Homeಮುಖಪುಟಬಿಜೆಪಿಯ ನವ ಭಾರತದಲ್ಲಿ ಧರ್ಮವನ್ನು ಆಯುಧವನ್ನಾಗಿಸಲಾಗಿದೆ: ಪರಕಾಲ ಪ್ರಭಾಕರ್

ಬಿಜೆಪಿಯ ನವ ಭಾರತದಲ್ಲಿ ಧರ್ಮವನ್ನು ಆಯುಧವನ್ನಾಗಿಸಲಾಗಿದೆ: ಪರಕಾಲ ಪ್ರಭಾಕರ್

- Advertisement -
- Advertisement -

ಬಿಜೆಪಿ ಆಡಳಿತದ ನವ ಭಾರತದಲ್ಲಿ ರಾಜಕೀಯ ಉದ್ದೇಶಗಳಿಗಾಗಿ ಧರ್ಮವನ್ನು ಆಯುಧವನ್ನಾಗಿಸಲಾಗಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಪತಿ ಹಾಗೂ ರಾಜಕೀಯ ಅರ್ಥಶಾಸ್ತ್ರಜ್ಞ ಪರಕಾಲ ಪ್ರಭಾಕರ್ ಹೇಳಿದ್ದಾರೆ.

ಕೋಲ್ಕತ್ತಾದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಪರಕಾಲ ಪ್ರಭಾಕರ್, ಒಕ್ಕೂಟ ವ್ಯವಸ್ಥೆಯನ್ನು ನಾಶಪಡಿಸುವ ಪ್ರಯತ್ನಗಳು ನಡೆದಿವೆ. ದೇಶದಲ್ಲಿ  ಧರ್ಮವು ಯಾವಾಗಲೂ ಇತ್ತು. ಆದರೆ, ಬಿಜೆಪಿ ಆಡಳಿತದ ಈ ‘ನವ ಭಾರತ’ದಲ್ಲಿ ಹೊಸ ವಿಷಯವೆಂದರೆ ರಾಜಕೀಯ ಉದ್ದೇಶಗಳು ಮತ್ತು ಹಿತಾಸಕ್ತಿಗಳಿಗಾಗಿ ಧರ್ಮವನ್ನು ಆಯುಧವನ್ನಾಗಿಸಲಾಗಿದೆ ಎಂದು ಹೇಳಿದ್ದಾರೆ.

ದೇಶದ ಆರ್ಥಿಕ ಮತ್ತು ಸಾಮಾಜಿಕ ವ್ಯವಸ್ಥೆಯು ಅಪಾಯದಲ್ಲಿದೆ. ಕೇಂದ್ರ ಸರ್ಕಾರವು ಟೀಕೆಗಳನ್ನು ಸ್ವೀಕರಿಸುವುದಿಲ್ಲ. ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗದೆ ಇರುವವರು ತಮ್ಮನ್ನು ತಾವು ಸ್ವಾತಂತ್ರ್ಯ ಹೋರಾಟಗಾರರೆಂದು ಕರೆದುಕೊಳ್ಳುತ್ತಿದ್ದಾರೆ. ಇದು ನಾಚಿಗೇಡಿನ ಸಂಗತಿ. ನವಭಾರತದಲ್ಲಿ ಅಸಮಾನತೆ ತಾಂಡವವಾಡುತ್ತಿದೆ. ಆರ್ಥಿಕವಾಗಿ ಸಶಕ್ತರಾಗಿರುವ ಶೇಕಡ ಒಂದರಷ್ಟು ಜನರು ರಾಷ್ಟ್ರದ ಶೇ.40ರಷ್ಟು ಸಂ‍ಪನ್ಮೂಲವನ್ನು ಹೊಂದಿದ್ದಾರೆ ಎಂದು ಪರಕಾಲ ಪ್ರಭಾಕರ್ ಹೇಳಿದ್ದಾರೆ.

