Homeಕರ್ನಾಟಕಪರಮ್‍ಗೆ ಮೊದಲೇ ಸಿಕ್ಕಿತ್ತೇ ಐಟಿ ದಾಳಿಯ ಸುಳಿವು...

ಪರಮ್‍ಗೆ ಮೊದಲೇ ಸಿಕ್ಕಿತ್ತೇ ಐಟಿ ದಾಳಿಯ ಸುಳಿವು…

- Advertisement -
- Advertisement -

ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರಿಗೆ ತಮ್ಮ ಮೇಲಾಗುವ ಐಟಿ ರೈಡ್ ವಿಷಯ ಎರಡು ತಿಂಗಳಿಗೂ ಮೊದಲೇ ತಿಳಿದಿತ್ತು. ಅದಕ್ಕೆ ಅವರು ಹಿಂದೆ ಗೃಹ ಸಚಿವರಾಗಿದ್ದದ್ದೂ ಕಾರಣವಿರಬಹುದು. ಈ ವಿಷಯ ಗೊತ್ತಿದ್ದ ಕಾರಣ ಪರಮೇಶ್ವರ್ ತಮ್ಮ ಶಿಕ್ಷಣ ಸಂಸ್ಥೆಗಳ ಎಲ್ಲಾ ನೌಕರರು ಮತ್ತು ಸಿಬ್ಬಂದಿಗೆ ಚೆಕ್ ಮೂಲಕ ವೇತನ ಪಾವತಿಸಿದ್ದರು. ಒಂದು ವಾರ ಎಲ್ಲಿಗೂ ಹೋಗದೆ ಮನೆಯಲ್ಲೇ ಠಿಕಾಣಿ ಹೂಡಿ ತಮ್ಮೆಲ್ಲಾ ಸಂಸ್ಥೆಗಳ ನಿರ್ವಹಣೆಗೆ ಆಗುತ್ತಿರುವ ಖರ್ಚು-ವೆಚ್ಚಗಳ ಬಗ್ಗೆ ಪರಿಶೀಲನೆ ನಡೆಸಿದ್ದರು. ಸಂಸ್ಥೆಯ ಚಾರ್ಟರ್ಡ್ ಅಕೌಂಟೆಂಟ್‍ಗಳ ಸಮ್ಮುಖದಲ್ಲಿ ಪ್ರತಿಯೊಂದು ದಾಖಲೆಗಳನ್ನು ಸಂಗ್ರಹಿಸಿಟ್ಟುಕೊಂಡಿದ್ದರು.

ಐಟಿ ರೈಡ್ ಆಗುವ ದಿನ ಅಂದರೆ ಅಕ್ಟೋಬರ್ 10ರಂದು ಮುಂಜಾನೆ ಎಂಟು ಗಂಟೆಗೆ ಕೊರಟಗೆರೆ ಕ್ಷೇತ್ರದ ಜಂಪೇನಹಳ್ಳಿ ಕೆರೆಗೆ ಬಾಗಿನ ಅರ್ಪಿಸುವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಪರಮೇಶ್ವರ್ ಸಿದ್ದಾರ್ಥನಗರದ ಮನೆಯಲ್ಲಿ ಇಲ್ಲ ಎಂಬುದು ಖಚಿತಪಡಿಸಿಕೊಂಡ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನೇರ ಜಂಪೇನಹಳ್ಳಿಗೆ ಹೋದರು. ಅಲ್ಲಿಂದ ಕೊರಟಗೆರೆ ಐಬಿಯಲ್ಲಿ ವಿಚಾರಣೆ ನಡೆಸಿದ ಮೇಲೆ ಪರಮೇಶ್ವರ್ ಬೆಂಗಳೂರಿಗೆ ಹೋಗಿದ್ದು…

