Homeಕರ್ನಾಟಕಪರಮ್‍ಗೆ ಮೊದಲೇ ಸಿಕ್ಕಿತ್ತೇ ಐಟಿ ದಾಳಿಯ ಸುಳಿವು...

ಪರಮ್‍ಗೆ ಮೊದಲೇ ಸಿಕ್ಕಿತ್ತೇ ಐಟಿ ದಾಳಿಯ ಸುಳಿವು…

- Advertisement -
- Advertisement -

ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರಿಗೆ ತಮ್ಮ ಮೇಲಾಗುವ ಐಟಿ ರೈಡ್ ವಿಷಯ ಎರಡು ತಿಂಗಳಿಗೂ ಮೊದಲೇ ತಿಳಿದಿತ್ತು. ಅದಕ್ಕೆ ಅವರು ಹಿಂದೆ ಗೃಹ ಸಚಿವರಾಗಿದ್ದದ್ದೂ ಕಾರಣವಿರಬಹುದು. ಈ ವಿಷಯ ಗೊತ್ತಿದ್ದ ಕಾರಣ ಪರಮೇಶ್ವರ್ ತಮ್ಮ ಶಿಕ್ಷಣ ಸಂಸ್ಥೆಗಳ ಎಲ್ಲಾ ನೌಕರರು ಮತ್ತು ಸಿಬ್ಬಂದಿಗೆ ಚೆಕ್ ಮೂಲಕ ವೇತನ ಪಾವತಿಸಿದ್ದರು. ಒಂದು ವಾರ ಎಲ್ಲಿಗೂ ಹೋಗದೆ ಮನೆಯಲ್ಲೇ ಠಿಕಾಣಿ ಹೂಡಿ ತಮ್ಮೆಲ್ಲಾ ಸಂಸ್ಥೆಗಳ ನಿರ್ವಹಣೆಗೆ ಆಗುತ್ತಿರುವ ಖರ್ಚು-ವೆಚ್ಚಗಳ ಬಗ್ಗೆ ಪರಿಶೀಲನೆ ನಡೆಸಿದ್ದರು. ಸಂಸ್ಥೆಯ ಚಾರ್ಟರ್ಡ್ ಅಕೌಂಟೆಂಟ್‍ಗಳ ಸಮ್ಮುಖದಲ್ಲಿ ಪ್ರತಿಯೊಂದು ದಾಖಲೆಗಳನ್ನು ಸಂಗ್ರಹಿಸಿಟ್ಟುಕೊಂಡಿದ್ದರು.

ಐಟಿ ರೈಡ್ ಆಗುವ ದಿನ ಅಂದರೆ ಅಕ್ಟೋಬರ್ 10ರಂದು ಮುಂಜಾನೆ ಎಂಟು ಗಂಟೆಗೆ ಕೊರಟಗೆರೆ ಕ್ಷೇತ್ರದ ಜಂಪೇನಹಳ್ಳಿ ಕೆರೆಗೆ ಬಾಗಿನ ಅರ್ಪಿಸುವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಪರಮೇಶ್ವರ್ ಸಿದ್ದಾರ್ಥನಗರದ ಮನೆಯಲ್ಲಿ ಇಲ್ಲ ಎಂಬುದು ಖಚಿತಪಡಿಸಿಕೊಂಡ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನೇರ ಜಂಪೇನಹಳ್ಳಿಗೆ ಹೋದರು. ಅಲ್ಲಿಂದ ಕೊರಟಗೆರೆ ಐಬಿಯಲ್ಲಿ ವಿಚಾರಣೆ ನಡೆಸಿದ ಮೇಲೆ ಪರಮೇಶ್ವರ್ ಬೆಂಗಳೂರಿಗೆ ಹೋಗಿದ್ದು…

