Homeಅಂತರಾಷ್ಟ್ರೀಯಪನ್ನೂನ್ ಹತ್ಯೆ ಸಂಚು: ಮೋದಿ ಆಪ್ತರ ಕಡೆ ಬೊಟ್ಟು?

ಪನ್ನೂನ್ ಹತ್ಯೆ ಸಂಚು: ಮೋದಿ ಆಪ್ತರ ಕಡೆ ಬೊಟ್ಟು?

- Advertisement -
- Advertisement -

ಅಮೆರಿಕದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನೂನ್ ಹತ್ಯೆಗೆ ಭಾರತದ ಗುಪ್ತಚರ ಸೇವೆಯ ಅಧಿಕಾರಿಯೊಬ್ಬರು ಅಂತಿಮ ಸೂಚನೆಗಳನ್ನು ನೀಡಿದ್ದರು ಎಂದು ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿದ್ದು, ಪನ್ನೂನ್ ಹತ್ಯೆಯ ಬಗ್ಗೆ ಪ್ರಧಾನಿ ಮೋದಿ ಆಪ್ತರಿಗೆ ತಿಳಿದಿರುವ ಸಾಧ್ಯತೆ ಇದೆ ಎಂದು ಯುಎಸ್‌ ಏಜೆನ್ಸಿಗಳ ಮಾಹಿತಿ ಉಲ್ಲೇಖಿಸಿ ಹೇಳಿಕೊಂಡಿದೆ.

ಪನ್ನೂನ್‌ ಹತ್ಯೆಯು “ಈಗ ಆದ್ಯತೆಯಾಗಿದೆ” ಎಂದು ಭಾರತದ ಬೇಹುಗಾರಿಕಾ ಸಂಸ್ಥೆ, ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ ಅಥವಾ RAWನಲ್ಲಿ ಅಧಿಕಾರಿಯಾಗಿರುವ ವಿಕ್ರಂ ಯಾದವ್ ಬರೆದಿದ್ದಾರೆ ಎಂದು ಆಪಾದಿಸಲಾಗಿದೆ.

ಯುಎಸ್ ಸಲ್ಲಿಸಿದ ದೋಷಾರೋಪಣೆ ಪಟ್ಟಿ ಪ್ರಕಾರ, ಯಾದವ್‌ ಹಂತಕರಿಗೆ ಸಿಖ್ ಕಾರ್ಯಕರ್ತ ಗುರುಪತ್ವಂತ್ ಸಿಂಗ್ ಪನ್ನುನ್ ಅವರ ನ್ಯೂಯಾರ್ಕ್ ವಿಳಾಸ ಸೇರಿದಂತೆ ಎಲ್ಲಾ ಮಾಹಿತಿಗಳನ್ನು ನೀಡಿದ್ದರು. ಹಂತಕರು  ಪನ್ನೂನ್ ಮನೆಯಲ್ಲಿದ್ದಾರೆ ಎಂದು ಖಚಿತಪಡಿಸಿದ ತಕ್ಷಣ ಮುಂದಕ್ಕೆ ತನ್ನ ಕೆಲಸ ಮಾಡಬಹುದು ಎಂದು ಸೂಚಿಸಿದ್ದರು ಎನ್ನಲಾಗಿದೆ.

ಯಾದವ್ ಅವರ ಗುರುತು ಮತ್ತು ಸಂಬಂಧವು ಈ ಹಿಂದೆ ವರದಿಯಾಗಿಲ್ಲ, ಪನ್ನೂನ್‌ ಹತ್ಯೆಯ ಯೋಜನೆಯನ್ನು ಅಂತಿಮವಾಗಿ ಯುಎಸ್ ಅಧಿಕಾರಿಗಳು ವಿಫಲಗೊಳಿಸಿದ್ದಾರೆ. ಭಾರತೀಯ ಅಧಿಕಾರಿಯಿಂದಲೇ ನಿರ್ದೇಶಿಸಲ್ಪಟ್ಟಿದೆ ಎಂಬುದಕ್ಕೆ ಇಲ್ಲಿಯವರೆಗಿನ ಅತ್ಯಂತ ಸ್ಪಷ್ಟವಾದ ಪುರಾವೆಗಳನ್ನು  ಯುಎಸ್‌ ಒದಗಿಸುತ್ತದೆ. ಅದು ಮೋದಿಯ ಆಂತರಿಕ ವಲಯಕ್ಕೆ ಸಂಭಾವ್ಯ ಸಂಪರ್ಕಗಳ ಬಗ್ಗೆ ಬೊಟ್ಟು ಮಾಡಿದೆ.

