Homeಕ್ರೀಡೆಒಲಂಪಿಕ್ಚಿನ್ನ ಗೆದ್ದ ಶೂಟರ್ ಅವನಿ ಲೇಖರಾ: ಪ್ಯಾರಾಲಿಂಪಿಕ್ಸ್‌ನ ಮೊದಲ ಭಾರತೀಯ ಮಹಿಳೆಯೆಂಬ ಹೆಗ್ಗಳಿಕೆ

ಚಿನ್ನ ಗೆದ್ದ ಶೂಟರ್ ಅವನಿ ಲೇಖರಾ: ಪ್ಯಾರಾಲಿಂಪಿಕ್ಸ್‌ನ ಮೊದಲ ಭಾರತೀಯ ಮಹಿಳೆಯೆಂಬ ಹೆಗ್ಗಳಿಕೆ

- Advertisement -
- Advertisement -

ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ನಲ್ಲಿ ಮಹಿಳಾ 10 ಮೀಟರ್ ಏರ್ ರೈಫಲ್ ಸ್ಟ್ಯಾಂಡಿಂಗ್ (ಎಸ್‌ಎಚ್ 1) ಸ್ಪರ್ಧೆಯಲ್ಲಿ ಶೂಟರ್ ಅವನಿ ಲೇಖರಾ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ. ಆ ಮೂಲಕ ಪ್ಯಾರಾಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳೆ ಎನಿಸಿಕೊಂಡಿದ್ದಾರೆ.

ಅವನಿ ಲೇಖರಾ 249.6 ಅಂಕಗಳೊಂದಿಗೆ ಪ್ಯಾರಾಲಿಂಪಿಕ್ಸ್ ದಾಖಲೆ ಸೃಷ್ಟಿಸಿ ಚಿನ್ನದ ಪದಕ ತನ್ನದಾಗಿಸಿಕೊಂಡಿದ್ದಾರೆ. ಆ ಮೂಲಕ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದಾರೆ. ಸ್ಪರ್ಧೆಯಲ್ಲಿ ಚೀನಾದ ಕ್ಯುಪಿಂಗ್ ಜಾಂಗ್ 248.9 ಅಂಕಗಳೊಂದಿಗೆ ಬೆಳ್ಳಿ ಹಾಗೂ ಉಕ್ರೇನ್‌ನ ಇರಿನಾ ಶ್ಚೆಟ್ನಿಕ್ ಒಟ್ಟು 227.5 ಅಂಕಗಳೊಂದಿಗೆ ಕಂಚು ಪಡೆದರು.

ಯೋಗೀಶ್ ಕಠುನಿಯಾಗೆ ಬೆಳ್ಳಿ ಪದಕ

ಸೋಮವಾರ ಇಲ್ಲಿ ನಡೆದ ಪ್ಯಾರಾಲಿಂಪಿಕ್ಸ್‌ನಲ್ಲಿ ಪುರುಷರ ಎಫ್ 56 ಸ್ಪರ್ಧೆಯಲ್ಲಿ ಭಾರತದ ಡಿಸ್ಕಸ್ ಎಸೆತಗಾರ ಯೋಗೀಶ್ ಕಠುನಿಯಾ ಬೆಳ್ಳಿ ಪದಕ ಗೆದ್ದಿದ್ದಾರೆ. ಅವರು 44.38ಮೀಟರ್ ದೂರ ಎಸೆದು ಸಾಧನೆಗೈದಿದ್ದಾರೆ.

ದೇವೇಂದ್ರ ಜಜಾರಿಯಾಗೆ ಬೆಳ್ಳಿ ಪದಕ

ಎರಡು ಬಾರಿ ಚಿನ್ನ ಗೆದ್ದ ಜಾವೆಲಿನ್ ಥ್ರೋ ಅನುಭವಿ ಸ್ಪರ್ಧಿ ದೇವೇಂದ್ರ ಜಜಾರಿಯಾ ಈ ಬಾರಿ ಮೂರನೇ ಪ್ಯಾರಾಲಿಂಪಿಕ್ ಪದಕವನ್ನು ಗೆದ್ದರು. ಎಫ್ 46 ಫೈನಲ್ ಪಂದ್ಯದಲ್ಲಿ 64.35 ಮೀಟರ್ ದೂರ ಎಸೆದು ಬೆಳ್ಳಿ ಪದಕಕ್ಕೆ ಮುತ್ತಿಟ್ಟರು.

ಇದೇ ಸ್ಪರ್ಧೆಯಲ್ಲಿ ಸುಂದರ್ ಸಿಂಗ್ ಗುರ್ಜಾರ್ ಕೂಡ ಕಂಚಿನ ಪದಕ ಪಡೆದರು. ಅವರು 64.01 ಮೀಟರ್ ಎಸೆದು ಮೂರನೇ ಸ್ಥಾನ ಪಡೆದರು.

ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತದ ನಿಶಾದ್ ಕುಮಾರ್  ಪುರುಷರ ಎತ್ತರ ಜಿಗಿತ (ಟಿ 46/47) ವಿಭಾಗದಲ್ಲಿ ಭಾನುವಾರ ಬೆಳ್ಳಿ ಪದಕ ಗೆದ್ದಿದ್ದಾರೆ. ಭಾನುವಾರ ನಡೆದ ಟೇಬಲ್‌ ಟೆನ್ನಿಸ್‌ ಸ್ಪರ್ಧೆಯಲ್ಲಿ ಭಾರತದ ಭವಿನಾ ಪಟೇಲ್ ಬೆಳ್ಳಿ ಪದಕ ಗೆಲ್ಲುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ. ನಿನ್ನೆ ನಡೆದ ಡಿಸ್ಕಸ್ ಥ್ರೋ ಎಫ್52 ಫೈನಲ್ ಪಂದ್ಯದಲ್ಲಿ ಭಾರತದ ವಿನೋದ್ ಕುಮಾರ್ ಕಂಚಿನ ಪದಕ ಗೆದ್ದಿದ್ದಾರೆ. ಆದರೆ ಅದಕ್ಕೆ ಆಕ್ಷೇಪ ವ್ಯಕ್ತವಾದ ನಂತರ ಅದು ರಿವ್ಯೂನಲ್ಲಿದೆ. ಆ ಮೂಲಕ ಈ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಒಟ್ಟು ಏಳು ಪದಕಗಳು ಲಭಿಸಿದಂತಾಗಿವೆ.


ಇದನ್ನೂ ಓದಿ: ಪ್ಯಾರಾಲಿಂಪಿಕ್ಸ್: ಭಾರತಕ್ಕೆ ಮತ್ತೊಂದು ಬೆಳ್ಳಿ ತಂದುಕೊಟ್ಟ ಹೈಜಂಪರ್ ನಿಶಾದ್ ಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...