ಸಿದ್ದಾರ್ಥ ಶಿಕ್ಷಣ ಸಂಸ್ಥೆಯಡಿಯಲ್ಲಿ ಶಾಲಾ ಕಾಲೇಜುಗಳು, ಇಂಜಿನಿಯರ್, ವೈದ್ಯಕೀಯ ಕಾಲೇಜುಗಳ ಸೇರಿ 100ಕ್ಕೂ ಹೆಚ್ಚು ಸಂಸ್ಥೆಗಳಿವೆ. ಕರ್ನಾಟಕವಲ್ಲದೆ ಹೊರ ರಾಜ್ಯಗಳು ಮತ್ತು ಹೊರ ದೇಶದಲ್ಲೂ ಇವರ ಕಾಲೇಜುಗಳಿವೆ. ಇಷ್ಟೆಲ್ಲಾ ಸಂಸ್ಥೆಗಳ ವ್ಯವಹಾರ-ಹಣಕಾಸು ವಹಿವಾಟನ್ನು ಈ ಹಿಂದೆ ಪರಮೇಶ್ವರ್‍ರವರ ಸೋದರ ಡಾ.ಜಿ. ಶಿವಪ್ರಸಾದ್ ನೋಡಿಕೊಳ್ಳುತ್ತಿದ್ದರು. ಅವರು ಆಡಳಿತದ ಸಂಪೂರ್ಣ ಉಸ್ತುವಾರಿ ವಹಿಸಿದ್ದಾಗ ಎಲ್ಲಾ ಕಾಲೇಜುಗಳ ನಿರ್ವಹಣೆಯನ್ನು ನೋಡಿಕೊಳ್ಳುತ್ತಿದ್ದರು. ಪ್ರತಿ ವಾರಕ್ಕೊಮ್ಮೆ ಎಲ್ಲಾ ಕಾಲೇಜುಗಳ ಪ್ರಾಂಶುಪಾಲರು, ವ್ಯವಸ್ಥಾಪಕರನ್ನು ಕರೆಸಿ ಹಣಕಾಸಿನ ವಹಿವಾಟಿನ ಲೆಕ್ಕ ಪಡೆಯುತ್ತಿದ್ದರು. ಆಡಳಿತದ ನಿರ್ವಹಣೆಯ ಬಗ್ಗೆ ಮಾಹಿತಿ ಪಡೆಯುತ್ತಿದ್ದರು. ಶಿವಪ್ರಸಾದ್ ತೀರಿಕೊಂಡ ಮೇಲೆಯೇ ಪರಮೇಶ್ವರ್ ಕಾಲೇಜು ಉಸ್ತುವಾರಿ ವಹಿಸಿಕೊಂಡಿದ್ದು..

