿಂದ ಯಾರಿಗೆ ನೇರವಾಗಿ ಸಮಸ್ಯೆ ಉಂಟಾಗುವುದೋ, ಅವರ ಅನುಭವಪೂರ್ಣ ಸಲಹೆಯನ್ನು ಪಡೆಯುವ ದೊಡ್ಡತನವೂ ನಿಮಗಿಲ್ಲ. ಅವರು ನೀಡುವ ಅನುಭವ ಜನ್ಯವಾದ ಸಲಹೆಗಳನ್ನು ಪಡೆದು ಒಂದು ಒಳ್ಳೆಯ ಕಾನೂನು ರಚಿಸಬೇಕೆಂಬ ತವಕವೂ ನಿಮಗಿಲ್ಲ. ದೇಶವನ್ನು ಬಂಡವಾಳಗಾರರ ವಶಕ್ಕೆ ಒಪ್ಪಿಸಬಯಸುವ ನಿಮಗೆ ಆತ್ಮಸಾಕ್ಷಿ ಇರಲು ಸಾಧ್ಯವಿಲ್ಲ.

PC : India Legal

ಮೋದಿಯವರು ಜಮೀನು ಮತ್ತು ವ್ಯವಸಾಯ ಮತ್ತು ಮಾರುಕಟ್ಟೆಗೆ ಸಂಬಂಧಪಟ್ಟಂತೆ 3 ಉಗ್ರ ಕಾಯ್ದೆಗಳನ್ನು ಆರ್ಡಿನೆಸ್ಸ್ ಮುಖಾಂತರ ಜಾರಿಗೆ ತಂದು ಆ ನಂತರ ಪಾರ್ಲಿಮೆಂಟಿನ ಕಾನೂನು ಕಟ್ಟಲೆಗಳನ್ನು ಧಿಕ್ಕರಿಸಿ, ಕಾನೂನುಗಳನ್ನಾಗಿ ಪರಿವರ್ತಿಸಲಾಯಿತು. ವ್ಯವಸಾಯ ಭೂಮಿಯನ್ನು ಕಾರ್ಪೊರೆಟ್ ಕಂಪನಿಗಳ ವಶ ಮಾಡುವುದು, ರೈತರನ್ನು ಕೂಲಿಗಳಾಗಿ ಪರಿವರ್ತಿಸಿ, ಕಾರ್ಪೊರೆಟ್‌ಗಳಿಗೆ ಬೇಕಾದ ಬೆಳೆ ಬೆಳೆದುಕೊಡಲು ಅವಕಾಶ ಮಾಡಿಕೊಡಲಾಯಿತು. ರೈತರ ಹಿತದೃಷ್ಟಿಯಿಂದ ರಚಿಸಿರುವ ಮಾರ್ಕೆಟ್ ಯಾರ್ಡ್‌ಗಳನ್ನು ಮುಚ್ಚಿಸುವುದು, ರೈತರು ಕೂಲಿಯಾಳುಗಳಾಗಿ ಬೆಳೆದ ಬೆಳೆಯನ್ನೆಲ್ಲ ವಶಕ್ಕೆ ತೆಗೆದುಕೊಳ್ಳುವುದು, ರೈಲ್ವೆ ನಿಲ್ದಾಣಗಳ ಸಮೀಪ ಗೋಡೌನ್‌ಗಳನ್ನು ಮಾಡಿಕೊಂಡು ಗೂಡ್ಸ್ ರೈಲಿನ ಮೂಲಕ ಅವುಗಳನ್ನು ತಮಗೆ ಮಾರುಕಟ್ಟೆ ಇರುವ ಸ್ಥಳಗಳಿಗೆ ರವಾನಿಸುವುದು, ಅವುಗಳನ್ನು ದುಬಾರಿ ಬೆಲೆಗೆ ಮಾರಿಕೊಳ್ಳುವುದು ಈ ರೀತಿ ಕಾರ್ಪೊರೆಟ್ ಕಂಪನಿಗಳ ಹಿತದೃಷ್ಟಿಯಿಂದ ರೈತರನ್ನು ನಾಶ ಮಾಡುವ ದುರುದ್ದೇಶ ಮೋದಿಯವರ ಸರ್ಕಾರದ್ದು. ಆ ಮೂಲಕ ಭಾರತವನ್ನು ಬಂಡವಾಳಶಾಹಿ ರಾಷ್ಟ್ರವನ್ನಾಗಿ ಪರಿವರ್ತಿಸುವುದು ಅವರ ದುರಾಲೋಚನೆ.