ಅಮೆರಿಕದಲ್ಲಿ ನೆಲೆ ನಿಂತಿರುವ ಖಲಿಸ್ತಾನಿ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನೂನ್ ಹತ್ಯೆಗೆ ಸಂಶೋಧನೆ ಮತ್ತು ವಿಶ್ಲೇಷಣೆ ವಿಭಾಗ ಅಧಿಕಾರಿ ವಿಕ್ರಮ್ ಯಾದವ್, ಬಾಡಿಗೆ ಹಂತಕರಿಗೆ ಸೂಚನೆ ನೀಡಿದ್ದರು ಮತ್ತು ಪನ್ನೂನ್ ಹತ್ಯೆ ಕಾರ್ಯಾಚರಣೆಯನ್ನು ಆ ಸಮಯದಲ್ಲಿ ರಾ ಮುಖ್ಯಸ್ಥರಾಗಿದ್ದ ಸಮಂತ್ ಗೋಯಲ್ ಅನುಮೋದಿಸಿದ್ದರು ಎಂದು ಅಮೆರಿಕದ ಗುಪ್ತಚರ ಏಜೆನ್ಸಿಗಳು ಅಭಿಪ್ರಾಯಪಟ್ಟಿವೆ ಎಂದು ವರದಿಯಲ್ಲಿ ವಿವರಿಸಲಾಗಿದೆ.

ಮೋದಿಯವರ ರಾಷ್ಟ್ರೀಯ ಭದ್ರತಾ ಸಲಹೆಗಾರರಾದ ಅಜಿತ್ ದೋವಲ್ ಅವರು ಸಿಖ್ ಕಾರ್ಯಕರ್ತ ಪನ್ನೂನ್ ಹತ್ಯೆ ಸಂಚಿನ ಬಗ್ಗೆ ಬಹುಶಃ ತಿಳಿದಿದ್ದರು ಎಂದು ಯುಎಸ್ ಬೇಹುಗಾರಿಕಾ ಸಂಸ್ಥೆಗಳು ಹೇಳಿದೆ. ಆದರೆ ಇದಕ್ಕೆ ಯಾವುದೇ ಸ್ಪಷ್ಟ ಪುರಾವೆಯನ್ನು ನೀಡಿಲ್ಲ. ಈ ಬಗ್ಗೆ ಮಾಹಿತಿ ಕೋರಿ ಅಜಿತ್‌ ದೋವಲ್ ಅಥವಾ ಗೋಯಲ್‌ಗೆ ವಾಷಿಂಗ್‌ ಟನ್‌ ಪೋಸ್ಟ್‌ ಸಂಪರ್ಕಿಸಿದ್ದರೂ ಪ್ರತಿಕ್ರಿಯಿಸಿಲ್ಲ ಎನ್ನಲಾಗಿದೆ.

ಭಾರತವು ಯುಎಸ್ ನೆಲದಲ್ಲಿ ಹತ್ಯೆಯನ್ನು ಮಾಡುವಂತಹ ಅಪಯಾಕಾರಿ ಪ್ರಯತ್ನವನ್ನು ಏಕೆ ಮಾಡುತ್ತದೆ ಎಂದು ಕೇಳಿದಾಗ, ಅವರು ಅದರಿಂದ ಪಾರಾಗಬಹುದು ಎಂದು ಭಾವಿಸಿದ್ದರು ಎಂದು ಭದ್ರತಾ ಅಧಿಕಾರಿಯೋರ್ವರು ಹೇಳಿದ್ದಾರೆ.

ಜೂನ್‌ನಲ್ಲಿ ವ್ಯಾಂಕೋವರ್ ಉಪನಗರದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತೀಯ ಏಜೆಂಟರ ಕೈವಾಡದ ಬಗ್ಗೆ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಆರೋಪಿಸಿದ ಬಳಿಕ ಭಾರತ ಮತ್ತು ಕೆನಡಾ ನಡುವಿನ ರಾಜತಾಂತ್ರಿಕ ಸಂಬಂಧ ಹಳಸಿತ್ತು. ಕೆನಡಾದ ಸಿಖ್ ಪ್ರತ್ಯೇಕತಾವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ವಿವಾದದ ಮಧ್ಯೆಯೇ ಅಮೆರಿಕದಲ್ಲಿ ಸಿಖ್ ಪ್ರತ್ಯೇಕತಾವಾದಿ ನಾಯಕ ಗುರ್ಪತ್‌ವಂತ್ ಸಿಂಗ್ ಪನ್ನುನ್ ಅವರ ಹತ್ಯೆಯನ್ನು ಮಾಡುವ ಸಂಚನ್ನು ಅಮೆರಿಕ ವಿಫಲಗೊಳಿಸಿದೆ ಎಂದು ಕೂಡ ಹೇಳಿಕೊಂಡಿತ್ತು.

