Homeಮುಖಪುಟಪಪುವಾ ನ್ಯೂಗಿನಿಯಾ ಭೂಕುಸಿತ: 670ಕ್ಕೂ ಹೆಚ್ಚು ಜನರು ಸಾವು

ಪಪುವಾ ನ್ಯೂಗಿನಿಯಾ ಭೂಕುಸಿತ: 670ಕ್ಕೂ ಹೆಚ್ಚು ಜನರು ಸಾವು

- Advertisement -
- Advertisement -

ಪಪುವಾ ನ್ಯೂಗಿನಿಯಾದಲ್ಲಿ ಸಂಭವಿಸಿದ ಭಾರೀ ಭೂಕುಸಿತದಿಂದ ಸಾವನ್ನಪ್ಪಿದವರ ಸಂಖ್ಯೆ 670ಕ್ಕೂ ಹೆಚ್ಚು ಎಂದು ವಿಶ್ವಸಂಸ್ಥೆಯ ವಲಸಿಗ ಸಂಸ್ಥೆ ಭಾನುವಾರ ಅಂದಾಜಿಸಿದೆ.

ವಿಶ್ವಸಂಸ್ಥೆಯ ವಲಸಿಗ ಸಂಸ್ಥೆ ಯೋಜನೆಯ ಮುಖ್ಯಸ್ಥ ಸೆರಾನ್‌ ಅಕ್ಟೋಪ್ರಾಕ್‌, ಯಂಬಾಲಿ ಮತ್ತು ಎಂಗಾ ಪ್ರಾಂತ್ಯದ ಅಂಕಿ ಅಂಶಗಳ ಆಧಾರದ ಮೇಲೆ ಭೂಕುಸಿತದಿಂದ 150ಕ್ಕೂ ಹೆಚ್ಚು ಮನೆಗಳು ನೆಲಸಮಗೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಈ ಮೊದಲು 60 ಮನೆಗಳು ಮಾತ್ರ ನೆಲಸಮಗೊಂಡಿವೆ ಎಂದು ಅಂದಾಜಿಸಲಾಗಿತ್ತು. ಆದರೆ ಈಗ 670ಕ್ಕೂ ಹೆಚ್ಚು ಮಂದಿ ಮಣ್ಣಿನೊಳಗೆ ಹೂತು ಹೋಗಿದ್ದಾರೆ ಎಂದು ಅಂದಾಜಿಸಲಾಗಿದೆ ಎಂದು ತಿಳಿಸಿದ್ದಾರೆ.

ಸ್ಥಳೀಯ ಅಧಿಕಾರಿಗಳು ಸಾವಿನ ಸಂಖ್ಯೆ 100 ದಾಟಿರಬಹುದು ಎಂದು ಈ ಮೊದಲು ಅಂದಾಜಿಸಿದ್ದರು. ಭಾನುವಾರದವರೆಗೂ 6 ಮೃತದೇಹಗಳನ್ನು ಮಾತ್ರ ಹೊರತೆಗೆಯಲಾಗಿದೆ.

ಪಪುವಾ ನ್ಯೂಗಿನಿಯಾದ ತುರ್ತು ನಿರ್ವಹಣಾ ಘಟಕದ ಅಧಿಕಾರಿಗಳು ಬದುಕುಳಿದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದ್ದಾರೆ. ಅಲ್ಲಿನ ಸರ್ಕಾರ ಹೆಚ್ಚಿನ ಅಂತಾರಾಷ್ಟ್ರೀಯ ನೆರವಿಗಾಗಿ ಅಧಿಕೃತ ಮನವಿ ಅಗತ್ಯವಿದೆಯೇ? ಎಂಬುವುದನ್ನು ಪರಿಶೀಲಿಸುತ್ತಿದೆ.

