Homeಕರ್ನಾಟಕಪರಮ್‍ಗೆ ಮೊದಲೇ ಸಿಕ್ಕಿತ್ತೇ ಐಟಿ ದಾಳಿಯ ಸುಳಿವು...

ಪರಮ್‍ಗೆ ಮೊದಲೇ ಸಿಕ್ಕಿತ್ತೇ ಐಟಿ ದಾಳಿಯ ಸುಳಿವು…

- Advertisement -
- Advertisement -

ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರಿಗೆ ತಮ್ಮ ಮೇಲಾಗುವ ಐಟಿ ರೈಡ್ ವಿಷಯ ಎರಡು ತಿಂಗಳಿಗೂ ಮೊದಲೇ ತಿಳಿದಿತ್ತು. ಅದಕ್ಕೆ ಅವರು ಹಿಂದೆ ಗೃಹ ಸಚಿವರಾಗಿದ್ದದ್ದೂ ಕಾರಣವಿರಬಹುದು. ಈ ವಿಷಯ ಗೊತ್ತಿದ್ದ ಕಾರಣ ಪರಮೇಶ್ವರ್ ತಮ್ಮ ಶಿಕ್ಷಣ ಸಂಸ್ಥೆಗಳ ಎಲ್ಲಾ ನೌಕರರು ಮತ್ತು ಸಿಬ್ಬಂದಿಗೆ ಚೆಕ್ ಮೂಲಕ ವೇತನ ಪಾವತಿಸಿದ್ದರು. ಒಂದು ವಾರ ಎಲ್ಲಿಗೂ ಹೋಗದೆ ಮನೆಯಲ್ಲೇ ಠಿಕಾಣಿ ಹೂಡಿ ತಮ್ಮೆಲ್ಲಾ ಸಂಸ್ಥೆಗಳ ನಿರ್ವಹಣೆಗೆ ಆಗುತ್ತಿರುವ ಖರ್ಚು-ವೆಚ್ಚಗಳ ಬಗ್ಗೆ ಪರಿಶೀಲನೆ ನಡೆಸಿದ್ದರು. ಸಂಸ್ಥೆಯ ಚಾರ್ಟರ್ಡ್ ಅಕೌಂಟೆಂಟ್‍ಗಳ ಸಮ್ಮುಖದಲ್ಲಿ ಪ್ರತಿಯೊಂದು ದಾಖಲೆಗಳನ್ನು ಸಂಗ್ರಹಿಸಿಟ್ಟುಕೊಂಡಿದ್ದರು.

ಐಟಿ ರೈಡ್ ಆಗುವ ದಿನ ಅಂದರೆ ಅಕ್ಟೋಬರ್ 10ರಂದು ಮುಂಜಾನೆ ಎಂಟು ಗಂಟೆಗೆ ಕೊರಟಗೆರೆ ಕ್ಷೇತ್ರದ ಜಂಪೇನಹಳ್ಳಿ ಕೆರೆಗೆ ಬಾಗಿನ ಅರ್ಪಿಸುವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಪರಮೇಶ್ವರ್ ಸಿದ್ದಾರ್ಥನಗರದ ಮನೆಯಲ್ಲಿ ಇಲ್ಲ ಎಂಬುದು ಖಚಿತಪಡಿಸಿಕೊಂಡ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನೇರ ಜಂಪೇನಹಳ್ಳಿಗೆ ಹೋದರು. ಅಲ್ಲಿಂದ ಕೊರಟಗೆರೆ ಐಬಿಯಲ್ಲಿ ವಿಚಾರಣೆ ನಡೆಸಿದ ಮೇಲೆ ಪರಮೇಶ್ವರ್ ಬೆಂಗಳೂರಿಗೆ ಹೋಗಿದ್ದು…