ಸಿಖ್ ಪ್ರತ್ಯೇಕತಾವಾದಿ ನಾಯಕ ಗುರ್ಪತ್‌ವಂತ್ ಸಿಂಗ್ ಪನ್ನುನ್‌, ಹರ್ದೀಪ್ ಸಿಂಗ್ ನಿಜ್ಜರ್‌ನಂತೆ ದಶಕಗಳ ಕಾಲದ ಸಿಖ್‌ ಪ್ರತ್ಯೇಕವಾದಿ ಪ್ರತಿಪಾದಕನಾಗಿದ್ದಾನೆ. ಪನ್ನೂನ್ ಗಾರ್ಡಿಯನ್‌ಗೆ ಇತ್ತೀಚೆಗೆ ನೀಡಿದ ಸಂದರ್ಶನದಲ್ಲಿ, ಕೆನಡಾದಲ್ಲಿರುವ ಭಾರತೀಯ ಅಧಿಕಾರಿಗಳು ನಿಜ್ಜರ್ ಹತ್ಯೆಯ ತನಿಖೆಯನ್ನು ಕುಂಠಿತಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದರು. ನಿಜ್ಜರ್‌ ಗುಂಡೇಟಿಗೆ ಬಲಿಯಾಗಿ 5 ತಿಂಗಳಾದರೂ ಯಾರನ್ನೂ ಬಂಧಿಸಲಾಗಿಲ್ಲ. ಸರಣಿ ಹತ್ಯೆಗಳ ಈ ತನಿಖೆಗಳು ಹೇಗೆ ಕಾರ್ಯನಿರ್ವಹಿಸುತ್ತವೆ ಎಂಬುದನ್ನು ನಾನು ಅರ್ಥಮಾಡಿಕೊಂಡಿದ್ದೇನೆ. ಇದು ಟೊರೊಂಟೊ ಅಥವಾ ವ್ಯಾಂಕೋವರ್‌ನಲ್ಲಿ ನಡೆದ ಸರಳವಾದ ಕೊಲೆಯಲ್ಲ. ಇದು ಖಲಿಸ್ತಾನ್ ಪರ ಕಾರ್ಯಕರ್ತನ ಸುಸಂಘಟಿತ ಕೊಲೆಯಾಗಿದೆ ಎಂದು ಹೇಳಿದ್ದರು.

ಭಾರತದ ಪ್ರಜೆ ನಿಖಿಲ್ ಗುಪ್ತಾ ಈ ಪ್ರಕರಣದಲ್ಲಿ ಷಾಮೀಲಾಗಿದ್ದಾರೆ ಎಂಬ ಸುಳಿವನ್ನು ಅಮೆರಿಕದ ಅಧಿಕಾರಿಗಳು ಈ ಹಿಂದೆ ನೀಡಿದ್ದರು. ಭಾರತೀಯ ಅಧಿಕಾರಿಗಳ ಸೂಚನೆ ಮೇರೆಗೆ ಅವರು ಕಾರ್ಯ ನಿರ್ವಹಿಸಿದ್ದರು ಎಂದು ಆಪಾದಿಸಲಾಗಿತ್ತು. ಆ ಬಳಿಕ ಅವರನ್ನು ಬಂಧಿಸಲಾಗಿದ್ದು, ಪ್ರಸ್ತುತ ಅವರು ಪರುಗ್ವೆಯ ಜೈಲಿನಲ್ಲಿದ್ದಾರೆ. ಈ ಕುರಿತು ತನಿಖೆ ನಡೆಸಲು ಭಾರತ ಉನ್ನತ ಮಟ್ಟದ ಸಮಿತಿಯನ್ನು ರಚಿಸಿತ್ತು. ಭಾರತೀಯ ಅಧಿಕಾರಿಗಳ ಪಾತ್ರ ಕುರಿತಂತೆ ಅಮೆರಿಕ ಹಂಚಿಕೊಂಡ ಮಾಹಿತಿಗಳ ಬಗ್ಗೆ ತನಿಖೆ ನಡೆಸಲು ಸಮಿತಿ ನೇಮಿಸಿದ್ದರೂ, ಇದು ಭಾರತದ ಭದ್ರತೆಗೆ ಸಂಬಂಧಪಟ್ಟ ವಿಚಾರ ಎಂದು ಹೇಳಿ ಈ ಸಂಬಂಧ ಯಾವುದೇ ಮಾಹಿತಿಯನ್ನು ಬಿಡುಗಡೆ ಮಾಡಿಲ್ಲ.

ಇದನ್ನು ಓದಿ: ಗಾಝಾ ಹತ್ಯಾಕಾಂಡ: ನೆತನ್ಯಾಹು ಸೇರಿ ಇಸ್ರೇಲ್‌ ಅಧಿಕಾರಿಗಳ ಬಂಧನಕ್ಕೆ ವಾರೆಂಟ್‌ ಜಾರಿ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...