Homeಅಂಕಣಗಳುಸಮಿತಿಯಿಂದ ರೈತ ಹೋರಾಟಕ್ಕೆ ಪರಿಹಾರ ಅಸಾಧ್ಯ, ಬೇಡಿಕೆಗಳಿಗೆ ಒಪ್ಪುವುದೊಂದೇ ದಾರಿ: ಎಚ್ ಎಸ್ ದೊರೆಸ್ವಾಮಿ

ಸಮಿತಿಯಿಂದ ರೈತ ಹೋರಾಟಕ್ಕೆ ಪರಿಹಾರ ಅಸಾಧ್ಯ, ಬೇಡಿಕೆಗಳಿಗೆ ಒಪ್ಪುವುದೊಂದೇ ದಾರಿ: ಎಚ್ ಎಸ್ ದೊರೆಸ್ವಾಮಿ

ರೈತರ ಮತ್ತು ಸರ್ಕಾರದ ಉದ್ದೇಶಗಳೇ ಬೇರೆಯಾಗಿರುವುದರಿಂದ ಸಮಿತಿಯೊಂದಕ್ಕೆ ಹೇಗೆ ಈ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯವಾಗುತ್ತದೆ? ಸರ್ಕಾರ ಈ ಶಾಸನಗಳಲ್ಲಿ ಕೆಲವು ತಿದ್ದುಪಡಿಗಳನ್ನು ಈಗಾಗಲೇ ಸೂಚಿಸಿವೆ. ಇದಕ್ಕೆ ರೈತರು ವಿರೋಧ ಮಾಡಿದ್ದಾರೆ. ಸರ್ಕಾರಕ್ಕೆ ಇದು ಅರಿವಾಗಿದೆ. ಪರಿಸ್ಥಿತಿ ಹೀಗಿರುವಾಗ ಯಾವ ಸಮಿತಿ ತಾನೇ ಈ ಸಮಸ್ಯೆಯನ್ನು ಬಗೆಹರಿಸಬಲ್ಲದು? ಸರ್ಕಾರ ತನ್ನ ನಿಲುವನ್ನು ಬದಲಾಯಿಸುವುದೊಂದೇ ಇರುವ ರಾಜಮಾರ್ಗ.

- Advertisement -
- Advertisement -

ದೆಹಲಿಯ ಗಡಿಗಳಲ್ಲಿ ರೈತ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಈ ಸಂದರ್ಭದಲ್ಲಿ ಸರ್ವೋಚ್ಚ ನ್ಯಾಯಾಲಯ ಮಧ್ಯಪ್ರವೇಶಿಸಿ, ಒಂದು ಸಮಿತಿ ರಚಿಸುವ ಮೂಲಕ ರೈತರ ಬೇಡಿಕೆಗಳನ್ನು ವಿಶ್ಲೇಷಿಸಿ, ಶಾಂತಿಯುತವಾಗಿ ಸಮಸ್ಯೆ ಬಗೆಹರಿಸಿ ಕೊಡಿ ಎಂದು ಮೋದಿ ಸರ್ಕಾರಕ್ಕೆ ಸಲಹೆ ಕೊಟ್ಟಿದೆ. ಸಮಿತಿ ರಚಿಸುವುದರಿಂದ ಈ ಜಟಿಲ ಪ್ರಶ್ನೆ ಬಗೆಹರಿಯುವಂತೆ ಕಾಣುತ್ತಿಲ್ಲ.

