Homeಅಂತರಾಷ್ಟ್ರೀಯಪನ್ನೂನ್ ಹತ್ಯೆ ಸಂಚು: ಮೋದಿ ಆಪ್ತರ ಕಡೆ ಬೊಟ್ಟು?

ಪನ್ನೂನ್ ಹತ್ಯೆ ಸಂಚು: ಮೋದಿ ಆಪ್ತರ ಕಡೆ ಬೊಟ್ಟು?

- Advertisement -
- Advertisement -

ಅಮೆರಿಕದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನೂನ್ ಹತ್ಯೆಗೆ ಭಾರತದ ಗುಪ್ತಚರ ಸೇವೆಯ ಅಧಿಕಾರಿಯೊಬ್ಬರು ಅಂತಿಮ ಸೂಚನೆಗಳನ್ನು ನೀಡಿದ್ದರು ಎಂದು ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿದ್ದು, ಪನ್ನೂನ್ ಹತ್ಯೆಯ ಬಗ್ಗೆ ಪ್ರಧಾನಿ ಮೋದಿ ಆಪ್ತರಿಗೆ ತಿಳಿದಿರುವ ಸಾಧ್ಯತೆ ಇದೆ ಎಂದು ಯುಎಸ್‌ ಏಜೆನ್ಸಿಗಳ ಮಾಹಿತಿ ಉಲ್ಲೇಖಿಸಿ ಹೇಳಿಕೊಂಡಿದೆ.

ಪನ್ನೂನ್‌ ಹತ್ಯೆಯು “ಈಗ ಆದ್ಯತೆಯಾಗಿದೆ” ಎಂದು ಭಾರತದ ಬೇಹುಗಾರಿಕಾ ಸಂಸ್ಥೆ, ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ ಅಥವಾ RAWನಲ್ಲಿ ಅಧಿಕಾರಿಯಾಗಿರುವ ವಿಕ್ರಂ ಯಾದವ್ ಬರೆದಿದ್ದಾರೆ ಎಂದು ಆಪಾದಿಸಲಾಗಿದೆ.

ಯುಎಸ್ ಸಲ್ಲಿಸಿದ ದೋಷಾರೋಪಣೆ ಪಟ್ಟಿ ಪ್ರಕಾರ, ಯಾದವ್‌ ಹಂತಕರಿಗೆ ಸಿಖ್ ಕಾರ್ಯಕರ್ತ ಗುರುಪತ್ವಂತ್ ಸಿಂಗ್ ಪನ್ನುನ್ ಅವರ ನ್ಯೂಯಾರ್ಕ್ ವಿಳಾಸ ಸೇರಿದಂತೆ ಎಲ್ಲಾ ಮಾಹಿತಿಗಳನ್ನು ನೀಡಿದ್ದರು. ಹಂತಕರು  ಪನ್ನೂನ್ ಮನೆಯಲ್ಲಿದ್ದಾರೆ ಎಂದು ಖಚಿತಪಡಿಸಿದ ತಕ್ಷಣ ಮುಂದಕ್ಕೆ ತನ್ನ ಕೆಲಸ ಮಾಡಬಹುದು ಎಂದು ಸೂಚಿಸಿದ್ದರು ಎನ್ನಲಾಗಿದೆ.

ಯಾದವ್ ಅವರ ಗುರುತು ಮತ್ತು ಸಂಬಂಧವು ಈ ಹಿಂದೆ ವರದಿಯಾಗಿಲ್ಲ, ಪನ್ನೂನ್‌ ಹತ್ಯೆಯ ಯೋಜನೆಯನ್ನು ಅಂತಿಮವಾಗಿ ಯುಎಸ್ ಅಧಿಕಾರಿಗಳು ವಿಫಲಗೊಳಿಸಿದ್ದಾರೆ. ಭಾರತೀಯ ಅಧಿಕಾರಿಯಿಂದಲೇ ನಿರ್ದೇಶಿಸಲ್ಪಟ್ಟಿದೆ ಎಂಬುದಕ್ಕೆ ಇಲ್ಲಿಯವರೆಗಿನ ಅತ್ಯಂತ ಸ್ಪಷ್ಟವಾದ ಪುರಾವೆಗಳನ್ನು  ಯುಎಸ್‌ ಒದಗಿಸುತ್ತದೆ. ಅದು ಮೋದಿಯ ಆಂತರಿಕ ವಲಯಕ್ಕೆ ಸಂಭಾವ್ಯ ಸಂಪರ್ಕಗಳ ಬಗ್ಗೆ ಬೊಟ್ಟು ಮಾಡಿದೆ.