ಸಿದ್ದಾರ್ಥ ಶಿಕ್ಷಣ ಸಂಸ್ಥೆಯಡಿಯಲ್ಲಿ ಶಾಲಾ ಕಾಲೇಜುಗಳು, ಇಂಜಿನಿಯರ್, ವೈದ್ಯಕೀಯ ಕಾಲೇಜುಗಳ ಸೇರಿ 100ಕ್ಕೂ ಹೆಚ್ಚು ಸಂಸ್ಥೆಗಳಿವೆ. ಕರ್ನಾಟಕವಲ್ಲದೆ ಹೊರ ರಾಜ್ಯಗಳು ಮತ್ತು ಹೊರ ದೇಶದಲ್ಲೂ ಇವರ ಕಾಲೇಜುಗಳಿವೆ. ಇಷ್ಟೆಲ್ಲಾ ಸಂಸ್ಥೆಗಳ ವ್ಯವಹಾರ-ಹಣಕಾಸು ವಹಿವಾಟನ್ನು ಈ ಹಿಂದೆ ಪರಮೇಶ್ವರ್‍ರವರ ಸೋದರ ಡಾ.ಜಿ. ಶಿವಪ್ರಸಾದ್ ನೋಡಿಕೊಳ್ಳುತ್ತಿದ್ದರು. ಅವರು ಆಡಳಿತದ ಸಂಪೂರ್ಣ ಉಸ್ತುವಾರಿ ವಹಿಸಿದ್ದಾಗ ಎಲ್ಲಾ ಕಾಲೇಜುಗಳ ನಿರ್ವಹಣೆಯನ್ನು ನೋಡಿಕೊಳ್ಳುತ್ತಿದ್ದರು. ಪ್ರತಿ ವಾರಕ್ಕೊಮ್ಮೆ ಎಲ್ಲಾ ಕಾಲೇಜುಗಳ ಪ್ರಾಂಶುಪಾಲರು, ವ್ಯವಸ್ಥಾಪಕರನ್ನು ಕರೆಸಿ ಹಣಕಾಸಿನ ವಹಿವಾಟಿನ ಲೆಕ್ಕ ಪಡೆಯುತ್ತಿದ್ದರು. ಆಡಳಿತದ ನಿರ್ವಹಣೆಯ ಬಗ್ಗೆ ಮಾಹಿತಿ ಪಡೆಯುತ್ತಿದ್ದರು. ಶಿವಪ್ರಸಾದ್ ತೀರಿಕೊಂಡ ಮೇಲೆಯೇ ಪರಮೇಶ್ವರ್ ಕಾಲೇಜು ಉಸ್ತುವಾರಿ ವಹಿಸಿಕೊಂಡಿದ್ದು..

