Homeಮುಖಪುಟಸನಾತನ ಸಂಸ್ಥೆಯ ಮುಖ್ಯಸ್ಥರ ವಿರುದ್ಧ ತನಿಖೆಗೆ ಕೋರಿ ಎಟಿಎಸ್‌ಗೆ ಪತ್ರ ಬರೆದ ಗೋವಿಂದ್‌ ಪನ್ಸಾರೆ ಕುಟುಂಬ

ಸನಾತನ ಸಂಸ್ಥೆಯ ಮುಖ್ಯಸ್ಥರ ವಿರುದ್ಧ ತನಿಖೆಗೆ ಕೋರಿ ಎಟಿಎಸ್‌ಗೆ ಪತ್ರ ಬರೆದ ಗೋವಿಂದ್‌ ಪನ್ಸಾರೆ ಕುಟುಂಬ

- Advertisement -
- Advertisement -

ವಿಚಾರವಾದಿ ಹಾಗೂ ಎಡಪಂಥೀಯ ನಾಯಕ ಗೋವಿಂದ್‌ ಪನ್ಸಾರೆ ಅವರ ಹತ್ಯೆ ಪ್ರಕರಣದ ಕುರಿತಂತೆ ಬಾಂಬೆ ಹೈಕೋರ್ಟ್‌ ವಿಚಾರಣೆಗೆ ಮುನ್ನ ಅವರ ಕುಟುಂಬವು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್‌) ದ ಪುಣೆ ವಿಭಾಗದ ಎಸ್‌ಪಿ ಜಯಂತ್‌ ಮೀನಾ ಅವರಿಗೆ 68 ಪುಟಗಳ ಪತ್ರ ಬರೆದಿದ್ದು, ಪನ್ಸಾರೆ ಹತ್ಯೆಯಲ್ಲಿ ಸನಾತನ ಸಂಸ್ಥೆಯ ಸ್ಥಾಪಕ ಡಾ. ಜಯಂತ್‌ ಅಠಾವಳೆ ಅವರ ಪಾತ್ರವನ್ನು ಪರಿಶೀಲಿಸಬೇಕು ಎಂದು ಕೋರಿದ್ದಾರೆ ಎಂದು deccanherald.com ವರದಿ ಮಾಡಿದೆ.

ಪನ್ಸಾರೆ ಕುಟುಂಬದ ಸದಸ್ಯರಾದ ಡಾ. ಮೇಘಾ ಪನ್ಸಾರೆ, ಸ್ಮಿತಾ ಪನ್ಸಾರೆ ಹಾಗೂ ವಕೀಲ ಕಬೀರ್‌ ಪನ್ಸಾರೆ ಪತ್ರ ಬರೆದಿದ್ದಾರೆ. ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಬುದ್ಧಿಜೀವಿಗಳನ್ನು ಹತ್ಯೆಗೈಯ್ಯುವ ಸಂಚನ್ನು ಸನಾತನ ಸಂಸ್ಥೆ ಕಾರ್ಯಗತಗೊಳಿಸುತ್ತಿದೆ ಎಂದು ಪತ್ರದಲ್ಲಿ ಆರೋಪಿಸಲಾಗಿದೆ.

“ಕಾಮ್ರೇಡ್ ಪನ್ಸಾರೆ ಅವರ ಸಿದ್ಧಾಂತ, ಜಾತ್ಯತೀತತೆ, ವೈಚಾರಿಕತೆ, ಸಮಾನತೆ ಮತ್ತು ‘ಶಿವಾಜಿ ಕೋನ್?’ ನಂತಹ ಪುಸ್ತಕಗಳನ್ನು ರಚಿಸಲು ಜೀವನ ಪರ್ಯಂತ ಕೆಲಸ ಮಾಡಿದಕ್ಕಾಗಿ ಬಲಪಂಥೀಯ ಹಿಂದುತ್ವ ಸಂಘಟನೆಗಳಾದ ಸನಾತನ ಸಂಸ್ಥೆ, ಹಿಂದೂ ಜನಜಾಗೃತಿ ಸಮಿತಿ ಇತ್ಯಾದಿಗಳು ಅವರನ್ನು ಕಟುವಾಗಿ ವಿರೋಧಿಸಿದ್ದವು” ಎಂದು ಪತ್ರದಲ್ಲಿ ಬರೆಯಲಾಗಿದೆ.

ಪನ್ಸಾರೆ ಹತ್ಯೆ ಪ್ರಕರಣದಲ್ಲಿ ಸನಾತನ ಸಂಸ್ಥೆಯ ಸಂಸ್ಥಾಪಕ ಡಾ.ಜಯಂತ್ ಅಠಾವಳೆ, ಮುಖಂಡ ವೀರೇಂದ್ರ ಮರಾಠೆ ಮತ್ತು ಇತರರ ವಿರುದ್ಧ ಅಗತ್ಯ ಕ್ರಮಗಳನ್ನು ತೆಗೆದು ಕೊಳ್ಳಬೇಕು ಎಂದು ಕುಟುಂಬ ಒತ್ತಾಯಿಸಿದೆ.

