Homeಕ್ರೀಡೆಒಲಂಪಿಕ್ಚಿನ್ನ ಗೆದ್ದ ಶೂಟರ್ ಅವನಿ ಲೇಖರಾ: ಪ್ಯಾರಾಲಿಂಪಿಕ್ಸ್‌ನ ಮೊದಲ ಭಾರತೀಯ ಮಹಿಳೆಯೆಂಬ ಹೆಗ್ಗಳಿಕೆ

ಚಿನ್ನ ಗೆದ್ದ ಶೂಟರ್ ಅವನಿ ಲೇಖರಾ: ಪ್ಯಾರಾಲಿಂಪಿಕ್ಸ್‌ನ ಮೊದಲ ಭಾರತೀಯ ಮಹಿಳೆಯೆಂಬ ಹೆಗ್ಗಳಿಕೆ

- Advertisement -
- Advertisement -

ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ನಲ್ಲಿ ಮಹಿಳಾ 10 ಮೀಟರ್ ಏರ್ ರೈಫಲ್ ಸ್ಟ್ಯಾಂಡಿಂಗ್ (ಎಸ್‌ಎಚ್ 1) ಸ್ಪರ್ಧೆಯಲ್ಲಿ ಶೂಟರ್ ಅವನಿ ಲೇಖರಾ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ. ಆ ಮೂಲಕ ಪ್ಯಾರಾಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳೆ ಎನಿಸಿಕೊಂಡಿದ್ದಾರೆ.

ಅವನಿ ಲೇಖರಾ 249.6 ಅಂಕಗಳೊಂದಿಗೆ ಪ್ಯಾರಾಲಿಂಪಿಕ್ಸ್ ದಾಖಲೆ ಸೃಷ್ಟಿಸಿ ಚಿನ್ನದ ಪದಕ ತನ್ನದಾಗಿಸಿಕೊಂಡಿದ್ದಾರೆ. ಆ ಮೂಲಕ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದಾರೆ. ಸ್ಪರ್ಧೆಯಲ್ಲಿ ಚೀನಾದ ಕ್ಯುಪಿಂಗ್ ಜಾಂಗ್ 248.9 ಅಂಕಗಳೊಂದಿಗೆ ಬೆಳ್ಳಿ ಹಾಗೂ ಉಕ್ರೇನ್‌ನ ಇರಿನಾ ಶ್ಚೆಟ್ನಿಕ್ ಒಟ್ಟು 227.5 ಅಂಕಗಳೊಂದಿಗೆ ಕಂಚು ಪಡೆದರು.

ಯೋಗೀಶ್ ಕಠುನಿಯಾಗೆ ಬೆಳ್ಳಿ ಪದಕ

ಸೋಮವಾರ ಇಲ್ಲಿ ನಡೆದ ಪ್ಯಾರಾಲಿಂಪಿಕ್ಸ್‌ನಲ್ಲಿ ಪುರುಷರ ಎಫ್ 56 ಸ್ಪರ್ಧೆಯಲ್ಲಿ ಭಾರತದ ಡಿಸ್ಕಸ್ ಎಸೆತಗಾರ ಯೋಗೀಶ್ ಕಠುನಿಯಾ ಬೆಳ್ಳಿ ಪದಕ ಗೆದ್ದಿದ್ದಾರೆ. ಅವರು 44.38ಮೀಟರ್ ದೂರ ಎಸೆದು ಸಾಧನೆಗೈದಿದ್ದಾರೆ.

ದೇವೇಂದ್ರ ಜಜಾರಿಯಾಗೆ ಬೆಳ್ಳಿ ಪದಕ

ಎರಡು ಬಾರಿ ಚಿನ್ನ ಗೆದ್ದ ಜಾವೆಲಿನ್ ಥ್ರೋ ಅನುಭವಿ ಸ್ಪರ್ಧಿ ದೇವೇಂದ್ರ ಜಜಾರಿಯಾ ಈ ಬಾರಿ ಮೂರನೇ ಪ್ಯಾರಾಲಿಂಪಿಕ್ ಪದಕವನ್ನು ಗೆದ್ದರು. ಎಫ್ 46 ಫೈನಲ್ ಪಂದ್ಯದಲ್ಲಿ 64.35 ಮೀಟರ್ ದೂರ ಎಸೆದು ಬೆಳ್ಳಿ ಪದಕಕ್ಕೆ ಮುತ್ತಿಟ್ಟರು.

ಇದೇ ಸ್ಪರ್ಧೆಯಲ್ಲಿ ಸುಂದರ್ ಸಿಂಗ್ ಗುರ್ಜಾರ್ ಕೂಡ ಕಂಚಿನ ಪದಕ ಪಡೆದರು. ಅವರು 64.01 ಮೀಟರ್ ಎಸೆದು ಮೂರನೇ ಸ್ಥಾನ ಪಡೆದರು.

ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತದ ನಿಶಾದ್ ಕುಮಾರ್  ಪುರುಷರ ಎತ್ತರ ಜಿಗಿತ (ಟಿ 46/47) ವಿಭಾಗದಲ್ಲಿ ಭಾನುವಾರ ಬೆಳ್ಳಿ ಪದಕ ಗೆದ್ದಿದ್ದಾರೆ. ಭಾನುವಾರ ನಡೆದ ಟೇಬಲ್‌ ಟೆನ್ನಿಸ್‌ ಸ್ಪರ್ಧೆಯಲ್ಲಿ ಭಾರತದ ಭವಿನಾ ಪಟೇಲ್ ಬೆಳ್ಳಿ ಪದಕ ಗೆಲ್ಲುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ. ನಿನ್ನೆ ನಡೆದ ಡಿಸ್ಕಸ್ ಥ್ರೋ ಎಫ್52 ಫೈನಲ್ ಪಂದ್ಯದಲ್ಲಿ ಭಾರತದ ವಿನೋದ್ ಕುಮಾರ್ ಕಂಚಿನ ಪದಕ ಗೆದ್ದಿದ್ದಾರೆ. ಆದರೆ ಅದಕ್ಕೆ ಆಕ್ಷೇಪ ವ್ಯಕ್ತವಾದ ನಂತರ ಅದು ರಿವ್ಯೂನಲ್ಲಿದೆ. ಆ ಮೂಲಕ ಈ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಒಟ್ಟು ಏಳು ಪದಕಗಳು ಲಭಿಸಿದಂತಾಗಿವೆ.


ಇದನ್ನೂ ಓದಿ: ಪ್ಯಾರಾಲಿಂಪಿಕ್ಸ್: ಭಾರತಕ್ಕೆ ಮತ್ತೊಂದು ಬೆಳ್ಳಿ ತಂದುಕೊಟ್ಟ ಹೈಜಂಪರ್ ನಿಶಾದ್ ಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...