2011ರಲ್ಲಿ ಮರಳೂರು ದಿಣ್ಣೆಯಲ್ಲಿ ನೂತನವಾಗಿ ನಿರ್ಮಿಸಿದ್ದ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜು ಉದ್ಘಾಟನೆಗೆ ಡಾ.ಜಿ.ಪರಮೇಶ್ವರ್ ಬಂದಿದ್ದರು. ಅದುವರೆಗೂ ಅವರು ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ ಆಡಳಿತದಲ್ಲಿ ತಲೆಹಾಕಿರಲಿಲ್ಲ. ಎಂಟು ವರ್ಷ ಕೆಪಿಸಿಸಿಯ ಸಾರಥ್ಯ ವಹಿಸಿದ್ದೇ ಇದಕ್ಕೆ ಪ್ರಮುಖ ಕಾರಣ. ರಾಜಕೀಯದಲ್ಲೇ ಹೆಚ್ಚು ತೊಡಗಿಸಿಕೊಂಡಿದ್ದ ಪರಮೇಶ್ವರ್ ಅಣ್ಣ ಶಿವಪ್ರಸಾದ್ ತೀರಿಕೊಂಡ ಮೇಲೆ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದರು. ಆದರೂ ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿಗಳೇ ಎಲ್ಲವನ್ನೂ ನೋಡಿಕೊಂಡಿದ್ದರು. ನರಸಿಂಹಮೂರ್ತಿ, ವೈ.ಎಂ.ವಿ.ರೆಡ್ಡಿ ಆಡಳಿತಾಧಿಕಾರಿಗಳಾಗಿ ಕಾರ್ಯ ನಿರ್ವಹಿಸಿದ್ದರು. ಒಟ್ಟಿನಲ್ಲಿ ಈ ಎಲ್ಲಾ ಶಿಕ್ಷಣ ಸಂಸ್ಥೆಗಳ ಲಾಭ ಮಾತ್ರ ತೆಗೆದುಕೊಳ್ಳುತ್ತಿದ್ದ ಪರಮೇಶ್ವರ್ ಅದರ ಬಗ್ಗೆ ಎಚ್ಚರ ವಹಿಸದಿದ್ದುದರ ಪರಿಣಾಮವನ್ನು ಈಗ ಐಟಿ ದಾಳಿಯಲ್ಲಿ ಅನುಭವಿಸಬೇಕಾಗಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಲ್‍ಪಿ ಮತ್ತು ಪ್ರತಿಪಕ್ಷದ ನಾಯಕರಾಗಿ ನೇಮಕಗೊಂಡರು. ಇದರಿಂದ ಪರಮೇಶ್ವರ್ ಬೇಸರಗೊಂಡಿದ್ದರು. ಹೀಗಾಗಿಯೇ ಸಿದ್ದರಾಮಯ್ಯ ಪ್ರತಿಪಕ್ಷ ನಾಯಕರಾಗಿ ನೇಮಕಗೊಂಡ ಎರಡು ದಿನಗಳಲ್ಲೇ ಪರಮೇಶ್ವರ್ ಅವರನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ದೆಹಲಿಗೆ ಕರೆಸಿಕೊಂಡರು. ಅದಾಗಲೇ ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ಘೋಷಣೆಯಾಗಿತ್ತು. ಎಂಟು ವರ್ಷ ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷದ ಸಂಪೂರ್ಣ ಖರ್ಚು ವೆಚ್ಚ ನಿಭಾಯಿಸಿದ್ದ ಪರಮೇಶ್ವರ್ ಹೆಗಲಿಗೆ ಮಹಾರಾಷ್ಟ್ರ ಚುನಾವಣೆಯ ಜವಾಬ್ದಾರಿ ವಹಿಸಿದರು. ಹಾಗಾಗಿಯೇ ಪರಮೇಶ್ವರ್‍ರವರನ್ನು ದಿಕ್ಕುತಪ್ಪಿಸಲು ದುರುದ್ದೇಶಪೂರ್ವಕವಾಗಿ, ದ್ವೇಷದಿಂದ ಪರಮೇಶ್ವರ್ ಶಿಕ್ಷಣ ಸಂಸ್ಥೆಗಳ ವಿರುದ್ಧ ಕೇಂದ್ರದ ನಿಯಂತ್ರಣದಲ್ಲಿರುವ ಐಟಿ ದಾಳಿ ನಡೆಸಿದೆ ಎಂದು ಕೂಡ ವಿಶ್ಲೇಷಿಸಲಾಗುತ್ತಿದೆ.