ರೈತರ ಮತ್ತು ಸರ್ಕಾರದ ಉದ್ದೇಶಗಳೇ ಬೇರೆಯಾಗಿರುವುದರಿಂದ ಸಮಿತಿಯೊಂದಕ್ಕೆ ಹೇಗೆ ಈ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯವಾಗುತ್ತದೆ? ಸರ್ಕಾರ ಈ ಶಾಸನಗಳಲ್ಲಿ ಕೆಲವು ತಿದ್ದುಪಡಿಗಳನ್ನು ಈಗಾಗಲೇ ಸೂಚಿಸಿವೆ. ಇದಕ್ಕೆ ರೈತರು ವಿರೋಧ ಮಾಡಿದ್ದಾರೆ. ಸರ್ಕಾರಕ್ಕೆ ಇದು ಅರಿವಾಗಿದೆ. ಪರಿಸ್ಥಿತಿ ಹೀಗಿರುವಾಗ ಯಾವ ಸಮಿತಿ ತಾನೇ ಈ ಸಮಸ್ಯೆಯನ್ನು ಬಗೆಹರಿಸಬಲ್ಲದು? ಸರ್ಕಾರ ತನ್ನ ನಿಲುವನ್ನು ಬದಲಾಯಿಸುವುದೊಂದೇ ಇರುವ ರಾಜಮಾರ್ಗ. ಆರ್‌ಎಸ್‌ಎಸ್‌ನ ಭಾರತ ಕಿಸಾನ್ ಸಂಘ ತಾನು ರೈತರ ಪರ ಎಂದು ಘೋಷಣೆ ಮಾಡಿ ನಾಟಕವಾಡುತ್ತಿದೆ. ಅದರ ಪ್ರೇರಣೆಯಿಂದಲೇ ಮೋದಿ ಇಂತಹ ಘೋರ ಕಾನೂನುಗಳನ್ನು ರಚಿಸುತ್ತಿರುವುದು ಎಂಬುದು ಪ್ರಪಂಚಕ್ಕೆ ಗೊತ್ತಿದೆ. ಆ ದೃಷ್ಟಿಯಿಂದ ಇದೂ ಒಂದು ದೆವ್ವದ ಬಾಯಿಂದ ಬಂದ ಭಗವದ್ಗೀತೆಯೇ ಸರಿ.

ಕಾಂಗ್ರೆಸ್‌ಗೆ ಇಂತಹ ಬಿಗಡಾಯಿಸಿದ ಸ್ಥಿತಿಯಲ್ಲಿ ಹೇಗೆ ತನ್ನ ಕಾರ್ಯನಿರ್ವಹಿಸಬೇಕು ಎಂದು ತಿಳಿದಿತ್ತು. ಇಂತಹ ಅನೇಕ ಸಂದರ್ಭಗಳು ನಿರ್ಮಾಣವಾಗಿದ್ದ ಮತ್ತು ಅವುಗಳನ್ನು ಚಾಕಚಕ್ಯತೆಯಿಂದ ಪರಿಹರಿಸಿದ ಅನೇಕ ನಿದರ್ಶನಗಳಿವೆ. ಈಗ ಮೋದಿ ಸರ್ಕಾರಕ್ಕೆ ಸಲಹೆ ನೀಡುವವರಿಗೆ ಅಂತಹ ಯೋಗ್ಯತೆ ಇಲ್ಲ ಅಥವಾ ಉದ್ದೇಶಪೂರ್ವಕವಾಗಿ ಈ ೩ ಮಸೂದೆಗಳನ್ನು ಜಾರಿಗೆ ತರಲಾಗಿವೆ.

ಚುನಾವಣೆಗಳಲ್ಲಿ ಗೆಲವು ಸಾಧಿಸುವ ತಂತ್ರ ತಿಳಿದ ಮಾತ್ರಕ್ಕೆ ನೀವು Democratic ಆಗಿಬಿಡುವುದಿಲ್ಲ ಈ ಬಗೆಯ ಮಸೂದೆಗಳನ್ನು ಮಂಡಿಸುವುದಕ್ಕೆ ಮುಂಚೆ ಸಾರ್ವಜನಿಕರ ಅಭಿಪ್ರಾಯ ಪಡೆಯಬೇಕೆಂಬ ಕಾಳಜಿಯೇ ನಿಮಗಿಲ್ಲ. ಈ ಕಾಯ್ದೆಯಿಂದ ಯಾರಿಗೆ ನೇರವಾಗಿ ಸಮಸ್ಯೆ ಉಂಟಾಗುವುದೋ, ಅವರ ಅನುಭವಪೂರ್ಣ ಸಲಹೆಯನ್ನು ಪಡೆಯುವ ದೊಡ್ಡತನವೂ ನಿಮಗಿಲ್ಲ. ಅವರು ನೀಡುವ ಅನುಭವ ಜನ್ಯವಾದ ಸಲಹೆಗಳನ್ನು ಪಡೆದು ಒಂದು ಒಳ್ಳೆಯ ಕಾನೂನು ರಚಿಸಬೇಕೆಂಬ ತವಕವೂ ನಿಮಗಿಲ್ಲ. ದೇಶವನ್ನು ಬಂಡವಾಳಗಾರರ ವಶಕ್ಕೆ ಒಪ್ಪಿಸಬಯಸುವ ನಿಮಗೆ ಆತ್ಮಸಾಕ್ಷಿ ಇರಲು ಸಾಧ್ಯವಿಲ್ಲ.

