Homeಕ್ರೀಡೆಒಲಂಪಿಕ್ಪ್ಯಾರಾಲಿಂಪಿಕ್ಸ್‌: ಬ್ಯಾಡ್ಮಿಂಟನ್‌ನಲ್ಲಿ ಫೈನಲ್ ತಲುಪಿದ ಕನ್ನಡಿಗ ಸುಹಾಸ್!

ಪ್ಯಾರಾಲಿಂಪಿಕ್ಸ್‌: ಬ್ಯಾಡ್ಮಿಂಟನ್‌ನಲ್ಲಿ ಫೈನಲ್ ತಲುಪಿದ ಕನ್ನಡಿಗ ಸುಹಾಸ್!

- Advertisement -
- Advertisement -

ಪ್ರಸ್ತುತ ಉತ್ತರ ಪ್ರದೇಶದ ನೋಯ್ಡಾ ಜಿಲ್ಲಾ ಮ್ಯಾಜಿಸ್ಟ್ರೇಟ್ ಆಗಿರುವ, ಕನ್ನಡಿಗ ಸುಹಾಸ್‌ ಲಲಿನಕೆರೆ ಯತಿರಾಜ್‌ ಅವರು, ಶನಿವಾರ ನಡೆದ ಟೋಕಿಯೊ ಪ್ಯಾರಾಲಿಂಪಿಕ್ಸ್‌ನ ಪ್ಯಾರಾ ಬ್ಯಾಡ್ಮಿಂಟನ್ ಆಟದಲ್ಲಿ ಫೈನಲ್ ತಲುಪಿದ್ದಾರೆ. ಹಾಸನ ಮೂಲದ ಸುಹಾಸ್‌ ಅವರು ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ ದೇಶದ ಮೊದಲ ನಾಗರಿಕ ಸೇವೆಯಲ್ಲಿರುವ ಅಧಿಕಾರಿಯಾಗಿದ್ದಾರೆ. ಚಿನ್ನದ ಬೇಟೆಗಾಗಿ ಅವರು ಭಾನುವಾರ ನಡೆಯಲಿರುವ ಪಂದ್ಯವನ್ನು ಗೆಲ್ಲಬೇಕಾಗಿದೆ.

‘ಪುರುಷರ ಸಿಂಗಲ್ಸ್‌‌ ಎಸ್‌ಎಲ್4’ ಸೆಮಿಫೈನಲ್ ಅನ್ನು ಸುಹಾಸ್ ಅವರು ಇಂಡೋನೇಷ್ಯಾದ ಫ್ರೆಡಿ ಸೆಟಿಯಾವಾನ್ ಅವರ ವಿರುದ್ದ ಆಡಿದ್ದರು. ಅವರು 21-9, 21-15 ಅಂತರದಿಂದ ಪ್ರತಿಸ್ಪರ್ಧಿಯನ್ನು ಸೋಲಿಸಿ ನೇರ ಸೆಟ್ಗಳಲ್ಲಿ ಪಂದ್ಯವನ್ನು ಗೆದ್ದಿದ್ದಾರೆ.

ಇದರ ನಡುವೆ ಹಾಲಿ ವಿಶ್ವ ಚಾಂಪಿಯನ್ ಪ್ರಮೋದ್ ಭಗತ್ ಅವರು ಶನಿವಾರ ನಡೆದ ಟೋಕಿಯೊ ಪ್ಯಾರಾಲಿಂಪಿಕ್ಸ್‌ನ ನೇರ ಪಂದ್ಯಗಳಲ್ಲಿ ಜಪಾನ್‌ನ ಡೈಸುಕೆ ಫುಜಿಹರಾ ಅವರನ್ನು ಸೋಲಿಸಿ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ಫೈನಲ್‌ಗೆ ಪ್ರವೇಶಿಸಿದ್ದಾರೆ.

ಇದನ್ನೂ ಓದಿ: ಪ್ಯಾರಾಲಿಂಪಿಕ್ಸ್‌: ಪದಕ ಬೇಟೆ ಮುಂದುವರೆಸಿರುವ ಭಾರತ; ಬೆಳ್ಳಿ ಗೆದ್ದ ಮರಿಯಪ್ಪನ್‌!

ವಿಶ್ವದ ನಂಬರ್ 1 ಮತ್ತು ಪ್ರಸ್ತುತ ಏಷ್ಯನ್ ಚಾಂಪಿಯನ್ ಆಗಿರುವ 33 ವರ್ಷದ ಭಗತ್‌ 36 ನಿಮಿಷಗಳ ಕಾಲ ನಡೆದ ‘ಪುರುಷರ ಸಿಂಗಲ್ಸ್ ಎಸ್‌ಎಲ್ 3’ ಸೆಮಿಫೈನಲ್‌ನಲ್ಲಿ ಫುಜಿಹರಾ ವಿರುದ್ಧ 21-11, 21-16 ಅಂತರದಲ್ಲಿ ಜಯ ಸಾಧಿಸಿದ್ದಾರೆ.

ತನ್ನ 5 ನೇ ವಯಸ್ಸಿನಲ್ಲಿ ಪೋಲಿಯೋಗೆ ತುತ್ತಾಗಿ ಎಡಗಾಲಿನ ಸ್ವಾಧೀನ ಕಳೆದುಕೊಂಡಿದ್ದ ಭಗತ್, ನಾಲ್ಕು ವಿಶ್ವ ಚಾಂಪಿಯನ್‌ಶಿಪ್ ಚಿನ್ನ ಸೇರಿದಂತೆ ಒಟ್ಟು 45 ಅಂತರಾಷ್ಟ್ರೀಯ ಪದಕಗಳನ್ನು ಗೆದ್ದಿದ್ದಾರೆ.

ಈ ಮಧ್ಯೆ, ಶಟ್ಲರ್‌ ಮನೋಜ್ ಸರ್ಕಾರ್ ಶನಿವಾರ ನಡೆದ ‘ಪುರುಷರ ಸಿಂಗಲ್ಸ್ ಎಸ್‌ಎಲ್3’ ಸೆಮಿಫೈನಲ್ ಪಂದ್ಯದಲ್ಲಿ ನೇರ ಸೆಟ್ ಗಳಲ್ಲಿ ಸೋತಿದ್ದಾರೆ. ಅವರು ಕಂಚಿನ ಪದಕಕ್ಕಾಗಿ ಇಂದು ಮತ್ತೆ ಆಡಬೇಕಿದೆ.

ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತ ತಂಡ ಇದುವರೆಗೂ 3 ಚಿನ್ನ, 7 ಬೆಳ್ಳಿ ಮತ್ತು 5 ಕಂಚಿನ ಪದಕಗಳು ಸೇರಿ ಒಟ್ಟು 15 ಪದಕಗಳನ್ನು ಗೆದ್ದಿದೆ.

ಇದನ್ನೂ ಓದಿ: ಚಿನ್ನ ಗೆದ್ದ ಶೂಟರ್ ಅವನಿ ಲೇಖರಾ: ಪ್ಯಾರಾಲಿಂಪಿಕ್ಸ್‌ನ ಮೊದಲ ಭಾರತೀಯ ಮಹಿಳೆಯೆಂಬ ಹೆಗ್ಗಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...