Homeಮುಖಪುಟಪಪುವಾ ನ್ಯೂಗಿನಿಯಾ ಭೂಕುಸಿತ: 670ಕ್ಕೂ ಹೆಚ್ಚು ಜನರು ಸಾವು

ಪಪುವಾ ನ್ಯೂಗಿನಿಯಾ ಭೂಕುಸಿತ: 670ಕ್ಕೂ ಹೆಚ್ಚು ಜನರು ಸಾವು

- Advertisement -
- Advertisement -

ಪಪುವಾ ನ್ಯೂಗಿನಿಯಾದಲ್ಲಿ ಸಂಭವಿಸಿದ ಭಾರೀ ಭೂಕುಸಿತದಿಂದ ಸಾವನ್ನಪ್ಪಿದವರ ಸಂಖ್ಯೆ 670ಕ್ಕೂ ಹೆಚ್ಚು ಎಂದು ವಿಶ್ವಸಂಸ್ಥೆಯ ವಲಸಿಗ ಸಂಸ್ಥೆ ಭಾನುವಾರ ಅಂದಾಜಿಸಿದೆ.

ವಿಶ್ವಸಂಸ್ಥೆಯ ವಲಸಿಗ ಸಂಸ್ಥೆ ಯೋಜನೆಯ ಮುಖ್ಯಸ್ಥ ಸೆರಾನ್‌ ಅಕ್ಟೋಪ್ರಾಕ್‌, ಯಂಬಾಲಿ ಮತ್ತು ಎಂಗಾ ಪ್ರಾಂತ್ಯದ ಅಂಕಿ ಅಂಶಗಳ ಆಧಾರದ ಮೇಲೆ ಭೂಕುಸಿತದಿಂದ 150ಕ್ಕೂ ಹೆಚ್ಚು ಮನೆಗಳು ನೆಲಸಮಗೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಈ ಮೊದಲು 60 ಮನೆಗಳು ಮಾತ್ರ ನೆಲಸಮಗೊಂಡಿವೆ ಎಂದು ಅಂದಾಜಿಸಲಾಗಿತ್ತು. ಆದರೆ ಈಗ 670ಕ್ಕೂ ಹೆಚ್ಚು ಮಂದಿ ಮಣ್ಣಿನೊಳಗೆ ಹೂತು ಹೋಗಿದ್ದಾರೆ ಎಂದು ಅಂದಾಜಿಸಲಾಗಿದೆ ಎಂದು ತಿಳಿಸಿದ್ದಾರೆ.

ಸ್ಥಳೀಯ ಅಧಿಕಾರಿಗಳು ಸಾವಿನ ಸಂಖ್ಯೆ 100 ದಾಟಿರಬಹುದು ಎಂದು ಈ ಮೊದಲು ಅಂದಾಜಿಸಿದ್ದರು. ಭಾನುವಾರದವರೆಗೂ 6 ಮೃತದೇಹಗಳನ್ನು ಮಾತ್ರ ಹೊರತೆಗೆಯಲಾಗಿದೆ.

ಪಪುವಾ ನ್ಯೂಗಿನಿಯಾದ ತುರ್ತು ನಿರ್ವಹಣಾ ಘಟಕದ ಅಧಿಕಾರಿಗಳು ಬದುಕುಳಿದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದ್ದಾರೆ. ಅಲ್ಲಿನ ಸರ್ಕಾರ ಹೆಚ್ಚಿನ ಅಂತಾರಾಷ್ಟ್ರೀಯ ನೆರವಿಗಾಗಿ ಅಧಿಕೃತ ಮನವಿ ಅಗತ್ಯವಿದೆಯೇ? ಎಂಬುವುದನ್ನು ಪರಿಶೀಲಿಸುತ್ತಿದೆ.

ಭೂಕುಸಿತ ಉಂಟಾಗಿರುವ ಪ್ರದೇಶಗಳ ಅವಶೇಷಗಳಡಿ ಇನ್ನೂ ಹಲವರು ಬದುಕುಳಿದಿರುವ ಸಂಭವವಿದ್ದು, ಕುಟುಂಬದ ಸದಸ್ಯರು ತಮ್ಮವರ ರಕ್ಷಣೆಗಾಗಿ ಅಳಲು ತೋಡಿಕೊಂಡಿದ್ದಾರೆ ಎಂದು ಸೆರಾನ್‌ ಅಕ್ಟೋಪ್ರಾಕ್‌ ತಿಳಿಸಿದ್ದಾರೆ.

