Homeಮುಖಪುಟಸನಾತನ ಸಂಸ್ಥೆಯ ಮುಖ್ಯಸ್ಥರ ವಿರುದ್ಧ ತನಿಖೆಗೆ ಕೋರಿ ಎಟಿಎಸ್‌ಗೆ ಪತ್ರ ಬರೆದ ಗೋವಿಂದ್‌ ಪನ್ಸಾರೆ ಕುಟುಂಬ

ಸನಾತನ ಸಂಸ್ಥೆಯ ಮುಖ್ಯಸ್ಥರ ವಿರುದ್ಧ ತನಿಖೆಗೆ ಕೋರಿ ಎಟಿಎಸ್‌ಗೆ ಪತ್ರ ಬರೆದ ಗೋವಿಂದ್‌ ಪನ್ಸಾರೆ ಕುಟುಂಬ

- Advertisement -
- Advertisement -

ವಿಚಾರವಾದಿ ಹಾಗೂ ಎಡಪಂಥೀಯ ನಾಯಕ ಗೋವಿಂದ್‌ ಪನ್ಸಾರೆ ಅವರ ಹತ್ಯೆ ಪ್ರಕರಣದ ಕುರಿತಂತೆ ಬಾಂಬೆ ಹೈಕೋರ್ಟ್‌ ವಿಚಾರಣೆಗೆ ಮುನ್ನ ಅವರ ಕುಟುಂಬವು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್‌) ದ ಪುಣೆ ವಿಭಾಗದ ಎಸ್‌ಪಿ ಜಯಂತ್‌ ಮೀನಾ ಅವರಿಗೆ 68 ಪುಟಗಳ ಪತ್ರ ಬರೆದಿದ್ದು, ಪನ್ಸಾರೆ ಹತ್ಯೆಯಲ್ಲಿ ಸನಾತನ ಸಂಸ್ಥೆಯ ಸ್ಥಾಪಕ ಡಾ. ಜಯಂತ್‌ ಅಠಾವಳೆ ಅವರ ಪಾತ್ರವನ್ನು ಪರಿಶೀಲಿಸಬೇಕು ಎಂದು ಕೋರಿದ್ದಾರೆ ಎಂದು deccanherald.com ವರದಿ ಮಾಡಿದೆ.

ಪನ್ಸಾರೆ ಕುಟುಂಬದ ಸದಸ್ಯರಾದ ಡಾ. ಮೇಘಾ ಪನ್ಸಾರೆ, ಸ್ಮಿತಾ ಪನ್ಸಾರೆ ಹಾಗೂ ವಕೀಲ ಕಬೀರ್‌ ಪನ್ಸಾರೆ ಪತ್ರ ಬರೆದಿದ್ದಾರೆ. ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಬುದ್ಧಿಜೀವಿಗಳನ್ನು ಹತ್ಯೆಗೈಯ್ಯುವ ಸಂಚನ್ನು ಸನಾತನ ಸಂಸ್ಥೆ ಕಾರ್ಯಗತಗೊಳಿಸುತ್ತಿದೆ ಎಂದು ಪತ್ರದಲ್ಲಿ ಆರೋಪಿಸಲಾಗಿದೆ.

“ಕಾಮ್ರೇಡ್ ಪನ್ಸಾರೆ ಅವರ ಸಿದ್ಧಾಂತ, ಜಾತ್ಯತೀತತೆ, ವೈಚಾರಿಕತೆ, ಸಮಾನತೆ ಮತ್ತು ‘ಶಿವಾಜಿ ಕೋನ್?’ ನಂತಹ ಪುಸ್ತಕಗಳನ್ನು ರಚಿಸಲು ಜೀವನ ಪರ್ಯಂತ ಕೆಲಸ ಮಾಡಿದಕ್ಕಾಗಿ ಬಲಪಂಥೀಯ ಹಿಂದುತ್ವ ಸಂಘಟನೆಗಳಾದ ಸನಾತನ ಸಂಸ್ಥೆ, ಹಿಂದೂ ಜನಜಾಗೃತಿ ಸಮಿತಿ ಇತ್ಯಾದಿಗಳು ಅವರನ್ನು ಕಟುವಾಗಿ ವಿರೋಧಿಸಿದ್ದವು” ಎಂದು ಪತ್ರದಲ್ಲಿ ಬರೆಯಲಾಗಿದೆ.

ಪನ್ಸಾರೆ ಹತ್ಯೆ ಪ್ರಕರಣದಲ್ಲಿ ಸನಾತನ ಸಂಸ್ಥೆಯ ಸಂಸ್ಥಾಪಕ ಡಾ.ಜಯಂತ್ ಅಠಾವಳೆ, ಮುಖಂಡ ವೀರೇಂದ್ರ ಮರಾಠೆ ಮತ್ತು ಇತರರ ವಿರುದ್ಧ ಅಗತ್ಯ ಕ್ರಮಗಳನ್ನು ತೆಗೆದು ಕೊಳ್ಳಬೇಕು ಎಂದು ಕುಟುಂಬ ಒತ್ತಾಯಿಸಿದೆ.