2011ರಲ್ಲಿ ಮರಳೂರು ದಿಣ್ಣೆಯಲ್ಲಿ ನೂತನವಾಗಿ ನಿರ್ಮಿಸಿದ್ದ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜು ಉದ್ಘಾಟನೆಗೆ ಡಾ.ಜಿ.ಪರಮೇಶ್ವರ್ ಬಂದಿದ್ದರು. ಅದುವರೆಗೂ ಅವರು ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ ಆಡಳಿತದಲ್ಲಿ ತಲೆಹಾಕಿರಲಿಲ್ಲ. ಎಂಟು ವರ್ಷ ಕೆಪಿಸಿಸಿಯ ಸಾರಥ್ಯ ವಹಿಸಿದ್ದೇ ಇದಕ್ಕೆ ಪ್ರಮುಖ ಕಾರಣ. ರಾಜಕೀಯದಲ್ಲೇ ಹೆಚ್ಚು ತೊಡಗಿಸಿಕೊಂಡಿದ್ದ ಪರಮೇಶ್ವರ್ ಅಣ್ಣ ಶಿವಪ್ರಸಾದ್ ತೀರಿಕೊಂಡ ಮೇಲೆ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದರು. ಆದರೂ ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿಗಳೇ ಎಲ್ಲವನ್ನೂ ನೋಡಿಕೊಂಡಿದ್ದರು. ನರಸಿಂಹಮೂರ್ತಿ, ವೈ.ಎಂ.ವಿ.ರೆಡ್ಡಿ ಆಡಳಿತಾಧಿಕಾರಿಗಳಾಗಿ ಕಾರ್ಯ ನಿರ್ವಹಿಸಿದ್ದರು. ಒಟ್ಟಿನಲ್ಲಿ ಈ ಎಲ್ಲಾ ಶಿಕ್ಷಣ ಸಂಸ್ಥೆಗಳ ಲಾಭ ಮಾತ್ರ ತೆಗೆದುಕೊಳ್ಳುತ್ತಿದ್ದ ಪರಮೇಶ್ವರ್ ಅದರ ಬಗ್ಗೆ ಎಚ್ಚರ ವಹಿಸದಿದ್ದುದರ ಪರಿಣಾಮವನ್ನು ಈಗ ಐಟಿ ದಾಳಿಯಲ್ಲಿ ಅನುಭವಿಸಬೇಕಾಗಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಲ್‍ಪಿ ಮತ್ತು ಪ್ರತಿಪಕ್ಷದ ನಾಯಕರಾಗಿ ನೇಮಕಗೊಂಡರು. ಇದರಿಂದ ಪರಮೇಶ್ವರ್ ಬೇಸರಗೊಂಡಿದ್ದರು. ಹೀಗಾಗಿಯೇ ಸಿದ್ದರಾಮಯ್ಯ ಪ್ರತಿಪಕ್ಷ ನಾಯಕರಾಗಿ ನೇಮಕಗೊಂಡ ಎರಡು ದಿನಗಳಲ್ಲೇ ಪರಮೇಶ್ವರ್ ಅವರನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ದೆಹಲಿಗೆ ಕರೆಸಿಕೊಂಡರು. ಅದಾಗಲೇ ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ಘೋಷಣೆಯಾಗಿತ್ತು. ಎಂಟು ವರ್ಷ ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷದ ಸಂಪೂರ್ಣ ಖರ್ಚು ವೆಚ್ಚ ನಿಭಾಯಿಸಿದ್ದ ಪರಮೇಶ್ವರ್ ಹೆಗಲಿಗೆ ಮಹಾರಾಷ್ಟ್ರ ಚುನಾವಣೆಯ ಜವಾಬ್ದಾರಿ ವಹಿಸಿದರು. ಹಾಗಾಗಿಯೇ ಪರಮೇಶ್ವರ್‍ರವರನ್ನು ದಿಕ್ಕುತಪ್ಪಿಸಲು ದುರುದ್ದೇಶಪೂರ್ವಕವಾಗಿ, ದ್ವೇಷದಿಂದ ಪರಮೇಶ್ವರ್ ಶಿಕ್ಷಣ ಸಂಸ್ಥೆಗಳ ವಿರುದ್ಧ ಕೇಂದ್ರದ ನಿಯಂತ್ರಣದಲ್ಲಿರುವ ಐಟಿ ದಾಳಿ ನಡೆಸಿದೆ ಎಂದು ಕೂಡ ವಿಶ್ಲೇಷಿಸಲಾಗುತ್ತಿದೆ.

