Homeಅಂತರಾಷ್ಟ್ರೀಯಸುಡಾನ್‌ನ ಅಲ್‌-ಪಾಶೆರ್ ನಿಯಂತ್ರಣಕ್ಕೆ ಪಡೆದ ಅರೆಸೈನಿಕ ಪಡೆ ಆರ್‌ಎಸ್‌ಎಫ್‌ : ವ್ಯಾಪಕ ಹಿಂಸಾಚಾರದ ವರದಿ

ಸುಡಾನ್‌ನ ಅಲ್‌-ಪಾಶೆರ್ ನಿಯಂತ್ರಣಕ್ಕೆ ಪಡೆದ ಅರೆಸೈನಿಕ ಪಡೆ ಆರ್‌ಎಸ್‌ಎಫ್‌ : ವ್ಯಾಪಕ ಹಿಂಸಾಚಾರದ ವರದಿ

- Advertisement -
- Advertisement -

ಸುಡಾನ್‌ನ ಉತ್ತರ ದಾರ್ಫರ್ ರಾಜ್ಯದ ರಾಜಧಾನಿ ಅಲ್- ಫಾಶೆರ್‌ ಅನ್ನು ರ‍್ಯಾಪಿಡ್ ಸಪೋರ್ಟ್ ಫೋರ್ಸಸ್ (ಆರ್‌ಎಸ್‌ಎಫ್) ಸಂಪೂರ್ಣವಾಗಿ ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದೆ ಎಂದು ವರದಿಯಾಗಿದೆ.

ಆರ್‌ಎಸ್‌ಎಫ್ ಸೂಡಾನ್‌ನ ಒಂದು ಶಕ್ತಿಶಾಲಿ ಪ್ಯಾರಾ ಮಿಲಿಟರಿ ದಳವಾಗಿದ್ದು, ಇದು ಸಾಮಾನ್ಯ ಸೇನೆಯಾದ ಸೂಡಾನೀಸ್ ಆರ್ಮ್ಡ್ ಫೋರ್ಸಸ್ (ಎಸ್‌ಎಎಫ್‌) ಗಿಂತ ಸಂಪೂರ್ಣವಾಗಿ ಭಿನ್ನವಾಗಿ ಕಾರ್ಯನಿರ್ವಹಿಸುತ್ತದೆ.

2003ರಲ್ಲಿ ದಾರ್ಫರ್‌ನಲ್ಲಿ ನಡೆದ ಜನಾಂಗೀಯ ದಬ್ಬಾಳಿಕೆಯ ಸಮಯದಲ್ಲಿ ಸರ್ಕಾರಿ ಬೆಂಬಲಿತ ಜಂಜಾವೀದ್ ಮಿಲೀಷ್ಯಾಗಳಿಂದ ಉಗಮವಾದ ಈ ಗುಂಪನ್ನು 2013ರಲ್ಲಿ ಔಪಚಾರಿಕವಾಗಿ ಆರ್‌ಎಸ್‌ಎಫ್‌ ಘೋಷಿಸಲಾಯಿತು.

ಇದರ ನಾಯಕ ಮೊಹಮ್ಮದ್ ಹಮದಾನ್ ದಗಾಲೋ (ಹೆಮೆದ್ತಿ) ಚಿನ್ನದ ಗಣಿಗಳು ಮತ್ತು ಯುಎಇ ಒಡಂಬಡಿಕೆಗಳ ಮೂಲಕ ಭಾರೀ ಆರ್ಥಿಕ ಶಕ್ತಿಯನ್ನು ಸಂಗ್ರಹಿಸಿದ್ದಾನೆ. 2023ರಲ್ಲಿ ಆರಂಭವಾದ ಸೂಡಾನ್ ಆಂತರಿಕ ಯುದ್ಧದಲ್ಲಿ ಆರ್‌ಎಸ್‌ಎಫ್‌ ಮತ್ತು ಸರ್ಕಾರಿ ಸೇನೆ ನಡುವೆ ಘೋರ ಸಂಘರ್ಷ ನಡೆಯುತ್ತಿದ್ದು, ಅಕ್ಟೋಬರ್ 26,2025ರಂದು ಅಲ್‌ ಫಾಶೆರ್ ನಗರವನ್ನು ವಶಪಡಿಸಿಕೊಂಡು ದಾರ್ಫರ್‌ನ ಐದೂ ರಾಜ್ಯಗಳನ್ನು ಆರ್‌ಎಸ್‌ಎಫ್‌ ಸಂಪೂರ್ಣವಾಗಿ ತನ್ನ ನಿಯಂತ್ರಣಕ್ಕೆ ತಂದುಕೊಂಡಿದೆ.

