Homeಅಂಕಣಗಳುಸಮಿತಿಯಿಂದ ರೈತ ಹೋರಾಟಕ್ಕೆ ಪರಿಹಾರ ಅಸಾಧ್ಯ, ಬೇಡಿಕೆಗಳಿಗೆ ಒಪ್ಪುವುದೊಂದೇ ದಾರಿ: ಎಚ್ ಎಸ್ ದೊರೆಸ್ವಾಮಿ

ಸಮಿತಿಯಿಂದ ರೈತ ಹೋರಾಟಕ್ಕೆ ಪರಿಹಾರ ಅಸಾಧ್ಯ, ಬೇಡಿಕೆಗಳಿಗೆ ಒಪ್ಪುವುದೊಂದೇ ದಾರಿ: ಎಚ್ ಎಸ್ ದೊರೆಸ್ವಾಮಿ

ರೈತರ ಮತ್ತು ಸರ್ಕಾರದ ಉದ್ದೇಶಗಳೇ ಬೇರೆಯಾಗಿರುವುದರಿಂದ ಸಮಿತಿಯೊಂದಕ್ಕೆ ಹೇಗೆ ಈ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯವಾಗುತ್ತದೆ? ಸರ್ಕಾರ ಈ ಶಾಸನಗಳಲ್ಲಿ ಕೆಲವು ತಿದ್ದುಪಡಿಗಳನ್ನು ಈಗಾಗಲೇ ಸೂಚಿಸಿವೆ. ಇದಕ್ಕೆ ರೈತರು ವಿರೋಧ ಮಾಡಿದ್ದಾರೆ. ಸರ್ಕಾರಕ್ಕೆ ಇದು ಅರಿವಾಗಿದೆ. ಪರಿಸ್ಥಿತಿ ಹೀಗಿರುವಾಗ ಯಾವ ಸಮಿತಿ ತಾನೇ ಈ ಸಮಸ್ಯೆಯನ್ನು ಬಗೆಹರಿಸಬಲ್ಲದು? ಸರ್ಕಾರ ತನ್ನ ನಿಲುವನ್ನು ಬದಲಾಯಿಸುವುದೊಂದೇ ಇರುವ ರಾಜಮಾರ್ಗ.

- Advertisement -
- Advertisement -

ದೆಹಲಿಯ ಗಡಿಗಳಲ್ಲಿ ರೈತ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಈ ಸಂದರ್ಭದಲ್ಲಿ ಸರ್ವೋಚ್ಚ ನ್ಯಾಯಾಲಯ ಮಧ್ಯಪ್ರವೇಶಿಸಿ, ಒಂದು ಸಮಿತಿ ರಚಿಸುವ ಮೂಲಕ ರೈತರ ಬೇಡಿಕೆಗಳನ್ನು ವಿಶ್ಲೇಷಿಸಿ, ಶಾಂತಿಯುತವಾಗಿ ಸಮಸ್ಯೆ ಬಗೆಹರಿಸಿ ಕೊಡಿ ಎಂದು ಮೋದಿ ಸರ್ಕಾರಕ್ಕೆ ಸಲಹೆ ಕೊಟ್ಟಿದೆ. ಸಮಿತಿ ರಚಿಸುವುದರಿಂದ ಈ ಜಟಿಲ ಪ್ರಶ್ನೆ ಬಗೆಹರಿಯುವಂತೆ ಕಾಣುತ್ತಿಲ್ಲ.

