Homeಮುಖಪುಟಪಪುವಾ ನ್ಯೂಗಿನಿಯಾ ಭೂಕುಸಿತ: 670ಕ್ಕೂ ಹೆಚ್ಚು ಜನರು ಸಾವು

ಪಪುವಾ ನ್ಯೂಗಿನಿಯಾ ಭೂಕುಸಿತ: 670ಕ್ಕೂ ಹೆಚ್ಚು ಜನರು ಸಾವು

- Advertisement -
- Advertisement -

ಪಪುವಾ ನ್ಯೂಗಿನಿಯಾದಲ್ಲಿ ಸಂಭವಿಸಿದ ಭಾರೀ ಭೂಕುಸಿತದಿಂದ ಸಾವನ್ನಪ್ಪಿದವರ ಸಂಖ್ಯೆ 670ಕ್ಕೂ ಹೆಚ್ಚು ಎಂದು ವಿಶ್ವಸಂಸ್ಥೆಯ ವಲಸಿಗ ಸಂಸ್ಥೆ ಭಾನುವಾರ ಅಂದಾಜಿಸಿದೆ.

ವಿಶ್ವಸಂಸ್ಥೆಯ ವಲಸಿಗ ಸಂಸ್ಥೆ ಯೋಜನೆಯ ಮುಖ್ಯಸ್ಥ ಸೆರಾನ್‌ ಅಕ್ಟೋಪ್ರಾಕ್‌, ಯಂಬಾಲಿ ಮತ್ತು ಎಂಗಾ ಪ್ರಾಂತ್ಯದ ಅಂಕಿ ಅಂಶಗಳ ಆಧಾರದ ಮೇಲೆ ಭೂಕುಸಿತದಿಂದ 150ಕ್ಕೂ ಹೆಚ್ಚು ಮನೆಗಳು ನೆಲಸಮಗೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಈ ಮೊದಲು 60 ಮನೆಗಳು ಮಾತ್ರ ನೆಲಸಮಗೊಂಡಿವೆ ಎಂದು ಅಂದಾಜಿಸಲಾಗಿತ್ತು. ಆದರೆ ಈಗ 670ಕ್ಕೂ ಹೆಚ್ಚು ಮಂದಿ ಮಣ್ಣಿನೊಳಗೆ ಹೂತು ಹೋಗಿದ್ದಾರೆ ಎಂದು ಅಂದಾಜಿಸಲಾಗಿದೆ ಎಂದು ತಿಳಿಸಿದ್ದಾರೆ.

ಸ್ಥಳೀಯ ಅಧಿಕಾರಿಗಳು ಸಾವಿನ ಸಂಖ್ಯೆ 100 ದಾಟಿರಬಹುದು ಎಂದು ಈ ಮೊದಲು ಅಂದಾಜಿಸಿದ್ದರು. ಭಾನುವಾರದವರೆಗೂ 6 ಮೃತದೇಹಗಳನ್ನು ಮಾತ್ರ ಹೊರತೆಗೆಯಲಾಗಿದೆ.

ಪಪುವಾ ನ್ಯೂಗಿನಿಯಾದ ತುರ್ತು ನಿರ್ವಹಣಾ ಘಟಕದ ಅಧಿಕಾರಿಗಳು ಬದುಕುಳಿದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದ್ದಾರೆ. ಅಲ್ಲಿನ ಸರ್ಕಾರ ಹೆಚ್ಚಿನ ಅಂತಾರಾಷ್ಟ್ರೀಯ ನೆರವಿಗಾಗಿ ಅಧಿಕೃತ ಮನವಿ ಅಗತ್ಯವಿದೆಯೇ? ಎಂಬುವುದನ್ನು ಪರಿಶೀಲಿಸುತ್ತಿದೆ.

ಭೂಕುಸಿತ ಉಂಟಾಗಿರುವ ಪ್ರದೇಶಗಳ ಅವಶೇಷಗಳಡಿ ಇನ್ನೂ ಹಲವರು ಬದುಕುಳಿದಿರುವ ಸಂಭವವಿದ್ದು, ಕುಟುಂಬದ ಸದಸ್ಯರು ತಮ್ಮವರ ರಕ್ಷಣೆಗಾಗಿ ಅಳಲು ತೋಡಿಕೊಂಡಿದ್ದಾರೆ ಎಂದು ಸೆರಾನ್‌ ಅಕ್ಟೋಪ್ರಾಕ್‌ ತಿಳಿಸಿದ್ದಾರೆ.

ಪರಿಹಾರ ಕೇಂದ್ರಗಳು ಹಾಗೂ ಅವಶೇಷಗಳನ್ನು ಸಂಗ್ರಹಿಸಲು ನಾಲ್ಕು ಫುಟ್‌ಬಾಲ್‌ ಮೈದಾನಗಳನ್ನು ಬಳಸಿಕೊಳ್ಳಲಾಗಿದೆ. ಅವಶೇಷಗಳಡಿ ಕೆಲಸ ನಿರ್ವಹಿಸುವುದು ಅತ್ಯಂತ ಅಪಾಯಕಾರಿಯಾದ ಕೆಲಸವಾಗಿದ್ದು,ಭೂಕುಸಿತವು ಇನ್ನೂ ಮುಂದುವರೆಯುತ್ತಿದೆ ಎಂದು ಅಕ್ಟೋಪ್ರಾಕ್‌ ಹೇಳಿದ್ದಾರೆ.

ಭೂಕುಸಿತಗೊಂಡಿರುವ ಪ್ರದೇಶಗಳಿಗೆ ಆಹಾರ, ನೀರು ಹಾಗೂ ಇತರ ಅಗತ್ಯ ಸೌಕರ್ಯಗಳನ್ನು 60 ಕಿಮೀ ದೂರವಿರುವ ಪಪುವಾ ನ್ಯೂಗಿನಿಯಾ ರಾಜಧಾನಿ ವಬಾಗ್‌ನಿಂದ ಸೇನೆಯ ಭದ್ರತೆಯೊಂದಿಗೆ ರವಾನಿಸಲಾಗುತ್ತಿದೆ.

ಇದನ್ನೂ ಓದಿ : ‘ಮುಕ್ತ ಅಭಿವ್ಯಕ್ತಿ’ಯ ಮಹತ್ವ ಸಾರಿದ ಪಾಯಲ್ ಕಪಾಡಿಯ ಕೇನ್ಸ್ ಗೆಲುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...