ಸಿದ್ದಾರ್ಥ ಶಿಕ್ಷಣ ಸಂಸ್ಥೆಯಡಿಯಲ್ಲಿ ಶಾಲಾ ಕಾಲೇಜುಗಳು, ಇಂಜಿನಿಯರ್, ವೈದ್ಯಕೀಯ ಕಾಲೇಜುಗಳ ಸೇರಿ 100ಕ್ಕೂ ಹೆಚ್ಚು ಸಂಸ್ಥೆಗಳಿವೆ. ಕರ್ನಾಟಕವಲ್ಲದೆ ಹೊರ ರಾಜ್ಯಗಳು ಮತ್ತು ಹೊರ ದೇಶದಲ್ಲೂ ಇವರ ಕಾಲೇಜುಗಳಿವೆ. ಇಷ್ಟೆಲ್ಲಾ ಸಂಸ್ಥೆಗಳ ವ್ಯವಹಾರ-ಹಣಕಾಸು ವಹಿವಾಟನ್ನು ಈ ಹಿಂದೆ ಪರಮೇಶ್ವರ್‍ರವರ ಸೋದರ ಡಾ.ಜಿ. ಶಿವಪ್ರಸಾದ್ ನೋಡಿಕೊಳ್ಳುತ್ತಿದ್ದರು. ಅವರು ಆಡಳಿತದ ಸಂಪೂರ್ಣ ಉಸ್ತುವಾರಿ ವಹಿಸಿದ್ದಾಗ ಎಲ್ಲಾ ಕಾಲೇಜುಗಳ ನಿರ್ವಹಣೆಯನ್ನು ನೋಡಿಕೊಳ್ಳುತ್ತಿದ್ದರು. ಪ್ರತಿ ವಾರಕ್ಕೊಮ್ಮೆ ಎಲ್ಲಾ ಕಾಲೇಜುಗಳ ಪ್ರಾಂಶುಪಾಲರು, ವ್ಯವಸ್ಥಾಪಕರನ್ನು ಕರೆಸಿ ಹಣಕಾಸಿನ ವಹಿವಾಟಿನ ಲೆಕ್ಕ ಪಡೆಯುತ್ತಿದ್ದರು. ಆಡಳಿತದ ನಿರ್ವಹಣೆಯ ಬಗ್ಗೆ ಮಾಹಿತಿ ಪಡೆಯುತ್ತಿದ್ದರು. ಶಿವಪ್ರಸಾದ್ ತೀರಿಕೊಂಡ ಮೇಲೆಯೇ ಪರಮೇಶ್ವರ್ ಕಾಲೇಜು ಉಸ್ತುವಾರಿ ವಹಿಸಿಕೊಂಡಿದ್ದು..