ರೈತರ ಮತ್ತು ಸರ್ಕಾರದ ಉದ್ದೇಶಗಳೇ ಬೇರೆಯಾಗಿರುವುದರಿಂದ ಸಮಿತಿಯೊಂದಕ್ಕೆ ಹೇಗೆ ಈ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯವಾಗುತ್ತದೆ? ಸರ್ಕಾರ ಈ ಶಾಸನಗಳಲ್ಲಿ ಕೆಲವು ತಿದ್ದುಪಡಿಗಳನ್ನು ಈಗಾಗಲೇ ಸೂಚಿಸಿವೆ. ಇದಕ್ಕೆ ರೈತರು ವಿರೋಧ ಮಾಡಿದ್ದಾರೆ. ಸರ್ಕಾರಕ್ಕೆ ಇದು ಅರಿವಾಗಿದೆ. ಪರಿಸ್ಥಿತಿ ಹೀಗಿರುವಾಗ ಯಾವ ಸಮಿತಿ ತಾನೇ ಈ ಸಮಸ್ಯೆಯನ್ನು ಬಗೆಹರಿಸಬಲ್ಲದು? ಸರ್ಕಾರ ತನ್ನ ನಿಲುವನ್ನು ಬದಲಾಯಿಸುವುದೊಂದೇ ಇರುವ ರಾಜಮಾರ್ಗ. ಆರ್‌ಎಸ್‌ಎಸ್‌ನ ಭಾರತ ಕಿಸಾನ್ ಸಂಘ ತಾನು ರೈತರ ಪರ ಎಂದು ಘೋಷಣೆ ಮಾಡಿ ನಾಟಕವಾಡುತ್ತಿದೆ. ಅದರ ಪ್ರೇರಣೆಯಿಂದಲೇ ಮೋದಿ ಇಂತಹ ಘೋರ ಕಾನೂನುಗಳನ್ನು ರಚಿಸುತ್ತಿರುವುದು ಎಂಬುದು ಪ್ರಪಂಚಕ್ಕೆ ಗೊತ್ತಿದೆ. ಆ ದೃಷ್ಟಿಯಿಂದ ಇದೂ ಒಂದು ದೆವ್ವದ ಬಾಯಿಂದ ಬಂದ ಭಗವದ್ಗೀತೆಯೇ ಸರಿ.

ಕಾಂಗ್ರೆಸ್‌ಗೆ ಇಂತಹ ಬಿಗಡಾಯಿಸಿದ ಸ್ಥಿತಿಯಲ್ಲಿ ಹೇಗೆ ತನ್ನ ಕಾರ್ಯನಿರ್ವಹಿಸಬೇಕು ಎಂದು ತಿಳಿದಿತ್ತು. ಇಂತಹ ಅನೇಕ ಸಂದರ್ಭಗಳು ನಿರ್ಮಾಣವಾಗಿದ್ದ ಮತ್ತು ಅವುಗಳನ್ನು ಚಾಕಚಕ್ಯತೆಯಿಂದ ಪರಿಹರಿಸಿದ ಅನೇಕ ನಿದರ್ಶನಗಳಿವೆ. ಈಗ ಮೋದಿ ಸರ್ಕಾರಕ್ಕೆ ಸಲಹೆ ನೀಡುವವರಿಗೆ ಅಂತಹ ಯೋಗ್ಯತೆ ಇಲ್ಲ ಅಥವಾ ಉದ್ದೇಶಪೂರ್ವಕವಾಗಿ ಈ ೩ ಮಸೂದೆಗಳನ್ನು ಜಾರಿಗೆ ತರಲಾಗಿವೆ.

ಚುನಾವಣೆಗಳಲ್ಲಿ ಗೆಲವು ಸಾಧಿಸುವ ತಂತ್ರ ತಿಳಿದ ಮಾತ್ರಕ್ಕೆ ನೀವು Democratic ಆಗಿಬಿಡುವುದಿಲ್ಲ ಈ ಬಗೆಯ ಮಸೂದೆಗಳನ್ನು ಮಂಡಿಸುವುದಕ್ಕೆ ಮುಂಚೆ ಸಾರ್ವಜನಿಕರ ಅಭಿಪ್ರಾಯ ಪಡೆಯಬೇಕೆಂಬ ಕಾಳಜಿಯೇ ನಿಮಗಿಲ್ಲ. ಈ ಕಾಯ್ದೆಯಿಂದ ಯಾರಿಗೆ ನೇರವಾಗಿ ಸಮಸ್ಯೆ ಉಂಟಾಗುವುದೋ, ಅವರ ಅನುಭವಪೂರ್ಣ ಸಲಹೆಯನ್ನು ಪಡೆಯುವ ದೊಡ್ಡತನವೂ ನಿಮಗಿಲ್ಲ. ಅವರು ನೀಡುವ ಅನುಭವ ಜನ್ಯವಾದ ಸಲಹೆಗಳನ್ನು ಪಡೆದು ಒಂದು ಒಳ್ಳೆಯ ಕಾನೂನು ರಚಿಸಬೇಕೆಂಬ ತವಕವೂ ನಿಮಗಿಲ್ಲ. ದೇಶವನ್ನು ಬಂಡವಾಳಗಾರರ ವಶಕ್ಕೆ ಒಪ್ಪಿಸಬಯಸುವ ನಿಮಗೆ ಆತ್ಮಸಾಕ್ಷಿ ಇರಲು ಸಾಧ್ಯವಿಲ್ಲ.

