Homeಅಂಕಣಗಳುಸಮಿತಿಯಿಂದ ರೈತ ಹೋರಾಟಕ್ಕೆ ಪರಿಹಾರ ಅಸಾಧ್ಯ, ಬೇಡಿಕೆಗಳಿಗೆ ಒಪ್ಪುವುದೊಂದೇ ದಾರಿ: ಎಚ್ ಎಸ್ ದೊರೆಸ್ವಾಮಿ

ಸಮಿತಿಯಿಂದ ರೈತ ಹೋರಾಟಕ್ಕೆ ಪರಿಹಾರ ಅಸಾಧ್ಯ, ಬೇಡಿಕೆಗಳಿಗೆ ಒಪ್ಪುವುದೊಂದೇ ದಾರಿ: ಎಚ್ ಎಸ್ ದೊರೆಸ್ವಾಮಿ

ರೈತರ ಮತ್ತು ಸರ್ಕಾರದ ಉದ್ದೇಶಗಳೇ ಬೇರೆಯಾಗಿರುವುದರಿಂದ ಸಮಿತಿಯೊಂದಕ್ಕೆ ಹೇಗೆ ಈ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯವಾಗುತ್ತದೆ? ಸರ್ಕಾರ ಈ ಶಾಸನಗಳಲ್ಲಿ ಕೆಲವು ತಿದ್ದುಪಡಿಗಳನ್ನು ಈಗಾಗಲೇ ಸೂಚಿಸಿವೆ. ಇದಕ್ಕೆ ರೈತರು ವಿರೋಧ ಮಾಡಿದ್ದಾರೆ. ಸರ್ಕಾರಕ್ಕೆ ಇದು ಅರಿವಾಗಿದೆ. ಪರಿಸ್ಥಿತಿ ಹೀಗಿರುವಾಗ ಯಾವ ಸಮಿತಿ ತಾನೇ ಈ ಸಮಸ್ಯೆಯನ್ನು ಬಗೆಹರಿಸಬಲ್ಲದು? ಸರ್ಕಾರ ತನ್ನ ನಿಲುವನ್ನು ಬದಲಾಯಿಸುವುದೊಂದೇ ಇರುವ ರಾಜಮಾರ್ಗ.

- Advertisement -
- Advertisement -

ದೆಹಲಿಯ ಗಡಿಗಳಲ್ಲಿ ರೈತ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಈ ಸಂದರ್ಭದಲ್ಲಿ ಸರ್ವೋಚ್ಚ ನ್ಯಾಯಾಲಯ ಮಧ್ಯಪ್ರವೇಶಿಸಿ, ಒಂದು ಸಮಿತಿ ರಚಿಸುವ ಮೂಲಕ ರೈತರ ಬೇಡಿಕೆಗಳನ್ನು ವಿಶ್ಲೇಷಿಸಿ, ಶಾಂತಿಯುತವಾಗಿ ಸಮಸ್ಯೆ ಬಗೆಹರಿಸಿ ಕೊಡಿ ಎಂದು ಮೋದಿ ಸರ್ಕಾರಕ್ಕೆ ಸಲಹೆ ಕೊಟ್ಟಿದೆ. ಸಮಿತಿ ರಚಿಸುವುದರಿಂದ ಈ ಜಟಿಲ ಪ್ರಶ್ನೆ ಬಗೆಹರಿಯುವಂತೆ ಕಾಣುತ್ತಿಲ್ಲ.

