Homeಮುಖಪುಟಪಪುವಾ ನ್ಯೂಗಿನಿಯಾ ಭೂಕುಸಿತ: 670ಕ್ಕೂ ಹೆಚ್ಚು ಜನರು ಸಾವು

ಪಪುವಾ ನ್ಯೂಗಿನಿಯಾ ಭೂಕುಸಿತ: 670ಕ್ಕೂ ಹೆಚ್ಚು ಜನರು ಸಾವು

- Advertisement -
- Advertisement -

ಪಪುವಾ ನ್ಯೂಗಿನಿಯಾದಲ್ಲಿ ಸಂಭವಿಸಿದ ಭಾರೀ ಭೂಕುಸಿತದಿಂದ ಸಾವನ್ನಪ್ಪಿದವರ ಸಂಖ್ಯೆ 670ಕ್ಕೂ ಹೆಚ್ಚು ಎಂದು ವಿಶ್ವಸಂಸ್ಥೆಯ ವಲಸಿಗ ಸಂಸ್ಥೆ ಭಾನುವಾರ ಅಂದಾಜಿಸಿದೆ.

ವಿಶ್ವಸಂಸ್ಥೆಯ ವಲಸಿಗ ಸಂಸ್ಥೆ ಯೋಜನೆಯ ಮುಖ್ಯಸ್ಥ ಸೆರಾನ್‌ ಅಕ್ಟೋಪ್ರಾಕ್‌, ಯಂಬಾಲಿ ಮತ್ತು ಎಂಗಾ ಪ್ರಾಂತ್ಯದ ಅಂಕಿ ಅಂಶಗಳ ಆಧಾರದ ಮೇಲೆ ಭೂಕುಸಿತದಿಂದ 150ಕ್ಕೂ ಹೆಚ್ಚು ಮನೆಗಳು ನೆಲಸಮಗೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಈ ಮೊದಲು 60 ಮನೆಗಳು ಮಾತ್ರ ನೆಲಸಮಗೊಂಡಿವೆ ಎಂದು ಅಂದಾಜಿಸಲಾಗಿತ್ತು. ಆದರೆ ಈಗ 670ಕ್ಕೂ ಹೆಚ್ಚು ಮಂದಿ ಮಣ್ಣಿನೊಳಗೆ ಹೂತು ಹೋಗಿದ್ದಾರೆ ಎಂದು ಅಂದಾಜಿಸಲಾಗಿದೆ ಎಂದು ತಿಳಿಸಿದ್ದಾರೆ.

ಸ್ಥಳೀಯ ಅಧಿಕಾರಿಗಳು ಸಾವಿನ ಸಂಖ್ಯೆ 100 ದಾಟಿರಬಹುದು ಎಂದು ಈ ಮೊದಲು ಅಂದಾಜಿಸಿದ್ದರು. ಭಾನುವಾರದವರೆಗೂ 6 ಮೃತದೇಹಗಳನ್ನು ಮಾತ್ರ ಹೊರತೆಗೆಯಲಾಗಿದೆ.

ಪಪುವಾ ನ್ಯೂಗಿನಿಯಾದ ತುರ್ತು ನಿರ್ವಹಣಾ ಘಟಕದ ಅಧಿಕಾರಿಗಳು ಬದುಕುಳಿದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದ್ದಾರೆ. ಅಲ್ಲಿನ ಸರ್ಕಾರ ಹೆಚ್ಚಿನ ಅಂತಾರಾಷ್ಟ್ರೀಯ ನೆರವಿಗಾಗಿ ಅಧಿಕೃತ ಮನವಿ ಅಗತ್ಯವಿದೆಯೇ? ಎಂಬುವುದನ್ನು ಪರಿಶೀಲಿಸುತ್ತಿದೆ.