PC : India Legal

ಮೋದಿಯವರು ಜಮೀನು ಮತ್ತು ವ್ಯವಸಾಯ ಮತ್ತು ಮಾರುಕಟ್ಟೆಗೆ ಸಂಬಂಧಪಟ್ಟಂತೆ 3 ಉಗ್ರ ಕಾಯ್ದೆಗಳನ್ನು ಆರ್ಡಿನೆಸ್ಸ್ ಮುಖಾಂತರ ಜಾರಿಗೆ ತಂದು ಆ ನಂತರ ಪಾರ್ಲಿಮೆಂಟಿನ ಕಾನೂನು ಕಟ್ಟಲೆಗಳನ್ನು ಧಿಕ್ಕರಿಸಿ, ಕಾನೂನುಗಳನ್ನಾಗಿ ಪರಿವರ್ತಿಸಲಾಯಿತು. ವ್ಯವಸಾಯ ಭೂಮಿಯನ್ನು ಕಾರ್ಪೊರೆಟ್ ಕಂಪನಿಗಳ ವಶ ಮಾಡುವುದು, ರೈತರನ್ನು ಕೂಲಿಗಳಾಗಿ ಪರಿವರ್ತಿಸಿ, ಕಾರ್ಪೊರೆಟ್‌ಗಳಿಗೆ ಬೇಕಾದ ಬೆಳೆ ಬೆಳೆದುಕೊಡಲು ಅವಕಾಶ ಮಾಡಿಕೊಡಲಾಯಿತು. ರೈತರ ಹಿತದೃಷ್ಟಿಯಿಂದ ರಚಿಸಿರುವ ಮಾರ್ಕೆಟ್ ಯಾರ್ಡ್‌ಗಳನ್ನು ಮುಚ್ಚಿಸುವುದು, ರೈತರು ಕೂಲಿಯಾಳುಗಳಾಗಿ ಬೆಳೆದ ಬೆಳೆಯನ್ನೆಲ್ಲ ವಶಕ್ಕೆ ತೆಗೆದುಕೊಳ್ಳುವುದು, ರೈಲ್ವೆ ನಿಲ್ದಾಣಗಳ ಸಮೀಪ ಗೋಡೌನ್‌ಗಳನ್ನು ಮಾಡಿಕೊಂಡು ಗೂಡ್ಸ್ ರೈಲಿನ ಮೂಲಕ ಅವುಗಳನ್ನು ತಮಗೆ ಮಾರುಕಟ್ಟೆ ಇರುವ ಸ್ಥಳಗಳಿಗೆ ರವಾನಿಸುವುದು, ಅವುಗಳನ್ನು ದುಬಾರಿ ಬೆಲೆಗೆ ಮಾರಿಕೊಳ್ಳುವುದು ಈ ರೀತಿ ಕಾರ್ಪೊರೆಟ್ ಕಂಪನಿಗಳ ಹಿತದೃಷ್ಟಿಯಿಂದ ರೈತರನ್ನು ನಾಶ ಮಾಡುವ ದುರುದ್ದೇಶ ಮೋದಿಯವರ ಸರ್ಕಾರದ್ದು. ಆ ಮೂಲಕ ಭಾರತವನ್ನು ಬಂಡವಾಳಶಾಹಿ ರಾಷ್ಟ್ರವನ್ನಾಗಿ ಪರಿವರ್ತಿಸುವುದು ಅವರ ದುರಾಲೋಚನೆ.