ಅಮೆರಿಕದಲ್ಲಿ ನೆಲೆ ನಿಂತಿರುವ ಖಲಿಸ್ತಾನಿ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನೂನ್ ಹತ್ಯೆಗೆ ಸಂಶೋಧನೆ ಮತ್ತು ವಿಶ್ಲೇಷಣೆ ವಿಭಾಗ ಅಧಿಕಾರಿ ವಿಕ್ರಮ್ ಯಾದವ್, ಬಾಡಿಗೆ ಹಂತಕರಿಗೆ ಸೂಚನೆ ನೀಡಿದ್ದರು ಮತ್ತು ಪನ್ನೂನ್ ಹತ್ಯೆ ಕಾರ್ಯಾಚರಣೆಯನ್ನು ಆ ಸಮಯದಲ್ಲಿ ರಾ ಮುಖ್ಯಸ್ಥರಾಗಿದ್ದ ಸಮಂತ್ ಗೋಯಲ್ ಅನುಮೋದಿಸಿದ್ದರು ಎಂದು ಅಮೆರಿಕದ ಗುಪ್ತಚರ ಏಜೆನ್ಸಿಗಳು ಅಭಿಪ್ರಾಯಪಟ್ಟಿವೆ ಎಂದು ವರದಿಯಲ್ಲಿ ವಿವರಿಸಲಾಗಿದೆ.

ಮೋದಿಯವರ ರಾಷ್ಟ್ರೀಯ ಭದ್ರತಾ ಸಲಹೆಗಾರರಾದ ಅಜಿತ್ ದೋವಲ್ ಅವರು ಸಿಖ್ ಕಾರ್ಯಕರ್ತ ಪನ್ನೂನ್ ಹತ್ಯೆ ಸಂಚಿನ ಬಗ್ಗೆ ಬಹುಶಃ ತಿಳಿದಿದ್ದರು ಎಂದು ಯುಎಸ್ ಬೇಹುಗಾರಿಕಾ ಸಂಸ್ಥೆಗಳು ಹೇಳಿದೆ. ಆದರೆ ಇದಕ್ಕೆ ಯಾವುದೇ ಸ್ಪಷ್ಟ ಪುರಾವೆಯನ್ನು ನೀಡಿಲ್ಲ. ಈ ಬಗ್ಗೆ ಮಾಹಿತಿ ಕೋರಿ ಅಜಿತ್‌ ದೋವಲ್ ಅಥವಾ ಗೋಯಲ್‌ಗೆ ವಾಷಿಂಗ್‌ ಟನ್‌ ಪೋಸ್ಟ್‌ ಸಂಪರ್ಕಿಸಿದ್ದರೂ ಪ್ರತಿಕ್ರಿಯಿಸಿಲ್ಲ ಎನ್ನಲಾಗಿದೆ.

ಭಾರತವು ಯುಎಸ್ ನೆಲದಲ್ಲಿ ಹತ್ಯೆಯನ್ನು ಮಾಡುವಂತಹ ಅಪಯಾಕಾರಿ ಪ್ರಯತ್ನವನ್ನು ಏಕೆ ಮಾಡುತ್ತದೆ ಎಂದು ಕೇಳಿದಾಗ, ಅವರು ಅದರಿಂದ ಪಾರಾಗಬಹುದು ಎಂದು ಭಾವಿಸಿದ್ದರು ಎಂದು ಭದ್ರತಾ ಅಧಿಕಾರಿಯೋರ್ವರು ಹೇಳಿದ್ದಾರೆ.

ಜೂನ್‌ನಲ್ಲಿ ವ್ಯಾಂಕೋವರ್ ಉಪನಗರದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತೀಯ ಏಜೆಂಟರ ಕೈವಾಡದ ಬಗ್ಗೆ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಆರೋಪಿಸಿದ ಬಳಿಕ ಭಾರತ ಮತ್ತು ಕೆನಡಾ ನಡುವಿನ ರಾಜತಾಂತ್ರಿಕ ಸಂಬಂಧ ಹಳಸಿತ್ತು. ಕೆನಡಾದ ಸಿಖ್ ಪ್ರತ್ಯೇಕತಾವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ವಿವಾದದ ಮಧ್ಯೆಯೇ ಅಮೆರಿಕದಲ್ಲಿ ಸಿಖ್ ಪ್ರತ್ಯೇಕತಾವಾದಿ ನಾಯಕ ಗುರ್ಪತ್‌ವಂತ್ ಸಿಂಗ್ ಪನ್ನುನ್ ಅವರ ಹತ್ಯೆಯನ್ನು ಮಾಡುವ ಸಂಚನ್ನು ಅಮೆರಿಕ ವಿಫಲಗೊಳಿಸಿದೆ ಎಂದು ಕೂಡ ಹೇಳಿಕೊಂಡಿತ್ತು.

