Homeಅಂತರಾಷ್ಟ್ರೀಯಪನ್ನೂನ್ ಹತ್ಯೆ ಸಂಚು: ಮೋದಿ ಆಪ್ತರ ಕಡೆ ಬೊಟ್ಟು?

ಪನ್ನೂನ್ ಹತ್ಯೆ ಸಂಚು: ಮೋದಿ ಆಪ್ತರ ಕಡೆ ಬೊಟ್ಟು?

- Advertisement -
- Advertisement -

ಅಮೆರಿಕದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನೂನ್ ಹತ್ಯೆಗೆ ಭಾರತದ ಗುಪ್ತಚರ ಸೇವೆಯ ಅಧಿಕಾರಿಯೊಬ್ಬರು ಅಂತಿಮ ಸೂಚನೆಗಳನ್ನು ನೀಡಿದ್ದರು ಎಂದು ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿದ್ದು, ಪನ್ನೂನ್ ಹತ್ಯೆಯ ಬಗ್ಗೆ ಪ್ರಧಾನಿ ಮೋದಿ ಆಪ್ತರಿಗೆ ತಿಳಿದಿರುವ ಸಾಧ್ಯತೆ ಇದೆ ಎಂದು ಯುಎಸ್‌ ಏಜೆನ್ಸಿಗಳ ಮಾಹಿತಿ ಉಲ್ಲೇಖಿಸಿ ಹೇಳಿಕೊಂಡಿದೆ.

ಪನ್ನೂನ್‌ ಹತ್ಯೆಯು “ಈಗ ಆದ್ಯತೆಯಾಗಿದೆ” ಎಂದು ಭಾರತದ ಬೇಹುಗಾರಿಕಾ ಸಂಸ್ಥೆ, ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ ಅಥವಾ RAWನಲ್ಲಿ ಅಧಿಕಾರಿಯಾಗಿರುವ ವಿಕ್ರಂ ಯಾದವ್ ಬರೆದಿದ್ದಾರೆ ಎಂದು ಆಪಾದಿಸಲಾಗಿದೆ.

ಯುಎಸ್ ಸಲ್ಲಿಸಿದ ದೋಷಾರೋಪಣೆ ಪಟ್ಟಿ ಪ್ರಕಾರ, ಯಾದವ್‌ ಹಂತಕರಿಗೆ ಸಿಖ್ ಕಾರ್ಯಕರ್ತ ಗುರುಪತ್ವಂತ್ ಸಿಂಗ್ ಪನ್ನುನ್ ಅವರ ನ್ಯೂಯಾರ್ಕ್ ವಿಳಾಸ ಸೇರಿದಂತೆ ಎಲ್ಲಾ ಮಾಹಿತಿಗಳನ್ನು ನೀಡಿದ್ದರು. ಹಂತಕರು  ಪನ್ನೂನ್ ಮನೆಯಲ್ಲಿದ್ದಾರೆ ಎಂದು ಖಚಿತಪಡಿಸಿದ ತಕ್ಷಣ ಮುಂದಕ್ಕೆ ತನ್ನ ಕೆಲಸ ಮಾಡಬಹುದು ಎಂದು ಸೂಚಿಸಿದ್ದರು ಎನ್ನಲಾಗಿದೆ.

ಯಾದವ್ ಅವರ ಗುರುತು ಮತ್ತು ಸಂಬಂಧವು ಈ ಹಿಂದೆ ವರದಿಯಾಗಿಲ್ಲ, ಪನ್ನೂನ್‌ ಹತ್ಯೆಯ ಯೋಜನೆಯನ್ನು ಅಂತಿಮವಾಗಿ ಯುಎಸ್ ಅಧಿಕಾರಿಗಳು ವಿಫಲಗೊಳಿಸಿದ್ದಾರೆ. ಭಾರತೀಯ ಅಧಿಕಾರಿಯಿಂದಲೇ ನಿರ್ದೇಶಿಸಲ್ಪಟ್ಟಿದೆ ಎಂಬುದಕ್ಕೆ ಇಲ್ಲಿಯವರೆಗಿನ ಅತ್ಯಂತ ಸ್ಪಷ್ಟವಾದ ಪುರಾವೆಗಳನ್ನು  ಯುಎಸ್‌ ಒದಗಿಸುತ್ತದೆ. ಅದು ಮೋದಿಯ ಆಂತರಿಕ ವಲಯಕ್ಕೆ ಸಂಭಾವ್ಯ ಸಂಪರ್ಕಗಳ ಬಗ್ಗೆ ಬೊಟ್ಟು ಮಾಡಿದೆ.