ಪಂಜಾಬ್ ಮತ್ತು ಹರಿಯಾಣದ 30ಸಾವಿರಕ್ಕಿಂತಲೂ ಹೆಚ್ಚು ರೈತರು ಸರ್ಕಾರದ ವಿರುದ್ಧ ಶಾಂತಿಯುತ ದಂಗೆ ಎದ್ದಿರುವುದು ಸ್ವಾಭಾವಿಕವಾಗಿಯೇ ಇದೆ. ಕಡಿಮೆ ದರದಲ್ಲಿ ಪ್ರಯಾಣಿಸುತ್ತಿದ್ದ ಭಾರತೀಯ ಮಧ್ಯಮವರ್ಗದ ಹಾಗೂ ಬಡವರ ಅನುಕೂಲಕ್ಕಾಗಿ ನಿರ್ಮಿತವಾದ ರೈಲ್ವೆಯನ್ನು ಬಿಡಿಬಿಡಿಯಾಗಿ ಬಂಡವಾಳಶಾಹಿಗಳಿಗೆ ವಹಿಸತಕ್ಕ ಹುನ್ನಾರವೂ ಇದರಲ್ಲಿದೆ. ರೈಲ್ವೆ ವ್ಯವಸ್ಥೆ ಈ ಬಂಡವಾಳಶಾಹಿಗಳ ಕೈಗೆ ಹೋಗುತ್ತಿರುವುದರಿಂದ ತಾವು ನಿರ್ವಹಿಸುವ ಗೋಡೌನ್‌ಗಳಿಂದ ಉಚಿತವಾಗಿ ಗೂಡ್ಸ್ ಬೋಗಿಗಳಲ್ಲಿ ಕೃಷಿ ಉತ್ಪನ್ನಗಳನ್ನು ತುಂಬಿ ಸಾಗಿಸಲೂ ಅವಕಾಶ ಕಲ್ಪಿಸಿಕೊಡಲಾಗಿದೆ. ವ್ಯವಸಾಯಗಾರನ ಭೂಮಿ ಕಿತ್ತುಕೊಂಡು ಅವನನ್ನು ಬಂಡವಾಳಶಾಹಿಯ ಗುಲಾಮನನ್ನಾಗಿ ಮಾಡಿ ಅವನು ಬೆಳೆದು ಕೊಟ್ಟ ಆಹಾರ ಪದಾರ್ಥಗಳನ್ನು ಸಾಗಿಸುವ ಖರ್ಚನ್ನು ಉಳಿಸಿ ಈ ಧೂರ್ತರ ಕಿಸೆ ತುಂಬುವ ಯೋಜನೆ ಇದು.

ಕೇಂದ್ರ ಸರ್ಕಾರದ ಈ ವರ್ಷದ ಹಣಕಾಸಿನ ಪರಿಸ್ಥಿತಿ ತಿಳಿಯಬೇಕು. ಆರ್ಥಿಕಸ್ಥಿತಿ ಬಹಳ ಬಿಗಡಾಯಿಸಿದೆ. ಹಣಕಾಸಿನ ಸಚಿವಾಲಯದ ಮಾತನ್ನು ನಂಬುವುದಾದರೆ ಆಹಾರ ಧಾನ್ಯಗಳನ್ನು ಕೊಳ್ಳಲು ಸರ್ಕಾರದ ಬಳಿ ಹಣವಿಲ್ಲ. ಫುಡ್ ಕಾರ್ಪೊರೇಶನ್ ಇಂಡಿಯಾಗೆ ಈಗಾಗಲೇ ಕೊಟ್ಟಿರುವ ಸಾಲದ ಮೊತ್ತ 2.65 ಲಕ್ಷ ಕೋಟಿ. ಆದರೆ ಜನರಿಗೆ ಆಹಾರ ಒದಗಿಸುವುದು ಕಾನೂನು ರೀತ್ಯಾ ಸರ್ಕಾರದ ಜವಾಬ್ದಾರಿ. ಹಣದ ಕೊರತೆ ಇದೆ ಎಂದು ಈ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವೇ ಇಲ್ಲ. ಈ ನ್ಯಾಯಬದ್ಧ ಜವಾಬ್ದಾರಿಯನ್ನು ಕಾರ್ಪೊರೇಟ್ ಸಂಸ್ಥೆಗಳಿಗೆ, ಖಾಸಗಿಯವರಿಗೆ ವಹಿಸಿಕೊಡಲು ಬರುವುದೇ! ಗಂಭೀರವಾಗಿ ವಿಚಾರ ಮಾಡಬೇಕಾದ ಜಟಿಲ ಪ್ರಶ್ನೆ ಇದು.