ಪಂಜಾಬ್ ಮತ್ತು ಹರಿಯಾಣದ 30ಸಾವಿರಕ್ಕಿಂತಲೂ ಹೆಚ್ಚು ರೈತರು ಸರ್ಕಾರದ ವಿರುದ್ಧ ಶಾಂತಿಯುತ ದಂಗೆ ಎದ್ದಿರುವುದು ಸ್ವಾಭಾವಿಕವಾಗಿಯೇ ಇದೆ. ಕಡಿಮೆ ದರದಲ್ಲಿ ಪ್ರಯಾಣಿಸುತ್ತಿದ್ದ ಭಾರತೀಯ ಮಧ್ಯಮವರ್ಗದ ಹಾಗೂ ಬಡವರ ಅನುಕೂಲಕ್ಕಾಗಿ ನಿರ್ಮಿತವಾದ ರೈಲ್ವೆಯನ್ನು ಬಿಡಿಬಿಡಿಯಾಗಿ ಬಂಡವಾಳಶಾಹಿಗಳಿಗೆ ವಹಿಸತಕ್ಕ ಹುನ್ನಾರವೂ ಇದರಲ್ಲಿದೆ. ರೈಲ್ವೆ ವ್ಯವಸ್ಥೆ ಈ ಬಂಡವಾಳಶಾಹಿಗಳ ಕೈಗೆ ಹೋಗುತ್ತಿರುವುದರಿಂದ ತಾವು ನಿರ್ವಹಿಸುವ ಗೋಡೌನ್‌ಗಳಿಂದ ಉಚಿತವಾಗಿ ಗೂಡ್ಸ್ ಬೋಗಿಗಳಲ್ಲಿ ಕೃಷಿ ಉತ್ಪನ್ನಗಳನ್ನು ತುಂಬಿ ಸಾಗಿಸಲೂ ಅವಕಾಶ ಕಲ್ಪಿಸಿಕೊಡಲಾಗಿದೆ. ವ್ಯವಸಾಯಗಾರನ ಭೂಮಿ ಕಿತ್ತುಕೊಂಡು ಅವನನ್ನು ಬಂಡವಾಳಶಾಹಿಯ ಗುಲಾಮನನ್ನಾಗಿ ಮಾಡಿ ಅವನು ಬೆಳೆದು ಕೊಟ್ಟ ಆಹಾರ ಪದಾರ್ಥಗಳನ್ನು ಸಾಗಿಸುವ ಖರ್ಚನ್ನು ಉಳಿಸಿ ಈ ಧೂರ್ತರ ಕಿಸೆ ತುಂಬುವ ಯೋಜನೆ ಇದು.

ಕೇಂದ್ರ ಸರ್ಕಾರದ ಈ ವರ್ಷದ ಹಣಕಾಸಿನ ಪರಿಸ್ಥಿತಿ ತಿಳಿಯಬೇಕು. ಆರ್ಥಿಕಸ್ಥಿತಿ ಬಹಳ ಬಿಗಡಾಯಿಸಿದೆ. ಹಣಕಾಸಿನ ಸಚಿವಾಲಯದ ಮಾತನ್ನು ನಂಬುವುದಾದರೆ ಆಹಾರ ಧಾನ್ಯಗಳನ್ನು ಕೊಳ್ಳಲು ಸರ್ಕಾರದ ಬಳಿ ಹಣವಿಲ್ಲ. ಫುಡ್ ಕಾರ್ಪೊರೇಶನ್ ಇಂಡಿಯಾಗೆ ಈಗಾಗಲೇ ಕೊಟ್ಟಿರುವ ಸಾಲದ ಮೊತ್ತ 2.65 ಲಕ್ಷ ಕೋಟಿ. ಆದರೆ ಜನರಿಗೆ ಆಹಾರ ಒದಗಿಸುವುದು ಕಾನೂನು ರೀತ್ಯಾ ಸರ್ಕಾರದ ಜವಾಬ್ದಾರಿ. ಹಣದ ಕೊರತೆ ಇದೆ ಎಂದು ಈ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವೇ ಇಲ್ಲ. ಈ ನ್ಯಾಯಬದ್ಧ ಜವಾಬ್ದಾರಿಯನ್ನು ಕಾರ್ಪೊರೇಟ್ ಸಂಸ್ಥೆಗಳಿಗೆ, ಖಾಸಗಿಯವರಿಗೆ ವಹಿಸಿಕೊಡಲು ಬರುವುದೇ! ಗಂಭೀರವಾಗಿ ವಿಚಾರ ಮಾಡಬೇಕಾದ ಜಟಿಲ ಪ್ರಶ್ನೆ ಇದು.


ಇದನ್ನೂ ಓದಿ: ಟ್ರ್ಯಾಕ್ಟರ್ ರ್‍ಯಾಲಿ: ದಿಟ್ಟ ರೈತ ಹೋರಾಟದ ಗಮನಸೆಳೆದ 10 ಫೋಟೊಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...