PC : India Legal

ಮೋದಿಯವರು ಜಮೀನು ಮತ್ತು ವ್ಯವಸಾಯ ಮತ್ತು ಮಾರುಕಟ್ಟೆಗೆ ಸಂಬಂಧಪಟ್ಟಂತೆ 3 ಉಗ್ರ ಕಾಯ್ದೆಗಳನ್ನು ಆರ್ಡಿನೆಸ್ಸ್ ಮುಖಾಂತರ ಜಾರಿಗೆ ತಂದು ಆ ನಂತರ ಪಾರ್ಲಿಮೆಂಟಿನ ಕಾನೂನು ಕಟ್ಟಲೆಗಳನ್ನು ಧಿಕ್ಕರಿಸಿ, ಕಾನೂನುಗಳನ್ನಾಗಿ ಪರಿವರ್ತಿಸಲಾಯಿತು. ವ್ಯವಸಾಯ ಭೂಮಿಯನ್ನು ಕಾರ್ಪೊರೆಟ್ ಕಂಪನಿಗಳ ವಶ ಮಾಡುವುದು, ರೈತರನ್ನು ಕೂಲಿಗಳಾಗಿ ಪರಿವರ್ತಿಸಿ, ಕಾರ್ಪೊರೆಟ್‌ಗಳಿಗೆ ಬೇಕಾದ ಬೆಳೆ ಬೆಳೆದುಕೊಡಲು ಅವಕಾಶ ಮಾಡಿಕೊಡಲಾಯಿತು. ರೈತರ ಹಿತದೃಷ್ಟಿಯಿಂದ ರಚಿಸಿರುವ ಮಾರ್ಕೆಟ್ ಯಾರ್ಡ್‌ಗಳನ್ನು ಮುಚ್ಚಿಸುವುದು, ರೈತರು ಕೂಲಿಯಾಳುಗಳಾಗಿ ಬೆಳೆದ ಬೆಳೆಯನ್ನೆಲ್ಲ ವಶಕ್ಕೆ ತೆಗೆದುಕೊಳ್ಳುವುದು, ರೈಲ್ವೆ ನಿಲ್ದಾಣಗಳ ಸಮೀಪ ಗೋಡೌನ್‌ಗಳನ್ನು ಮಾಡಿಕೊಂಡು ಗೂಡ್ಸ್ ರೈಲಿನ ಮೂಲಕ ಅವುಗಳನ್ನು ತಮಗೆ ಮಾರುಕಟ್ಟೆ ಇರುವ ಸ್ಥಳಗಳಿಗೆ ರವಾನಿಸುವುದು, ಅವುಗಳನ್ನು ದುಬಾರಿ ಬೆಲೆಗೆ ಮಾರಿಕೊಳ್ಳುವುದು ಈ ರೀತಿ ಕಾರ್ಪೊರೆಟ್ ಕಂಪನಿಗಳ ಹಿತದೃಷ್ಟಿಯಿಂದ ರೈತರನ್ನು ನಾಶ ಮಾಡುವ ದುರುದ್ದೇಶ ಮೋದಿಯವರ ಸರ್ಕಾರದ್ದು. ಆ ಮೂಲಕ ಭಾರತವನ್ನು ಬಂಡವಾಳಶಾಹಿ ರಾಷ್ಟ್ರವನ್ನಾಗಿ ಪರಿವರ್ತಿಸುವುದು ಅವರ ದುರಾಲೋಚನೆ.