ಕಾಮ್ರೇಡ್ ಪನ್ಸಾರೆ, ಡಾ. ನರೇಂದ್ರ ದಾಭೋಲ್ಕರ್, ಪ್ರೊ.ಎಂ.ಎಂ ಕಲಬುರ್ಗಿ ಮತ್ತು ಗೌರಿ ಲಂಕೇಶ್ ಅವರ ಹತ್ಯೆಗಳ ನಡುವಿನ ಸಂಬಂಧದ ಸಾಮಿಪ್ಯತೆಯನ್ನು ಪತ್ರವು ಒತ್ತಿ ಹೇಳಿದೆ. “ಕಾಮ್ರೇಡ್ ಪನ್ಸಾರೆ ಪ್ರಕರಣದಲ್ಲಿ ಸಲ್ಲಿಸಲಾದ ಐದು ಆರೋಪ ಪಟ್ಟಿಗಳ ಬಗ್ಗೆ ನಿಮ್ಮ ಗಮನವನ್ನು ಸೆಳೆಯಲು ನಾವು ಬಯಸುತ್ತೇವೆ” ಎಂದಿದೆ.

“ಪನ್ಸಾರೆ ಹತ್ಯೆ ಪ್ರಕರಣದಲ್ಲಿ ಹನ್ನೆರಡು ಜನರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ. ಈ ಪೈಕಿ ಇಬ್ಬರು ತಲೆಮರೆಸಿಕೊಂಡಿದ್ದಾರೆ ಎಂದು ಘೋಷಿಸಲಾಗಿದೆ. ಎಲ್ಲಾ ಆರೋಪಿಗಳು ಸನಾತನ ಸಂಸ್ಥೆ ಮತ್ತು/ಅಥವಾ ಹಿಂದೂ ಜನಜಾಗೃತಿ ಸಮಿತಿಯ ಸದಸ್ಯರಾಗಿದ್ದಾರೆ. ಕೆಲವು ಆರೋಪಿಗಳು ಡಾ.ನರೇಂದ್ರ ದಾಭೋಲ್ಕರ್, ಪ್ರೊ.ಎಂ.ಎಂ.ಕಲಬುರ್ಗಿ, ಗೌರಿ ಲಂಕೇಶ್ ಹತ್ಯೆ ಪ್ರಕರಣಗಳಲ್ಲಿ ಹಾಗೂ ನಲಸೋಪರ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪ್ರಕರಣ ಮತ್ತು ಇತರ ಸಂಬಂಧಿತ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದಾರೆ. ಇದು ಎಲ್ಲಾ ಪ್ರಕರಣಗಳ ನಡುವೆ ಒಂದು ಸಾಮಾನ್ಯ ಲಿಂಕ್ ಇರುವುದನ್ನು ಸೂಚಿಸುತ್ತದೆ” ಎಂದು ಪತ್ರದಲ್ಲಿ ಹೇಳಲಾಗಿದೆ.

“ನಾಲ್ಕು ಕೊಲೆಗಳು ಮತ್ತು ಇತರ ಘೋರ ಅಪರಾಧಗಳಲ್ಲಿ ಸನಾತನ ಸಂಸ್ಥೆ ಮತ್ತು ಅದರ ಸದಸ್ಯರ ಪಾತ್ರದ ಬಗ್ಗೆ ಎಟಿಎಸ್, ಸಿಬಿಐ, ಮಹಾರಾಷ್ಟ್ರ ಪೊಲೀಸ್, ಕರ್ನಾಟಕ ಪೊಲೀಸ್ ಮತ್ತು ಗೋವಾ ಪೊಲೀಸರಂತಹ ಇತರ ಏಜೆನ್ಸಿಗಳಿಗೆ ತಿಳಿದಿದೆ” ಎಂದು ಕುಟುಂಬವು ಹೇಳಿಕೊಂಡಿದೆ.

