Homeಮುಖಪುಟತಮಿಳುನಾಡು ಸಿಎಂ ಅಭ್ಯರ್ಥಿ ಪಟ್ಟಕ್ಕಾಗಿ ಪಳನಿಸ್ವಾಮಿ ಮತ್ತು ಪನ್ನೀರ್ ಸೆಲ್ವಂ ನಡುವೆ ಪೈಪೋಟಿ

ತಮಿಳುನಾಡು ಸಿಎಂ ಅಭ್ಯರ್ಥಿ ಪಟ್ಟಕ್ಕಾಗಿ ಪಳನಿಸ್ವಾಮಿ ಮತ್ತು ಪನ್ನೀರ್ ಸೆಲ್ವಂ ನಡುವೆ ಪೈಪೋಟಿ

ಚುನಾವಣೆಗೆ ಮುನ್ನವೇ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಮಾಡುವುದನ್ನು ಪನ್ನೀರ್‌ಸೆಲ್ವಂ ಪ್ರಶ್ನಿಸಿದ್ದಾರೆ.

- Advertisement -
- Advertisement -

ಮುಂದಿನ ವರ್ಷ ಆರಂಭದಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ರಾಜಕೀಯ ಗರಿಗೆದರಿದೆ. ಆಡಳಿತ ಪಕ್ಷ AIADMK ನಲ್ಲಿ ಮುಸುಕಿನ ಗುದ್ದಾಟಕ್ಕೆ ಉಪಮುಖ್ಯಮಂತ್ರಿ ಓ ಪನ್ನೀರ್ ಸೆಲ್ವಂ ಪ್ರತಿಕ್ರಿಯೆ ನೀಡಿದ್ದಾರೆ.

ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಎಐಎಡಿಎಂಕೆ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬ ಪ್ರಶ್ನೆ ಉದ್ಭವಿಸಿದೆ. ಆಯ್ಕೆ ಹಿನ್ನೆಲೆ ಉದ್ಭವಿಸಿರುವ ಬಿಕ್ಕಟ್ಟಿನ ಕುರಿತು ತಮಿಳುನಾಡಿನ ಉಪಮುಖ್ಯಮಂತ್ರಿ ಓ ಪನ್ನೀರ್‌ಸೆಲ್ವಂ ಮೌನ ಮುರಿದಿದ್ದಾರೆ.

2021ರಲ್ಲಿ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆಯಾಗಲು ಎಡಪ್ಪಾಡಿ ಪಳನಿಸ್ವಾಮಿ ಮತ್ತು ಪನ್ನೀರ್‌ಸೆಲ್ವಂ ಅವರ ನಡುವೆ ಬಿರುಸಿನ ಪೈಪೋಟಿ ನಡೆದಿದೆ.

ಮುಖ್ಯಮಂತ್ರಿ ಪಳನಿಸ್ವಾಮಿ ಮತ್ತು ಪನ್ನೀರ್ ಸೆಲ್ವಂ ಅವರ ಬೆಂಬಲಿಗರು ತಮ್ಮ ನಾಯಕ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಹೇಳಿಕೊಂಡು ಪೋಸ್ಟರ್‌ಗಳನ್ನು ಹಾಕಿದಾಗ ಈ ವಿವಾದ ಉಲ್ಬಣಗೊಂಡಿತು. ಅಕ್ಟೋಬರ್‌ 7 ರಂದು ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಘೋಷಿಸುವ ಸಾಧ್ಯತೆಯಿದೆ.

ಇದನ್ನೂ ಓದಿ: ವಿನಾಯಕ ಚತುರ್ಥಿ: ತಮಿಳುನಾಡಿನಲ್ಲಿ ಮಿತ್ರಪಕ್ಷಗಳಾದ AIADMK ಮತ್ತು BJP ಟ್ವೀಟ್ ಸಮರ

ಇಂದು ಟ್ವೀಟ್ ಮಾಡಿರುವ ಪನ್ನೀರ್‌ ಸೆಲ್ವಂ, ’ಇದುವರೆಗಿನ ನನ್ನ ನಿರ್ಧಾರಗಳು ತಮಿಳುನಾಡಿನ ಜನರು ಮತ್ತು ಎಐಎಡಿಎಂಕೆ ಸ್ವಯಂಸೇವಕರ ಹಿತದೃಷ್ಟಿಯಿಂದ ಕೈಗೊಂಡಿರುತ್ತೇನೆ. ಭವಿಷ್ಯದಲ್ಲಿಯೂ ಇದೇ ರೀತಿ ನಿರ್ಧಾರ ಕೈಗೊಳ್ಳುತ್ತೇನೆ” ಎಂದಿದ್ದಾರೆ.