ಪಂಜಾಬ್ ಮತ್ತು ಹರಿಯಾಣದ 30ಸಾವಿರಕ್ಕಿಂತಲೂ ಹೆಚ್ಚು ರೈತರು ಸರ್ಕಾರದ ವಿರುದ್ಧ ಶಾಂತಿಯುತ ದಂಗೆ ಎದ್ದಿರುವುದು ಸ್ವಾಭಾವಿಕವಾಗಿಯೇ ಇದೆ. ಕಡಿಮೆ ದರದಲ್ಲಿ ಪ್ರಯಾಣಿಸುತ್ತಿದ್ದ ಭಾರತೀಯ ಮಧ್ಯಮವರ್ಗದ ಹಾಗೂ ಬಡವರ ಅನುಕೂಲಕ್ಕಾಗಿ ನಿರ್ಮಿತವಾದ ರೈಲ್ವೆಯನ್ನು ಬಿಡಿಬಿಡಿಯಾಗಿ ಬಂಡವಾಳಶಾಹಿಗಳಿಗೆ ವಹಿಸತಕ್ಕ ಹುನ್ನಾರವೂ ಇದರಲ್ಲಿದೆ. ರೈಲ್ವೆ ವ್ಯವಸ್ಥೆ ಈ ಬಂಡವಾಳಶಾಹಿಗಳ ಕೈಗೆ ಹೋಗುತ್ತಿರುವುದರಿಂದ ತಾವು ನಿರ್ವಹಿಸುವ ಗೋಡೌನ್‌ಗಳಿಂದ ಉಚಿತವಾಗಿ ಗೂಡ್ಸ್ ಬೋಗಿಗಳಲ್ಲಿ ಕೃಷಿ ಉತ್ಪನ್ನಗಳನ್ನು ತುಂಬಿ ಸಾಗಿಸಲೂ ಅವಕಾಶ ಕಲ್ಪಿಸಿಕೊಡಲಾಗಿದೆ. ವ್ಯವಸಾಯಗಾರನ ಭೂಮಿ ಕಿತ್ತುಕೊಂಡು ಅವನನ್ನು ಬಂಡವಾಳಶಾಹಿಯ ಗುಲಾಮನನ್ನಾಗಿ ಮಾಡಿ ಅವನು ಬೆಳೆದು ಕೊಟ್ಟ ಆಹಾರ ಪದಾರ್ಥಗಳನ್ನು ಸಾಗಿಸುವ ಖರ್ಚನ್ನು ಉಳಿಸಿ ಈ ಧೂರ್ತರ ಕಿಸೆ ತುಂಬುವ ಯೋಜನೆ ಇದು.

ಕೇಂದ್ರ ಸರ್ಕಾರದ ಈ ವರ್ಷದ ಹಣಕಾಸಿನ ಪರಿಸ್ಥಿತಿ ತಿಳಿಯಬೇಕು. ಆರ್ಥಿಕಸ್ಥಿತಿ ಬಹಳ ಬಿಗಡಾಯಿಸಿದೆ. ಹಣಕಾಸಿನ ಸಚಿವಾಲಯದ ಮಾತನ್ನು ನಂಬುವುದಾದರೆ ಆಹಾರ ಧಾನ್ಯಗಳನ್ನು ಕೊಳ್ಳಲು ಸರ್ಕಾರದ ಬಳಿ ಹಣವಿಲ್ಲ. ಫುಡ್ ಕಾರ್ಪೊರೇಶನ್ ಇಂಡಿಯಾಗೆ ಈಗಾಗಲೇ ಕೊಟ್ಟಿರುವ ಸಾಲದ ಮೊತ್ತ 2.65 ಲಕ್ಷ ಕೋಟಿ. ಆದರೆ ಜನರಿಗೆ ಆಹಾರ ಒದಗಿಸುವುದು ಕಾನೂನು ರೀತ್ಯಾ ಸರ್ಕಾರದ ಜವಾಬ್ದಾರಿ. ಹಣದ ಕೊರತೆ ಇದೆ ಎಂದು ಈ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವೇ ಇಲ್ಲ. ಈ ನ್ಯಾಯಬದ್ಧ ಜವಾಬ್ದಾರಿಯನ್ನು ಕಾರ್ಪೊರೇಟ್ ಸಂಸ್ಥೆಗಳಿಗೆ, ಖಾಸಗಿಯವರಿಗೆ ವಹಿಸಿಕೊಡಲು ಬರುವುದೇ! ಗಂಭೀರವಾಗಿ ವಿಚಾರ ಮಾಡಬೇಕಾದ ಜಟಿಲ ಪ್ರಶ್ನೆ ಇದು.


ಇದನ್ನೂ ಓದಿ: ಟ್ರ್ಯಾಕ್ಟರ್ ರ್‍ಯಾಲಿ: ದಿಟ್ಟ ರೈತ ಹೋರಾಟದ ಗಮನಸೆಳೆದ 10 ಫೋಟೊಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...