Homeಮುಖಪುಟಟಿಂಡರ್‌ ಆ್ಯಪ್‌ನಲ್ಲಿ ಪರಿಚಯವಾಗಿದ್ದ ಯುವಕನ ಕೊಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಟಿಂಡರ್‌ ಆ್ಯಪ್‌ನಲ್ಲಿ ಪರಿಚಯವಾಗಿದ್ದ ಯುವಕನ ಕೊಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

- Advertisement -
- Advertisement -

ಟಿಂಡರ್‌ ಡೇಟಿಂಗ್‌ ಆ್ಯಪ್‌ನಲ್ಲಿ ಪರಿಚಯವಾಗಿದ್ದ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಜೈಪುರದ ನ್ಯಾಯಾಲಯವು ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ.

ಸೆಷನ್ಸ್ ನ್ಯಾಯಾಧೀಶ ಅಜಿತ್ ಕುಮಾರ್ ಹಿಂಗರ್ ಅವರ ಪೀಠವು, ಪ್ರಾಸಿಕ್ಯೂಷನ್ ಸತ್ಯಗಳನ್ನು ದೃಢೀಕರಿಸಲು ಸಾಕಷ್ಟು ಪುರಾವೆಗಳನ್ನು ಪ್ರಸ್ತುತಪಡಿಸಿದೆ ಎಂದು ಹೇಳಿ ಶಿಕ್ಷೆಯನ್ನು ಪ್ರಕಟಿಸಿದ್ದಾರೆ.

ಪ್ರಮುಖ ಆರೋಪಿ ಪ್ರಿಯಾ ಸೇಠ್ (27) ಟಿಂಡರ್‌ನಲ್ಲಿ ದುಶ್ಯಂತ್ ಶರ್ಮಾ ಅವರೊಂದಿಗೆ ಸ್ನೇಹ ಬೆಳೆಸಿದ್ದರು.  ನಂತರ ಅವನನ್ನು ಬಾಡಿಗೆಗೆ ಮನೆಗೆ ಕರೆಸಿ ಅಲ್ಲಿ ಅವಳು ಮತ್ತು ಆಕೆಯ ಇಬ್ಬರು ಸಹಚರರಾದ ದಿಶ್ಕಾಂತ್ ಕಮ್ರಾ ಮತ್ತು ಲಕ್ಷ್ಯ ವಾಲಿಯಾ ಶರ್ಮಾ ಕುಟುಂಬಕ್ಕೆ ಹಣಕ್ಕೆ ಬೇಡಿಕೆಯಿಟ್ಟಿದ್ದರು. ದುಶ್ಯಂತ್ ಕುಟುಂಬವು ಇವರು ಕೇಳಿದಷ್ಟು ಹಣವನ್ನು ಕೊಡದ ಕಾರಣ ಆತನಿಗೆ ಹಲವು ಬಾರಿ ಇರಿದು ಬಳಿಕ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ.

ದುಶ್ಯಂತ್ ಶರ್ಮಾ ಅವರ ತಂದೆಯಿಂದ ಆರೋಪಿಗಳು 10 ಲಕ್ಷ  ಹಣಕ್ಕೆ ಬೇಡಿಕೆ ಇಟ್ಟಿದ್ದರು. ಸಂತ್ರಸ್ತನ ತಂದೆ ತನ್ನ ಮಗನ ಖಾತೆಗೆ 3 ಲಕ್ಷ ಜಮೆ ಮಾಡಿದ ನಂತರ ಆರೋಪಿಗಳು ಶರ್ಮಾ ಅವರ ಡೆಬಿಟ್ ಕಾರ್ಡ್ ಬಳಸಿ ಜೈಪುರದ ನೆಹರು ಉದ್ಯಾನ್ ಬಳಿ ಎಟಿಎಂನಿಂದ 20,000ರೂ. ಡ್ರಾ ಮಾಡಿದ್ದಾರೆ. ಬಳಿಕ ಶರ್ಮಾನನ್ನು ಕೊಂದು ದೇಹವನ್ನು ತುಂಡುಗಳಾಗಿ ಕತ್ತರಿಸಿ ಸೂಟ್‌ಕೇಸ್‌ನಲ್ಲಿ ತುಂಬಿ ದೆಹಲಿ ರಸ್ತೆಯಲ್ಲಿ ಎಸೆದಿದ್ದರು.