ಪರಿಹಾರ ಕೇಂದ್ರಗಳು ಹಾಗೂ ಅವಶೇಷಗಳನ್ನು ಸಂಗ್ರಹಿಸಲು ನಾಲ್ಕು ಫುಟ್‌ಬಾಲ್‌ ಮೈದಾನಗಳನ್ನು ಬಳಸಿಕೊಳ್ಳಲಾಗಿದೆ. ಅವಶೇಷಗಳಡಿ ಕೆಲಸ ನಿರ್ವಹಿಸುವುದು ಅತ್ಯಂತ ಅಪಾಯಕಾರಿಯಾದ ಕೆಲಸವಾಗಿದ್ದು,ಭೂಕುಸಿತವು ಇನ್ನೂ ಮುಂದುವರೆಯುತ್ತಿದೆ ಎಂದು ಅಕ್ಟೋಪ್ರಾಕ್‌ ಹೇಳಿದ್ದಾರೆ.

ಭೂಕುಸಿತಗೊಂಡಿರುವ ಪ್ರದೇಶಗಳಿಗೆ ಆಹಾರ, ನೀರು ಹಾಗೂ ಇತರ ಅಗತ್ಯ ಸೌಕರ್ಯಗಳನ್ನು 60 ಕಿಮೀ ದೂರವಿರುವ ಪಪುವಾ ನ್ಯೂಗಿನಿಯಾ ರಾಜಧಾನಿ ವಬಾಗ್‌ನಿಂದ ಸೇನೆಯ ಭದ್ರತೆಯೊಂದಿಗೆ ರವಾನಿಸಲಾಗುತ್ತಿದೆ.

ಇದನ್ನೂ ಓದಿ : ‘ಮುಕ್ತ ಅಭಿವ್ಯಕ್ತಿ’ಯ ಮಹತ್ವ ಸಾರಿದ ಪಾಯಲ್ ಕಪಾಡಿಯ ಕೇನ್ಸ್ ಗೆಲುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರಾಚ್ಯ ಸಂಘರ್ಷ| ಇರಾನ್ ಮೇಲಿನ ದಾಳಿಗೆ ಅಮೆರಿಕಾ ಭಾರತದ ಬಂದರುಗಳನ್ನು ಬಳಸುತ್ತಿದೆ ಎಂಬ ಹೇಳಿಕೆ ವೈರಲ್: ಭಾರತದ ಪ್ರತಿಕ್ರಿಯೆ ಏನು?

ಇರಾನ್ ಮೇಲೆ ನೌಕಾ ದಾಳಿ ನಡೆಸಲು ಅಮೆರಿಕ ಭಾರತದ ಬಂದರುಗಳನ್ನು ಬಳಸುತ್ತಿದೆ ಎಂಬ ವೈರಲ್ ಹೇಳಿಕೆಗಳನ್ನು ಭಾರತ ಬಲವಾಗಿ ತಿರಸ್ಕರಿಸಿದೆ. ಅಲ್ಲದೇ ಈ ಆರೋಪಗಳನ್ನು "ನಕಲಿ"  ಮತ್ತು “ಆಧಾರರಹಿತ” ಎಂದು ಕರೆದಿದೆ. ಬುಧವಾರ ವಿದೇಶಾಂಗ...

ಬಾಬಾ ಬುಡನ್‌ ಗಿರಿಯಲ್ಲಿ ಉರುಸ್ ನಡೆಸಲು ಅನುಮತಿ ನೀಡುವಂತೆ ‘ಪ್ರಗತಿಪರ ಸೌಹಾರ್ದ ಸಂಘಟನೆಗಳ’ ಆಗ್ರಹ

ಚಿಕ್ಕಮಗಳೂರಿನ ಬಾಬಾ ಬುಡನ್‌ ಗಿರಿಯಲ್ಲಿ ಉರುಸ್ ನಡೆಸಲು ಅನುಮತಿ ನೀಡುವಂತೆ ಆಗ್ರಹಿಸಿದ ಕರ್ನಾಟಕ ಸಮಸ್ತ ಪ್ರಗತಿಪರ ಸೌಹಾರ್ದ ಸಂಘಟನೆಗಳ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆದು ಆಗ್ರಹಿಸಿದ್ದಾರೆ. ಚಿಕ್ಕಮಗಳೂರಿನ ಬಾಬಾ ಬುಡನ್‌...