ಅಮೆರಿಕದಲ್ಲಿ ನೆಲೆ ನಿಂತಿರುವ ಖಲಿಸ್ತಾನಿ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನೂನ್ ಹತ್ಯೆಗೆ ಸಂಶೋಧನೆ ಮತ್ತು ವಿಶ್ಲೇಷಣೆ ವಿಭಾಗ ಅಧಿಕಾರಿ ವಿಕ್ರಮ್ ಯಾದವ್, ಬಾಡಿಗೆ ಹಂತಕರಿಗೆ ಸೂಚನೆ ನೀಡಿದ್ದರು ಮತ್ತು ಪನ್ನೂನ್ ಹತ್ಯೆ ಕಾರ್ಯಾಚರಣೆಯನ್ನು ಆ ಸಮಯದಲ್ಲಿ ರಾ ಮುಖ್ಯಸ್ಥರಾಗಿದ್ದ ಸಮಂತ್ ಗೋಯಲ್ ಅನುಮೋದಿಸಿದ್ದರು ಎಂದು ಅಮೆರಿಕದ ಗುಪ್ತಚರ ಏಜೆನ್ಸಿಗಳು ಅಭಿಪ್ರಾಯಪಟ್ಟಿವೆ ಎಂದು ವರದಿಯಲ್ಲಿ ವಿವರಿಸಲಾಗಿದೆ.

ಮೋದಿಯವರ ರಾಷ್ಟ್ರೀಯ ಭದ್ರತಾ ಸಲಹೆಗಾರರಾದ ಅಜಿತ್ ದೋವಲ್ ಅವರು ಸಿಖ್ ಕಾರ್ಯಕರ್ತ ಪನ್ನೂನ್ ಹತ್ಯೆ ಸಂಚಿನ ಬಗ್ಗೆ ಬಹುಶಃ ತಿಳಿದಿದ್ದರು ಎಂದು ಯುಎಸ್ ಬೇಹುಗಾರಿಕಾ ಸಂಸ್ಥೆಗಳು ಹೇಳಿದೆ. ಆದರೆ ಇದಕ್ಕೆ ಯಾವುದೇ ಸ್ಪಷ್ಟ ಪುರಾವೆಯನ್ನು ನೀಡಿಲ್ಲ. ಈ ಬಗ್ಗೆ ಮಾಹಿತಿ ಕೋರಿ ಅಜಿತ್‌ ದೋವಲ್ ಅಥವಾ ಗೋಯಲ್‌ಗೆ ವಾಷಿಂಗ್‌ ಟನ್‌ ಪೋಸ್ಟ್‌ ಸಂಪರ್ಕಿಸಿದ್ದರೂ ಪ್ರತಿಕ್ರಿಯಿಸಿಲ್ಲ ಎನ್ನಲಾಗಿದೆ.

ಭಾರತವು ಯುಎಸ್ ನೆಲದಲ್ಲಿ ಹತ್ಯೆಯನ್ನು ಮಾಡುವಂತಹ ಅಪಯಾಕಾರಿ ಪ್ರಯತ್ನವನ್ನು ಏಕೆ ಮಾಡುತ್ತದೆ ಎಂದು ಕೇಳಿದಾಗ, ಅವರು ಅದರಿಂದ ಪಾರಾಗಬಹುದು ಎಂದು ಭಾವಿಸಿದ್ದರು ಎಂದು ಭದ್ರತಾ ಅಧಿಕಾರಿಯೋರ್ವರು ಹೇಳಿದ್ದಾರೆ.

ಜೂನ್‌ನಲ್ಲಿ ವ್ಯಾಂಕೋವರ್ ಉಪನಗರದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತೀಯ ಏಜೆಂಟರ ಕೈವಾಡದ ಬಗ್ಗೆ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಆರೋಪಿಸಿದ ಬಳಿಕ ಭಾರತ ಮತ್ತು ಕೆನಡಾ ನಡುವಿನ ರಾಜತಾಂತ್ರಿಕ ಸಂಬಂಧ ಹಳಸಿತ್ತು. ಕೆನಡಾದ ಸಿಖ್ ಪ್ರತ್ಯೇಕತಾವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ವಿವಾದದ ಮಧ್ಯೆಯೇ ಅಮೆರಿಕದಲ್ಲಿ ಸಿಖ್ ಪ್ರತ್ಯೇಕತಾವಾದಿ ನಾಯಕ ಗುರ್ಪತ್‌ವಂತ್ ಸಿಂಗ್ ಪನ್ನುನ್ ಅವರ ಹತ್ಯೆಯನ್ನು ಮಾಡುವ ಸಂಚನ್ನು ಅಮೆರಿಕ ವಿಫಲಗೊಳಿಸಿದೆ ಎಂದು ಕೂಡ ಹೇಳಿಕೊಂಡಿತ್ತು.