ರಾಜ್ಯದಲ್ಲಿ ಜೆಡಿಎಸ್, ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಕಾಲೇಜುಗಳು ಇವೆ. ಅಲ್ಲೇನು ಕಡಿಮೆ ಶುಲ್ಕ ತೆಗೆದುಕೊಳ್ಳುತ್ತಾರೆಯೇ? ಬಿಜೆಪಿ ಮುಖಂಡ ಪ್ರಭಾಕರ್ ಕೋರೆ, ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್, ಕಾಂಗ್ರೆಸ್ ಮುಖಂಡ ಶಾಮನೂರು ಶಿವಶಂಕರಪ್ಪ, ಬಿಜೆಪಿ ಬೆಂಬಲಿತ ಮೋಹನ್ ಆಳ್ವಾ ಮತ್ತು ಮಠಗಳಿಗೆ ಸೇರಿದ ಸಂಸ್ಥೆಗಳು, ಹೀಗೆ ಹಲವು ಮುಖಂಡರ ಕಾಲೇಜುಗಳು ಇವೆ. ಅವರ ಕಾಲೇಜುಗಳಲ್ಲಿ ಕೋಟಿ ಕೋಟಿ ಶುಲ್ಕ ಪಡೆಯುತ್ತಿಲ್ಲವೇ? ಎಂಬ ಪ್ರಶ್ನೆಗಳು ಸಹ ಎದ್ದಿವೆ.

ಎಲ್‍ಕೆಜಿ, ಯುಕೆಜಿ ಪ್ರವೇಶಕ್ಕೆ ಹೋಬಳಿ ಮಟ್ಟದಲ್ಲಿ 20 ಸಾವಿರ, ಜಿಲ್ಲಾ ಮಟ್ಟದಲ್ಲಿ 1 ಲಕ್ಷ, ಬೆಂಗಳೂರು ರಾಜಧಾನಿಯಲ್ಲಿ 2 ಲಕ್ಷ, ವಸತಿ ಶಾಲೆಗಳಲ್ಲಿ 5 ಲಕ್ಷ, ಆಳ್ವಾಸ್ ಕಾಲೇಜುಗಳಲ್ಲಿ 1 ಲಕ್ಷ ಶುಲ್ಕ ಪಡೆಯಲಾಗುತ್ತಿದೆ. ವೈದ್ಯಕೀಯ ಕಾಲೇಜುಗಳಲ್ಲಿ ಹೊರ ರಾಜ್ಯದವರಿಗೆ ಆದರೆ 2 ಕೋಟಿ ರೂಪಾಯಿಯಿಂದ 5 ಕೋಟಿ ಪಡೆಯುತ್ತಾರೆ. ಇದು ಎಲ್ಲರಿಗೂ ಗೊತ್ತಿರುವ ಹಗಲು ರಹಸ್ಯ. ಪ್ರಬಲ ಜಾತಿಗಳಾದ ಲಿಂಗಾಯತ, ಒಕ್ಕಲಿಗ ಶಿಕ್ಷಣ ಸಂಸ್ಥೆಗಳಲ್ಲಿ ಅವ್ಯವಹಾರ ನಡೆಯುತ್ತಿಲ್ಲವೇ, ಅವುಗಳ ಮೇಲೆ ತಾಕತ್ತಿದ್ದರೆ ಐಟಿ ದಾಳಿ ಮಾಡಲಿ ಎಂಬ ವಾದವೂ ಇದೇ ಸಂದರ್ಭದಲ್ಲಿ ಮುನ್ನೆಲೆಗೆ ಬಂದಿದೆ.