ಭೂಕುಸಿತ ಉಂಟಾಗಿರುವ ಪ್ರದೇಶಗಳ ಅವಶೇಷಗಳಡಿ ಇನ್ನೂ ಹಲವರು ಬದುಕುಳಿದಿರುವ ಸಂಭವವಿದ್ದು, ಕುಟುಂಬದ ಸದಸ್ಯರು ತಮ್ಮವರ ರಕ್ಷಣೆಗಾಗಿ ಅಳಲು ತೋಡಿಕೊಂಡಿದ್ದಾರೆ ಎಂದು ಸೆರಾನ್‌ ಅಕ್ಟೋಪ್ರಾಕ್‌ ತಿಳಿಸಿದ್ದಾರೆ.

ಪರಿಹಾರ ಕೇಂದ್ರಗಳು ಹಾಗೂ ಅವಶೇಷಗಳನ್ನು ಸಂಗ್ರಹಿಸಲು ನಾಲ್ಕು ಫುಟ್‌ಬಾಲ್‌ ಮೈದಾನಗಳನ್ನು ಬಳಸಿಕೊಳ್ಳಲಾಗಿದೆ. ಅವಶೇಷಗಳಡಿ ಕೆಲಸ ನಿರ್ವಹಿಸುವುದು ಅತ್ಯಂತ ಅಪಾಯಕಾರಿಯಾದ ಕೆಲಸವಾಗಿದ್ದು,ಭೂಕುಸಿತವು ಇನ್ನೂ ಮುಂದುವರೆಯುತ್ತಿದೆ ಎಂದು ಅಕ್ಟೋಪ್ರಾಕ್‌ ಹೇಳಿದ್ದಾರೆ.

ಭೂಕುಸಿತಗೊಂಡಿರುವ ಪ್ರದೇಶಗಳಿಗೆ ಆಹಾರ, ನೀರು ಹಾಗೂ ಇತರ ಅಗತ್ಯ ಸೌಕರ್ಯಗಳನ್ನು 60 ಕಿಮೀ ದೂರವಿರುವ ಪಪುವಾ ನ್ಯೂಗಿನಿಯಾ ರಾಜಧಾನಿ ವಬಾಗ್‌ನಿಂದ ಸೇನೆಯ ಭದ್ರತೆಯೊಂದಿಗೆ ರವಾನಿಸಲಾಗುತ್ತಿದೆ.

ಇದನ್ನೂ ಓದಿ : ‘ಮುಕ್ತ ಅಭಿವ್ಯಕ್ತಿ’ಯ ಮಹತ್ವ ಸಾರಿದ ಪಾಯಲ್ ಕಪಾಡಿಯ ಕೇನ್ಸ್ ಗೆಲುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶದಲ್ಲಿ ಮುಸ್ಲಿಮರ ಮೇಲಿನ ದೌರ್ಜನ್ಯ: ಯೋಗಿ ಆದಿತ್ಯನಾಥ್ ಸೇರಿ 8 ಅಧಿಕಾರಿಗಳ ನಿರ್ಬಂಧಕ್ಕೆ ಕೆನಡಾ ಮಾನವ ಹಕ್ಕುಗಳ ಸಂಸ್ಥೆ ಆಗ್ರಹ

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ನಿರಂತರವಾಗಿ ನಡೆಸಲಾಗುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ರಾಜ್ಯ ಬೆಂಬಲಿತ ದೌರ್ಜನ್ಯಗಳನ್ನು ಖಂಡಿಸಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಎಂಟು ಪ್ರಮುಖ...

SIR: ಬೆಂಗಳೂರಿನ ಸರ್ವಜ್ಞನಗರದ ಒಂದೇ ಬೂತ್‌ನಲ್ಲಿ ಶೇ.93.71ರಷ್ಟು ಮತದಾರರ ಹೆಸರು ನಾಪತ್ತೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಹೆಸರಿನಲ್ಲಿ ರಾಜಧಾನಿ ಬೆಂಗಳೂರಿನ ಸರ್ವಜ್ಞನಗರ ಕ್ಷೇತ್ರದ ಒಂದೇ ಮತಗಟ್ಟೆಯಲ್ಲಿ ಬರೋಬ್ಬರಿ ಶೇ. 93.71ರಷ್ಟು ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ತೆಗೆಯಲಾಗಿದೆ ಎಂಬ ಆಘಾತಕಾರಿ ಸಂಗತಿಯೊಂದು...