“ಜಯಂತ್ ಅಠಾವಳೆ ಮತ್ತು ವೀರೇಂದ್ರ ಮರಾಠೆ ಅವರ ಮಾರ್ಗದರ್ಶನ ಮತ್ತು ನಿರ್ದೇಶನಗಳ ಅಡಿಯಲ್ಲಿ ಅಪರಾಧಿಗಳ ಸಂಘಟಿತ ಭಯೋತ್ಪಾದಕ ಜಾಲವಾಗಿ ಕಾರ್ಯನಿರ್ವಹಿಸುತ್ತಿರುವ ಸನಾತನ ಸಂಸ್ಥೆ ಮತ್ತು ಅದನ್ನು ಮುನ್ನಡೆಸುತ್ತಿರುವ ಜನರ ಪಾತ್ರವನ್ನು ಪರಿಶೀಲಿಸುವುದು ಅವಶ್ಯಕ. ನಲಸೋಪಾರ ಸ್ಫೋಟಕಗಳನ್ನು ವಶಪಡಿಸಿಕೊಂಡ ಪ್ರಕರಣದಲ್ಲಿ, ಮಹಾರಾಷ್ಟ್ರ ಎಟಿಎಸ್ 2018 ರಲ್ಲಿ ಹೆಚ್ಚಿನ ಸಂಖ್ಯೆಯ ಪಿಸ್ತೂಲ್‌ಗಳು, ಬಾಂಬ್‌ಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಂಡಿದೆ ಮತ್ತು ಸನಾತನ ಸಂಸ್ಥೆ ಮತ್ತು/ಅಥವಾ ಹಿಂದೂ ಜನಜಾಗೃತಿ ಸಮಿತಿಯ ಸದಸ್ಯರಾಗಿರುವ ಹನ್ನೆರಡು ಜನರ ವಿರುದ್ಧ ಫೆಬ್ರವರಿ 18, 2019 ರಂದು ಚಾರ್ಜ್‌ಶೀಟ್ ಸಲ್ಲಿಸಿದೆ” ಎಂದು ಪತ್ರ ಹೇಳಿದೆ.

“ನಲಸೋಪರ ಪ್ರಕರಣದಲ್ಲಿ ಎಟಿಎಸ್ ಸಲ್ಲಿಸಿರುವ ಆರೋಪ ಪಟ್ಟಿಯನ್ನು ಪರಿಶೀಲಿಸಿದಾಗ, ಸನಾತನ ಸಂಸ್ಥೆ ಮತ್ತು ಅದರ ಸದಸ್ಯರ ಉದ್ದೇಶವು ಸಮಾಜವನ್ನು ದೊಡ್ಡ ಪ್ರಮಾಣದಲ್ಲಿ ಭಯಭೀತಗೊಳಿಸುವುದು ಮತ್ತು ಕ್ಷಾತ್ರಧರ್ಮ ಸಾಧನದಿಂದ ಪ್ರೇರೇಪಿಸಲ್ಪಟ್ಟ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸುವುದು ಎಂದು ಸ್ಪಷ್ಟವಾಗಿ ದಾಖಲಿಸಲಾಗಿದೆ” ಎಂದು ಪತ್ರದಲ್ಲಿ ಬರೆಯಲಾಗಿದೆ

ಪನ್ಸಾರೆ ಹತ್ಯೆ ಪ್ರಕರಣದಲ್ಲಿ ತನಿಖಾ ಸಂಸ್ಥೆಯು ಸನಾತನ ಸಂಸ್ಥೆಯ ಪದಾಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಬೇಕಿತ್ತು. ಏಕೆಂದರೆ ಅವರು ದೊಡ್ಡ ಪಿತೂರಿಯಲ್ಲಿ ಭಾಗಿಯಾಗಿರುವುದನ್ನು ತಳ್ಳಿ ಹಾಕಲಾಗುವುದಿಲ್ಲ. ಸಂಸ್ಥೆಯು ಒಪ್ಪಿಗೆಯಿಲ್ಲದೆ ತಮ್ಮದೇ ಸದಸ್ಯರ ಮೇಲೆ ಮನೋವೈದ್ಯಕೀಯ ಔಷಧಗಳನ್ನು ಬಳಸುವುದರಿಂದ ಹಿಡಿದು ಕೊಲೆ, ಬಾಂಬ್ ಸ್ಫೋಟಗಳಂತಹ ಕೃತ್ಯಗಳನ್ನು ಯೋಜಿಸಿ ಕಾರ್ಯಗತಗೊಳಿಸುವರೆಗೆ ಅದರ ಪಿತೂರಿಯಿದೆ. ಈ ಪಿತೂರಿಗಳು ಕೇವಲ ಸನಾತನ ಸಂಸ್ಥೆಯ ಸದಸ್ಯರನ್ನು ಒಳಗೊಂಡಂತೆ ಸಾಧ್ಯ ಎಂದು ಹೇಳಲಾಗುವುದಿಲ್ಲ” ಎಂದು ಪತ್ರದಲ್ಲಿ ಹೇಳಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ : ಅಪಘಾತಕ್ಕೆ ಬಲಿಯಾದ ಜಾನುವಾರುಗಳು: ಬಸ್‌ ಚಾಲಕನಿಗೆ ಮಾರಣಾಂತಿಕವಾಗಿ ಥಳಿಸಿದ ಸ್ವಯಂಘೋಷಿತ ಗೋರಕ್ಷಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...