ಸಿಖ್ ಪ್ರತ್ಯೇಕತಾವಾದಿ ನಾಯಕ ಗುರ್ಪತ್‌ವಂತ್ ಸಿಂಗ್ ಪನ್ನುನ್‌, ಹರ್ದೀಪ್ ಸಿಂಗ್ ನಿಜ್ಜರ್‌ನಂತೆ ದಶಕಗಳ ಕಾಲದ ಸಿಖ್‌ ಪ್ರತ್ಯೇಕವಾದಿ ಪ್ರತಿಪಾದಕನಾಗಿದ್ದಾನೆ. ಪನ್ನೂನ್ ಗಾರ್ಡಿಯನ್‌ಗೆ ಇತ್ತೀಚೆಗೆ ನೀಡಿದ ಸಂದರ್ಶನದಲ್ಲಿ, ಕೆನಡಾದಲ್ಲಿರುವ ಭಾರತೀಯ ಅಧಿಕಾರಿಗಳು ನಿಜ್ಜರ್ ಹತ್ಯೆಯ ತನಿಖೆಯನ್ನು ಕುಂಠಿತಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದರು. ನಿಜ್ಜರ್‌ ಗುಂಡೇಟಿಗೆ ಬಲಿಯಾಗಿ 5 ತಿಂಗಳಾದರೂ ಯಾರನ್ನೂ ಬಂಧಿಸಲಾಗಿಲ್ಲ. ಸರಣಿ ಹತ್ಯೆಗಳ ಈ ತನಿಖೆಗಳು ಹೇಗೆ ಕಾರ್ಯನಿರ್ವಹಿಸುತ್ತವೆ ಎಂಬುದನ್ನು ನಾನು ಅರ್ಥಮಾಡಿಕೊಂಡಿದ್ದೇನೆ. ಇದು ಟೊರೊಂಟೊ ಅಥವಾ ವ್ಯಾಂಕೋವರ್‌ನಲ್ಲಿ ನಡೆದ ಸರಳವಾದ ಕೊಲೆಯಲ್ಲ. ಇದು ಖಲಿಸ್ತಾನ್ ಪರ ಕಾರ್ಯಕರ್ತನ ಸುಸಂಘಟಿತ ಕೊಲೆಯಾಗಿದೆ ಎಂದು ಹೇಳಿದ್ದರು.

ಭಾರತದ ಪ್ರಜೆ ನಿಖಿಲ್ ಗುಪ್ತಾ ಈ ಪ್ರಕರಣದಲ್ಲಿ ಷಾಮೀಲಾಗಿದ್ದಾರೆ ಎಂಬ ಸುಳಿವನ್ನು ಅಮೆರಿಕದ ಅಧಿಕಾರಿಗಳು ಈ ಹಿಂದೆ ನೀಡಿದ್ದರು. ಭಾರತೀಯ ಅಧಿಕಾರಿಗಳ ಸೂಚನೆ ಮೇರೆಗೆ ಅವರು ಕಾರ್ಯ ನಿರ್ವಹಿಸಿದ್ದರು ಎಂದು ಆಪಾದಿಸಲಾಗಿತ್ತು. ಆ ಬಳಿಕ ಅವರನ್ನು ಬಂಧಿಸಲಾಗಿದ್ದು, ಪ್ರಸ್ತುತ ಅವರು ಪರುಗ್ವೆಯ ಜೈಲಿನಲ್ಲಿದ್ದಾರೆ. ಈ ಕುರಿತು ತನಿಖೆ ನಡೆಸಲು ಭಾರತ ಉನ್ನತ ಮಟ್ಟದ ಸಮಿತಿಯನ್ನು ರಚಿಸಿತ್ತು. ಭಾರತೀಯ ಅಧಿಕಾರಿಗಳ ಪಾತ್ರ ಕುರಿತಂತೆ ಅಮೆರಿಕ ಹಂಚಿಕೊಂಡ ಮಾಹಿತಿಗಳ ಬಗ್ಗೆ ತನಿಖೆ ನಡೆಸಲು ಸಮಿತಿ ನೇಮಿಸಿದ್ದರೂ, ಇದು ಭಾರತದ ಭದ್ರತೆಗೆ ಸಂಬಂಧಪಟ್ಟ ವಿಚಾರ ಎಂದು ಹೇಳಿ ಈ ಸಂಬಂಧ ಯಾವುದೇ ಮಾಹಿತಿಯನ್ನು ಬಿಡುಗಡೆ ಮಾಡಿಲ್ಲ.

ಇದನ್ನು ಓದಿ: ಗಾಝಾ ಹತ್ಯಾಕಾಂಡ: ನೆತನ್ಯಾಹು ಸೇರಿ ಇಸ್ರೇಲ್‌ ಅಧಿಕಾರಿಗಳ ಬಂಧನಕ್ಕೆ ವಾರೆಂಟ್‌ ಜಾರಿ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...