2011ರಲ್ಲಿ ಮರಳೂರು ದಿಣ್ಣೆಯಲ್ಲಿ ನೂತನವಾಗಿ ನಿರ್ಮಿಸಿದ್ದ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜು ಉದ್ಘಾಟನೆಗೆ ಡಾ.ಜಿ.ಪರಮೇಶ್ವರ್ ಬಂದಿದ್ದರು. ಅದುವರೆಗೂ ಅವರು ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ ಆಡಳಿತದಲ್ಲಿ ತಲೆಹಾಕಿರಲಿಲ್ಲ. ಎಂಟು ವರ್ಷ ಕೆಪಿಸಿಸಿಯ ಸಾರಥ್ಯ ವಹಿಸಿದ್ದೇ ಇದಕ್ಕೆ ಪ್ರಮುಖ ಕಾರಣ. ರಾಜಕೀಯದಲ್ಲೇ ಹೆಚ್ಚು ತೊಡಗಿಸಿಕೊಂಡಿದ್ದ ಪರಮೇಶ್ವರ್ ಅಣ್ಣ ಶಿವಪ್ರಸಾದ್ ತೀರಿಕೊಂಡ ಮೇಲೆ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದರು. ಆದರೂ ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿಗಳೇ ಎಲ್ಲವನ್ನೂ ನೋಡಿಕೊಂಡಿದ್ದರು. ನರಸಿಂಹಮೂರ್ತಿ, ವೈ.ಎಂ.ವಿ.ರೆಡ್ಡಿ ಆಡಳಿತಾಧಿಕಾರಿಗಳಾಗಿ ಕಾರ್ಯ ನಿರ್ವಹಿಸಿದ್ದರು. ಒಟ್ಟಿನಲ್ಲಿ ಈ ಎಲ್ಲಾ ಶಿಕ್ಷಣ ಸಂಸ್ಥೆಗಳ ಲಾಭ ಮಾತ್ರ ತೆಗೆದುಕೊಳ್ಳುತ್ತಿದ್ದ ಪರಮೇಶ್ವರ್ ಅದರ ಬಗ್ಗೆ ಎಚ್ಚರ ವಹಿಸದಿದ್ದುದರ ಪರಿಣಾಮವನ್ನು ಈಗ ಐಟಿ ದಾಳಿಯಲ್ಲಿ ಅನುಭವಿಸಬೇಕಾಗಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಲ್‍ಪಿ ಮತ್ತು ಪ್ರತಿಪಕ್ಷದ ನಾಯಕರಾಗಿ ನೇಮಕಗೊಂಡರು. ಇದರಿಂದ ಪರಮೇಶ್ವರ್ ಬೇಸರಗೊಂಡಿದ್ದರು. ಹೀಗಾಗಿಯೇ ಸಿದ್ದರಾಮಯ್ಯ ಪ್ರತಿಪಕ್ಷ ನಾಯಕರಾಗಿ ನೇಮಕಗೊಂಡ ಎರಡು ದಿನಗಳಲ್ಲೇ ಪರಮೇಶ್ವರ್ ಅವರನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ದೆಹಲಿಗೆ ಕರೆಸಿಕೊಂಡರು. ಅದಾಗಲೇ ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ಘೋಷಣೆಯಾಗಿತ್ತು. ಎಂಟು ವರ್ಷ ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷದ ಸಂಪೂರ್ಣ ಖರ್ಚು ವೆಚ್ಚ ನಿಭಾಯಿಸಿದ್ದ ಪರಮೇಶ್ವರ್ ಹೆಗಲಿಗೆ ಮಹಾರಾಷ್ಟ್ರ ಚುನಾವಣೆಯ ಜವಾಬ್ದಾರಿ ವಹಿಸಿದರು. ಹಾಗಾಗಿಯೇ ಪರಮೇಶ್ವರ್‍ರವರನ್ನು ದಿಕ್ಕುತಪ್ಪಿಸಲು ದುರುದ್ದೇಶಪೂರ್ವಕವಾಗಿ, ದ್ವೇಷದಿಂದ ಪರಮೇಶ್ವರ್ ಶಿಕ್ಷಣ ಸಂಸ್ಥೆಗಳ ವಿರುದ್ಧ ಕೇಂದ್ರದ ನಿಯಂತ್ರಣದಲ್ಲಿರುವ ಐಟಿ ದಾಳಿ ನಡೆಸಿದೆ ಎಂದು ಕೂಡ ವಿಶ್ಲೇಷಿಸಲಾಗುತ್ತಿದೆ.