ಇನ್ನು ಆದಾಯ ತೆರಿಗೆ ಅಧಿಕಾರಿಗಳ ಮುಂದೆ ಅಕ್ಟೋಬರ್ 15ರಂದು ಪರಮೇಶ್ವರ್‌ ಹಾಜರಾಗಿದ್ದಾರೆ. ಐಟಿ ಅಧಿಕಾರಿಗಳು ಅವರನ್ನು ಪ್ರಶ್ನೆ ಮಾಡಿದ್ದೇ ತಡ ನನಗೆ ಮೂರ್ನಾಲ್ಕು ದಿನ ಸಮಯಕೊಡಿ ಎಂದ ಪರಂ ಬೇಡಿಕೆಗೆ ಐಟಿ ಅಧಿಕಾರಿಗಳು ಮರುಮಾತಿಲ್ಲದೇ ಒಪ್ಪಿಕೊಂಡಿದ್ದಾರೆ. ತನಿಖೆಯ ನಂತರ ಮಾಧ್ಯಮಗಳ ಜೊತೆ ಮಾತಾಡಿದ ಅವರು `ನನ್ನ ಸೆಕ್ರಟರಿ ರಮೇಶ್ ಸಾವಿನ ಕುರಿತು ಸಮರ್ಪಕ ತನಿಖೆಯಾಗಬೇಕು. ಏಕೆಂದರೆ ಕೆಲವು ಮಾಧ್ಯಮಗಳು ನಾನೇ ಕೊಲೆ ಮಾಡಿಸಿದ್ದೇನೆ, ನನ್ನ ಸ್ನೇಹಿತರು ಕೊಲೆ ಮಾಡಿಸಿದ್ದಾರೆ ಎಂದೆಲ್ಲಾ ಬಿತ್ತರಿಸಿದ್ದಾರೆ. ಇದಕ್ಕೆ ಉತ್ತರ ಸಿಗಬೇಕಾದರೆ ತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಒತ್ತಾಯಿಸಿ ಪತ್ರಬರೆಯುತ್ತೇನೆ’ ಎಂದು ಪರಂ ಹೇಳಿದ್ದಾರೆ. ಒಟ್ಟಾರೆ ಅವರ ಮಾತಿನಲ್ಲಿ ಗತ್ತಿದೆಯೇ ಹೊರತು ಯಾವ ಭಯವೂ ಇಲ್ಲ..

ಐಟಿಯನ್ನೇ ಅಳುಕಿಸಿತಾ ರಮೇಶ್ ಸಾವು?
ಒಂದು ಕಡೆ ನಾಲ್ಕು ಕೋಟಿ ಹಣ ಸಿಕ್ಕಿದೆ, ಇನ್ನೊಂದು ಕಡೆ ಅವರ ಆಪ್ತ ಸಹಾಯಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರಲ್ಲಿ ಐಟಿಯೂ ಸಿಕ್ಕಿಬಿದ್ದಿದೆ. ಮೊದಲಿಗೆ ಪರಂ ಪಿಎ ರಮೇಶ್ ಆತ್ಮಹತ್ಯೆ ಮಾಡಿಕೊಂಡಾಗ ಐಟಿ ಅಧಿಕಾರಿಗಳು `ನಾವು ಮನೆಗೆ ಹೋಗಿಲ್ಲ, ಅವರನ್ನು ವಿಚಾರಣೆ ನಡೆಸಿಲ್ಲ’ ಎಂದು ಹೇಳಿಕೆ ನೀಡಿ ಜಾರಿಕೊಳ್ಳಲು ಪ್ರಯತ್ನಿಸಿದರು. ಆದರೆ ಆರು ಜನರ ತಂಡ ಅವರ ಮನೆಗೆ ಹೋಗಿ ವಿಚಾರಣೆ ನಡೆಸಿದ್ದು ಎಲ್ಲರಿಗೂ ಗೊತ್ತಿರುವ ವಿಚಾರವಾದ್ದರಿಂದ ರಮೇಶ್ ಸಾವು ಐಟಿಯವರನ್ನೇ ಅಳುಕಿಸಿದೆ.
ಮೂರು ತಿಂಗಳ ಹಿಂದೆಯಷ್ಟೇ ಎಸ್‍ಎಂ ಕೃಷ್ಣರ ಅಳಿಯ ಸಿದ್ಧಾರ್ಥ್ ಇದೇ ಐಟಿ ಕಿರುಕುಳ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡು ದೇಶವ್ಯಾಪಿ ಸುದ್ದಿಯಾಗಿದ್ದರ ಹಿನ್ನೆಲೆಯಲ್ಲಿ ರಮೇಶ್ ಸಾವು ಸಹ ಸಂಭವಿಸಿರುವುದರಿಂದ ಐಟಿ ಕಾದು ನೋಡುವ ತಂತ್ರ ಅನುಸರಿಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...