ಭೂಕುಸಿತ ಉಂಟಾಗಿರುವ ಪ್ರದೇಶಗಳ ಅವಶೇಷಗಳಡಿ ಇನ್ನೂ ಹಲವರು ಬದುಕುಳಿದಿರುವ ಸಂಭವವಿದ್ದು, ಕುಟುಂಬದ ಸದಸ್ಯರು ತಮ್ಮವರ ರಕ್ಷಣೆಗಾಗಿ ಅಳಲು ತೋಡಿಕೊಂಡಿದ್ದಾರೆ ಎಂದು ಸೆರಾನ್‌ ಅಕ್ಟೋಪ್ರಾಕ್‌ ತಿಳಿಸಿದ್ದಾರೆ.

ಪರಿಹಾರ ಕೇಂದ್ರಗಳು ಹಾಗೂ ಅವಶೇಷಗಳನ್ನು ಸಂಗ್ರಹಿಸಲು ನಾಲ್ಕು ಫುಟ್‌ಬಾಲ್‌ ಮೈದಾನಗಳನ್ನು ಬಳಸಿಕೊಳ್ಳಲಾಗಿದೆ. ಅವಶೇಷಗಳಡಿ ಕೆಲಸ ನಿರ್ವಹಿಸುವುದು ಅತ್ಯಂತ ಅಪಾಯಕಾರಿಯಾದ ಕೆಲಸವಾಗಿದ್ದು,ಭೂಕುಸಿತವು ಇನ್ನೂ ಮುಂದುವರೆಯುತ್ತಿದೆ ಎಂದು ಅಕ್ಟೋಪ್ರಾಕ್‌ ಹೇಳಿದ್ದಾರೆ.

ಭೂಕುಸಿತಗೊಂಡಿರುವ ಪ್ರದೇಶಗಳಿಗೆ ಆಹಾರ, ನೀರು ಹಾಗೂ ಇತರ ಅಗತ್ಯ ಸೌಕರ್ಯಗಳನ್ನು 60 ಕಿಮೀ ದೂರವಿರುವ ಪಪುವಾ ನ್ಯೂಗಿನಿಯಾ ರಾಜಧಾನಿ ವಬಾಗ್‌ನಿಂದ ಸೇನೆಯ ಭದ್ರತೆಯೊಂದಿಗೆ ರವಾನಿಸಲಾಗುತ್ತಿದೆ.

ಇದನ್ನೂ ಓದಿ : ‘ಮುಕ್ತ ಅಭಿವ್ಯಕ್ತಿ’ಯ ಮಹತ್ವ ಸಾರಿದ ಪಾಯಲ್ ಕಪಾಡಿಯ ಕೇನ್ಸ್ ಗೆಲುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆ: ಪೊಲೀಸ್ ದೌರ್ಜನ್ಯಗಳ ಆರೋಪದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಸುಪ್ರೀಂ ಆದೇಶ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ದೆಹಲಿ ಪೊಲೀಸರು ನಡೆಸಿದ ಅತಿಯಾದ ಬಲಪ್ರಯೋಗ, ಹಿಂಸಾಚಾರ ಮತ್ತು ಇತರ ಗಂಭೀರ ದುರ್ನಡತೆಯ ಆರೋಪಗಳ ತನಿಖೆಗೆ ಉನ್ನತ...

ನಕಲಿ ಔಷಧ ದಂಧೆ: ತನಿಖೆಗೆ ಕಾನೂನು ತೊಡಕು, ಎಸ್‌ಐಟಿಗೆ ವಿಶೇಷಾಧಿಕಾರಕ್ಕೆ ಬೇಡಿಕೆ

ರಾಮನಗರ ಜಿಲ್ಲೆಯ ತಾವರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡೇರಿ ಗ್ರಾಮದ ಫಾರ್ಮ್‌ಹೌಸ್‌ನಲ್ಲಿ ಬೆಳಕಿಗೆ ಬಂದಿರುವ ಸುಮಾರು 5 ಕೋಟಿ ರೂಪಾಯಿ ಮೌಲ್ಯದ ಬೃಹತ್ ನಕಲಿ ಔಷಧ ದಂಧೆಯ ತನಿಖೆಗೆ ಗಂಭೀರವಾದ ಕಾನೂನು ತೊಡಕು...

