Homeಮುಖಪುಟಮೂರನೇ ಒಂದು ಭಾಗದಷ್ಟು ವಲಸೆ ಕಾರ್ಮಿಕರು ಕೊರೊನಾ ಸೋಂಕಿಗೆ ಒಳಗಾಗಬಹುದು: ಸುಪ್ರೀಂಗೆ ಕೇಂದ್ರದ ಉತ್ತರ

ಮೂರನೇ ಒಂದು ಭಾಗದಷ್ಟು ವಲಸೆ ಕಾರ್ಮಿಕರು ಕೊರೊನಾ ಸೋಂಕಿಗೆ ಒಳಗಾಗಬಹುದು: ಸುಪ್ರೀಂಗೆ ಕೇಂದ್ರದ ಉತ್ತರ

ಭೀತಿ ಮತ್ತು ನಕಲಿ ಸುದ್ದಿಗಳನ್ನು ಎದುರಿಸಲು ಕೊರೊನಾದ ನೈಜ-ಸಮಯದ ಮಾಹಿತಿಯನ್ನು ಪ್ರಸಾರ ಮಾಡಲು 24 ಗಂಟೆಗಳ ಒಳಗೆ ಪೋರ್ಟಲ್ ಸ್ಥಾಪಿಸಲು ನ್ಯಾಯಾಲಯವು ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

- Advertisement -
- Advertisement -

ಲಾಕ್‌ಡೌನ್‌ ಕಾರಣದಿಂದಾಗಿ ನಗರಗಳಿಂದ ಗ್ರಾಮೀಣ ಪ್ರದೇಶಗಳಿಗೆ ತೆರಳಿರುವ 10 ಜನ ವಲಸೆ ಕಾರ್ಮಿಕರಲ್ಲಿ ಮೂವರಿಗೆ ಕೊರೊನಾ ವೈರಸ್ ಕಾಯಿಲೆ ಹರಡುವ ಸಾಧ್ಯತೆಯಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಎರಡು ಸಾರ್ವಜನಿಕ ಹಿತಾಸಕ್ತಿ ದಾವೆಗಳ (ಪಿಐಎಲ್) ವಿಚಾರಣೆಯಲ್ಲಿ ಕೇಂದ್ರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಉತ್ತರಿಸಿದ್ದು, ಸುಮಾರು 4.14 ಕೋಟಿ ಜನರು ಕೆಲಸಕ್ಕಾಗಿ ವಲಸೆ ಬಂದಿದ್ದಾರೆ. ಆದರೆ ಕೊರೊನಾವೈರಸ್ ಲಾಕ್‌ಡೌನ್‌  ಕಾರಣಕ್ಕಾಗಿ ಹಿಮ್ಮುಖ ವಲಸೆ ನಡೆಯುತ್ತಿದೆ ಎಂದಿದ್ದಾರೆ.

ಆಶ್ರಯ ಮನೆಗಳಲ್ಲಿ ಇರಿಸಲಾಗಿರುವ ವಲಸೆ ಕಾರ್ಮಿಕರಿಗೆ ಆಹಾರ, ವೈದ್ಯಕೀಯ ನೆರವು ನೀಡಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ನ್ಯಾಯಾಲಯವು ಕೇಂದ್ರಕ್ಕೆ ನಿರ್ದೇಶನ ನೀಡಿತು. ವಲಸಿಗರ ಭೀತಿಯನ್ನು ಹೋಗಲಾಡಿಸಲು ಸಹಾಯ ಮಾಡಲು ಎಲ್ಲಾ ಧರ್ಮಗಳ ತರಬೇತಿ ಪಡೆದ ಸಲಹೆಗಾರರು ಮತ್ತು ಧಾರ್ಮಿಕ ಮುಖಂಡರ ಸಹಾಯವನ್ನು ತೆಗೆದುಕೊಳ್ಳುವಂತೆ ಸುಪ್ರೀಂ ಸೂಚಿಸಿದೆ.

“ಭೀತಿಯು ವೈರಸ್‌ಗಿಂತ ಹೆಚ್ಚಿನ ಜನರನ್ನು ನಾಶಮಾಡುತ್ತದೆ ಎಂದು ನಾವು ನಿಮಗೆ ತಿಳಿಸಲು ಬಯಸುತ್ತೇವೆ. ನಿಮಗೆ ಸಲಹೆಗಾರರ ​​ಅಗತ್ಯವಿದೆ” ಎಂದು ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ಮತ್ತು ನ್ಯಾಯಮೂರ್ತಿ ಎಲ್ ನಾಗೇಶ್ವರ ರಾವ್ ಅವರ ನ್ಯಾಯಪೀಠವು ಹೇಳಿದೆ. ಅದಕ್ಕಾಗಿ ನೀವು ’ಭಜನೆ, ಕೀರ್ತನೆ ನಮಾಜ್’ ಅಥವಾ ಯಾವುದನ್ನಾದರೂ ಮಾಡಿಸುವ ಮೂಲಕ ಜನರಿಗೆ ಬಲವನ್ನು ನೀಡಬೇಕು ಎಂದು ಹೇಳಿದರು.

