Homeಮುಖಪುಟಬಿಜೆಪಿಗೆ ಗುಡ್ ಬೈ ಹೇಳಲಿದ್ದಾರೆಯೇ ಪಂಕಜ ಮುಂಡೆ?

ಬಿಜೆಪಿಗೆ ಗುಡ್ ಬೈ ಹೇಳಲಿದ್ದಾರೆಯೇ ಪಂಕಜ ಮುಂಡೆ?

- Advertisement -
- Advertisement -

ಬಿಜೆಪಿ ನಾಯಕಿ ಪಂಕಜ ಮುಂಡೆ ಪಕ್ಷವನ್ನು ತೊರೆಯಲಿದ್ದಾರೆ ಎಂಬ ಮಾತುಗಳು ವ್ಯಾಪಕವಾಗಿ ಕೇಳಿಬಂದಿವೆ. ಇದಕ್ಕೆ ಪೂರಕವೆಂಬಂತೆ ಫೇಸ್ಬುಕ್ ನಲ್ಲಿದ್ದ ಬಿಜೆಪಿ ಟ್ಯಾಗ್ ಅನ್ನು ಅವರು ತೆಗೆದುಹಾಕಿರುವುದರಿಂದ ಅವರ ಮುಂದಿನ ರಾಜಕೀಯ ನಡೆ ಕುರಿತು ಊಹಾಪೋಹಗಳು ಎದ್ದಿವೆ. ಪಂಕಜ ಮುಂಡೆಯ ಮುಂದಿನ ತೀರ್ಮಾನಗಳು ಡಿಸೆಂಬರ್ 12 ರಂದು ಹೊರಬೀಳಲಿವೆ ಎಂದು ಪಿಟಿಐ ವರದಿ ಮಾಡಿದೆ.

ಹೌದು ಪಂಕಜ ಮುಂಡೆ ತನ್ನ ಫೇಸ್ಬುಕ್ ಖಾತೆಯಲ್ಲಿ ಉಲ್ಲೇಖಿಸಿದ್ದ ಬಿಜೆಪಿ ಎಂಬದನ್ನು ತೆಗೆದುಹಾಕಿದ್ದಾರೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚಿಸುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಪಂಕಜ ಮುಂಡೆ ಪಕ್ಷ ತೊರೆಯಲು ತೀರ್ಮಾನಿಸಿದ್ದಾರೆ ಎನ್ನಲಾಗುತ್ತಿದೆ.

ಚಿಕ್ಕಪ್ಪ ಮತ್ತು ಎನ್.ಸಿ.ಪಿ. ನಾಯಕ ಧನಂಜಯ ಮುಂಡೆ ಮತ್ತು ಪಂಕಜ ಮುಂಡೆ ವಿಧಾನಸಭಾ ಚುನಾವಣೆಯಲ್ಲಿ ಎದುರು-ಬದರು ಸ್ಪರ್ಧಿಸಿದ್ದರು. ಅಲ್ಲಿ ಸುಮಾರು 30 ಸಾವಿರ ಮತಗಳ ಅಂತರದಿಂದ ಪಂಕಜ ಮುಂಡೆ ಸೋತಿದ್ದರು. ಈಗ ಬಿಜೆಪಿ ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಸಾದ್ಯವಾಗಿಲ್ಲ. ಇದರಿಂದ ಬೇಸತ್ತಿರುವ ಪಂಕಜ ಮುಂಡೆ ಆತ್ಮಾವಲೋಕನ ಮಾಡಿಕೊಳ್ಳಲು ಮತ್ತು ಬೆಂಬಲಿಗರೊಂದಿಗೆ  ಮಾತುಕತೆ ನಡೆಸಲು ಡಿಸೆಂಬರ್ 12ರಂದು ಸಭೆ ಕರೆದಿದ್ದಾರೆ.