ಸಿಜೆಪಿ ಸ್ವಯಂ ಸೇವಕರ ಮೇಲೆ ದಾಳಿ | ರಾಜಸ್ಥಾನದ ಬಿಜೆಪಿ ಸರ್ಕಾರಕ್ಕೆ 3 ಬೇಡಿಕೆಗಳನ್ನು ಮುಂದಿಟ್ಟ ಅಭಿಜೀತ್ ದೀಪ್ಕೆ : ಈಡೇರಿಸಲು 48 ಗಂಟೆಗಳ ಗಡುವು

ಸರ್ಕಾರಿ ಶಾಲೆಯ ದುಃಸ್ಥಿತಿಯನ್ನು ಪರಿಶೀಲಿಸಲು ತೆರಳಿದ್ದ ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಸಹ-ಸಂಘಟಕ ಆಶುತೋಷ್ ರಾಂಕಾ ಮತ್ತು ಇತರ ಸ್ವಯಂಸೇವಕರ ಮೇಲೆ ದಾಳಿ ನಡೆಸಿರುವುದನ್ನು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ತೀವ್ರವಾಗಿ ಖಂಡಿಸಿದ್ದಾರೆ. ಬಿಜೆಪಿ ಕಾರ್ಯಕರ್ತರು...

ಸಾರ್ವಜನಿಕರ ಉಪಸ್ಥಿತಿಯಿಲ್ಲದ ಮುಚ್ಚಿದ ಸ್ಥಳದಲ್ಲಿ ಜಾತಿ ನಿಂದನೆ: ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಅಪರಾಧವಲ್ಲ: ಸುಪ್ರೀಂ ಕೋರ್ಟ್ 

ಸಾರ್ವಜನಿಕ ಪ್ರವೇಶವಿಲ್ಲದ ಮತ್ತು ಸಾರ್ವಜನಿಕರ ಉಪಸ್ಥಿತಿಯಿಲ್ಲದ ನಾಲ್ಕು ಗೋಡೆಗಳ ನಡುವೆ ಅಥವಾ ಸುತ್ತುವರಿದ ಮುಚ್ಚಿದ ಜಾಗದಲ್ಲಿ ನಡೆದಿದೆ ಎನ್ನಲಾದ ಜಾತಿ ಆಧಾರಿತ ನಿಂದನೆ ಅಥವಾ ವಾಗ್ವಾದಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ...

ಕರ್ನಾಟಕದ ಒಂದೂವರೆ ಕೋಟಿ ಮತದಾರರನ್ನು ಬಾಧಿಸಿದ SIR

ಎನ್ಯುಮರೇಷನ್ ಫಾರಂ (ಗಣತಿ ನಮೂನೆ) ಸಲ್ಲಿಕೆ ಹಂತ ಮುಗಿದ ಬಳಿಕ (ಆ.18-19ರ ಪ್ರಕಾರ) ದೊರೆತ ಮಾಹಿತಿ ಪ್ರಕಾರ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕರ್ನಾಟಕದ ಸುಮಾರು ಒಂದೂವರೆ ಕೋಟಿ (...

ಮಹಾರಾಷ್ಟ್ರ: 8 ವರ್ಷದ ಬಾಲಕಿ ಶಾರ್ಟ್ಸ್ ಧರಿಸಿದ್ದಕ್ಕೆ ಕುಟುಂಬದ ಮೇಲೆ ಭೀಕರ ಹಲ್ಲೆ: ನೈತಿಕ ಪೊಲೀಸ್‌ಗಿರಿಗೆ ಸಾಕ್ಷಿಯಾದ ಸಿಂಹಗಢ ಕೋಟೆ

ಮಹಾರಾಷ್ಟ್ರದ ಪುಣೆ ಸಮೀಪದ ಐತಿಹಾಸಿಕ ಸಿಂಹಗಢ ಕೋಟೆಯಲ್ಲಿ ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಪ್ರವಾಸಿಗರ ಮೇಲೆ ನೈತಿಕ ಪೊಲೀಸ್‌ಗಿರಿ (ಮೊರಾಲ್ ಪೋಲಿಸಿಂಗ್) ನಡೆಸಿ ಭೀಕರ ಹಲ್ಲೆ ನಡೆಸಲಾಗಿದೆ. ಎಂಟು ವರ್ಷದ ಚಿಕ್ಕ ಬಾಲಕಿಯೊಬ್ಬಳು...

