Homeಅಂಕಣಗಳುಸಮಿತಿಯಿಂದ ರೈತ ಹೋರಾಟಕ್ಕೆ ಪರಿಹಾರ ಅಸಾಧ್ಯ, ಬೇಡಿಕೆಗಳಿಗೆ ಒಪ್ಪುವುದೊಂದೇ ದಾರಿ: ಎಚ್ ಎಸ್ ದೊರೆಸ್ವಾಮಿ

ಸಮಿತಿಯಿಂದ ರೈತ ಹೋರಾಟಕ್ಕೆ ಪರಿಹಾರ ಅಸಾಧ್ಯ, ಬೇಡಿಕೆಗಳಿಗೆ ಒಪ್ಪುವುದೊಂದೇ ದಾರಿ: ಎಚ್ ಎಸ್ ದೊರೆಸ್ವಾಮಿ

ರೈತರ ಮತ್ತು ಸರ್ಕಾರದ ಉದ್ದೇಶಗಳೇ ಬೇರೆಯಾಗಿರುವುದರಿಂದ ಸಮಿತಿಯೊಂದಕ್ಕೆ ಹೇಗೆ ಈ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯವಾಗುತ್ತದೆ? ಸರ್ಕಾರ ಈ ಶಾಸನಗಳಲ್ಲಿ ಕೆಲವು ತಿದ್ದುಪಡಿಗಳನ್ನು ಈಗಾಗಲೇ ಸೂಚಿಸಿವೆ. ಇದಕ್ಕೆ ರೈತರು ವಿರೋಧ ಮಾಡಿದ್ದಾರೆ. ಸರ್ಕಾರಕ್ಕೆ ಇದು ಅರಿವಾಗಿದೆ. ಪರಿಸ್ಥಿತಿ ಹೀಗಿರುವಾಗ ಯಾವ ಸಮಿತಿ ತಾನೇ ಈ ಸಮಸ್ಯೆಯನ್ನು ಬಗೆಹರಿಸಬಲ್ಲದು? ಸರ್ಕಾರ ತನ್ನ ನಿಲುವನ್ನು ಬದಲಾಯಿಸುವುದೊಂದೇ ಇರುವ ರಾಜಮಾರ್ಗ.

- Advertisement -
- Advertisement -

ದೆಹಲಿಯ ಗಡಿಗಳಲ್ಲಿ ರೈತ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಈ ಸಂದರ್ಭದಲ್ಲಿ ಸರ್ವೋಚ್ಚ ನ್ಯಾಯಾಲಯ ಮಧ್ಯಪ್ರವೇಶಿಸಿ, ಒಂದು ಸಮಿತಿ ರಚಿಸುವ ಮೂಲಕ ರೈತರ ಬೇಡಿಕೆಗಳನ್ನು ವಿಶ್ಲೇಷಿಸಿ, ಶಾಂತಿಯುತವಾಗಿ ಸಮಸ್ಯೆ ಬಗೆಹರಿಸಿ ಕೊಡಿ ಎಂದು ಮೋದಿ ಸರ್ಕಾರಕ್ಕೆ ಸಲಹೆ ಕೊಟ್ಟಿದೆ. ಸಮಿತಿ ರಚಿಸುವುದರಿಂದ ಈ ಜಟಿಲ ಪ್ರಶ್ನೆ ಬಗೆಹರಿಯುವಂತೆ ಕಾಣುತ್ತಿಲ್ಲ.

