Homeಮುಖಪುಟಪಪುವಾ ನ್ಯೂಗಿನಿಯಾ ಭೂಕುಸಿತ: 670ಕ್ಕೂ ಹೆಚ್ಚು ಜನರು ಸಾವು

ಪಪುವಾ ನ್ಯೂಗಿನಿಯಾ ಭೂಕುಸಿತ: 670ಕ್ಕೂ ಹೆಚ್ಚು ಜನರು ಸಾವು

- Advertisement -
- Advertisement -

ಪಪುವಾ ನ್ಯೂಗಿನಿಯಾದಲ್ಲಿ ಸಂಭವಿಸಿದ ಭಾರೀ ಭೂಕುಸಿತದಿಂದ ಸಾವನ್ನಪ್ಪಿದವರ ಸಂಖ್ಯೆ 670ಕ್ಕೂ ಹೆಚ್ಚು ಎಂದು ವಿಶ್ವಸಂಸ್ಥೆಯ ವಲಸಿಗ ಸಂಸ್ಥೆ ಭಾನುವಾರ ಅಂದಾಜಿಸಿದೆ.

ವಿಶ್ವಸಂಸ್ಥೆಯ ವಲಸಿಗ ಸಂಸ್ಥೆ ಯೋಜನೆಯ ಮುಖ್ಯಸ್ಥ ಸೆರಾನ್‌ ಅಕ್ಟೋಪ್ರಾಕ್‌, ಯಂಬಾಲಿ ಮತ್ತು ಎಂಗಾ ಪ್ರಾಂತ್ಯದ ಅಂಕಿ ಅಂಶಗಳ ಆಧಾರದ ಮೇಲೆ ಭೂಕುಸಿತದಿಂದ 150ಕ್ಕೂ ಹೆಚ್ಚು ಮನೆಗಳು ನೆಲಸಮಗೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಈ ಮೊದಲು 60 ಮನೆಗಳು ಮಾತ್ರ ನೆಲಸಮಗೊಂಡಿವೆ ಎಂದು ಅಂದಾಜಿಸಲಾಗಿತ್ತು. ಆದರೆ ಈಗ 670ಕ್ಕೂ ಹೆಚ್ಚು ಮಂದಿ ಮಣ್ಣಿನೊಳಗೆ ಹೂತು ಹೋಗಿದ್ದಾರೆ ಎಂದು ಅಂದಾಜಿಸಲಾಗಿದೆ ಎಂದು ತಿಳಿಸಿದ್ದಾರೆ.

ಸ್ಥಳೀಯ ಅಧಿಕಾರಿಗಳು ಸಾವಿನ ಸಂಖ್ಯೆ 100 ದಾಟಿರಬಹುದು ಎಂದು ಈ ಮೊದಲು ಅಂದಾಜಿಸಿದ್ದರು. ಭಾನುವಾರದವರೆಗೂ 6 ಮೃತದೇಹಗಳನ್ನು ಮಾತ್ರ ಹೊರತೆಗೆಯಲಾಗಿದೆ.

ಪಪುವಾ ನ್ಯೂಗಿನಿಯಾದ ತುರ್ತು ನಿರ್ವಹಣಾ ಘಟಕದ ಅಧಿಕಾರಿಗಳು ಬದುಕುಳಿದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದ್ದಾರೆ. ಅಲ್ಲಿನ ಸರ್ಕಾರ ಹೆಚ್ಚಿನ ಅಂತಾರಾಷ್ಟ್ರೀಯ ನೆರವಿಗಾಗಿ ಅಧಿಕೃತ ಮನವಿ ಅಗತ್ಯವಿದೆಯೇ? ಎಂಬುವುದನ್ನು ಪರಿಶೀಲಿಸುತ್ತಿದೆ.