ರಾಜ್ಯದಲ್ಲಿ ಜೆಡಿಎಸ್, ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಕಾಲೇಜುಗಳು ಇವೆ. ಅಲ್ಲೇನು ಕಡಿಮೆ ಶುಲ್ಕ ತೆಗೆದುಕೊಳ್ಳುತ್ತಾರೆಯೇ? ಬಿಜೆಪಿ ಮುಖಂಡ ಪ್ರಭಾಕರ್ ಕೋರೆ, ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್, ಕಾಂಗ್ರೆಸ್ ಮುಖಂಡ ಶಾಮನೂರು ಶಿವಶಂಕರಪ್ಪ, ಬಿಜೆಪಿ ಬೆಂಬಲಿತ ಮೋಹನ್ ಆಳ್ವಾ ಮತ್ತು ಮಠಗಳಿಗೆ ಸೇರಿದ ಸಂಸ್ಥೆಗಳು, ಹೀಗೆ ಹಲವು ಮುಖಂಡರ ಕಾಲೇಜುಗಳು ಇವೆ. ಅವರ ಕಾಲೇಜುಗಳಲ್ಲಿ ಕೋಟಿ ಕೋಟಿ ಶುಲ್ಕ ಪಡೆಯುತ್ತಿಲ್ಲವೇ? ಎಂಬ ಪ್ರಶ್ನೆಗಳು ಸಹ ಎದ್ದಿವೆ.

ಎಲ್‍ಕೆಜಿ, ಯುಕೆಜಿ ಪ್ರವೇಶಕ್ಕೆ ಹೋಬಳಿ ಮಟ್ಟದಲ್ಲಿ 20 ಸಾವಿರ, ಜಿಲ್ಲಾ ಮಟ್ಟದಲ್ಲಿ 1 ಲಕ್ಷ, ಬೆಂಗಳೂರು ರಾಜಧಾನಿಯಲ್ಲಿ 2 ಲಕ್ಷ, ವಸತಿ ಶಾಲೆಗಳಲ್ಲಿ 5 ಲಕ್ಷ, ಆಳ್ವಾಸ್ ಕಾಲೇಜುಗಳಲ್ಲಿ 1 ಲಕ್ಷ ಶುಲ್ಕ ಪಡೆಯಲಾಗುತ್ತಿದೆ. ವೈದ್ಯಕೀಯ ಕಾಲೇಜುಗಳಲ್ಲಿ ಹೊರ ರಾಜ್ಯದವರಿಗೆ ಆದರೆ 2 ಕೋಟಿ ರೂಪಾಯಿಯಿಂದ 5 ಕೋಟಿ ಪಡೆಯುತ್ತಾರೆ. ಇದು ಎಲ್ಲರಿಗೂ ಗೊತ್ತಿರುವ ಹಗಲು ರಹಸ್ಯ. ಪ್ರಬಲ ಜಾತಿಗಳಾದ ಲಿಂಗಾಯತ, ಒಕ್ಕಲಿಗ ಶಿಕ್ಷಣ ಸಂಸ್ಥೆಗಳಲ್ಲಿ ಅವ್ಯವಹಾರ ನಡೆಯುತ್ತಿಲ್ಲವೇ, ಅವುಗಳ ಮೇಲೆ ತಾಕತ್ತಿದ್ದರೆ ಐಟಿ ದಾಳಿ ಮಾಡಲಿ ಎಂಬ ವಾದವೂ ಇದೇ ಸಂದರ್ಭದಲ್ಲಿ ಮುನ್ನೆಲೆಗೆ ಬಂದಿದೆ.