ರಾಜ್ಯದಲ್ಲಿ ಜೆಡಿಎಸ್, ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಕಾಲೇಜುಗಳು ಇವೆ. ಅಲ್ಲೇನು ಕಡಿಮೆ ಶುಲ್ಕ ತೆಗೆದುಕೊಳ್ಳುತ್ತಾರೆಯೇ? ಬಿಜೆಪಿ ಮುಖಂಡ ಪ್ರಭಾಕರ್ ಕೋರೆ, ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್, ಕಾಂಗ್ರೆಸ್ ಮುಖಂಡ ಶಾಮನೂರು ಶಿವಶಂಕರಪ್ಪ, ಬಿಜೆಪಿ ಬೆಂಬಲಿತ ಮೋಹನ್ ಆಳ್ವಾ ಮತ್ತು ಮಠಗಳಿಗೆ ಸೇರಿದ ಸಂಸ್ಥೆಗಳು, ಹೀಗೆ ಹಲವು ಮುಖಂಡರ ಕಾಲೇಜುಗಳು ಇವೆ. ಅವರ ಕಾಲೇಜುಗಳಲ್ಲಿ ಕೋಟಿ ಕೋಟಿ ಶುಲ್ಕ ಪಡೆಯುತ್ತಿಲ್ಲವೇ? ಎಂಬ ಪ್ರಶ್ನೆಗಳು ಸಹ ಎದ್ದಿವೆ.

ಎಲ್‍ಕೆಜಿ, ಯುಕೆಜಿ ಪ್ರವೇಶಕ್ಕೆ ಹೋಬಳಿ ಮಟ್ಟದಲ್ಲಿ 20 ಸಾವಿರ, ಜಿಲ್ಲಾ ಮಟ್ಟದಲ್ಲಿ 1 ಲಕ್ಷ, ಬೆಂಗಳೂರು ರಾಜಧಾನಿಯಲ್ಲಿ 2 ಲಕ್ಷ, ವಸತಿ ಶಾಲೆಗಳಲ್ಲಿ 5 ಲಕ್ಷ, ಆಳ್ವಾಸ್ ಕಾಲೇಜುಗಳಲ್ಲಿ 1 ಲಕ್ಷ ಶುಲ್ಕ ಪಡೆಯಲಾಗುತ್ತಿದೆ. ವೈದ್ಯಕೀಯ ಕಾಲೇಜುಗಳಲ್ಲಿ ಹೊರ ರಾಜ್ಯದವರಿಗೆ ಆದರೆ 2 ಕೋಟಿ ರೂಪಾಯಿಯಿಂದ 5 ಕೋಟಿ ಪಡೆಯುತ್ತಾರೆ. ಇದು ಎಲ್ಲರಿಗೂ ಗೊತ್ತಿರುವ ಹಗಲು ರಹಸ್ಯ. ಪ್ರಬಲ ಜಾತಿಗಳಾದ ಲಿಂಗಾಯತ, ಒಕ್ಕಲಿಗ ಶಿಕ್ಷಣ ಸಂಸ್ಥೆಗಳಲ್ಲಿ ಅವ್ಯವಹಾರ ನಡೆಯುತ್ತಿಲ್ಲವೇ, ಅವುಗಳ ಮೇಲೆ ತಾಕತ್ತಿದ್ದರೆ ಐಟಿ ದಾಳಿ ಮಾಡಲಿ ಎಂಬ ವಾದವೂ ಇದೇ ಸಂದರ್ಭದಲ್ಲಿ ಮುನ್ನೆಲೆಗೆ ಬಂದಿದೆ.