ಆರ್‌ಎಸ್‌ಎಫ್‌ ಮೇಲೆ ಜನಾಂಗೀಯ ಶುದ್ಧೀಕರಣ, ಅತ್ಯಾಚಾರ, ನಾಗರಿಕರ ಹತ್ಯೆ, ಆಹಾರ ಸರಬರಾಜಿಗೆ ತಡೆ ಮತ್ತು ಮಾನವೀಯತೆ ವಿರೋಧಿ ಕೃತ್ಯಗಳ ಆರೋಪಗಳಿವೆ. ಇದು ಸರ್ಕಾರಿ ಸೇನೆಯ ಭಾಗವಲ್ಲದಿದ್ದರೂ, ಹಿಂದೆ ಸರ್ಕಾರದ ಪರವಾಗಿ ಕಾರ್ಯನಿರ್ವಹಿಸುತ್ತಿತ್ತು. ಈಗ ಸಂಪೂರ್ಣ ದಂಗೆಗಾರ ಶಕ್ತಿಯಾಗಿ ಪರಿಣಮಿಸಿದೆ.

ಆರ್‌ಎಸ್‌ಎಫ್‌ ಅಲ್‌-ಪಾಶೆರ್‌ ಅನ್ನು ವಶಪಡಿಸಿಕೊಂಡ ಬಳಿಕ ದಾರ್ಫರ್‌ ಪ್ರದೇಶದಲ್ಲಿ ಭಯಾನಕ ಮಾನವೀಯ ಸಂಕಷ್ಟಗಳು ಮತ್ತು ರಾಜಕೀಯ ಬದಲಾವಣೆಗಳು ಸಂಭವಿಸಿವೆ ಎಂದು ವರದಿಯಾಗಿದೆ. ಸೂಡಾನ್ ಸೇನೆಯ ನಾಯಕ ಅಬ್ದುಲ್ ಫತ್ಹ್ ಅಲ್-ಬುರ್ಹಾನ್ ಅವರು ಅಕ್ಟೋಬರ್ 27ರಂದು ಸೇನೆಯನ್ನು ‘ಸುರಕ್ಷಿತ ಸ್ಥಳಗಳಿಗೆ’ ಕರೆಸಿಕೊಂಡಿರುವುದಾಗಿ ಘೋಷಿಸಿದ್ದಾರೆ.

ಆರ್‌ಎಸ್‌ಎಫ್‌ ದೇಶವನ್ನು ವಿಭಜಿಸುವ ಆಂತಕ ಶುರುವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಅಂತಾರಾಷ್ಟ್ರೀಯ ಮಾಧ್ಯಮಗಳಲ್ಲಿ ಪ್ರಸಾರವಾದ ವಿಡಿಯೋಗಳಲ್ಲಿ ಆರ್‌ಎಸ್‌ಎಫ್‌ನವರು ಕೈಯಲ್ಲಿ ಶಸ್ತ್ರಾಸ್ತ್ರಗಳನ್ನು ಹಿಡಿದುಕೊಂಡು ಘೋಷಣೆಗಳನ್ನು ಕೂಗುವ, ನಾಗರಿಕರು ಜೀವ ಉಳಿಸಿಕೊಳ್ಳಲು ಓಡುವ ಮತ್ತು ಆರ್‌ಎಸ್‌ಎಫ್‌ನವರು ಅವರನ್ನು ಹಿಡಿದು ಬೇಕಾಬಿಟ್ಟಿ ಹತ್ಯೆ ಮಾಡಿ ಸಂಭ್ರಮಿಸಿದ ಭಯಾನಕರ ದೃಶ್ಯಗಳಿವೆ.