ಇದನ್ನೂ ಓದಿ: ಟ್ರ್ಯಾಕ್ಟರ್ ರ್‍ಯಾಲಿ: ದಿಟ್ಟ ರೈತ ಹೋರಾಟದ ಗಮನಸೆಳೆದ 10 ಫೋಟೊಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೇರಿಕಾದಲ್ಲಿ ಅದಾನಿ ಮತ್ತು ಆಪ್ತರ ಮೇಲಿನ ಕ್ರಿಮಿನಲ್ ಕೇಸ್ ರದ್ದು: ‘ರಾಜಿ ಮಾಡಿಕೊಂಡ ಪ್ರಧಾನಿ ಭಾರತದ ಹಿತಾಸಕ್ತಿ ಮಾರಾಟ ಮಾಡಿದ್ದಾರೆ’ ಎಂದ ರಾಹುಲ್ ಗಾಂಧಿ 

ನವದೆಹಲಿ: ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಹಾಗೂ ಅವರ ಸೋದರಳಿಯ ಸಾಗರ್ ಅದಾನಿ ವಿರುದ್ಧದ ಪ್ರಮುಖ ಕ್ರಿಮಿನಲ್ ಆರೋಪಗಳನ್ನು ಅಮೆರಿಕದ ಫೆಡರಲ್ ನ್ಯಾಯಾಧೀಶರು ಶಾಶ್ವತವಾಗಿ ವಜಾಗೊಳಿಸಿದ ಬೆನ್ನಲ್ಲೇ, ವಿಪಕ್ಷ ನಾಯಕ ರಾಹುಲ್...

ಕರ್ನಾಟಕ SIR | ‘ಲಾಜಿಕಲ್ ಡಿಸ್ಕ್ರಿಪೆನ್ಸಿ’ ಬಗ್ಗೆ ತುಟಿ ಬಿಚ್ಚದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಆಗಸ್ಟ್ 7ರಂದು ಚುನಾವಣಾ ಆಯೋಗ ಹೊರಡಿಸಿದ ಪ್ರಕಟಣೆಯ ಪ್ರಕಾರ, ಗಣತಿ ನಮೂನೆ ಅಥವಾ ಎನ್ಯುಮರೇಶನ್ ಫಾರಂ ಸಲ್ಲಿಕೆ ದಿನಾಂಕ ಆಗಸ್ಟ್...

‘ಆಹಾರ ಸುರಕ್ಷತೆ – ಔಷಧ ಆಡಳಿತ ಇಲಾಖೆ’ಯಿಂದ ಹೋಟೆಲ್‌ಗಳಿಗೆ ಕಟ್ಟುನಿಟ್ಟಿನ ನಿಯಮ ಜಾರಿ; ಹೊಸ ಮಾರ್ಗಸೂಚಿ ಪ್ರಕಟ

ರಾಜ್ಯದ ಹೋಟೆಲ್‌ಗಳು, ಡಾಬಾಗಳು ಹಾಗೂ ಆಹಾರ ಸೇವಾ ಸಂಸ್ಥೆಗಳು ಪಾಲಿಸಬೇಕಾದ 'ಆಹಾರ ಸುರಕ್ಷತಾ ಮತ್ತು ನೈರ್ಮಲ್ಯ ನಿಯಮಗಳ'ನ್ನು 'ಆಹಾರ ಸುರಕ್ಷತೆ ಇಲಾಖೆ ಮತ್ತು ಔಷಧ ಆಡಳಿತ ಇಲಾಖೆ' ಆಯುಕ್ತರು ಪ್ರಕಟಿಸಿದ್ದಾರೆ. ಕಳೆದ ಮೂರ್ನಾಲ್ಕು...