ರೈತರ ಮತ್ತು ಸರ್ಕಾರದ ಉದ್ದೇಶಗಳೇ ಬೇರೆಯಾಗಿರುವುದರಿಂದ ಸಮಿತಿಯೊಂದಕ್ಕೆ ಹೇಗೆ ಈ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯವಾಗುತ್ತದೆ? ಸರ್ಕಾರ ಈ ಶಾಸನಗಳಲ್ಲಿ ಕೆಲವು ತಿದ್ದುಪಡಿಗಳನ್ನು ಈಗಾಗಲೇ ಸೂಚಿಸಿವೆ. ಇದಕ್ಕೆ ರೈತರು ವಿರೋಧ ಮಾಡಿದ್ದಾರೆ. ಸರ್ಕಾರಕ್ಕೆ ಇದು ಅರಿವಾಗಿದೆ. ಪರಿಸ್ಥಿತಿ ಹೀಗಿರುವಾಗ ಯಾವ ಸಮಿತಿ ತಾನೇ ಈ ಸಮಸ್ಯೆಯನ್ನು ಬಗೆಹರಿಸಬಲ್ಲದು? ಸರ್ಕಾರ ತನ್ನ ನಿಲುವನ್ನು ಬದಲಾಯಿಸುವುದೊಂದೇ ಇರುವ ರಾಜಮಾರ್ಗ. ಆರ್‌ಎಸ್‌ಎಸ್‌ನ ಭಾರತ ಕಿಸಾನ್ ಸಂಘ ತಾನು ರೈತರ ಪರ ಎಂದು ಘೋಷಣೆ ಮಾಡಿ ನಾಟಕವಾಡುತ್ತಿದೆ. ಅದರ ಪ್ರೇರಣೆಯಿಂದಲೇ ಮೋದಿ ಇಂತಹ ಘೋರ ಕಾನೂನುಗಳನ್ನು ರಚಿಸುತ್ತಿರುವುದು ಎಂಬುದು ಪ್ರಪಂಚಕ್ಕೆ ಗೊತ್ತಿದೆ. ಆ ದೃಷ್ಟಿಯಿಂದ ಇದೂ ಒಂದು ದೆವ್ವದ ಬಾಯಿಂದ ಬಂದ ಭಗವದ್ಗೀತೆಯೇ ಸರಿ.

ಕಾಂಗ್ರೆಸ್‌ಗೆ ಇಂತಹ ಬಿಗಡಾಯಿಸಿದ ಸ್ಥಿತಿಯಲ್ಲಿ ಹೇಗೆ ತನ್ನ ಕಾರ್ಯನಿರ್ವಹಿಸಬೇಕು ಎಂದು ತಿಳಿದಿತ್ತು. ಇಂತಹ ಅನೇಕ ಸಂದರ್ಭಗಳು ನಿರ್ಮಾಣವಾಗಿದ್ದ ಮತ್ತು ಅವುಗಳನ್ನು ಚಾಕಚಕ್ಯತೆಯಿಂದ ಪರಿಹರಿಸಿದ ಅನೇಕ ನಿದರ್ಶನಗಳಿವೆ. ಈಗ ಮೋದಿ ಸರ್ಕಾರಕ್ಕೆ ಸಲಹೆ ನೀಡುವವರಿಗೆ ಅಂತಹ ಯೋಗ್ಯತೆ ಇಲ್ಲ ಅಥವಾ ಉದ್ದೇಶಪೂರ್ವಕವಾಗಿ ಈ ೩ ಮಸೂದೆಗಳನ್ನು ಜಾರಿಗೆ ತರಲಾಗಿವೆ.

ಚುನಾವಣೆಗಳಲ್ಲಿ ಗೆಲವು ಸಾಧಿಸುವ ತಂತ್ರ ತಿಳಿದ ಮಾತ್ರಕ್ಕೆ ನೀವು Democratic ಆಗಿಬಿಡುವುದಿಲ್ಲ ಈ ಬಗೆಯ ಮಸೂದೆಗಳನ್ನು ಮಂಡಿಸುವುದಕ್ಕೆ ಮುಂಚೆ ಸಾರ್ವಜನಿಕರ ಅಭಿಪ್ರಾಯ ಪಡೆಯಬೇಕೆಂಬ ಕಾಳಜಿಯೇ ನಿಮಗಿಲ್ಲ. ಈ ಕಾಯ್ದೆಯಿಂದ ಯಾರಿಗೆ ನೇರವಾಗಿ ಸಮಸ್ಯೆ ಉಂಟಾಗುವುದೋ, ಅವರ ಅನುಭವಪೂರ್ಣ ಸಲಹೆಯನ್ನು ಪಡೆಯುವ ದೊಡ್ಡತನವೂ ನಿಮಗಿಲ್ಲ. ಅವರು ನೀಡುವ ಅನುಭವ ಜನ್ಯವಾದ ಸಲಹೆಗಳನ್ನು ಪಡೆದು ಒಂದು ಒಳ್ಳೆಯ ಕಾನೂನು ರಚಿಸಬೇಕೆಂಬ ತವಕವೂ ನಿಮಗಿಲ್ಲ. ದೇಶವನ್ನು ಬಂಡವಾಳಗಾರರ ವಶಕ್ಕೆ ಒಪ್ಪಿಸಬಯಸುವ ನಿಮಗೆ ಆತ್ಮಸಾಕ್ಷಿ ಇರಲು ಸಾಧ್ಯವಿಲ್ಲ.