ಭೂಕುಸಿತ ಉಂಟಾಗಿರುವ ಪ್ರದೇಶಗಳ ಅವಶೇಷಗಳಡಿ ಇನ್ನೂ ಹಲವರು ಬದುಕುಳಿದಿರುವ ಸಂಭವವಿದ್ದು, ಕುಟುಂಬದ ಸದಸ್ಯರು ತಮ್ಮವರ ರಕ್ಷಣೆಗಾಗಿ ಅಳಲು ತೋಡಿಕೊಂಡಿದ್ದಾರೆ ಎಂದು ಸೆರಾನ್‌ ಅಕ್ಟೋಪ್ರಾಕ್‌ ತಿಳಿಸಿದ್ದಾರೆ.

ಪರಿಹಾರ ಕೇಂದ್ರಗಳು ಹಾಗೂ ಅವಶೇಷಗಳನ್ನು ಸಂಗ್ರಹಿಸಲು ನಾಲ್ಕು ಫುಟ್‌ಬಾಲ್‌ ಮೈದಾನಗಳನ್ನು ಬಳಸಿಕೊಳ್ಳಲಾಗಿದೆ. ಅವಶೇಷಗಳಡಿ ಕೆಲಸ ನಿರ್ವಹಿಸುವುದು ಅತ್ಯಂತ ಅಪಾಯಕಾರಿಯಾದ ಕೆಲಸವಾಗಿದ್ದು,ಭೂಕುಸಿತವು ಇನ್ನೂ ಮುಂದುವರೆಯುತ್ತಿದೆ ಎಂದು ಅಕ್ಟೋಪ್ರಾಕ್‌ ಹೇಳಿದ್ದಾರೆ.

ಭೂಕುಸಿತಗೊಂಡಿರುವ ಪ್ರದೇಶಗಳಿಗೆ ಆಹಾರ, ನೀರು ಹಾಗೂ ಇತರ ಅಗತ್ಯ ಸೌಕರ್ಯಗಳನ್ನು 60 ಕಿಮೀ ದೂರವಿರುವ ಪಪುವಾ ನ್ಯೂಗಿನಿಯಾ ರಾಜಧಾನಿ ವಬಾಗ್‌ನಿಂದ ಸೇನೆಯ ಭದ್ರತೆಯೊಂದಿಗೆ ರವಾನಿಸಲಾಗುತ್ತಿದೆ.

ಇದನ್ನೂ ಓದಿ : ‘ಮುಕ್ತ ಅಭಿವ್ಯಕ್ತಿ’ಯ ಮಹತ್ವ ಸಾರಿದ ಪಾಯಲ್ ಕಪಾಡಿಯ ಕೇನ್ಸ್ ಗೆಲುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ದೇವಸ್ಥಾನದ ಉತ್ಸವದಲ್ಲಿ ಗುಂಪು ಹಲ್ಲೆ : 18 ವರ್ಷದ ಯುವಕ ಸಾವು

ಕೇರಳದ ಕೊಲ್ಲಂ ಜಿಲ್ಲೆಯ ದೇವಸ್ಥಾನವೊಂದರ ಉತ್ಸವದಲ್ಲಿ ಕ್ಷುಲ್ಲಕ ಕಾರಣಕ್ಕೆ 18 ವರ್ಷದ ಯುವಕನ ಮೇಲೆ ಗುಂಪು ಹಲ್ಲೆ ನಡೆಸಲಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಯುವಕ ಸಾವಿಗೀಡಾಗಿದ್ದಾರೆ. ಈ ಘಟನೆ ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದೆ. ಮೃತನ...

ಬಿಹಾರ : ಕಂಬಕ್ಕೆ ಕಟ್ಟಿ ಥಳಿಸಿ, ಮದ್ಯ ಮಿಶ್ರಿತ ಮೂತ್ರ ಕುಡಿಸಿದ ಗುಂಪು : ಗಂಭೀರವಾಗಿ ಗಾಯಗೊಂಡಿದ್ದ ಮುಸ್ಲಿಂ ಮಹಿಳೆ ಸಾವು

ರಂಝಾನ್ ಉಪವಾಸ ನಿರತ ಮುಸ್ಲಿಂ ಮಹಿಳೆಯೊಬ್ಬರನ್ನು ಕಂಬಕ್ಕೆ ಕಟ್ಟಿ ಭೀಕರವಾಗಿ ಥಳಿಸಿ, ಆಕೆ ನೀರು ಕೇಳಿದಾಗ ಮದ್ಯ ಮಿಶ್ರಿತ ಮೂತ್ರ ಕುಡಿಸಿದ ಅಮಾನವೀಯ, ಅನಾಗರಿಕ ಮತ್ತು ಆಘಾತಕಾರಿ ಘಟನೆ ಬಿಹಾರದ ಮಧುಬನಿ ಜಿಲ್ಲೆಯಲ್ಲಿ...