ಖಮೇನಿ ನಿಧನಕ್ಕೆ ತಡವಾಗಿ ಸಂತಾಪ ಸೂಚಿಸಿದ ಭಾರತ; ಇರಾನ್‌ ರಾಯಭಾರ ಕಚೇರಿಯಲ್ಲಿನ ಪುಸ್ತಕದಲ್ಲಿ ವಿಕ್ರಮ್ ಮಿಶ್ರಿ ಸಹಿ

ಇರಾನಿನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನಕ್ಕೆ ಭಾರತ ತಡವಾಗಿ ಸಂತಾಪ ಸೂಚಿಸಿದೆ. ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಗುರುವಾರ ನವದೆಹಲಿಯ ಇರಾನಿನ ರಾಯಭಾರ ಕಚೇರಿಯಲ್ಲಿ ಸಂತಾಪ ಸೂಚಿಸುವ ಪುಸ್ತಕಕ್ಕೆ...

ಉಕ್ರೇನ್, ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷ ತ್ವರಿತವಾಗಿ ಕೊನೆಗೊಳಿಸಲು ಬೆಂಬಲಿಸುತ್ತೇನೆ: ಫಿನ್ಲೆಂಡ್‌ನಲ್ಲಿ ಪ್ರಧಾನಿ ಮೋದಿ

ನವದೆಹಲಿ: ಪಶ್ಚಿಮ ಏಷ್ಯಾ ಮತ್ತು ಉಕ್ರೇನ್‌ನಲ್ಲಿನ ಸಂಘರ್ಷಗಳಿಗೆ "ತ್ವರಿತ ಅಂತ್ಯ" ವನ್ನು ತರಲು ಪ್ರಧಾನಿ ನರೇಂದ್ರ ಮೋದಿ ಗುರುವಾರ ಕರೆ ನೀಡಿದ್ದಾರೆ, ಯಾವುದೇ ಸಮಸ್ಯೆಯನ್ನು ಮಿಲಿಟರಿ ಮುಖಾಮುಖಿಯ ಮೂಲಕ ಪರಿಹರಿಸಲು ಸಾಧ್ಯವಿಲ್ಲ ಎಂದು...

ಮಹಾರಾಷ್ಟ್ರ| ಬಣ್ಣ ಎರಚಿದ ಮೊಮ್ಮಗನ ಮೇಲೆ ಬಿಸಿ ನೀರು ಸುರಿದ ಮಹಿಳೆ; ಬಾಲಕನ ಸ್ಥಿತಿ ಗಂಭೀರ

ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕೊರಾಡಿ ಪ್ರದೇಶದಲ್ಲಿ ಹೋಲಿ ಆಡುತ್ತಿದ್ದಾಗ ನಾಲ್ಕು ವರ್ಷದ ಮೊಮ್ಮಗ ತನ್ನ ಮೇಲೆ ಬಣ್ಣ ಎರಚಿದ್ದರಿಂದ ಕೋಪಗೊಂಡ ಅಜ್ಜಿ ಮಗುವಿನ ಮೇಲೆ ಕುದಿಯುವ ನೀರನ್ನು ಸುರಿದಿರುವ ವಿಡಿಯೋ ಇದೀಗ ವೈರಲ್...

ಭಾರತದ ಕಾಲ ಬುಡದಲ್ಲಿ ಇರಾನ್ ನೌಕೆ ಮೇಲೆ ಅಮೆರಿಕ ದಾಳಿ : 100ರಷ್ಟು ಸಿಬ್ಬಂದಿ ಸಾವಿಗೀಡಾದರೂ ಮೋದಿ ಸರ್ಕಾರ ಮೌನ!

ಭಾರತದಿಂದ ಕೇವಲ 300 ಕಿಲೋ ಮೀಟರ್ ದೂರದಲ್ಲಿ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ 'ಐಆರ್‌ಐಎಸ್ ದೆನಾ' ಮೇಲೆ ಅಮೆರಿಕ ಜಲಾಂತರ್ಗಾಮಿ ಬುಧವಾರ (ಮಾ.4) ಭೀಕರ ದಾಳಿ ನಡೆಸಿದೆ. ಈ ಘಟನೆಯಲ್ಲಿ ಇರಾನ್‌ ನೌಕೆಯಲ್ಲಿದ್ದ 180 ಸಿಬ್ಬಂದಿಯ...

