Homeಮುಖಪುಟಪನ್ಸಾರೆ ಹತ್ಯೆ ಪ್ರಕರಣ: 8 ವರ್ಷಗಳ ಬಳಿಕ 10 ಜನರ ವಿರುದ್ಧ ಆರೋಪ ದಾಖಲಿಸಿದ ನ್ಯಾಯಾಲಯ

ಪನ್ಸಾರೆ ಹತ್ಯೆ ಪ್ರಕರಣ: 8 ವರ್ಷಗಳ ಬಳಿಕ 10 ಜನರ ವಿರುದ್ಧ ಆರೋಪ ದಾಖಲಿಸಿದ ನ್ಯಾಯಾಲಯ

- Advertisement -
- Advertisement -

ದೇಶವನ್ನೇ ತಲ್ಲಣಗೊಳಿಸಿದ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ನಾಯಕ ಗೋವಿಂದ್ ಪನ್ಸಾರೆ ಅವರ ಹತ್ಯೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್, ಎಂಟು ವರ್ಷಗಳ ಬಳಿಕ ಆರೋಪಿಗಳ ವಿರುದ್ಧ ಆರೋಪಗಳನ್ನು ದಾಖಲಿಸಿದೆ.

ಈ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ 10 ಜನರ ವಿರುದ್ಧ ಮಹಾರಾಷ್ಟ್ರದ ಕೊಲ್ಹಾಪುರ ನಗರದ ವಿಶೇಷ ನ್ಯಾಯಾಲಯವು ಆರೋಪಗಳನ್ನು ದಾಖಲಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ಕೊಲ್ಹಾಪುರದಲ್ಲಿ ಫೆಬ್ರುವರಿ 16, 2015ರಂದು ಬೆಳಗಿನಜಾವ ವಿಚಾರವಾದಿ ಪನ್ಸಾರೆ ಅವರು ವಾಕಿಂಗ್ ಮುಗಿಸಿ ಮನೆಗೆ ಹೋಗುತ್ತಿದ್ದರು. ಈ ವೇಳೆ ಇಬ್ಬರು ಅಪರಿಚಿತ ಬಂದೂಕುಧಾರಿಗಳು ಪನ್ಸಾರೆ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಗುಂಡಿನ ದಾಳಿಯಿಂದಾಗಿ ನಾಲ್ಕು ದಿನಗಳ ನಂತರ ಅವರು ಸಾವನ್ನಪ್ಪಿದರು.

ವಿಶೇಷ ಭಯೋತ್ಪಾದನಾ ನಿಗ್ರಹ ದಳದ ನ್ಯಾಯಾಧೀಶ ಎಸ್‌ಎಸ್ ತಾಂಬೆ ಅವರು, ಸೋಮವಾರ ಸಮೀರ್ ಗಾಯಕ್ವಾಡ್, ವೀರೇಂದ್ರ ಸಿನ್ ತಾವ್ಡೆ, ಅಮೋಲ್ ಕಾಳೆ, ವಾಸುದೇವ್ ಸೂರ್ಯವಂಶಿ, ಭರತ್ ಕುರಾಣೆ, ಅಮಿತ್ ದೆಗ್ವೇಕರ್, ಶರದ್ ಕಲಾಸ್ಕರ್, ಸಚಿನ್ ಅಂದುರೆ, ಅಮಿತ್ ಬದ್ದಿ ಮತ್ತು ಗಣೇಶ್ ಮಿಸ್ಕಿನ್ ವಿರುದ್ಧ ಆರೋಪಗಳನ್ನು ದಾಖಲಿಸಿದ್ದಾರೆ.