ಮೋದಿ ನೇತೃತ್ವದ ಪ್ರಸ್ತುತ ಬಿಜೆಪಿ ಸರಕಾರದ ಪ್ರಬಲ ಟೀಕಾಕಾರಾಗಿರುವ ಪರಕಾಲ ಪ್ರಭಾಕರ್ ಅವರು ಒರ್ವ ಭಾರತೀಯ ರಾಜಕೀಯ ಅರ್ಥಶಾಸ್ತ್ರಜ್ಞ ಮತ್ತು ಸಾಮಾಜಿಕ ವಿಮರ್ಶಕರಾಗಿದ್ದಾರೆ. ಇವರು ಲಂಡನ್‌ ಸ್ಕೂಲ್‌ ಆಪ್‌ ಎಕನಾಮಿಕ್‌ನಿಂದ ಪಿಹೆಚ್‌ಡಿ ಪಡೆದಿದ್ದರು. ಜುಲೈ 2014 ಮತ್ತು ಜೂನ್ 2018ರ ನಡುವೆ ಸಂವಹನ ಸಲಹೆಗಾರರಾಗಿ ಆಂಧ್ರ ಪ್ರದೇಶ ಸರ್ಕಾರದಲ್ಲಿ ಕ್ಯಾಬಿನೆಟ್ ದರ್ಜೆಯ ಸ್ಥಾನವನ್ನು ಹೊಂದಿದ್ದರು.

ನೋಟು ರದ್ದತಿಯನ್ನು ಒಂದು ದೊಡ್ಡ ಪ್ರಮಾದ ಎಂದು ಕರೆದಿದ್ದ ಪರಕಾಲ ಪ್ರಭಾಕರ್, ಅರ್ಥಶಾಸ್ತ್ರದಲ್ಲಿ ಮೂಲಭೂತ ತರಬೇತಿ ಹೊಂದಿರುವ ಯಾವುದೇ ಅರ್ಥಶಾಸ್ತ್ರಜ್ಞರು, ಇಷ್ಟು ದೊಡ್ಡ ಪ್ರಮಾಣದಲ್ಲಿ ನೋಟು ಅಮಾನೀಕರಣವನ್ನು ಶಿಫಾರಸು ಮಾಡುತ್ತಿರಲಿಲ್ಲ ಎಂದು ಹೇಳಿದ್ದರು. ಸ್ವಾತಂತ್ರ್ಯ ಹಾಗೂ ಸಂವಿಧಾನ ರೂಪಿಸಿದ ಆಶಯಗಳಿಗೆ ವಿರುದ್ಧವಾಗಿ ದೇಶ ಸಾಗುತ್ತಿದೆ. ಜನರು ಭ್ರಮೆಗಳನ್ನೇ ವಾಸ್ತವವೆಂದು ನಂಬಿಕೊಂಡು ಸಂಭ್ರಮಿಸುತ್ತಿದ್ದಾರೆ. ಕೇಂದ್ರದ ಯೋಜನೆಗಳ ಶೇ 80ರಷ್ಟು ಹಣವನ್ನು ಪ್ರಚಾರಕ್ಕೆ ಬಳಸಲಾಗುತ್ತಿದೆ. ಪ್ರಶ್ನಿಸಿದವರನ್ನು ಹತ್ತಿಕ್ಕುವ ಕೆಲಸ ನಡೆಯುತ್ತಿದೆ. ಭಿನ್ನಾಭಿಪ್ರಾಯಕ್ಕೆ ಅವಕಾಶ ನೀಡುತ್ತಿಲ್ಲ ಎಂದು ಅವರು ಹೇಳಿದ್ದರು.

ಇದನ್ನು ಓದಿ: ರೋಹಿತ್ ವೇಮುಲಾ ‘ಪರಿಶಿಷ್ಟ ಜಾತಿ’ಗೆ ಸೇರಿದವರಲ್ಲ: ಪ್ರಕರಣದ ಫೈಲ್ ಕ್ಲೋಸ್ ಮಾಡಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...