ಇನ್ನು ಆದಾಯ ತೆರಿಗೆ ಅಧಿಕಾರಿಗಳ ಮುಂದೆ ಅಕ್ಟೋಬರ್ 15ರಂದು ಪರಮೇಶ್ವರ್‌ ಹಾಜರಾಗಿದ್ದಾರೆ. ಐಟಿ ಅಧಿಕಾರಿಗಳು ಅವರನ್ನು ಪ್ರಶ್ನೆ ಮಾಡಿದ್ದೇ ತಡ ನನಗೆ ಮೂರ್ನಾಲ್ಕು ದಿನ ಸಮಯಕೊಡಿ ಎಂದ ಪರಂ ಬೇಡಿಕೆಗೆ ಐಟಿ ಅಧಿಕಾರಿಗಳು ಮರುಮಾತಿಲ್ಲದೇ ಒಪ್ಪಿಕೊಂಡಿದ್ದಾರೆ. ತನಿಖೆಯ ನಂತರ ಮಾಧ್ಯಮಗಳ ಜೊತೆ ಮಾತಾಡಿದ ಅವರು `ನನ್ನ ಸೆಕ್ರಟರಿ ರಮೇಶ್ ಸಾವಿನ ಕುರಿತು ಸಮರ್ಪಕ ತನಿಖೆಯಾಗಬೇಕು. ಏಕೆಂದರೆ ಕೆಲವು ಮಾಧ್ಯಮಗಳು ನಾನೇ ಕೊಲೆ ಮಾಡಿಸಿದ್ದೇನೆ, ನನ್ನ ಸ್ನೇಹಿತರು ಕೊಲೆ ಮಾಡಿಸಿದ್ದಾರೆ ಎಂದೆಲ್ಲಾ ಬಿತ್ತರಿಸಿದ್ದಾರೆ. ಇದಕ್ಕೆ ಉತ್ತರ ಸಿಗಬೇಕಾದರೆ ತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಒತ್ತಾಯಿಸಿ ಪತ್ರಬರೆಯುತ್ತೇನೆ’ ಎಂದು ಪರಂ ಹೇಳಿದ್ದಾರೆ. ಒಟ್ಟಾರೆ ಅವರ ಮಾತಿನಲ್ಲಿ ಗತ್ತಿದೆಯೇ ಹೊರತು ಯಾವ ಭಯವೂ ಇಲ್ಲ..

ಐಟಿಯನ್ನೇ ಅಳುಕಿಸಿತಾ ರಮೇಶ್ ಸಾವು?
ಒಂದು ಕಡೆ ನಾಲ್ಕು ಕೋಟಿ ಹಣ ಸಿಕ್ಕಿದೆ, ಇನ್ನೊಂದು ಕಡೆ ಅವರ ಆಪ್ತ ಸಹಾಯಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರಲ್ಲಿ ಐಟಿಯೂ ಸಿಕ್ಕಿಬಿದ್ದಿದೆ. ಮೊದಲಿಗೆ ಪರಂ ಪಿಎ ರಮೇಶ್ ಆತ್ಮಹತ್ಯೆ ಮಾಡಿಕೊಂಡಾಗ ಐಟಿ ಅಧಿಕಾರಿಗಳು `ನಾವು ಮನೆಗೆ ಹೋಗಿಲ್ಲ, ಅವರನ್ನು ವಿಚಾರಣೆ ನಡೆಸಿಲ್ಲ’ ಎಂದು ಹೇಳಿಕೆ ನೀಡಿ ಜಾರಿಕೊಳ್ಳಲು ಪ್ರಯತ್ನಿಸಿದರು. ಆದರೆ ಆರು ಜನರ ತಂಡ ಅವರ ಮನೆಗೆ ಹೋಗಿ ವಿಚಾರಣೆ ನಡೆಸಿದ್ದು ಎಲ್ಲರಿಗೂ ಗೊತ್ತಿರುವ ವಿಚಾರವಾದ್ದರಿಂದ ರಮೇಶ್ ಸಾವು ಐಟಿಯವರನ್ನೇ ಅಳುಕಿಸಿದೆ.
ಮೂರು ತಿಂಗಳ ಹಿಂದೆಯಷ್ಟೇ ಎಸ್‍ಎಂ ಕೃಷ್ಣರ ಅಳಿಯ ಸಿದ್ಧಾರ್ಥ್ ಇದೇ ಐಟಿ ಕಿರುಕುಳ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡು ದೇಶವ್ಯಾಪಿ ಸುದ್ದಿಯಾಗಿದ್ದರ ಹಿನ್ನೆಲೆಯಲ್ಲಿ ರಮೇಶ್ ಸಾವು ಸಹ ಸಂಭವಿಸಿರುವುದರಿಂದ ಐಟಿ ಕಾದು ನೋಡುವ ತಂತ್ರ ಅನುಸರಿಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...