ಮಧ್ಯಪ್ರಾಚ್ಯ ಉದ್ವಿಗ್ನತೆ: ಅಂತರರಾಷ್ಟ್ರೀಯ ಕಾನೂನು ಸತ್ತಿದೆ ಎಂದ ರಷ್ಯಾ, ಯುಎನ್ಎಸ್‌ಸಿ ಪಿ-5 ಶೃಂಗಸಭೆಗೆ ಒತ್ತಾಯ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಳ್ಳುತ್ತಿರುವ ನಡುವೆ, ಇರಾನ್ ಮೇಲೆ ಅಮೆರಿಕ-ಇಸ್ರೇಲಿ ದಾಳಿಯ ನಂತರ ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ಅಂತರರಾಷ್ಟ್ರೀಯ ಕಾನೂನು ಪರಿಣಾಮಕಾರಿಯಾಗಿ ಸತ್ತಿದೆ ಎಂದು ರಷ್ಯಾ ಹೇಳಿದೆ ಮತ್ತು ಯುಎನ್ ಭದ್ರತಾ...

ಕೊಚ್ಚಿ ಬಂದರಿನಲ್ಲಿ ಇರಾನ್ ಯುದ್ಧನೌಕೆಯ ವಿಡಿಯೋ ಸೆರೆಹಿಡಿಯಲು ಯತ್ನ : ಇಬ್ಬರು ‘ರಿಪಬ್ಲಿಕ್ ಟಿವಿ’ ಪತ್ರಕರ್ತರ ಬಂಧನ-ವರದಿ

ಕೇರಳದ ಕೊಚ್ಚಿ ಬಂದರಿನಲ್ಲಿ ಲಂಗರು ಹಾಕಿರುವ ಇರಾನಿನ ಯುದ್ಧ ನೌಕೆಯ ವಿಡಿಯೋ ಸೆರೆಹಿಡಿಯಲು ಯತ್ನಿಸಿದ ಇಬ್ಬರು ರಿಪಬ್ಲಿಕ್ ಟಿವಿ ಪತ್ರಕರ್ತರು ಸೇರಿದಂತೆ ಮೂವರನ್ನು ಶನಿವಾರ (ಮಾ.7) ಬಂಧಿಸಲಾಗಿದೆ ಎಂದು thenewsminute.com ವರದಿ ಮಾಡಿದೆ. ಅಂತಾರಾಷ್ಟ್ರೀಯ...

ಬಿಹಾರ | ಅಧಿಕೃತವಾಗಿ ಜೆಡಿಯು ಸೇರಿದ ನಿತೀಶ್ ಕುಮಾರ್ ಮಗ ನಿಶಾಂತ್ ಕುಮಾರ್

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮಗ ನಿಶಾಂತ್ ಕುಮಾರ್ ಅವರು ಭಾನುವಾರ (ಮಾ.8) ಔಪಚಾರಿಕವಾಗಿ ಜೆಡಿಯು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಅಧಿಕೃತವಾಗಿ ರಾಜಕೀಯಕ್ಕೆ ಪಾದಾರ್ಪಾಣೆ ಮಾಡಿದ್ದಾರೆ. ಸಿಎಂ ನಿತೀಶ್ ಕುಮಾರ್...

