Homeಮುಖಪುಟಪಪುವಾ ನ್ಯೂಗಿನಿಯಾ ಭೂಕುಸಿತ: 670ಕ್ಕೂ ಹೆಚ್ಚು ಜನರು ಸಾವು

ಪಪುವಾ ನ್ಯೂಗಿನಿಯಾ ಭೂಕುಸಿತ: 670ಕ್ಕೂ ಹೆಚ್ಚು ಜನರು ಸಾವು

- Advertisement -
- Advertisement -

ಪಪುವಾ ನ್ಯೂಗಿನಿಯಾದಲ್ಲಿ ಸಂಭವಿಸಿದ ಭಾರೀ ಭೂಕುಸಿತದಿಂದ ಸಾವನ್ನಪ್ಪಿದವರ ಸಂಖ್ಯೆ 670ಕ್ಕೂ ಹೆಚ್ಚು ಎಂದು ವಿಶ್ವಸಂಸ್ಥೆಯ ವಲಸಿಗ ಸಂಸ್ಥೆ ಭಾನುವಾರ ಅಂದಾಜಿಸಿದೆ.

ವಿಶ್ವಸಂಸ್ಥೆಯ ವಲಸಿಗ ಸಂಸ್ಥೆ ಯೋಜನೆಯ ಮುಖ್ಯಸ್ಥ ಸೆರಾನ್‌ ಅಕ್ಟೋಪ್ರಾಕ್‌, ಯಂಬಾಲಿ ಮತ್ತು ಎಂಗಾ ಪ್ರಾಂತ್ಯದ ಅಂಕಿ ಅಂಶಗಳ ಆಧಾರದ ಮೇಲೆ ಭೂಕುಸಿತದಿಂದ 150ಕ್ಕೂ ಹೆಚ್ಚು ಮನೆಗಳು ನೆಲಸಮಗೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಈ ಮೊದಲು 60 ಮನೆಗಳು ಮಾತ್ರ ನೆಲಸಮಗೊಂಡಿವೆ ಎಂದು ಅಂದಾಜಿಸಲಾಗಿತ್ತು. ಆದರೆ ಈಗ 670ಕ್ಕೂ ಹೆಚ್ಚು ಮಂದಿ ಮಣ್ಣಿನೊಳಗೆ ಹೂತು ಹೋಗಿದ್ದಾರೆ ಎಂದು ಅಂದಾಜಿಸಲಾಗಿದೆ ಎಂದು ತಿಳಿಸಿದ್ದಾರೆ.

ಸ್ಥಳೀಯ ಅಧಿಕಾರಿಗಳು ಸಾವಿನ ಸಂಖ್ಯೆ 100 ದಾಟಿರಬಹುದು ಎಂದು ಈ ಮೊದಲು ಅಂದಾಜಿಸಿದ್ದರು. ಭಾನುವಾರದವರೆಗೂ 6 ಮೃತದೇಹಗಳನ್ನು ಮಾತ್ರ ಹೊರತೆಗೆಯಲಾಗಿದೆ.

ಪಪುವಾ ನ್ಯೂಗಿನಿಯಾದ ತುರ್ತು ನಿರ್ವಹಣಾ ಘಟಕದ ಅಧಿಕಾರಿಗಳು ಬದುಕುಳಿದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದ್ದಾರೆ. ಅಲ್ಲಿನ ಸರ್ಕಾರ ಹೆಚ್ಚಿನ ಅಂತಾರಾಷ್ಟ್ರೀಯ ನೆರವಿಗಾಗಿ ಅಧಿಕೃತ ಮನವಿ ಅಗತ್ಯವಿದೆಯೇ? ಎಂಬುವುದನ್ನು ಪರಿಶೀಲಿಸುತ್ತಿದೆ.

ಭೂಕುಸಿತ ಉಂಟಾಗಿರುವ ಪ್ರದೇಶಗಳ ಅವಶೇಷಗಳಡಿ ಇನ್ನೂ ಹಲವರು ಬದುಕುಳಿದಿರುವ ಸಂಭವವಿದ್ದು, ಕುಟುಂಬದ ಸದಸ್ಯರು ತಮ್ಮವರ ರಕ್ಷಣೆಗಾಗಿ ಅಳಲು ತೋಡಿಕೊಂಡಿದ್ದಾರೆ ಎಂದು ಸೆರಾನ್‌ ಅಕ್ಟೋಪ್ರಾಕ್‌ ತಿಳಿಸಿದ್ದಾರೆ.

ಪರಿಹಾರ ಕೇಂದ್ರಗಳು ಹಾಗೂ ಅವಶೇಷಗಳನ್ನು ಸಂಗ್ರಹಿಸಲು ನಾಲ್ಕು ಫುಟ್‌ಬಾಲ್‌ ಮೈದಾನಗಳನ್ನು ಬಳಸಿಕೊಳ್ಳಲಾಗಿದೆ. ಅವಶೇಷಗಳಡಿ ಕೆಲಸ ನಿರ್ವಹಿಸುವುದು ಅತ್ಯಂತ ಅಪಾಯಕಾರಿಯಾದ ಕೆಲಸವಾಗಿದ್ದು,ಭೂಕುಸಿತವು ಇನ್ನೂ ಮುಂದುವರೆಯುತ್ತಿದೆ ಎಂದು ಅಕ್ಟೋಪ್ರಾಕ್‌ ಹೇಳಿದ್ದಾರೆ.

ಭೂಕುಸಿತಗೊಂಡಿರುವ ಪ್ರದೇಶಗಳಿಗೆ ಆಹಾರ, ನೀರು ಹಾಗೂ ಇತರ ಅಗತ್ಯ ಸೌಕರ್ಯಗಳನ್ನು 60 ಕಿಮೀ ದೂರವಿರುವ ಪಪುವಾ ನ್ಯೂಗಿನಿಯಾ ರಾಜಧಾನಿ ವಬಾಗ್‌ನಿಂದ ಸೇನೆಯ ಭದ್ರತೆಯೊಂದಿಗೆ ರವಾನಿಸಲಾಗುತ್ತಿದೆ.

ಇದನ್ನೂ ಓದಿ : ‘ಮುಕ್ತ ಅಭಿವ್ಯಕ್ತಿ’ಯ ಮಹತ್ವ ಸಾರಿದ ಪಾಯಲ್ ಕಪಾಡಿಯ ಕೇನ್ಸ್ ಗೆಲುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...