ಜೊತೆಗೆ ’ಇದುವರೆಗೆ ಏನು ನಡೆದಿದೆಯೋ ಒಳ್ಳೆಯದಕ್ಕಾಗಿಯೇ ನಡೆದಿದೆ. ಈಗ ನಡೆಯುತ್ತಿರುವುದು ಸಹ ಒಳ್ಳೆಯದಕ್ಕೆ. ಮುಂದೆ ನಡೆಯುವುದು ಸಹ ಒಳ್ಳೆಯದಕ್ಕೆ’ ಎಂದು ಒಪಿಎಸ್ ಟ್ವೀಟ್ ಮಾಡಿದ್ದಾರೆ.

ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಕುರಿತು ಚರ್ಚಿಸಲು ಎಐಎಡಿಎಂಕೆ ಕಾರ್ಯಕಾರಿ ಸಮಿತಿ ಸೆಪ್ಟೆಂಬರ್ 28 ರಂದು ಚೆನ್ನೈನ ಎಐಎಡಿಎಂಕೆ ಕೇಂದ್ರ ಕಚೇರಿಯಲ್ಲಿ ಸಭೆ ನಡೆಸಿತ್ತು. ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪನ್ನೀರ್ ಸೆಲ್ವಂ ಮತ್ತು ಎಡಪ್ಪಾಡಿ ಪಳನಿಸ್ವಾಮಿ ಇಬ್ಬರೂ ತಮ್ಮನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಸುವಂತೆ ಒತ್ತಾಯಿಸಿದರು.

ಇದನ್ನೂ ಓದಿ: NEP ಯ ತ್ರಿಭಾಷಾ ಸೂತ್ರ ಅಳವಡಿಸುವುದಿಲ್ಲ: ತಮಿಳುನಾಡು ಮುಖ್ಯಮಂತ್ರಿ

ಉಪಮುಖ್ಯಮಂತ್ರಿ ಪನ್ನೀರ್‌ಸೆಲ್ವಂಗೆ ಬೆಂಬಲದ ಕೊರತೆ ಇದ್ದು, ಪಳನಿಸ್ವಾಮಿ ಅವರಿಗೆ ಬಹುತೇಕ ಶಾಸಕರು, ಮುಖಂಡರ ಬೆಂಬಲವಿದೆ ಎನ್ನಲಾಗಿದೆ. ಇದರ ಬೆನ್ನಲ್ಲೇ ಕಾರ್ಯಕಾರಿ ಸಮಿತಿ ಎಐಎಡಿಎಂಕೆ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಅಕ್ಟೋಬರ್ 7 ರಂದು ಘೋಷಿಸಲಾಗುವುದು ಎಂದು ಘೋಷಿಸಿತ್ತು.

ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆಗೆ ಇನ್ನೇರಡು ದಿನಗಳಿರುವಾಗ ಪನ್ನೀರ್‌ ಸೆಲ್ವಂ ಟ್ವೀಟ್ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಚುನಾವಣೆಗೆ ಮುನ್ನವೇ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಮಾಡುವುದನ್ನು ಪನ್ನೀರ್‌ಸೆಲ್ವಂ ಪ್ರಶ್ನಿಸಿದ್ದಾರೆ.

’ಪಕ್ಷದಲ್ಲಿ ಯಾವುದೇ ಬದಲಾವಣೆಗಳಾಗುವುದಿಲ್ಲ. ಯಥಾಸ್ಥಿತಿ ಮುಂದುವರಿಯುತ್ತದೆ. ಪಳನಿಸ್ವಾಮಿ ಉಸ್ತುವಾರಿಯಲ್ಲಿ ಪಕ್ಷವು ಚುನಾವಣೆಯನ್ನು ಎದುರಿಸಲಿದೆ, ಆದರೆ ಪನ್ನೀರ್‌ ಸೆಲ್ವಂ ಪಕ್ಷದ ಸಂಯೋಜಕರಾಗಿರುತ್ತಾರೆ’ ಎಂದು ಹೆಸರು ಹೇಳಲು ಬಯಸದ ಹಿರಿಯ ಅಧಿಕಾರಿ ತಿಳಿಸಿದ್ದಾರೆ ಎಂದು ವರದಿಯಾಗಿದೆ.


ಇದನ್ನೂ ಓದಿ: ಹತ್ರಾಸ್ ಸಂತ್ರಸ್ತ ಕುಟುಂಬ ಕೇಳುತ್ತಿರುವುದೇನು?: 5 ಪ್ರಶ್ನೆಗಳನ್ನು ಮುಂದಿಟ್ಟ ಪ್ರಿಯಾಂಕ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...