ಭೀತಿ ಮತ್ತು ನಕಲಿ ಸುದ್ದಿಗಳನ್ನು ಎದುರಿಸಲು ಕೊರೊನಾದ ನೈಜ-ಸಮಯದ ಮಾಹಿತಿಯನ್ನು ಪ್ರಸಾರ ಮಾಡಲು 24 ಗಂಟೆಗಳ ಒಳಗೆ ಪೋರ್ಟಲ್ ಸ್ಥಾಪಿಸಲು ನ್ಯಾಯಾಲಯವು ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

ಕೊರೊನ ವೈರಸ್ ಹರಡುವುದನ್ನು ನಿಯಂತ್ರಿಸಲು ದೇಶಾದ್ಯಂತ 21 ದಿನಗಳ ಲಾಕ್ ಡೌನ್ ವಿಧಿಸಿದ ನಂತರ ಅಸಹಾಯಕರಾಗಿ ಉಳಿದಿರುವ ವಲಸೆ ಕಾರ್ಮಿಕರಿಗೆ ಆಹಾರ ಮತ್ತು ಆಶ್ರಯ ನೀಡುವಂತೆ ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.

ಈ ಸಮಯದಲ್ಲಿ ಹಳ್ಳಿಗಳಲ್ಲಿ ವೈರಸ್ ಹರಡುವುದರಿಂದ ಜನರ ವಲಸೆಯನ್ನು ಈ ಸಮಯದಲ್ಲಿ ಅನುಮತಿಸಲಾಗುವುದಿಲ್ಲ ಎಂದು ಮೆಹ್ತಾ ಹೇಳಿದರು.

“ನೀವು ವಲಸೆ ನಿಲ್ಲಿಸಿದ ಎಲ್ಲರನ್ನು ಆಹಾರ, ಆಶ್ರಯ, ಪೋಷಣೆ ಮತ್ತು ವೈದ್ಯಕೀಯ ನೆರವಿನ ವಿಷಯದಲ್ಲಿ ನೋಡಿಕೊಳ್ಳುವುದನ್ನು ಭರವಸೆ ನೀಡಬೇಕು” ಎಂದು ಮುಖ್ಯ ನ್ಯಾಯಮೂರ್ತಿ ಎಸ್.ಎ.ಬಾಬ್ಡೆ ಕೇಂದ್ರ ಸರ್ಕಾರಕ್ಕೆ ತಿಳಿಸಿದ್ದಾರೆ.

ಪಿಐಎಲ್‌ಗಳ ಮೇಲಿನ ವಿಚಾರಣೆಯನ್ನು ಏಪ್ರಿಲ್ 7 ಕ್ಕೆ ಮುಂದೂಡಿದ ನ್ಯಾಯಪೀಠ, ವಲಸಿಗರ ಸಮಸ್ಯೆಯನ್ನು ತೆಗೆದುಕೊಳ್ಳದಂತೆ ಹೈಕೋರ್ಟ್‌ಗಳನ್ನು ತಡೆಯಲು ನಿರಾಕರಿಸಿದೆ. ಅವರು ಈ ಸಮಸ್ಯೆಯನ್ನು ಹೆಚ್ಚು ನಿಕಟವಾಗಿ ಮೇಲ್ವಿಚಾರಣೆ ಮಾಡಬಹುದು ಎಂದು ಕೋರ್ಟ್ ಹೇಳಿದೆ.

ಕೇಂದ್ರ ಗೃಹ ಸಚಿವಾಲಯದ ಪ್ರಕಾರ, ದೇಶಾದ್ಯಂತ 21,000 ಕ್ಕೂ ಹೆಚ್ಚು ಪರಿಹಾರ ಶಿಬಿರಗಳನ್ನು ಸ್ಥಾಪಿಸಲಾಗಿದ್ದು, ಅಲ್ಲಿ 6.6 ಲಕ್ಷಕ್ಕೂ ಹೆಚ್ಚು ನಿರ್ಗತಿಕರು ಮತ್ತು ಕೋವಿಡ್ -19 ಲಾಕ್‌ಡೌನ್ ಕಾರಣದಿಂದಾಗಿ ಸಿಕ್ಕಿಕೊಂಡವರಿಗೆ ಆಶ್ರಯ ನೀಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....