ಮಹಾರಾಷ್ಟ್ರದಲ್ಲಿ ನೀರಿನಿಂದ ಹರಡುವ ರೋಗಗಳ ಹೆಚ್ಚಳ; 2025 ರ ವರದಿಯಲ್ಲಿ 3.6 ಲಕ್ಷ ದಾಟಿದ ಅತಿಸಾರ ಪ್ರಕರಣಗಳು

ಮುಂಬೈ: ಮಹಾರಾಷ್ಟ್ರದಲ್ಲಿ ನೀರಿನಿಂದ ಹರಡುವ ರೋಗಗಳ ಸಂಖ್ಯೆ ಹೆಚ್ಚುತ್ತಿರುವುದು ಆರೋಗ್ಯ ಅಧಿಕಾರಿಗಳಲ್ಲಿ ಕಳವಳವನ್ನು ಮೂಡಿಸಿದೆ.  ಅಧಿಕೃತ ಅಂಕಿಅಂಶಗಳು ಪ್ರತಿ ವರ್ಷ ಸಾವಿರಾರು ಜನರು ಕಲುಷಿತ ನೀರು ಮತ್ತು ಕಳಪೆ ನೈರ್ಮಲ್ಯಕ್ಕೆ ಸಂಬಂಧಿಸಿದ ಕಾಯಿಲೆಗಳಿಂದ...

ರಾಷ್ಟ್ರಪತಿ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆರೋಪ : ಬಂಗಾಳ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದ ಕೇಂದ್ರ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಪಶ್ಚಿಮ ಬಂಗಾಳ ಭೇಟಿಗೆ ಸಂಬಂಧಿಸಿದಂತೆ ರಾಜ್ಯದ ಟಿಎಂಸಿ ಸರ್ಕಾರ ಮತ್ತು ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ನಡುವೆ ರಾಜಕೀಯ ಕಿತ್ತಾಟ ತೀವ್ರಗೊಂಡಂತೆ ಗೋಚರಿಸುತ್ತಿದೆ. ರಾಷ್ಟ್ರಪತಿ ಭೇಟಿಯ ವೇಳೆ...

ಮಧ್ಯಪ್ರಾಚ್ಯ ಉದ್ವಿಗ್ನತೆ: ಒಂದು ವಾರದಲ್ಲಿ ಗಲ್ಫ್ ದೇಶಗಳಿಂದ 52,000 ಕ್ಕೂ ಹೆಚ್ಚು ಭಾರತೀಯರು ಮರಳಿದ್ದಾರೆ: ವಿದೇಶಾಂಗ ಸಚಿವಾಲಯ

ಪಶ್ಚಿಮ ಏಷ್ಯಾದಲ್ಲಿನ ಪರಿಸ್ಥಿತಿಯನ್ನು ಸರ್ಕಾರ ಮೇಲ್ವಿಚಾರಣೆ ಮಾಡುತ್ತಿರುವುದರಿಂದ ಮಾರ್ಚ್ 1 ರಿಂದ 7 ರವರೆಗೆ ಗಲ್ಫ್ ಪ್ರದೇಶದಿಂದ 52,000 ಕ್ಕೂ ಹೆಚ್ಚು ಭಾರತೀಯರು ಸುರಕ್ಷಿತವಾಗಿ ಭಾರತಕ್ಕೆ ಮರಳಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

‘ನೀವು ಅಮೆರಿಕನ್ನರನ್ನು ಕೊಂದರೆ ನಾವು, ನಿಮ್ಮನ್ನು ಬೇಟೆಯಾಡುತ್ತೇವೆ’: ಅಮೆರಿಕ ಬೆದರಿಕೆ 

ವಾಷಿಂಗ್ಟನ್: "ನೀವು ಅಮೆರಿಕನ್ನರನ್ನು ಕೊಂದರೆ, ನಾವು ನಿಮ್ಮನ್ನು ಬೇಟೆಯಾಡುತ್ತೇವೆ" ಎಂದು ಯುದ್ಧ ಕಾರ್ಯದರ್ಶಿ ಪೀಟ್ ಹೆಗ್ಸೆತ್ ರೀಡ್ ಸಾಮಾಜಿಕ ಮಾಧ್ಯಮದಲ್ಲಿ ಬೆದರಿಕೆ ಪೋಸ್ಟ್ ಹಾಕಿದ್ದಾರೆ.  ಅಮೆರಿಕ ನಾಗರಿಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಯಾವುದೇ ದೇಶ...