Homeಮುಖಪುಟಪಪುವಾ ನ್ಯೂಗಿನಿಯಾ ಭೂಕುಸಿತ: 670ಕ್ಕೂ ಹೆಚ್ಚು ಜನರು ಸಾವು

ಪಪುವಾ ನ್ಯೂಗಿನಿಯಾ ಭೂಕುಸಿತ: 670ಕ್ಕೂ ಹೆಚ್ಚು ಜನರು ಸಾವು

- Advertisement -
- Advertisement -

ಪಪುವಾ ನ್ಯೂಗಿನಿಯಾದಲ್ಲಿ ಸಂಭವಿಸಿದ ಭಾರೀ ಭೂಕುಸಿತದಿಂದ ಸಾವನ್ನಪ್ಪಿದವರ ಸಂಖ್ಯೆ 670ಕ್ಕೂ ಹೆಚ್ಚು ಎಂದು ವಿಶ್ವಸಂಸ್ಥೆಯ ವಲಸಿಗ ಸಂಸ್ಥೆ ಭಾನುವಾರ ಅಂದಾಜಿಸಿದೆ.

ವಿಶ್ವಸಂಸ್ಥೆಯ ವಲಸಿಗ ಸಂಸ್ಥೆ ಯೋಜನೆಯ ಮುಖ್ಯಸ್ಥ ಸೆರಾನ್‌ ಅಕ್ಟೋಪ್ರಾಕ್‌, ಯಂಬಾಲಿ ಮತ್ತು ಎಂಗಾ ಪ್ರಾಂತ್ಯದ ಅಂಕಿ ಅಂಶಗಳ ಆಧಾರದ ಮೇಲೆ ಭೂಕುಸಿತದಿಂದ 150ಕ್ಕೂ ಹೆಚ್ಚು ಮನೆಗಳು ನೆಲಸಮಗೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಈ ಮೊದಲು 60 ಮನೆಗಳು ಮಾತ್ರ ನೆಲಸಮಗೊಂಡಿವೆ ಎಂದು ಅಂದಾಜಿಸಲಾಗಿತ್ತು. ಆದರೆ ಈಗ 670ಕ್ಕೂ ಹೆಚ್ಚು ಮಂದಿ ಮಣ್ಣಿನೊಳಗೆ ಹೂತು ಹೋಗಿದ್ದಾರೆ ಎಂದು ಅಂದಾಜಿಸಲಾಗಿದೆ ಎಂದು ತಿಳಿಸಿದ್ದಾರೆ.

ಸ್ಥಳೀಯ ಅಧಿಕಾರಿಗಳು ಸಾವಿನ ಸಂಖ್ಯೆ 100 ದಾಟಿರಬಹುದು ಎಂದು ಈ ಮೊದಲು ಅಂದಾಜಿಸಿದ್ದರು. ಭಾನುವಾರದವರೆಗೂ 6 ಮೃತದೇಹಗಳನ್ನು ಮಾತ್ರ ಹೊರತೆಗೆಯಲಾಗಿದೆ.

ಪಪುವಾ ನ್ಯೂಗಿನಿಯಾದ ತುರ್ತು ನಿರ್ವಹಣಾ ಘಟಕದ ಅಧಿಕಾರಿಗಳು ಬದುಕುಳಿದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದ್ದಾರೆ. ಅಲ್ಲಿನ ಸರ್ಕಾರ ಹೆಚ್ಚಿನ ಅಂತಾರಾಷ್ಟ್ರೀಯ ನೆರವಿಗಾಗಿ ಅಧಿಕೃತ ಮನವಿ ಅಗತ್ಯವಿದೆಯೇ? ಎಂಬುವುದನ್ನು ಪರಿಶೀಲಿಸುತ್ತಿದೆ.

ಭೂಕುಸಿತ ಉಂಟಾಗಿರುವ ಪ್ರದೇಶಗಳ ಅವಶೇಷಗಳಡಿ ಇನ್ನೂ ಹಲವರು ಬದುಕುಳಿದಿರುವ ಸಂಭವವಿದ್ದು, ಕುಟುಂಬದ ಸದಸ್ಯರು ತಮ್ಮವರ ರಕ್ಷಣೆಗಾಗಿ ಅಳಲು ತೋಡಿಕೊಂಡಿದ್ದಾರೆ ಎಂದು ಸೆರಾನ್‌ ಅಕ್ಟೋಪ್ರಾಕ್‌ ತಿಳಿಸಿದ್ದಾರೆ.

ಪರಿಹಾರ ಕೇಂದ್ರಗಳು ಹಾಗೂ ಅವಶೇಷಗಳನ್ನು ಸಂಗ್ರಹಿಸಲು ನಾಲ್ಕು ಫುಟ್‌ಬಾಲ್‌ ಮೈದಾನಗಳನ್ನು ಬಳಸಿಕೊಳ್ಳಲಾಗಿದೆ. ಅವಶೇಷಗಳಡಿ ಕೆಲಸ ನಿರ್ವಹಿಸುವುದು ಅತ್ಯಂತ ಅಪಾಯಕಾರಿಯಾದ ಕೆಲಸವಾಗಿದ್ದು,ಭೂಕುಸಿತವು ಇನ್ನೂ ಮುಂದುವರೆಯುತ್ತಿದೆ ಎಂದು ಅಕ್ಟೋಪ್ರಾಕ್‌ ಹೇಳಿದ್ದಾರೆ.

ಭೂಕುಸಿತಗೊಂಡಿರುವ ಪ್ರದೇಶಗಳಿಗೆ ಆಹಾರ, ನೀರು ಹಾಗೂ ಇತರ ಅಗತ್ಯ ಸೌಕರ್ಯಗಳನ್ನು 60 ಕಿಮೀ ದೂರವಿರುವ ಪಪುವಾ ನ್ಯೂಗಿನಿಯಾ ರಾಜಧಾನಿ ವಬಾಗ್‌ನಿಂದ ಸೇನೆಯ ಭದ್ರತೆಯೊಂದಿಗೆ ರವಾನಿಸಲಾಗುತ್ತಿದೆ.

ಇದನ್ನೂ ಓದಿ : ‘ಮುಕ್ತ ಅಭಿವ್ಯಕ್ತಿ’ಯ ಮಹತ್ವ ಸಾರಿದ ಪಾಯಲ್ ಕಪಾಡಿಯ ಕೇನ್ಸ್ ಗೆಲುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...