ಕಾಮ್ರೇಡ್ ಪನ್ಸಾರೆ, ಡಾ. ನರೇಂದ್ರ ದಾಭೋಲ್ಕರ್, ಪ್ರೊ.ಎಂ.ಎಂ ಕಲಬುರ್ಗಿ ಮತ್ತು ಗೌರಿ ಲಂಕೇಶ್ ಅವರ ಹತ್ಯೆಗಳ ನಡುವಿನ ಸಂಬಂಧದ ಸಾಮಿಪ್ಯತೆಯನ್ನು ಪತ್ರವು ಒತ್ತಿ ಹೇಳಿದೆ. “ಕಾಮ್ರೇಡ್ ಪನ್ಸಾರೆ ಪ್ರಕರಣದಲ್ಲಿ ಸಲ್ಲಿಸಲಾದ ಐದು ಆರೋಪ ಪಟ್ಟಿಗಳ ಬಗ್ಗೆ ನಿಮ್ಮ ಗಮನವನ್ನು ಸೆಳೆಯಲು ನಾವು ಬಯಸುತ್ತೇವೆ” ಎಂದಿದೆ.

“ಪನ್ಸಾರೆ ಹತ್ಯೆ ಪ್ರಕರಣದಲ್ಲಿ ಹನ್ನೆರಡು ಜನರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ. ಈ ಪೈಕಿ ಇಬ್ಬರು ತಲೆಮರೆಸಿಕೊಂಡಿದ್ದಾರೆ ಎಂದು ಘೋಷಿಸಲಾಗಿದೆ. ಎಲ್ಲಾ ಆರೋಪಿಗಳು ಸನಾತನ ಸಂಸ್ಥೆ ಮತ್ತು/ಅಥವಾ ಹಿಂದೂ ಜನಜಾಗೃತಿ ಸಮಿತಿಯ ಸದಸ್ಯರಾಗಿದ್ದಾರೆ. ಕೆಲವು ಆರೋಪಿಗಳು ಡಾ.ನರೇಂದ್ರ ದಾಭೋಲ್ಕರ್, ಪ್ರೊ.ಎಂ.ಎಂ.ಕಲಬುರ್ಗಿ, ಗೌರಿ ಲಂಕೇಶ್ ಹತ್ಯೆ ಪ್ರಕರಣಗಳಲ್ಲಿ ಹಾಗೂ ನಲಸೋಪರ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪ್ರಕರಣ ಮತ್ತು ಇತರ ಸಂಬಂಧಿತ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದಾರೆ. ಇದು ಎಲ್ಲಾ ಪ್ರಕರಣಗಳ ನಡುವೆ ಒಂದು ಸಾಮಾನ್ಯ ಲಿಂಕ್ ಇರುವುದನ್ನು ಸೂಚಿಸುತ್ತದೆ” ಎಂದು ಪತ್ರದಲ್ಲಿ ಹೇಳಲಾಗಿದೆ.

“ನಾಲ್ಕು ಕೊಲೆಗಳು ಮತ್ತು ಇತರ ಘೋರ ಅಪರಾಧಗಳಲ್ಲಿ ಸನಾತನ ಸಂಸ್ಥೆ ಮತ್ತು ಅದರ ಸದಸ್ಯರ ಪಾತ್ರದ ಬಗ್ಗೆ ಎಟಿಎಸ್, ಸಿಬಿಐ, ಮಹಾರಾಷ್ಟ್ರ ಪೊಲೀಸ್, ಕರ್ನಾಟಕ ಪೊಲೀಸ್ ಮತ್ತು ಗೋವಾ ಪೊಲೀಸರಂತಹ ಇತರ ಏಜೆನ್ಸಿಗಳಿಗೆ ತಿಳಿದಿದೆ” ಎಂದು ಕುಟುಂಬವು ಹೇಳಿಕೊಂಡಿದೆ.