ಪಂಕಜ ಅವರ ತಂದೆ ಗೋಪಿನಾಥ್ ಮುಂಡೆ 2014ರಲ್ಲಿ ಕಾರು ಅಪಘಾತದಲ್ಲಿ ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕೆಲವು ತೀರ್ಮಾನಗಳನ್ನು ಕೈಗೊಂಡಿದ್ದರು. ಈಗ ಮತ್ತೆ ಮಹಾರಾಷ್ಟ್ರದಲ್ಲಿ ರಾಜಕೀಯ ಬದಲಾವಣೆಯಾಗಿದೆ. ಅನಿವಾರ್ಯ ಕಾರಣಗಳಿಂದ ನಿರ್ಧಾರಗಳನ್ನು ಕೈಗೊಳ್ಳಬೇಕಾಗಿದೆ. ಈ ತೀರ್ಮಾನ ಕೈಗೊಳ್ಳಲು ನನಗೆ 8-10 ದಿನ ಬೇಕಾಗಿದೆ ಎಂದು ಅವರು ಹೇಳಿದ್ದಾರೆ.

ಹೀಗಾಗಿಯೇ ಡಿಸೆಂಬರ್ 12ರಂದು ಅವರ ಬೆಂಬಲಿಗರಿಗೆ ಸಭೆ ಸೇರುವಂತೆ ಆಹ್ವಾನ ನೀಡಿದ್ದಾರೆ. ಹಾಗಾಗಿ ಅವರ ಮುಂದಿನ ತೀರ್ಮಾನಗಳು ಒಂದು ವಾರದಲ್ಲಿ ಹೊರಬೀಳಲಿವೆ. ಮುಂದಿನ ತೀರ್ಮಾನಗಳು ಏನಿರಬೇಕು, ಯಾವ ಮಾರ್ಗ ಅನುಸರಿಸಬೇಕು, ನಮ್ಮ ರಾಜಕೀಯ ಬಲವೇನು? ಜನರಿಗೆ ಏನು ಕೊಡಬೇಕು/ ಜನರ ನಿರೀಕ್ಷೆಗಳೇನು ಈ ಎಲ್ಲಾ ಕೋನಗಳಿಂದಲೂ ಯೋಚಿಸಿ 12ರಂದು ನಿಮ್ಮ ಮುಂದೆ ಬರುತ್ತೇನೆ ಎಂದು ಅವರು ಹೇಳಿಕೊಂಡಿದ್ದಾರೆ

ಕಳೆದ ಬಿಜೆಪಿ ಸರ್ಕಾರದ ಫಡ್ನಾವೀಸ್ ಸಂಪುಟದಲ್ಲಿ ಪಂಕಜ ಮುಮಡೆ ಗ್ರಾಮೀಣ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾಗಿ ಕೆಲಸ ನಿರ್ವಹಿಸಿದ್ದರು. 2014ರಲ್ಲಿ ತಂದೆ ಗೋಪಿನಾಥ್ ಮುಂಡೆ ಮೃತಪಟ್ಟ ಹಿನ್ನೆಲೆಯಲ್ಲಿ ಅನುಕಂಪದ ಅಲೆಯ ಮೇಲೆ ಪಂಕಜ ಮುಂಡೆ ಗೆದ್ದು ಬಂದಿದ್ದರು.

ಈ ಕುರಿತು ಪ್ರತಿಕ್ರಿಯ ನೀಡಿರುವ ಮಹಾರಾಷ್ಟ್ರ ಬಿಜೆಪಿ ವಕ್ತಾರ ಶಿರಿಶ್ ಬೋರ್ಕರ್, ಪಂಕಜ ಮುಂಡೆ ಬಿಜೆಪಿಯಲ್ಲೇ ಮುಂದುವರಿಯುತ್ತಾರೆ. ಪಕ್ಷವನ್ನು ಬಲಪಡಿಸಲು ಕೆಲಸ ಮಾಡುತ್ತಾರೆ. ಅವರ ಫೇಸ್ಬುಕ್ ಹೇಳಿಕೆಯನ್ನು ಓದಿದ್ದೇನೆ. ಅವರಿಗೆ ಬಿಜೆಪಿ ಬಗ್ಗೆ ಸಿಟ್ಟಿಲ್ಲ. ಅವರು ಕೋರ್ ಕಮಿಟಿ ಸಭೆಗೆ ಬರುತ್ತಾರೆ. ಅವರ ತಂದೆ ಬಿಜೆಪಿಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಹಾಗಾಗಿ ಪಂಕಜ್ ಮುಂಡೆ ಬೇರೆ ಪಕ್ಷಕ್ಕೆ ಹೋಗುವುದಿಲ್ಲ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...