ಇನ್ನಿಬ್ಬರು ಆರೋಪಿಗಳಾದ ವಿನಯ್ ಪವಾರ್ ಮತ್ತು ಸಾರಂಗ್ ಅಕೋಲ್ಕರ್ ತಲೆಮರೆಸಿಕೊಂಡಿದ್ದಾರೆ. ಇನ್ನು ಪ್ರಕರಣದ ಸಾಕ್ಷಿಗಳ ಪಟ್ಟಿ ಮತ್ತು ತನಿಖಾ ಸಂಸ್ಥೆಗಳಿಂದ ದಾಖಲೆಗಳನ್ನು ಹಾಜರುಪಡಿಸುವಂತೆ ನ್ಯಾಯಾಧೀಶರು ಪ್ರಾಸಿಕ್ಯೂಷನ್‌ಗೆ ಸೂಚಿಸಿದ್ದಾರೆ ಎಂದು ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ), 307 (ಕೊಲೆಗೆ ಯತ್ನ), 120-ಬಿ (ಕ್ರಿಮಿನಲ್ ಪಿತೂರಿ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಶಿವಾಜಿರಾವ್ ರಾಣೆ ತಿಳಿಸಿದ್ದಾರೆ. ಅಕ್ರಮವಾಗಿ ಬಂದೂಕು ಸಂಗ್ರಹ ಮತ್ತು ಬಳಕೆಗೆ ಸಂಬಂಧಿಸಿದಂತೆ ಶಸ್ತ್ರಾಸ್ತ್ರ ಕಾಯಿದೆಯಡಿ ಆರೋಪಗಳನ್ನು ಹೊರಿಸಲಾಗಿದೆ.

ಇದನ್ನೂ ಓದಿರಿ: ಗೌರಿ ಲಂಕೇಶ್ ಹತ್ಯೆ ಪ್ರಕರಣದ ವಿಚಾರಣೆ; ಆರೋಪಿಗಳನ್ನು ಗುರುತು ಹಚ್ಚಿದ ಪ್ರಮುಖ ಸಾಕ್ಷಿ

ಈ ಬಗ್ಗೆ ಆರೋಪಿಗಳ ಪರ ವಕೀಲ ಸಮೀರ್ ಪಟವರ್ಧನ್ ಮಾತನಾಡಿ, ಎಲ್ಲಾ ಆರೋಪಿಗಳು ಆರೋಪಗಳನ್ನು ನಿರಾಕರಿಸಿದ್ದು, ವಿಚಾರಣೆಯನ್ನು ಎದುರಿಸಲು ಅವರು ಸಿದ್ಧರಾಗಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ.

ಗೋವಿಂದ ಪನ್ಸಾರೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಕಲಾಸ್ಕರ್ ಮತ್ತು ಅಂಧುರೆಯವರು, ಮೂಢನಂಬಿಕೆ ವಿರೋಧಿ ಹೋರಾಟಗಾರರಾಗಿದ್ದ ನರೇಂದ್ರ ದಾಭೋಲ್ಕರ್ ಅವರ ಹತ್ಯೆಯಲ್ಲೂ ಭಾಗಿಯಾಗಿದ್ದಾರೆ.

ಪುಣೆಯಲ್ಲಿ ಆಗಸ್ಟ್ 20, 2013 ರಂದು ದಾಭೋಲ್ಕರ್ ಅವರನ್ನು ಗುಂಡಿಕ್ಕಿ ಕೊಲ್ಲಲಾಯಿತು. ನಂತರ 2015ರಲ್ಲಿ ಪನ್ಸಾರೆ ಮತ್ತು ಚಿಂತಕ ಎಂಎಂ ಕಲ್ಬುರ್ಗಿ ಅವರನ್ನು, 2017ರಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡಲಾಯಿತು. ಈ ಎಲ್ಲ ಪ್ರಕರಣಗಳಿಗೂ ಒಂದಕ್ಕೊಂದು ಸಂಬಂಧವಿದೆ ಎಂದು ತನಿಖಾ ಸಂಸ್ಥೆಗಳು ಹೇಳಿವೆ. ಅಷ್ಟೇ ಅಲ್ಲದೇ ಈ ಹತ್ಯೆಗಳ ಹಿಂದೆ ಹಿಂದುತ್ವದ ಉಗ್ರಗಾಮಿಗಳು ಇದ್ದಾರೆ ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...