ಜೈಪುರದಲ್ಲಿ ಸರ್ಕಾರಿ ಶಾಲೆ ತಪಾಸಣೆ ವೇಳೆ ಭೀಕರ ಹಿಂಸಾಚಾರ: ‘ಸಿಜೆಪಿ’ನಾಯಕ ಅಶುತೋಷ್ ರಂಕಾ ತಂಡದ ಮೇಲೆ ದಾಳಿ, ಕಲ್ಲು ತೂರಾಟ, ಕಾರು ಧ್ವಂಸ

ಜೈಪುರ: ರಾಜಸ್ಥಾನದ ರಾಜಧಾನಿ ಜೈಪುರ ಸಮೀಪದ ಬಾಗ್ರು ವಿಧಾನಸಭಾ ಕ್ಷೇತ್ರದ ರಾಂಪುರ ಕನ್ವರ್‌ಪುರ ಗ್ರಾಮದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯ ಸ್ಥಿತಿಗತಿಗಳನ್ನು ಪರಿಶೀಲಿಸಲು ತೆರಳಿದ್ದ 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ) ಕಾರ್ಯಕರ್ತರ ಮೇಲೆ ಉಗ್ರ...

BJP 40 ಕ್ಷೇತ್ರಗಳಲ್ಲಿ ಸೋಲಲು ಕಾಂಗ್ರೆಸ್ ಜಾಹೀರಾತೇ ಕಾರಣ: ಹೈಕೋರ್ಟ್‌ಗೆ ಬಿಜೆಪಿ ದೂರು

2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳ ಮೊದಲು ಕಾಂಗ್ರೆಸ್ ಪತ್ರಿಕೆಗಳಲ್ಲಿ ಪ್ರಕಟಿಸಿದ್ದ ‘ಭ್ರಷ್ಟಾಚಾರದ ರೇಟ್ ಕಾರ್ಡ್’ (Corruption Rate Card) ಜಾಹೀರಾತಿನಿಂದಾಗಿ ತಾನು 40 ಕ್ಷೇತ್ರಗಳಲ್ಲಿ ಸೋಲು ಅನುಭವಿಸಬೇಕಾಯಿತು ಎಂದು ಭಾರತೀಯ...

“ಎಫ್‌ಐಆರ್ ದಾಖಲಾಗದೆ ಇಲ್ಲಿಂದ ಕದಲಲ್ಲ” : ಡಿಸಿಪಿ ಕಚೇರಿ ಮುಂದೆ ಧರಣಿ ಕುಳಿತ ರಾಹುಲ್ ಗಾಂಧಿ

ಜುಲೈ 20ರಂದು ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಪೆಲೆಟ್ ಗನ್‌ ಬಳಕೆ, ಲಾಠಿ ಚಾರ್ಜ್ ಸೇರಿದಂತೆ ಪೊಲೀಸರಿಂದ ವಿವಿಧ ದೌರ್ಜನ್ಯಕ್ಕೆ ಒಳಗಾದ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಲೋಕಸಭೆಯ ವಿರೋಧ ಪಕ್ಷದ...

ಪೆಲೆಟ್ ಗನ್ ಫೈರಿಂಗ್ ವಿರುದ್ಧ FIR ದಾಖಲಿಸಲು ದೆಹಲಿ ಪೊಲೀಸರ ನಿರಾಕರಣೆ, ರಾಹುಲ್ ಗಾಂಧಿ ಧರಣಿ

ಜುಲೈ 20ರ ಸಂಸತ್ ಚಲೋ ಪ್ರತಿಭಟನೆ ವೇಳೆ ಭದ್ರತಾ ಸಿಬ್ಬಂದಿ ಪೆಲೆಟ್ ಗನ್ ಬಳಸಿ ಗುಂಡು ಹಾರಿಸಿದ್ದಾರೆ ಎಂದು ಆರೋಪಿಸಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಶುಕ್ರವಾರ (ಅಗಸ್ಟ್ 20)...