ರೈತರ ಮತ್ತು ಸರ್ಕಾರದ ಉದ್ದೇಶಗಳೇ ಬೇರೆಯಾಗಿರುವುದರಿಂದ ಸಮಿತಿಯೊಂದಕ್ಕೆ ಹೇಗೆ ಈ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯವಾಗುತ್ತದೆ? ಸರ್ಕಾರ ಈ ಶಾಸನಗಳಲ್ಲಿ ಕೆಲವು ತಿದ್ದುಪಡಿಗಳನ್ನು ಈಗಾಗಲೇ ಸೂಚಿಸಿವೆ. ಇದಕ್ಕೆ ರೈತರು ವಿರೋಧ ಮಾಡಿದ್ದಾರೆ. ಸರ್ಕಾರಕ್ಕೆ ಇದು ಅರಿವಾಗಿದೆ. ಪರಿಸ್ಥಿತಿ ಹೀಗಿರುವಾಗ ಯಾವ ಸಮಿತಿ ತಾನೇ ಈ ಸಮಸ್ಯೆಯನ್ನು ಬಗೆಹರಿಸಬಲ್ಲದು? ಸರ್ಕಾರ ತನ್ನ ನಿಲುವನ್ನು ಬದಲಾಯಿಸುವುದೊಂದೇ ಇರುವ ರಾಜಮಾರ್ಗ. ಆರ್‌ಎಸ್‌ಎಸ್‌ನ ಭಾರತ ಕಿಸಾನ್ ಸಂಘ ತಾನು ರೈತರ ಪರ ಎಂದು ಘೋಷಣೆ ಮಾಡಿ ನಾಟಕವಾಡುತ್ತಿದೆ. ಅದರ ಪ್ರೇರಣೆಯಿಂದಲೇ ಮೋದಿ ಇಂತಹ ಘೋರ ಕಾನೂನುಗಳನ್ನು ರಚಿಸುತ್ತಿರುವುದು ಎಂಬುದು ಪ್ರಪಂಚಕ್ಕೆ ಗೊತ್ತಿದೆ. ಆ ದೃಷ್ಟಿಯಿಂದ ಇದೂ ಒಂದು ದೆವ್ವದ ಬಾಯಿಂದ ಬಂದ ಭಗವದ್ಗೀತೆಯೇ ಸರಿ.

ಕಾಂಗ್ರೆಸ್‌ಗೆ ಇಂತಹ ಬಿಗಡಾಯಿಸಿದ ಸ್ಥಿತಿಯಲ್ಲಿ ಹೇಗೆ ತನ್ನ ಕಾರ್ಯನಿರ್ವಹಿಸಬೇಕು ಎಂದು ತಿಳಿದಿತ್ತು. ಇಂತಹ ಅನೇಕ ಸಂದರ್ಭಗಳು ನಿರ್ಮಾಣವಾಗಿದ್ದ ಮತ್ತು ಅವುಗಳನ್ನು ಚಾಕಚಕ್ಯತೆಯಿಂದ ಪರಿಹರಿಸಿದ ಅನೇಕ ನಿದರ್ಶನಗಳಿವೆ. ಈಗ ಮೋದಿ ಸರ್ಕಾರಕ್ಕೆ ಸಲಹೆ ನೀಡುವವರಿಗೆ ಅಂತಹ ಯೋಗ್ಯತೆ ಇಲ್ಲ ಅಥವಾ ಉದ್ದೇಶಪೂರ್ವಕವಾಗಿ ಈ ೩ ಮಸೂದೆಗಳನ್ನು ಜಾರಿಗೆ ತರಲಾಗಿವೆ.

ಚುನಾವಣೆಗಳಲ್ಲಿ ಗೆಲವು ಸಾಧಿಸುವ ತಂತ್ರ ತಿಳಿದ ಮಾತ್ರಕ್ಕೆ ನೀವು Democratic ಆಗಿಬಿಡುವುದಿಲ್ಲ ಈ ಬಗೆಯ ಮಸೂದೆಗಳನ್ನು ಮಂಡಿಸುವುದಕ್ಕೆ ಮುಂಚೆ ಸಾರ್ವಜನಿಕರ ಅಭಿಪ್ರಾಯ ಪಡೆಯಬೇಕೆಂಬ ಕಾಳಜಿಯೇ ನಿಮಗಿಲ್ಲ. ಈ ಕಾಯ್ದೆಯಿಂದ ಯಾರಿಗೆ ನೇರವಾಗಿ ಸಮಸ್ಯೆ ಉಂಟಾಗುವುದೋ, ಅವರ ಅನುಭವಪೂರ್ಣ ಸಲಹೆಯನ್ನು ಪಡೆಯುವ ದೊಡ್ಡತನವೂ ನಿಮಗಿಲ್ಲ. ಅವರು ನೀಡುವ ಅನುಭವ ಜನ್ಯವಾದ ಸಲಹೆಗಳನ್ನು ಪಡೆದು ಒಂದು ಒಳ್ಳೆಯ ಕಾನೂನು ರಚಿಸಬೇಕೆಂಬ ತವಕವೂ ನಿಮಗಿಲ್ಲ. ದೇಶವನ್ನು ಬಂಡವಾಳಗಾರರ ವಶಕ್ಕೆ ಒಪ್ಪಿಸಬಯಸುವ ನಿಮಗೆ ಆತ್ಮಸಾಕ್ಷಿ ಇರಲು ಸಾಧ್ಯವಿಲ್ಲ.