PC : India Legal

ಮೋದಿಯವರು ಜಮೀನು ಮತ್ತು ವ್ಯವಸಾಯ ಮತ್ತು ಮಾರುಕಟ್ಟೆಗೆ ಸಂಬಂಧಪಟ್ಟಂತೆ 3 ಉಗ್ರ ಕಾಯ್ದೆಗಳನ್ನು ಆರ್ಡಿನೆಸ್ಸ್ ಮುಖಾಂತರ ಜಾರಿಗೆ ತಂದು ಆ ನಂತರ ಪಾರ್ಲಿಮೆಂಟಿನ ಕಾನೂನು ಕಟ್ಟಲೆಗಳನ್ನು ಧಿಕ್ಕರಿಸಿ, ಕಾನೂನುಗಳನ್ನಾಗಿ ಪರಿವರ್ತಿಸಲಾಯಿತು. ವ್ಯವಸಾಯ ಭೂಮಿಯನ್ನು ಕಾರ್ಪೊರೆಟ್ ಕಂಪನಿಗಳ ವಶ ಮಾಡುವುದು, ರೈತರನ್ನು ಕೂಲಿಗಳಾಗಿ ಪರಿವರ್ತಿಸಿ, ಕಾರ್ಪೊರೆಟ್‌ಗಳಿಗೆ ಬೇಕಾದ ಬೆಳೆ ಬೆಳೆದುಕೊಡಲು ಅವಕಾಶ ಮಾಡಿಕೊಡಲಾಯಿತು. ರೈತರ ಹಿತದೃಷ್ಟಿಯಿಂದ ರಚಿಸಿರುವ ಮಾರ್ಕೆಟ್ ಯಾರ್ಡ್‌ಗಳನ್ನು ಮುಚ್ಚಿಸುವುದು, ರೈತರು ಕೂಲಿಯಾಳುಗಳಾಗಿ ಬೆಳೆದ ಬೆಳೆಯನ್ನೆಲ್ಲ ವಶಕ್ಕೆ ತೆಗೆದುಕೊಳ್ಳುವುದು, ರೈಲ್ವೆ ನಿಲ್ದಾಣಗಳ ಸಮೀಪ ಗೋಡೌನ್‌ಗಳನ್ನು ಮಾಡಿಕೊಂಡು ಗೂಡ್ಸ್ ರೈಲಿನ ಮೂಲಕ ಅವುಗಳನ್ನು ತಮಗೆ ಮಾರುಕಟ್ಟೆ ಇರುವ ಸ್ಥಳಗಳಿಗೆ ರವಾನಿಸುವುದು, ಅವುಗಳನ್ನು ದುಬಾರಿ ಬೆಲೆಗೆ ಮಾರಿಕೊಳ್ಳುವುದು ಈ ರೀತಿ ಕಾರ್ಪೊರೆಟ್ ಕಂಪನಿಗಳ ಹಿತದೃಷ್ಟಿಯಿಂದ ರೈತರನ್ನು ನಾಶ ಮಾಡುವ ದುರುದ್ದೇಶ ಮೋದಿಯವರ ಸರ್ಕಾರದ್ದು. ಆ ಮೂಲಕ ಭಾರತವನ್ನು ಬಂಡವಾಳಶಾಹಿ ರಾಷ್ಟ್ರವನ್ನಾಗಿ ಪರಿವರ್ತಿಸುವುದು ಅವರ ದುರಾಲೋಚನೆ.