2018ರಲ್ಲಿ ವಿವಾನ್‌ ಕೊಹ್ಲಿ ಎಂಬವರು ಟಿಂಡರ್‌ ಡೇಟಿಂಗ್‌ ಆ್ಯಪ್‌ನಲ್ಲಿ ದುಷ್ಯಂತ್ ಶರ್ಮಾ ಎಂಬ ಹೆಸರಿನಲ್ಲಿ ಪ್ರೊಫೈಲ್‌  ತೆರೆದಿದ್ದಾರೆ. ನಂತರ ಇವರಿಗೆ ಜೈಪುರದ ಯುವತಿ ಪ್ರಿಯಾ ಸೇಠ್‌ ಪರಿಚಿತರಾಗುತ್ತಾರೆ. ಈ ವೇಳೆ ವಿವಾನ್‌ ಕೊಹ್ಲಿ ನಾನು ದೊಡ್ಡ ಉದ್ಯಮಿ ಎಂದು ಪ್ರಿಯಾ ಸೇಠ್‌ ಬಳಿ ಸುಳ್ಳು ಹೇಳಿಕೊಂಡಿರುತ್ತಾರೆ. ಇದರಿಂದಾಗಿ ಆತನಿಂದ ದರೋಡೆ ಮಾಡುವ ಉದ್ದೇಶದಿಂದ ವಿವಾನ್‌ ಕೊಹ್ಲಿ( ದುಶ್ಯಂತ್ ಶರ್ಮಾ) ಅವರನ್ನು ಪ್ರಿಯಾ ಜೈಪುರಕ್ಕೆ ಕರೆಸಿ ಬಳಿಕ ಅಪಹರಣ ನಡೆಸಿ ಕೊಲೆ ಮಾಡಿದ್ದರು.

ವಿವಾನ್‌ ಕುಟುಂಬದವರು ನೀಡಿದ ದೂರನ್ನು ಆಧರಿಸಿ ಜೈಪುರ ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸುತ್ತಾರೆ. ಈ ಘಟನೆ ಬಗ್ಗೆ ನ್ಯಾಯಾಲಯದಲ್ಲಿ 5 ವರ್ಷಗಳ ಕಾಲ ಸುದೀರ್ಘವಾದ ವಿಚಾರಣೆ ನಡೆಯುತ್ತದೆ. ಅಂತಿಮವಾಗಿ ನ್ಯಾಯಾಲಯ ಪ್ರಿಯಾ ಮತ್ತು ಇಬ್ಬರು ಸಹಚರರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ಆರೋಪಿಗಳಾದ ಪ್ರಿಯಾ ಸೇಥ್ ಮತ್ತು ದಿಶ್ಕಾಂತ್ ಕಮ್ರಾ  ಅವರು ಇದಕ್ಕೂ ಮೊದಲು ಕ್ರಿಮಿನಲ್ ಪ್ರಕರಣದಲ್ಲಿ ಭಾಗಿಯಾಗಿದ್ದರು. 2014, 2016 ಮತ್ತು 2017ರಲ್ಲಿ ಎಟಿಎಂ ಯಂತ್ರ ಒಡೆದ ಪ್ರಕರಣಕ್ಕೆ ಸಂಬಂಧಿಸಿ ಆಕೆಯನ್ನು  ಬಂಧಿಸಲಾಗಿತ್ತು.

ಇದನ್ನು ಓದಿ; ಕೊಚ್ಚಿ: ‘ಟೆಕ್‌ ಫೆಸ್ಟ್‌’ನಲ್ಲಿ ಕಾಲ್ತುಳಿತ; ನಾಲ್ವರು ವಿದ್ಯಾರ್ಥಿಗಳು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...