Homeಮುಖಪುಟತಮಿಳುನಾಡು ಸಿಎಂ ಅಭ್ಯರ್ಥಿ ಪಟ್ಟಕ್ಕಾಗಿ ಪಳನಿಸ್ವಾಮಿ ಮತ್ತು ಪನ್ನೀರ್ ಸೆಲ್ವಂ ನಡುವೆ ಪೈಪೋಟಿ

ತಮಿಳುನಾಡು ಸಿಎಂ ಅಭ್ಯರ್ಥಿ ಪಟ್ಟಕ್ಕಾಗಿ ಪಳನಿಸ್ವಾಮಿ ಮತ್ತು ಪನ್ನೀರ್ ಸೆಲ್ವಂ ನಡುವೆ ಪೈಪೋಟಿ

ಚುನಾವಣೆಗೆ ಮುನ್ನವೇ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಮಾಡುವುದನ್ನು ಪನ್ನೀರ್‌ಸೆಲ್ವಂ ಪ್ರಶ್ನಿಸಿದ್ದಾರೆ.

- Advertisement -
- Advertisement -

ಮುಂದಿನ ವರ್ಷ ಆರಂಭದಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ರಾಜಕೀಯ ಗರಿಗೆದರಿದೆ. ಆಡಳಿತ ಪಕ್ಷ AIADMK ನಲ್ಲಿ ಮುಸುಕಿನ ಗುದ್ದಾಟಕ್ಕೆ ಉಪಮುಖ್ಯಮಂತ್ರಿ ಓ ಪನ್ನೀರ್ ಸೆಲ್ವಂ ಪ್ರತಿಕ್ರಿಯೆ ನೀಡಿದ್ದಾರೆ.

ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಎಐಎಡಿಎಂಕೆ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬ ಪ್ರಶ್ನೆ ಉದ್ಭವಿಸಿದೆ. ಆಯ್ಕೆ ಹಿನ್ನೆಲೆ ಉದ್ಭವಿಸಿರುವ ಬಿಕ್ಕಟ್ಟಿನ ಕುರಿತು ತಮಿಳುನಾಡಿನ ಉಪಮುಖ್ಯಮಂತ್ರಿ ಓ ಪನ್ನೀರ್‌ಸೆಲ್ವಂ ಮೌನ ಮುರಿದಿದ್ದಾರೆ.

2021ರಲ್ಲಿ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆಯಾಗಲು ಎಡಪ್ಪಾಡಿ ಪಳನಿಸ್ವಾಮಿ ಮತ್ತು ಪನ್ನೀರ್‌ಸೆಲ್ವಂ ಅವರ ನಡುವೆ ಬಿರುಸಿನ ಪೈಪೋಟಿ ನಡೆದಿದೆ.

ಮುಖ್ಯಮಂತ್ರಿ ಪಳನಿಸ್ವಾಮಿ ಮತ್ತು ಪನ್ನೀರ್ ಸೆಲ್ವಂ ಅವರ ಬೆಂಬಲಿಗರು ತಮ್ಮ ನಾಯಕ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಹೇಳಿಕೊಂಡು ಪೋಸ್ಟರ್‌ಗಳನ್ನು ಹಾಕಿದಾಗ ಈ ವಿವಾದ ಉಲ್ಬಣಗೊಂಡಿತು. ಅಕ್ಟೋಬರ್‌ 7 ರಂದು ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಘೋಷಿಸುವ ಸಾಧ್ಯತೆಯಿದೆ.

ಇದನ್ನೂ ಓದಿ: ವಿನಾಯಕ ಚತುರ್ಥಿ: ತಮಿಳುನಾಡಿನಲ್ಲಿ ಮಿತ್ರಪಕ್ಷಗಳಾದ AIADMK ಮತ್ತು BJP ಟ್ವೀಟ್ ಸಮರ

ಇಂದು ಟ್ವೀಟ್ ಮಾಡಿರುವ ಪನ್ನೀರ್‌ ಸೆಲ್ವಂ, ’ಇದುವರೆಗಿನ ನನ್ನ ನಿರ್ಧಾರಗಳು ತಮಿಳುನಾಡಿನ ಜನರು ಮತ್ತು ಎಐಎಡಿಎಂಕೆ ಸ್ವಯಂಸೇವಕರ ಹಿತದೃಷ್ಟಿಯಿಂದ ಕೈಗೊಂಡಿರುತ್ತೇನೆ. ಭವಿಷ್ಯದಲ್ಲಿಯೂ ಇದೇ ರೀತಿ ನಿರ್ಧಾರ ಕೈಗೊಳ್ಳುತ್ತೇನೆ” ಎಂದಿದ್ದಾರೆ.