ಹಿಂದೂ ಮಹಾಸಾಗರದಲ್ಲಿ ಇರಾನ್ ನೌಕೆ ಮೇಲೆ ದಾಳಿ: ‘ರಾಜಿ ಮಾಡಿಕೊಂಡ ಪ್ರಧಾನಿ ಕಾರ್ಯತಂತ್ರದ ಸ್ವಾಯತ್ತತೆ ಬಿಟ್ಟುಕೊಟ್ಟರು: ರಾಹುಲ್ ಟೀಕೆ

ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆ ಐರಿಸ್ ದೇನಾದ ಮೇಲೆ ಅಮೆರಿಕಾ ದಾಳಿ ಮಾಡಿದ ಒಂದು ದಿನದ ನಂತರ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ವಾಗ್ದಾಳಿ...

ಟ್ರಂಪ್ ಬೆದರಿಕೆಗೆ ಹೆದರದ ಸ್ಪೇನ್ ಪ್ರಧಾನಿ; ಇರಾನ್ ಮೇಲಿನ ದಾಳಿಗೆ ಸೇನಾ ನೆಲೆ ಬಳಸಲು ಅನುಮತಿ ನಿರಾಕರಿಸಿದ ಪೆಡ್ರೊ ಸ್ಯಾಂಚೆಜ್

ಇರಾನ್ ಮೇಲೆ ದಾಳಿ ಮಾಡಲು ಅಮೆರಿಕದ ವಿಮಾನಗಳು ತನ್ನ ನೆಲೆಗಳನ್ನು ಬಳಸಲು ಅನುಮತಿಸಲು ಮ್ಯಾಡ್ರಿಡ್ ನಿರಾಕರಿಸಿದ್ದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡಿದ ಟೀಕೆಗಳಿಗೆ ಬುಧವಾರ ಸ್ಪ್ಯಾನಿಷ್ ಪ್ರಧಾನಿ ಪೆಡ್ರೊ ಸ್ಯಾಂಚೆಜ್ ತಿರುಗೇಟು...

ಭಾರತದಿಂದ ಹಿಂದಿರುಗುತ್ತಿದ್ದ ಯುದ್ಧನೌಕೆ ಮೇಲೆ ಹಠಾತ್ ದಾಳಿ : ಅಮೆರಿಕ ಪಶ್ಚಾತ್ತಾಪ ಪಡಲಿದೆ ಎಂದ ಇರಾನ್

ಭಾರತೀಯ ನೌಕಾಪಡೆಯ ಆಹ್ವಾನದ ಮೇರೆಗೆ ಸಮರಾಭ್ಯಾಸದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ ಐಆರ್‌ಐಎಸ್ ದೆನಾ ಮೇಲೆ ಅಮೆರಿಕದ ಜಲಾಂತರ್ಗಾಮಿ ದಾಳಿ ನಡೆಸಿ ಅದನ್ನು ಮುಳುಗಿಸಿದೆ. ಮಾರ್ಚ್ 4ರಂದು ಶ್ರೀಲಂಕಾದ ದಕ್ಷಿಣ ಕರಾವಳಿಯಿಂದ ಸುಮಾರು 40 ನಾಟಿಕಲ್...

ದೆಹಲಿ| ಹೋಳಿ ಹಬ್ಬ ಸಡಗರದಲ್ಲಿ ಕುಡಿದು ವಾಹನ ಚಾಲನೆ; 1,200 ಕ್ಕೂ ಹೆಚ್ಚು ಜನರ ಮೇಲೆ ಪ್ರಕರಣ ದಾಖಲು

ಹೋಳಿ ಹಬ್ಬದಂದು ನಗರದಾದ್ಯಂತ ನಡೆಸಿದ ವಿಶೇಷ ಪರಿಶೀಲನೆಯಲ್ಲಿ ದೆಹಲಿ ಸಂಚಾರ ಪೊಲೀಸರು 1,200 ಕ್ಕೂ ಹೆಚ್ಚು ವಾಹನ ಚಾಲಕರ ವಿರುದ್ಧ ಕುಡಿದು ವಾಹನ ಚಲಾಯಿಸಿದ್ದಕ್ಕಾಗಿ ಪ್ರಕರಣ ದಾಖಲಿಸಿದ್ದಾರೆ. ಪಶ್ಚಿಮ ವಲಯದಿಂದ ಅತಿ ಹೆಚ್ಚು...