“ಜಯಂತ್ ಅಠಾವಳೆ ಮತ್ತು ವೀರೇಂದ್ರ ಮರಾಠೆ ಅವರ ಮಾರ್ಗದರ್ಶನ ಮತ್ತು ನಿರ್ದೇಶನಗಳ ಅಡಿಯಲ್ಲಿ ಅಪರಾಧಿಗಳ ಸಂಘಟಿತ ಭಯೋತ್ಪಾದಕ ಜಾಲವಾಗಿ ಕಾರ್ಯನಿರ್ವಹಿಸುತ್ತಿರುವ ಸನಾತನ ಸಂಸ್ಥೆ ಮತ್ತು ಅದನ್ನು ಮುನ್ನಡೆಸುತ್ತಿರುವ ಜನರ ಪಾತ್ರವನ್ನು ಪರಿಶೀಲಿಸುವುದು ಅವಶ್ಯಕ. ನಲಸೋಪಾರ ಸ್ಫೋಟಕಗಳನ್ನು ವಶಪಡಿಸಿಕೊಂಡ ಪ್ರಕರಣದಲ್ಲಿ, ಮಹಾರಾಷ್ಟ್ರ ಎಟಿಎಸ್ 2018 ರಲ್ಲಿ ಹೆಚ್ಚಿನ ಸಂಖ್ಯೆಯ ಪಿಸ್ತೂಲ್‌ಗಳು, ಬಾಂಬ್‌ಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಂಡಿದೆ ಮತ್ತು ಸನಾತನ ಸಂಸ್ಥೆ ಮತ್ತು/ಅಥವಾ ಹಿಂದೂ ಜನಜಾಗೃತಿ ಸಮಿತಿಯ ಸದಸ್ಯರಾಗಿರುವ ಹನ್ನೆರಡು ಜನರ ವಿರುದ್ಧ ಫೆಬ್ರವರಿ 18, 2019 ರಂದು ಚಾರ್ಜ್‌ಶೀಟ್ ಸಲ್ಲಿಸಿದೆ” ಎಂದು ಪತ್ರ ಹೇಳಿದೆ.

“ನಲಸೋಪರ ಪ್ರಕರಣದಲ್ಲಿ ಎಟಿಎಸ್ ಸಲ್ಲಿಸಿರುವ ಆರೋಪ ಪಟ್ಟಿಯನ್ನು ಪರಿಶೀಲಿಸಿದಾಗ, ಸನಾತನ ಸಂಸ್ಥೆ ಮತ್ತು ಅದರ ಸದಸ್ಯರ ಉದ್ದೇಶವು ಸಮಾಜವನ್ನು ದೊಡ್ಡ ಪ್ರಮಾಣದಲ್ಲಿ ಭಯಭೀತಗೊಳಿಸುವುದು ಮತ್ತು ಕ್ಷಾತ್ರಧರ್ಮ ಸಾಧನದಿಂದ ಪ್ರೇರೇಪಿಸಲ್ಪಟ್ಟ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸುವುದು ಎಂದು ಸ್ಪಷ್ಟವಾಗಿ ದಾಖಲಿಸಲಾಗಿದೆ” ಎಂದು ಪತ್ರದಲ್ಲಿ ಬರೆಯಲಾಗಿದೆ

ಪನ್ಸಾರೆ ಹತ್ಯೆ ಪ್ರಕರಣದಲ್ಲಿ ತನಿಖಾ ಸಂಸ್ಥೆಯು ಸನಾತನ ಸಂಸ್ಥೆಯ ಪದಾಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಬೇಕಿತ್ತು. ಏಕೆಂದರೆ ಅವರು ದೊಡ್ಡ ಪಿತೂರಿಯಲ್ಲಿ ಭಾಗಿಯಾಗಿರುವುದನ್ನು ತಳ್ಳಿ ಹಾಕಲಾಗುವುದಿಲ್ಲ. ಸಂಸ್ಥೆಯು ಒಪ್ಪಿಗೆಯಿಲ್ಲದೆ ತಮ್ಮದೇ ಸದಸ್ಯರ ಮೇಲೆ ಮನೋವೈದ್ಯಕೀಯ ಔಷಧಗಳನ್ನು ಬಳಸುವುದರಿಂದ ಹಿಡಿದು ಕೊಲೆ, ಬಾಂಬ್ ಸ್ಫೋಟಗಳಂತಹ ಕೃತ್ಯಗಳನ್ನು ಯೋಜಿಸಿ ಕಾರ್ಯಗತಗೊಳಿಸುವರೆಗೆ ಅದರ ಪಿತೂರಿಯಿದೆ. ಈ ಪಿತೂರಿಗಳು ಕೇವಲ ಸನಾತನ ಸಂಸ್ಥೆಯ ಸದಸ್ಯರನ್ನು ಒಳಗೊಂಡಂತೆ ಸಾಧ್ಯ ಎಂದು ಹೇಳಲಾಗುವುದಿಲ್ಲ” ಎಂದು ಪತ್ರದಲ್ಲಿ ಹೇಳಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ : ಅಪಘಾತಕ್ಕೆ ಬಲಿಯಾದ ಜಾನುವಾರುಗಳು: ಬಸ್‌ ಚಾಲಕನಿಗೆ ಮಾರಣಾಂತಿಕವಾಗಿ ಥಳಿಸಿದ ಸ್ವಯಂಘೋಷಿತ ಗೋರಕ್ಷಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...