ಜೊತೆಗೆ ’ಇದುವರೆಗೆ ಏನು ನಡೆದಿದೆಯೋ ಒಳ್ಳೆಯದಕ್ಕಾಗಿಯೇ ನಡೆದಿದೆ. ಈಗ ನಡೆಯುತ್ತಿರುವುದು ಸಹ ಒಳ್ಳೆಯದಕ್ಕೆ. ಮುಂದೆ ನಡೆಯುವುದು ಸಹ ಒಳ್ಳೆಯದಕ್ಕೆ’ ಎಂದು ಒಪಿಎಸ್ ಟ್ವೀಟ್ ಮಾಡಿದ್ದಾರೆ.

ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಕುರಿತು ಚರ್ಚಿಸಲು ಎಐಎಡಿಎಂಕೆ ಕಾರ್ಯಕಾರಿ ಸಮಿತಿ ಸೆಪ್ಟೆಂಬರ್ 28 ರಂದು ಚೆನ್ನೈನ ಎಐಎಡಿಎಂಕೆ ಕೇಂದ್ರ ಕಚೇರಿಯಲ್ಲಿ ಸಭೆ ನಡೆಸಿತ್ತು. ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪನ್ನೀರ್ ಸೆಲ್ವಂ ಮತ್ತು ಎಡಪ್ಪಾಡಿ ಪಳನಿಸ್ವಾಮಿ ಇಬ್ಬರೂ ತಮ್ಮನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಸುವಂತೆ ಒತ್ತಾಯಿಸಿದರು.

ಇದನ್ನೂ ಓದಿ: NEP ಯ ತ್ರಿಭಾಷಾ ಸೂತ್ರ ಅಳವಡಿಸುವುದಿಲ್ಲ: ತಮಿಳುನಾಡು ಮುಖ್ಯಮಂತ್ರಿ

ಉಪಮುಖ್ಯಮಂತ್ರಿ ಪನ್ನೀರ್‌ಸೆಲ್ವಂಗೆ ಬೆಂಬಲದ ಕೊರತೆ ಇದ್ದು, ಪಳನಿಸ್ವಾಮಿ ಅವರಿಗೆ ಬಹುತೇಕ ಶಾಸಕರು, ಮುಖಂಡರ ಬೆಂಬಲವಿದೆ ಎನ್ನಲಾಗಿದೆ. ಇದರ ಬೆನ್ನಲ್ಲೇ ಕಾರ್ಯಕಾರಿ ಸಮಿತಿ ಎಐಎಡಿಎಂಕೆ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಅಕ್ಟೋಬರ್ 7 ರಂದು ಘೋಷಿಸಲಾಗುವುದು ಎಂದು ಘೋಷಿಸಿತ್ತು.

ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆಗೆ ಇನ್ನೇರಡು ದಿನಗಳಿರುವಾಗ ಪನ್ನೀರ್‌ ಸೆಲ್ವಂ ಟ್ವೀಟ್ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಚುನಾವಣೆಗೆ ಮುನ್ನವೇ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಮಾಡುವುದನ್ನು ಪನ್ನೀರ್‌ಸೆಲ್ವಂ ಪ್ರಶ್ನಿಸಿದ್ದಾರೆ.

’ಪಕ್ಷದಲ್ಲಿ ಯಾವುದೇ ಬದಲಾವಣೆಗಳಾಗುವುದಿಲ್ಲ. ಯಥಾಸ್ಥಿತಿ ಮುಂದುವರಿಯುತ್ತದೆ. ಪಳನಿಸ್ವಾಮಿ ಉಸ್ತುವಾರಿಯಲ್ಲಿ ಪಕ್ಷವು ಚುನಾವಣೆಯನ್ನು ಎದುರಿಸಲಿದೆ, ಆದರೆ ಪನ್ನೀರ್‌ ಸೆಲ್ವಂ ಪಕ್ಷದ ಸಂಯೋಜಕರಾಗಿರುತ್ತಾರೆ’ ಎಂದು ಹೆಸರು ಹೇಳಲು ಬಯಸದ ಹಿರಿಯ ಅಧಿಕಾರಿ ತಿಳಿಸಿದ್ದಾರೆ ಎಂದು ವರದಿಯಾಗಿದೆ.


ಇದನ್ನೂ ಓದಿ: ಹತ್ರಾಸ್ ಸಂತ್ರಸ್ತ ಕುಟುಂಬ ಕೇಳುತ್ತಿರುವುದೇನು?: 5 ಪ್ರಶ್ನೆಗಳನ್ನು ಮುಂದಿಟ್ಟ ಪ್ರಿಯಾಂಕ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...