ಕರ್ನಾಟಕದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪಾದನೆ ಮತ್ತು ಮಾರಾಟ 1 ವರ್ಷ ನಿಷೇಧ: ರಾಜ್ಯ ಸರ್ಕಾರದ ಮಹತ್ವದ ಆದೇಶ

ಬೆಂಗಳೂರು: ಸಾರ್ವಜನಿಕ ಆರೋಗ್ಯ ಮತ್ತು ಸಮಾಜದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ ತಂಬಾಕು ಹಾಗೂ ನಿಕೋಟಿನ್ ಅಂಶ ಹೊಂದಿರುವ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ಇತರ ಅಪಾಯಕಾರಿ ಉತ್ಪನ್ನಗಳ ಮೇಲೆ ಸಂಪೂರ್ಣ...

ಲೋಕಸಭೆ ಬಲ 543 ರಲ್ಲೇ ಶಾಶ್ವತವಾಗಿ ಮುಂದುವರಿಸಲು ಕೇಂದ್ರಕ್ಕೆ ಆಗ್ರಹ: ತಮಿಳುನಾಡು ವಿಧಾನಸಭೆಯಲ್ಲಿ ಸಿಎಂ ಸಿ. ಜೋಸೆಫ್ ವಿಜಯ್ ನಿರ್ಣಯ ಮಂಡನೆ

ಚೆನ್ನೈ: ಕೇಂದ್ರ ಸರ್ಕಾರವು ಲೋಕಸಭೆಯ ಒಟ್ಟು ಸ್ಥಾನಗಳ ಬಲವನ್ನು ಪ್ರಸ್ತುತ ಇರುವ 543 ರಲ್ಲೇ ಶಾಶ್ವತವಾಗಿ ಕಾಯ್ದುಕೊಳ್ಳಬೇಕು ಮತ್ತು ರಾಜ್ಯಗಳ ನಡುವಿನ ಪ್ರಾತಿನಿಧ್ಯದ ಅನುಪಾತವನ್ನು ಬದಲಾಯಿಸಬಾರದು ಎಂದು ಒತ್ತಾಯಿಸಿ ತಮಿಳುನಾಡು ಮುಖ್ಯಮಂತ್ರಿ ಸಿ....

ಯುಪಿಯಲ್ಲಿ ಅಮಾನವೀಯ ಘಟನೆ: ಮೊಬೈಲ್ ಕದ್ದ ಆರೋಪ ಹೊರಿಸಿ ಒಬಿಸಿ ಯುವಕನ ತಲೆ ಬೋಳಿಸಿ ಮೆರವಣಿಗೆ; ಮೇಲ್ಜಾತಿಯ ತಂದೆ-ಮಗನ ಬಂಧನ

ಉನ್ನಾವೋ: ಉತ್ತರ ಪ್ರದೇಶದಲ್ಲಿ ಇದುವರೆಗೆ ದಲಿತ ಸಮುದಾಯಗಳ ಮೇಲೆ ವ್ಯಾಪಕವಾಗಿ ನಡೆಯುತ್ತಿದ್ದ ಜಾತಿ ಆಧಾರಿತ ದೌರ್ಜನ್ಯ ಮತ್ತು ಸಾರ್ವಜನಿಕ ಅವಮಾನದಂತಹ ಅಮಾನವೀಯ ಕೃತ್ಯಗಳು, ಈಗ ಇತರ ಹಿಂದುಳಿದ ವರ್ಗಗಳ (ಒಬಿಸಿ) ಜನರ ಮೇಲೆಯೂ...

SIR 3ನೇ ಹಂತ: 12 ರಾಜ್ಯಗಳು-ಕೇಂದ್ರಾಡಳಿತ ಪ್ರದೇಶಗಳ 1.58 ಕೋಟಿ ಮತದಾರರ ಹೆಸರು ಕರಡು ಪಟ್ಟಿಯಿಂದ ಡಿಲೀಟ್

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಮೂರನೇ ಹಂತದಲ್ಲಿ ಅಸ್ತಿತ್ವದಲ್ಲಿರುವ ಮತದಾರರ ಪಟ್ಟಿಯಿಂದ ಸುಮಾರು 1.58 ಕೋಟಿ ಹೆಸರುಗಳನ್ನು ಅಳಿಸಲಾಗಿದೆ. ಪ್ರಸ್ತುತ ನಡೆಯುತ್ತಿರುವ 3ನೇ ಹಂತದ ವ್ಯಾಪ್ತಿಗೆ ಒಳಪಡುವ 16 ರಾಜ್ಯಗಳಲ್ಲಿ...

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...