Homeಕ್ರೀಡೆಒಲಂಪಿಕ್ಚಿನ್ನ ಗೆದ್ದ ಶೂಟರ್ ಅವನಿ ಲೇಖರಾ: ಪ್ಯಾರಾಲಿಂಪಿಕ್ಸ್‌ನ ಮೊದಲ ಭಾರತೀಯ ಮಹಿಳೆಯೆಂಬ ಹೆಗ್ಗಳಿಕೆ

ಚಿನ್ನ ಗೆದ್ದ ಶೂಟರ್ ಅವನಿ ಲೇಖರಾ: ಪ್ಯಾರಾಲಿಂಪಿಕ್ಸ್‌ನ ಮೊದಲ ಭಾರತೀಯ ಮಹಿಳೆಯೆಂಬ ಹೆಗ್ಗಳಿಕೆ

- Advertisement -
- Advertisement -

ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ನಲ್ಲಿ ಮಹಿಳಾ 10 ಮೀಟರ್ ಏರ್ ರೈಫಲ್ ಸ್ಟ್ಯಾಂಡಿಂಗ್ (ಎಸ್‌ಎಚ್ 1) ಸ್ಪರ್ಧೆಯಲ್ಲಿ ಶೂಟರ್ ಅವನಿ ಲೇಖರಾ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ. ಆ ಮೂಲಕ ಪ್ಯಾರಾಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳೆ ಎನಿಸಿಕೊಂಡಿದ್ದಾರೆ.

ಅವನಿ ಲೇಖರಾ 249.6 ಅಂಕಗಳೊಂದಿಗೆ ಪ್ಯಾರಾಲಿಂಪಿಕ್ಸ್ ದಾಖಲೆ ಸೃಷ್ಟಿಸಿ ಚಿನ್ನದ ಪದಕ ತನ್ನದಾಗಿಸಿಕೊಂಡಿದ್ದಾರೆ. ಆ ಮೂಲಕ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದಾರೆ. ಸ್ಪರ್ಧೆಯಲ್ಲಿ ಚೀನಾದ ಕ್ಯುಪಿಂಗ್ ಜಾಂಗ್ 248.9 ಅಂಕಗಳೊಂದಿಗೆ ಬೆಳ್ಳಿ ಹಾಗೂ ಉಕ್ರೇನ್‌ನ ಇರಿನಾ ಶ್ಚೆಟ್ನಿಕ್ ಒಟ್ಟು 227.5 ಅಂಕಗಳೊಂದಿಗೆ ಕಂಚು ಪಡೆದರು.

ಯೋಗೀಶ್ ಕಠುನಿಯಾಗೆ ಬೆಳ್ಳಿ ಪದಕ

ಸೋಮವಾರ ಇಲ್ಲಿ ನಡೆದ ಪ್ಯಾರಾಲಿಂಪಿಕ್ಸ್‌ನಲ್ಲಿ ಪುರುಷರ ಎಫ್ 56 ಸ್ಪರ್ಧೆಯಲ್ಲಿ ಭಾರತದ ಡಿಸ್ಕಸ್ ಎಸೆತಗಾರ ಯೋಗೀಶ್ ಕಠುನಿಯಾ ಬೆಳ್ಳಿ ಪದಕ ಗೆದ್ದಿದ್ದಾರೆ. ಅವರು 44.38ಮೀಟರ್ ದೂರ ಎಸೆದು ಸಾಧನೆಗೈದಿದ್ದಾರೆ.

ದೇವೇಂದ್ರ ಜಜಾರಿಯಾಗೆ ಬೆಳ್ಳಿ ಪದಕ

ಎರಡು ಬಾರಿ ಚಿನ್ನ ಗೆದ್ದ ಜಾವೆಲಿನ್ ಥ್ರೋ ಅನುಭವಿ ಸ್ಪರ್ಧಿ ದೇವೇಂದ್ರ ಜಜಾರಿಯಾ ಈ ಬಾರಿ ಮೂರನೇ ಪ್ಯಾರಾಲಿಂಪಿಕ್ ಪದಕವನ್ನು ಗೆದ್ದರು. ಎಫ್ 46 ಫೈನಲ್ ಪಂದ್ಯದಲ್ಲಿ 64.35 ಮೀಟರ್ ದೂರ ಎಸೆದು ಬೆಳ್ಳಿ ಪದಕಕ್ಕೆ ಮುತ್ತಿಟ್ಟರು.

ಇದೇ ಸ್ಪರ್ಧೆಯಲ್ಲಿ ಸುಂದರ್ ಸಿಂಗ್ ಗುರ್ಜಾರ್ ಕೂಡ ಕಂಚಿನ ಪದಕ ಪಡೆದರು. ಅವರು 64.01 ಮೀಟರ್ ಎಸೆದು ಮೂರನೇ ಸ್ಥಾನ ಪಡೆದರು.

ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತದ ನಿಶಾದ್ ಕುಮಾರ್  ಪುರುಷರ ಎತ್ತರ ಜಿಗಿತ (ಟಿ 46/47) ವಿಭಾಗದಲ್ಲಿ ಭಾನುವಾರ ಬೆಳ್ಳಿ ಪದಕ ಗೆದ್ದಿದ್ದಾರೆ. ಭಾನುವಾರ ನಡೆದ ಟೇಬಲ್‌ ಟೆನ್ನಿಸ್‌ ಸ್ಪರ್ಧೆಯಲ್ಲಿ ಭಾರತದ ಭವಿನಾ ಪಟೇಲ್ ಬೆಳ್ಳಿ ಪದಕ ಗೆಲ್ಲುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ. ನಿನ್ನೆ ನಡೆದ ಡಿಸ್ಕಸ್ ಥ್ರೋ ಎಫ್52 ಫೈನಲ್ ಪಂದ್ಯದಲ್ಲಿ ಭಾರತದ ವಿನೋದ್ ಕುಮಾರ್ ಕಂಚಿನ ಪದಕ ಗೆದ್ದಿದ್ದಾರೆ. ಆದರೆ ಅದಕ್ಕೆ ಆಕ್ಷೇಪ ವ್ಯಕ್ತವಾದ ನಂತರ ಅದು ರಿವ್ಯೂನಲ್ಲಿದೆ. ಆ ಮೂಲಕ ಈ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಒಟ್ಟು ಏಳು ಪದಕಗಳು ಲಭಿಸಿದಂತಾಗಿವೆ.


ಇದನ್ನೂ ಓದಿ: ಪ್ಯಾರಾಲಿಂಪಿಕ್ಸ್: ಭಾರತಕ್ಕೆ ಮತ್ತೊಂದು ಬೆಳ್ಳಿ ತಂದುಕೊಟ್ಟ ಹೈಜಂಪರ್ ನಿಶಾದ್ ಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...