ASDDO ಪಟ್ಟಿ ಸಾರ್ವಜನಿಕ ಪ್ರಕಟಣೆ ಬಗ್ಗೆ ಚುನಾವಣಾ ಆಯೋಗ ನಿರ್ಲಕ್ಷ್ಯ! ಆರೋಪ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬರೋಬ್ಬರಿ 1.08 ಕೋಟಿ ಮತದಾರರ ಹೆಸರನ್ನು ಎಎಸ್‌ಡಿಡಿಒ (ASDDO) ಪಟ್ಟಿಗೆ ಸೇರಿಸಿ ಆತಂಕ ಸೃಷ್ಟಿಸಿದ್ದ ಚುನಾವಣಾ ಆಯೋಗ, ಈಗ ಆ ಪಟ್ಟಿಯ ಸಾರ್ವಜನಿಕ ಪ್ರಕಟಣೆಯ...

SIR: 62 ವರ್ಷದ ಜೀವಂತ ವ್ಯಕ್ತಿಯನ್ನು ‘ಮೃತ’ ಎಂದು ಪಟ್ಟಿ ಮಾಡಿದ ಆಯೋಗದ ಕುತಂತ್ರ ಬಯಲು

ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ ಆಶಯಕ್ಕೇ ಮಾರಕವಾಗಿ ಪರಿಣಮಿಸುತ್ತಿದೆ. ದೋಷಮುಕ್ತ ಪಟ್ಟಿ ಸಿದ್ಧಪಡಿಸುವ ನೆಪದಲ್ಲಿ ಚುನಾವಣಾ ಆಯೋಗವು ಬರೋಬ್ಬರಿ 1.08 ಕೋಟಿ ಮತದಾರರನ್ನು...

‘ಸಿದ್ದಾರ್ಥ ವಿಹಾರ ಟ್ರಸ್ಟ್’ ನ ದಾಖಲೆ ನೀಡುತ್ತೇನೆ: ಆರ್‌ಎಸ್‌ಎಸ್, ರಾಮಮಂದಿರದ ಲೆಕ್ಕ ನೀಡಲು ಸಿದ್ಧವಿದ್ದೀರಾ?: ಬಿಜೆಪಿ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಸವಾಲು

ಬೆಂಗಳೂರು: ‘ಸಿದ್ದಾರ್ಥ ವಿಹಾರ ಟ್ರಸ್ಟ್‌’ ವಿರುದ್ಧ ಭೂ ಅಕ್ರಮದ ಆರೋಪ ಮಾಡಿ ತಮ್ಮ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇರ...

ಕ್ಯೂಬಾ ಎಂದರೆ ಫಿಡೆಲ್, ಅಮೆರಿಕದ ಕುತಂತ್ರದ ವಿರುದ್ಧ ಪುಟ್ಟ ರಾಷ್ಟ್ರ ಕ್ಯೂಬಾದ ಸುದೀರ್ಘ ಕ್ರಾಂತಿ

ಆಗಸ್ಟ್ 13, 2026 ರಂದು ಕ್ಯೂಬಾ ತನ್ನ ಕ್ರಾಂತಿಕಾರಿ ನಾಯಕ, ಕಮಾಂಡರ್-ಇನ್-ಚೀಫ್ ಫಿಡೆಲ್ ಕ್ಯಾಸ್ಟ್ರೋ ರೂಜ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದೆ. ಐದು ದಶಕಗಳ ಕಾಲ ದೇಶವನ್ನು ಮುನ್ನಡೆಸಿದ ನಾಯಕನ ಶಾಶ್ವತ ಸಿದ್ಧಾಂತಗಳು...

‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ: ಚಾಲ್ತಿಯಲ್ಲಿರುವ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸರ್ಕಾರಕ್ಕೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಒತ್ತಾಯ

ಬೆಂಗಳೂರು: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಜಾತಿ ತಾರತಮ್ಯ, ಕಿರುಕುಳ ಹಾಗೂ ವಂಚನೆಯನ್ನು ತಡೆಗಟ್ಟಲು ಅತ್ಯಂತ ನಿರ್ಣಾಯಕವಾಗಿರುವ 'ಕರ್ನಾಟಕ ರೋಹಿತ್ ವೇಮುಲಾ...

SIR: ತೆಲಂಗಾಣ ಸರ್ಕಾರ ಮತದಾರರಿಗೆ ನೀಡಿದ್ದ FRC ಯನ್ನು , ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೆಲಂಗಾಣ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದ್ದ ‘ಫ್ಯಾಮಿಲಿ ರಿಜಿಸ್ಟರ್ ಸರ್ಟಿಫಿಕೇಟ್’ (FRC) ಅನ್ನು ಮತದಾರರ ದಾಖಲೆಯನ್ನಾಗಿ ಸ್ವೀಕರಿಸಲು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. FRC...

ಬಿಹಾರ| ಗ್ರಾಮ ತೊರೆಯಿರಿ ಅಥವಾ ‘ಘರ್ ವಾಪ್ಸಿ’ಯಾಗಿ; ಹಿಂದುತ್ವ ಗುಂಪಿನಿಂದ ಕ್ರೈಸ್ತ ಕಟುಂಬಗಳಿಗೆ ಬೆದರಿಕೆ

ಬಿಹಾರದ ಭಾಗಲ್ಪುರ ಜಿಲ್ಲೆಯ ಗೋಪಾಲಪುರ ಗ್ರಾಮದ 42 ಕ್ರಿಶ್ಚಿಯನ್ ಕುಟುಂಬಗಳಿಗೆ ಹಿಂದುತ್ವ ಗುಂಪಿನ ಸದಸ್ಯರು ಬೆದರಿಕೆ ಹಾಕಿದ್ದಾರೆ ಎಂದು 'ಕ್ಲಾರಿಯನ್ ಇಂಡಿಯಾ' ನ್ಯೂಸ್‌ ಪೋರ್ಟ್ಲ್ ವರದಿ ಮಾಡಿದೆ. 'ಘರ್ ವಾಪ್ಸಿ'ಯಾಗಿ ಅಥವಾ ಗ್ರಾಮ...

ಭೂಮಾನಂದ ಹತ್ಯೆ: ಕೊಲೆಗಾರರ ಪರ ನಿಂತ ‘ವಾಲ್ಮೀಕಿ ನಾಯಕ ಸಂಘ’ದ ವಿರುದ್ಧ ಆಕ್ರೋಶ: ಆಗಸ್ಟ್ 15ಕ್ಕೆ ಕಪ್ಪುಪಟ್ಟಿ ಪ್ರದರ್ಶನ, ಬೈಕ್ ರ್ಯಾಲಿಗೆ ಕರೆ

ರಾಯಚೂರು: ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಬಹುಜನ ಮುಖಂಡ ಭೂಮಾನಂದ ಅವರ ಬರ್ಬರ ಕಗ್ಗೋಲೆಯನ್ನು ಖಂಡಿಸಿ, ಕೊಲೆಗಡುಕರ ಪರವಾಗಿ ನಿಂತಿರುವ ಸಂಘಟನೆಗಳು ಹಾಗೂ ಮೌನ ವಹಿಸಿರುವ ಜನಪ್ರತಿನಿಧಿಗಳ ವಿರುದ್ಧ 'ಬಹುಜನ ಮುಖಂಡ ಭೂಮಾನಂದನ...