PC : India Legal

ಮೋದಿಯವರು ಜಮೀನು ಮತ್ತು ವ್ಯವಸಾಯ ಮತ್ತು ಮಾರುಕಟ್ಟೆಗೆ ಸಂಬಂಧಪಟ್ಟಂತೆ 3 ಉಗ್ರ ಕಾಯ್ದೆಗಳನ್ನು ಆರ್ಡಿನೆಸ್ಸ್ ಮುಖಾಂತರ ಜಾರಿಗೆ ತಂದು ಆ ನಂತರ ಪಾರ್ಲಿಮೆಂಟಿನ ಕಾನೂನು ಕಟ್ಟಲೆಗಳನ್ನು ಧಿಕ್ಕರಿಸಿ, ಕಾನೂನುಗಳನ್ನಾಗಿ ಪರಿವರ್ತಿಸಲಾಯಿತು. ವ್ಯವಸಾಯ ಭೂಮಿಯನ್ನು ಕಾರ್ಪೊರೆಟ್ ಕಂಪನಿಗಳ ವಶ ಮಾಡುವುದು, ರೈತರನ್ನು ಕೂಲಿಗಳಾಗಿ ಪರಿವರ್ತಿಸಿ, ಕಾರ್ಪೊರೆಟ್‌ಗಳಿಗೆ ಬೇಕಾದ ಬೆಳೆ ಬೆಳೆದುಕೊಡಲು ಅವಕಾಶ ಮಾಡಿಕೊಡಲಾಯಿತು. ರೈತರ ಹಿತದೃಷ್ಟಿಯಿಂದ ರಚಿಸಿರುವ ಮಾರ್ಕೆಟ್ ಯಾರ್ಡ್‌ಗಳನ್ನು ಮುಚ್ಚಿಸುವುದು, ರೈತರು ಕೂಲಿಯಾಳುಗಳಾಗಿ ಬೆಳೆದ ಬೆಳೆಯನ್ನೆಲ್ಲ ವಶಕ್ಕೆ ತೆಗೆದುಕೊಳ್ಳುವುದು, ರೈಲ್ವೆ ನಿಲ್ದಾಣಗಳ ಸಮೀಪ ಗೋಡೌನ್‌ಗಳನ್ನು ಮಾಡಿಕೊಂಡು ಗೂಡ್ಸ್ ರೈಲಿನ ಮೂಲಕ ಅವುಗಳನ್ನು ತಮಗೆ ಮಾರುಕಟ್ಟೆ ಇರುವ ಸ್ಥಳಗಳಿಗೆ ರವಾನಿಸುವುದು, ಅವುಗಳನ್ನು ದುಬಾರಿ ಬೆಲೆಗೆ ಮಾರಿಕೊಳ್ಳುವುದು ಈ ರೀತಿ ಕಾರ್ಪೊರೆಟ್ ಕಂಪನಿಗಳ ಹಿತದೃಷ್ಟಿಯಿಂದ ರೈತರನ್ನು ನಾಶ ಮಾಡುವ ದುರುದ್ದೇಶ ಮೋದಿಯವರ ಸರ್ಕಾರದ್ದು. ಆ ಮೂಲಕ ಭಾರತವನ್ನು ಬಂಡವಾಳಶಾಹಿ ರಾಷ್ಟ್ರವನ್ನಾಗಿ ಪರಿವರ್ತಿಸುವುದು ಅವರ ದುರಾಲೋಚನೆ.