ಸಿಖ್ ಪ್ರತ್ಯೇಕತಾವಾದಿ ನಾಯಕ ಗುರ್ಪತ್‌ವಂತ್ ಸಿಂಗ್ ಪನ್ನುನ್‌, ಹರ್ದೀಪ್ ಸಿಂಗ್ ನಿಜ್ಜರ್‌ನಂತೆ ದಶಕಗಳ ಕಾಲದ ಸಿಖ್‌ ಪ್ರತ್ಯೇಕವಾದಿ ಪ್ರತಿಪಾದಕನಾಗಿದ್ದಾನೆ. ಪನ್ನೂನ್ ಗಾರ್ಡಿಯನ್‌ಗೆ ಇತ್ತೀಚೆಗೆ ನೀಡಿದ ಸಂದರ್ಶನದಲ್ಲಿ, ಕೆನಡಾದಲ್ಲಿರುವ ಭಾರತೀಯ ಅಧಿಕಾರಿಗಳು ನಿಜ್ಜರ್ ಹತ್ಯೆಯ ತನಿಖೆಯನ್ನು ಕುಂಠಿತಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದರು. ನಿಜ್ಜರ್‌ ಗುಂಡೇಟಿಗೆ ಬಲಿಯಾಗಿ 5 ತಿಂಗಳಾದರೂ ಯಾರನ್ನೂ ಬಂಧಿಸಲಾಗಿಲ್ಲ. ಸರಣಿ ಹತ್ಯೆಗಳ ಈ ತನಿಖೆಗಳು ಹೇಗೆ ಕಾರ್ಯನಿರ್ವಹಿಸುತ್ತವೆ ಎಂಬುದನ್ನು ನಾನು ಅರ್ಥಮಾಡಿಕೊಂಡಿದ್ದೇನೆ. ಇದು ಟೊರೊಂಟೊ ಅಥವಾ ವ್ಯಾಂಕೋವರ್‌ನಲ್ಲಿ ನಡೆದ ಸರಳವಾದ ಕೊಲೆಯಲ್ಲ. ಇದು ಖಲಿಸ್ತಾನ್ ಪರ ಕಾರ್ಯಕರ್ತನ ಸುಸಂಘಟಿತ ಕೊಲೆಯಾಗಿದೆ ಎಂದು ಹೇಳಿದ್ದರು.

ಭಾರತದ ಪ್ರಜೆ ನಿಖಿಲ್ ಗುಪ್ತಾ ಈ ಪ್ರಕರಣದಲ್ಲಿ ಷಾಮೀಲಾಗಿದ್ದಾರೆ ಎಂಬ ಸುಳಿವನ್ನು ಅಮೆರಿಕದ ಅಧಿಕಾರಿಗಳು ಈ ಹಿಂದೆ ನೀಡಿದ್ದರು. ಭಾರತೀಯ ಅಧಿಕಾರಿಗಳ ಸೂಚನೆ ಮೇರೆಗೆ ಅವರು ಕಾರ್ಯ ನಿರ್ವಹಿಸಿದ್ದರು ಎಂದು ಆಪಾದಿಸಲಾಗಿತ್ತು. ಆ ಬಳಿಕ ಅವರನ್ನು ಬಂಧಿಸಲಾಗಿದ್ದು, ಪ್ರಸ್ತುತ ಅವರು ಪರುಗ್ವೆಯ ಜೈಲಿನಲ್ಲಿದ್ದಾರೆ. ಈ ಕುರಿತು ತನಿಖೆ ನಡೆಸಲು ಭಾರತ ಉನ್ನತ ಮಟ್ಟದ ಸಮಿತಿಯನ್ನು ರಚಿಸಿತ್ತು. ಭಾರತೀಯ ಅಧಿಕಾರಿಗಳ ಪಾತ್ರ ಕುರಿತಂತೆ ಅಮೆರಿಕ ಹಂಚಿಕೊಂಡ ಮಾಹಿತಿಗಳ ಬಗ್ಗೆ ತನಿಖೆ ನಡೆಸಲು ಸಮಿತಿ ನೇಮಿಸಿದ್ದರೂ, ಇದು ಭಾರತದ ಭದ್ರತೆಗೆ ಸಂಬಂಧಪಟ್ಟ ವಿಚಾರ ಎಂದು ಹೇಳಿ ಈ ಸಂಬಂಧ ಯಾವುದೇ ಮಾಹಿತಿಯನ್ನು ಬಿಡುಗಡೆ ಮಾಡಿಲ್ಲ.

ಇದನ್ನು ಓದಿ: ಗಾಝಾ ಹತ್ಯಾಕಾಂಡ: ನೆತನ್ಯಾಹು ಸೇರಿ ಇಸ್ರೇಲ್‌ ಅಧಿಕಾರಿಗಳ ಬಂಧನಕ್ಕೆ ವಾರೆಂಟ್‌ ಜಾರಿ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...