ಪಂಜಾಬ್ ಮತ್ತು ಹರಿಯಾಣದ 30ಸಾವಿರಕ್ಕಿಂತಲೂ ಹೆಚ್ಚು ರೈತರು ಸರ್ಕಾರದ ವಿರುದ್ಧ ಶಾಂತಿಯುತ ದಂಗೆ ಎದ್ದಿರುವುದು ಸ್ವಾಭಾವಿಕವಾಗಿಯೇ ಇದೆ. ಕಡಿಮೆ ದರದಲ್ಲಿ ಪ್ರಯಾಣಿಸುತ್ತಿದ್ದ ಭಾರತೀಯ ಮಧ್ಯಮವರ್ಗದ ಹಾಗೂ ಬಡವರ ಅನುಕೂಲಕ್ಕಾಗಿ ನಿರ್ಮಿತವಾದ ರೈಲ್ವೆಯನ್ನು ಬಿಡಿಬಿಡಿಯಾಗಿ ಬಂಡವಾಳಶಾಹಿಗಳಿಗೆ ವಹಿಸತಕ್ಕ ಹುನ್ನಾರವೂ ಇದರಲ್ಲಿದೆ. ರೈಲ್ವೆ ವ್ಯವಸ್ಥೆ ಈ ಬಂಡವಾಳಶಾಹಿಗಳ ಕೈಗೆ ಹೋಗುತ್ತಿರುವುದರಿಂದ ತಾವು ನಿರ್ವಹಿಸುವ ಗೋಡೌನ್‌ಗಳಿಂದ ಉಚಿತವಾಗಿ ಗೂಡ್ಸ್ ಬೋಗಿಗಳಲ್ಲಿ ಕೃಷಿ ಉತ್ಪನ್ನಗಳನ್ನು ತುಂಬಿ ಸಾಗಿಸಲೂ ಅವಕಾಶ ಕಲ್ಪಿಸಿಕೊಡಲಾಗಿದೆ. ವ್ಯವಸಾಯಗಾರನ ಭೂಮಿ ಕಿತ್ತುಕೊಂಡು ಅವನನ್ನು ಬಂಡವಾಳಶಾಹಿಯ ಗುಲಾಮನನ್ನಾಗಿ ಮಾಡಿ ಅವನು ಬೆಳೆದು ಕೊಟ್ಟ ಆಹಾರ ಪದಾರ್ಥಗಳನ್ನು ಸಾಗಿಸುವ ಖರ್ಚನ್ನು ಉಳಿಸಿ ಈ ಧೂರ್ತರ ಕಿಸೆ ತುಂಬುವ ಯೋಜನೆ ಇದು.

ಕೇಂದ್ರ ಸರ್ಕಾರದ ಈ ವರ್ಷದ ಹಣಕಾಸಿನ ಪರಿಸ್ಥಿತಿ ತಿಳಿಯಬೇಕು. ಆರ್ಥಿಕಸ್ಥಿತಿ ಬಹಳ ಬಿಗಡಾಯಿಸಿದೆ. ಹಣಕಾಸಿನ ಸಚಿವಾಲಯದ ಮಾತನ್ನು ನಂಬುವುದಾದರೆ ಆಹಾರ ಧಾನ್ಯಗಳನ್ನು ಕೊಳ್ಳಲು ಸರ್ಕಾರದ ಬಳಿ ಹಣವಿಲ್ಲ. ಫುಡ್ ಕಾರ್ಪೊರೇಶನ್ ಇಂಡಿಯಾಗೆ ಈಗಾಗಲೇ ಕೊಟ್ಟಿರುವ ಸಾಲದ ಮೊತ್ತ 2.65 ಲಕ್ಷ ಕೋಟಿ. ಆದರೆ ಜನರಿಗೆ ಆಹಾರ ಒದಗಿಸುವುದು ಕಾನೂನು ರೀತ್ಯಾ ಸರ್ಕಾರದ ಜವಾಬ್ದಾರಿ. ಹಣದ ಕೊರತೆ ಇದೆ ಎಂದು ಈ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವೇ ಇಲ್ಲ. ಈ ನ್ಯಾಯಬದ್ಧ ಜವಾಬ್ದಾರಿಯನ್ನು ಕಾರ್ಪೊರೇಟ್ ಸಂಸ್ಥೆಗಳಿಗೆ, ಖಾಸಗಿಯವರಿಗೆ ವಹಿಸಿಕೊಡಲು ಬರುವುದೇ! ಗಂಭೀರವಾಗಿ ವಿಚಾರ ಮಾಡಬೇಕಾದ ಜಟಿಲ ಪ್ರಶ್ನೆ ಇದು.


ಇದನ್ನೂ ಓದಿ: ಟ್ರ್ಯಾಕ್ಟರ್ ರ್‍ಯಾಲಿ: ದಿಟ್ಟ ರೈತ ಹೋರಾಟದ ಗಮನಸೆಳೆದ 10 ಫೋಟೊಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...