ಪಂಜಾಬ್ ಮತ್ತು ಹರಿಯಾಣದ 30ಸಾವಿರಕ್ಕಿಂತಲೂ ಹೆಚ್ಚು ರೈತರು ಸರ್ಕಾರದ ವಿರುದ್ಧ ಶಾಂತಿಯುತ ದಂಗೆ ಎದ್ದಿರುವುದು ಸ್ವಾಭಾವಿಕವಾಗಿಯೇ ಇದೆ. ಕಡಿಮೆ ದರದಲ್ಲಿ ಪ್ರಯಾಣಿಸುತ್ತಿದ್ದ ಭಾರತೀಯ ಮಧ್ಯಮವರ್ಗದ ಹಾಗೂ ಬಡವರ ಅನುಕೂಲಕ್ಕಾಗಿ ನಿರ್ಮಿತವಾದ ರೈಲ್ವೆಯನ್ನು ಬಿಡಿಬಿಡಿಯಾಗಿ ಬಂಡವಾಳಶಾಹಿಗಳಿಗೆ ವಹಿಸತಕ್ಕ ಹುನ್ನಾರವೂ ಇದರಲ್ಲಿದೆ. ರೈಲ್ವೆ ವ್ಯವಸ್ಥೆ ಈ ಬಂಡವಾಳಶಾಹಿಗಳ ಕೈಗೆ ಹೋಗುತ್ತಿರುವುದರಿಂದ ತಾವು ನಿರ್ವಹಿಸುವ ಗೋಡೌನ್‌ಗಳಿಂದ ಉಚಿತವಾಗಿ ಗೂಡ್ಸ್ ಬೋಗಿಗಳಲ್ಲಿ ಕೃಷಿ ಉತ್ಪನ್ನಗಳನ್ನು ತುಂಬಿ ಸಾಗಿಸಲೂ ಅವಕಾಶ ಕಲ್ಪಿಸಿಕೊಡಲಾಗಿದೆ. ವ್ಯವಸಾಯಗಾರನ ಭೂಮಿ ಕಿತ್ತುಕೊಂಡು ಅವನನ್ನು ಬಂಡವಾಳಶಾಹಿಯ ಗುಲಾಮನನ್ನಾಗಿ ಮಾಡಿ ಅವನು ಬೆಳೆದು ಕೊಟ್ಟ ಆಹಾರ ಪದಾರ್ಥಗಳನ್ನು ಸಾಗಿಸುವ ಖರ್ಚನ್ನು ಉಳಿಸಿ ಈ ಧೂರ್ತರ ಕಿಸೆ ತುಂಬುವ ಯೋಜನೆ ಇದು.

ಕೇಂದ್ರ ಸರ್ಕಾರದ ಈ ವರ್ಷದ ಹಣಕಾಸಿನ ಪರಿಸ್ಥಿತಿ ತಿಳಿಯಬೇಕು. ಆರ್ಥಿಕಸ್ಥಿತಿ ಬಹಳ ಬಿಗಡಾಯಿಸಿದೆ. ಹಣಕಾಸಿನ ಸಚಿವಾಲಯದ ಮಾತನ್ನು ನಂಬುವುದಾದರೆ ಆಹಾರ ಧಾನ್ಯಗಳನ್ನು ಕೊಳ್ಳಲು ಸರ್ಕಾರದ ಬಳಿ ಹಣವಿಲ್ಲ. ಫುಡ್ ಕಾರ್ಪೊರೇಶನ್ ಇಂಡಿಯಾಗೆ ಈಗಾಗಲೇ ಕೊಟ್ಟಿರುವ ಸಾಲದ ಮೊತ್ತ 2.65 ಲಕ್ಷ ಕೋಟಿ. ಆದರೆ ಜನರಿಗೆ ಆಹಾರ ಒದಗಿಸುವುದು ಕಾನೂನು ರೀತ್ಯಾ ಸರ್ಕಾರದ ಜವಾಬ್ದಾರಿ. ಹಣದ ಕೊರತೆ ಇದೆ ಎಂದು ಈ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವೇ ಇಲ್ಲ. ಈ ನ್ಯಾಯಬದ್ಧ ಜವಾಬ್ದಾರಿಯನ್ನು ಕಾರ್ಪೊರೇಟ್ ಸಂಸ್ಥೆಗಳಿಗೆ, ಖಾಸಗಿಯವರಿಗೆ ವಹಿಸಿಕೊಡಲು ಬರುವುದೇ! ಗಂಭೀರವಾಗಿ ವಿಚಾರ ಮಾಡಬೇಕಾದ ಜಟಿಲ ಪ್ರಶ್ನೆ ಇದು.


ಇದನ್ನೂ ಓದಿ: ಟ್ರ್ಯಾಕ್ಟರ್ ರ್‍ಯಾಲಿ: ದಿಟ್ಟ ರೈತ ಹೋರಾಟದ ಗಮನಸೆಳೆದ 10 ಫೋಟೊಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...