ಇನ್ನು ಆದಾಯ ತೆರಿಗೆ ಅಧಿಕಾರಿಗಳ ಮುಂದೆ ಅಕ್ಟೋಬರ್ 15ರಂದು ಪರಮೇಶ್ವರ್‌ ಹಾಜರಾಗಿದ್ದಾರೆ. ಐಟಿ ಅಧಿಕಾರಿಗಳು ಅವರನ್ನು ಪ್ರಶ್ನೆ ಮಾಡಿದ್ದೇ ತಡ ನನಗೆ ಮೂರ್ನಾಲ್ಕು ದಿನ ಸಮಯಕೊಡಿ ಎಂದ ಪರಂ ಬೇಡಿಕೆಗೆ ಐಟಿ ಅಧಿಕಾರಿಗಳು ಮರುಮಾತಿಲ್ಲದೇ ಒಪ್ಪಿಕೊಂಡಿದ್ದಾರೆ. ತನಿಖೆಯ ನಂತರ ಮಾಧ್ಯಮಗಳ ಜೊತೆ ಮಾತಾಡಿದ ಅವರು `ನನ್ನ ಸೆಕ್ರಟರಿ ರಮೇಶ್ ಸಾವಿನ ಕುರಿತು ಸಮರ್ಪಕ ತನಿಖೆಯಾಗಬೇಕು. ಏಕೆಂದರೆ ಕೆಲವು ಮಾಧ್ಯಮಗಳು ನಾನೇ ಕೊಲೆ ಮಾಡಿಸಿದ್ದೇನೆ, ನನ್ನ ಸ್ನೇಹಿತರು ಕೊಲೆ ಮಾಡಿಸಿದ್ದಾರೆ ಎಂದೆಲ್ಲಾ ಬಿತ್ತರಿಸಿದ್ದಾರೆ. ಇದಕ್ಕೆ ಉತ್ತರ ಸಿಗಬೇಕಾದರೆ ತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಒತ್ತಾಯಿಸಿ ಪತ್ರಬರೆಯುತ್ತೇನೆ’ ಎಂದು ಪರಂ ಹೇಳಿದ್ದಾರೆ. ಒಟ್ಟಾರೆ ಅವರ ಮಾತಿನಲ್ಲಿ ಗತ್ತಿದೆಯೇ ಹೊರತು ಯಾವ ಭಯವೂ ಇಲ್ಲ..

ಐಟಿಯನ್ನೇ ಅಳುಕಿಸಿತಾ ರಮೇಶ್ ಸಾವು?
ಒಂದು ಕಡೆ ನಾಲ್ಕು ಕೋಟಿ ಹಣ ಸಿಕ್ಕಿದೆ, ಇನ್ನೊಂದು ಕಡೆ ಅವರ ಆಪ್ತ ಸಹಾಯಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರಲ್ಲಿ ಐಟಿಯೂ ಸಿಕ್ಕಿಬಿದ್ದಿದೆ. ಮೊದಲಿಗೆ ಪರಂ ಪಿಎ ರಮೇಶ್ ಆತ್ಮಹತ್ಯೆ ಮಾಡಿಕೊಂಡಾಗ ಐಟಿ ಅಧಿಕಾರಿಗಳು `ನಾವು ಮನೆಗೆ ಹೋಗಿಲ್ಲ, ಅವರನ್ನು ವಿಚಾರಣೆ ನಡೆಸಿಲ್ಲ’ ಎಂದು ಹೇಳಿಕೆ ನೀಡಿ ಜಾರಿಕೊಳ್ಳಲು ಪ್ರಯತ್ನಿಸಿದರು. ಆದರೆ ಆರು ಜನರ ತಂಡ ಅವರ ಮನೆಗೆ ಹೋಗಿ ವಿಚಾರಣೆ ನಡೆಸಿದ್ದು ಎಲ್ಲರಿಗೂ ಗೊತ್ತಿರುವ ವಿಚಾರವಾದ್ದರಿಂದ ರಮೇಶ್ ಸಾವು ಐಟಿಯವರನ್ನೇ ಅಳುಕಿಸಿದೆ.
ಮೂರು ತಿಂಗಳ ಹಿಂದೆಯಷ್ಟೇ ಎಸ್‍ಎಂ ಕೃಷ್ಣರ ಅಳಿಯ ಸಿದ್ಧಾರ್ಥ್ ಇದೇ ಐಟಿ ಕಿರುಕುಳ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡು ದೇಶವ್ಯಾಪಿ ಸುದ್ದಿಯಾಗಿದ್ದರ ಹಿನ್ನೆಲೆಯಲ್ಲಿ ರಮೇಶ್ ಸಾವು ಸಹ ಸಂಭವಿಸಿರುವುದರಿಂದ ಐಟಿ ಕಾದು ನೋಡುವ ತಂತ್ರ ಅನುಸರಿಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....