ಆರ್‌ಎಸ್‌ಎಫ್‌ ಅಲ್‌-ಫಾಶೆರ್‌ ಅನ್ನು ವಶಪಡಿಸಿಕೊಂಡು ದಾರ್ಫರ್ ಅನ್ನು ನಿಯಂತ್ರಣಕ್ಕೆ ಪಡೆದ ಬಳಿಕ 2,000ಕ್ಕೂ ಹೆಚ್ಚು ನಾಗರಿಕರನ್ನು (ಮಹಿಳೆಯರು ಮತ್ತು ಮಕ್ಕಳು ಸೇರಿ) ನಿರ್ದಯವಾಗಿ ಕೊಂದಿದೆ ಎಂದು ಐರೋಪಾ ಸಂಸ್ಥೆಯ ಒಂದು ವರದಿಯ ಆರೋಪಿಸಿದೆ.

ಯೇಲ್ ಹ್ಯೂಮನಿಟೇರಿಯನ್ ರಿಸರ್ಚ್ ಲ್ಯಾಬ್‌ನ ಸ್ಯಾಟೆಲೈಟ್ ಚಿತ್ರಗಳು ದಾರ್ಫರ್‌ನಲ್ಲಿ ಶವಗಳ ರಾಶಿ ಮತ್ತು ಜನರು ಜೀವ ಉಳಿಸಿಕೊಳ್ಳು ಓಡುತ್ತಿರುವುದನ್ನು ತೋರಿಸಿವೆ ಎಂದು ವರದಿಯಾಗಿದೆ.

ವಿಶ್ವ ಸಂಸ್ಥೆ (ಯುಎನ್‌) ಮತ್ತು ಆಫ್ರಿಕನ್ ಯೂನಿಯನ್ (ಎಯು) ನಾಗರಿಕರ ರಕ್ಷಣೆ ಮತ್ತು ತಕ್ಷಣದ ಶಾಂತಿ ಘೋಷಣೆಗೆ ಕರೆ ನೀಡಿವೆ. ಯುಎನ್‌ ಅಧ್ಯಕ್ಷ ಅಂಟೊನಿಯೋ ಗುಟೆರೆಸ್ ಅಲ್- ಪಾಶೆರ್ ವಶಪಡಿಸಿಕೊಂಡ ಬಳಿಕದ ಬೆಳವಣಿಗಯನ್ನು ‘ಅತ್ಯಂತ ಭೀಕರ’ ಎಂದಿದ್ದಾರೆ.

ದಾರ್ಫರ್ ಗವರ್ನರ್ ಮಿನ್ನಿ ಅರ್ಕೋ ಮಿನಾವಿ ವಿದೇಶಿ ಗೌಪ್ಯ ಸೇವೆಗಳು (ಯುಎಇ ಸೇರಿ) ಆರ್‌ಎಸ್‌ಎಫ್‌ಗೆ ಸಹಾಯ ಮಾಡಿವೆ ಎಂದು ಆರೋಪಿಸಿದ್ದಾರೆ. ಅಮೆರಿಕದ ಕಾನೂನುಸಭಾ ಸದಸ್ಯರು ಯುಎಇಯನ್ನು ಹೊಣೆ ಮಾಡಲು ಆಗ್ರಹಿಸಿದ್ದಾರೆ.

ಸುಡಾನ್‌ನ ರಾಜಕೀಯ ಮತ್ತು ಮಾನವ ಹಕ್ಕು ಸಂಘಟನೆಗಳು ಮಾನವೀಯತೆ ಮೇಲಿನ ಈ ಭೀಕರ ಹಿಂಸಾಚಾರಕ್ಕೆ ಆರ್‌ಎಸ್‌ಎಫ್‌ ಮತ್ತು ಎಸ್‌ಎಎಫ್‌ ಇಬ್ಬರನ್ನೂ ಯುದ್ಧಪರಾಧದ ಹೊಣೆ ಮಾಡುವಂತೆ ಒತ್ತಾಯಿಸಿವೆ.

ಗಾಝಾ ಮೇಲೆ ‘ಪ್ರಬಲ ದಾಳಿ’ಗೆ ನೆತನ್ಯಾಹು ಆದೇಶ : 30 ಪ್ಯಾಲೆಸ್ತೀನಿಯರನ್ನು ಹತ್ಯೆಗೈದ ಇಸ್ರೇಲ್ ಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾನೂನುಬಾಹಿರ ಹತ್ಯೆ ಆರೋಪ : ಸಿಆರ್‌ಪಿಎಫ್ ಅಧಿಕಾರಿಗೆ ಶೌರ್ಯ ಚಕ್ರ ನೀಡಿರುವುದನ್ನು ಖಂಡಿಸಿದ ಕುಕಿ-ಝೋ ಗುಂಪುಗಳು

ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌) ಅಧಿಕಾರಿಯೊಬ್ಬರು ತಮ್ಮ ಸಮುದಾಯದ ಹತ್ತು ಪುರುಷರ "ಕಾನೂನುಬಾಹಿರ ಹತ್ಯೆ"ಯಲ್ಲಿ ಭಾಗಿಯಾಗಿದ್ದಾರೆ ಎಂದು ಮಣಿಪುರದ ಕುಕಿ-ಝೋ ಸಂಘಟನೆಗಳು ಸೋಮವಾರ (ಜ.26) ಆರೋಪಿಸಿದ್ದು, ಆ ಅಧಿಕಾರಿಗೆ ಶೌರ್ಯ ಚಕ್ರ...

ಉತ್ತರ ಪ್ರದೇಶ: ಸೋನಭದ್ರಾದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಧ್ವಂಸಗೊಳಿಸಿದ ದುಷ್ಕರ್ಮಿಗಳು 

ಸೋನಭದ್ರ: ರಾಯ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಸಿಕ್ರವಾರ್ ಗ್ರಾಮದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ಸೋಮವಾರ ರಾತ್ರಿ ಅಪರಿಚಿತ ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಕ್ರಾವರ್ ಗ್ರಾಮದ ಪಂಚಾಯತ್ ಕಟ್ಟಡದ ಬಳಿ...

ಬುಡಕಟ್ಟು ರೈತರ ಬೃಹತ್ ಮೆರವಣಿಗೆ: ಬೇಡಿಕೆಗಳ ಕುರಿತು ಸಿಪಿಐ(ಎಂ)-ಎಐಕೆಎಸ್ ನಿಯೋಗದೊಂದಿಗೆ ಮುಖ್ಯಮಂತ್ರಿ ಫಡ್ನವೀಸ್ ಮಾತುಕತೆ

ಬಾಕಿ ಇರುವ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಪಿಐ(ಎಂ)-ಎಐಕೆಎಸ್ ನೇತೃತ್ವದಲ್ಲಿ ನಾಸಿಕ್‌ನಿಂದ ಮುಂಬೈಗೆ ಸಾವಿರಾರು ರೈತರು ಮತ್ತು ಬುಡಕಟ್ಟು ನಿವಾಸಿಗಳು ನಡೆಸಿದ ದೀರ್ಘ ಮೆರವಣಿಗೆ ಇಂದು ಜನವರಿ 27 ರಂದು ಮುಂಬೈನ ಮಂತ್ರಾಲಯ...

‘ಭಾರತದಲ್ಲಿ ಬಿಜೆಪಿ ದಾಳಿಯನ್ನು ಎದುರಿಸಲು ‘ದೀದಿ’ಗೆ ಮಾತ್ರ ಸಾಧ್ಯ’: ಅಖಿಲೇಶ್ ಯಾದವ್ 

ಕೋಲ್ಕತ್ತಾ: ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮಂಗಳವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿ "ಬಿಜೆಪಿಯ ದಾಳಿಯನ್ನು ಎದುರಿಸುವಲ್ಲಿನ ಧೈರ್ಯ"ಕ್ಕಾಗಿ ಟಿಎಂಸಿ ಮುಖ್ಯಸ್ಥೆಯನ್ನು ಶ್ಲಾಘಿಸಿದ್ದಾರೆ. ಉತ್ತರ ಪ್ರದೇಶದ ಮಾಜಿ...

ಬದರಿನಾಥ್-ಕೇದಾರನಾಥ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶ ನಿಷೇಧ ಸಾಧ್ಯತೆ

ಉತ್ತರಾಖಂಡದ ಹಿಮಾಲಯದ ಮಡಿಲಲ್ಲಿ ನೆಲೆಗೊಂಡಿರುವ ಶತಮಾನಗಳಷ್ಟು ಹಳೆಯದಾದ ಬದರಿನಾಥ್ ಮತ್ತು ಕೇದಾರನಾಥ ದೇವಾಲಯಗಳಿಗೆ ಶೀಘ್ರದಲ್ಲೇ ಹಿಂದೂಗಳಿಗೆ ಮಾತ್ರ ಪ್ರವೇಶ ಅನುಮತಿಸಬಹುದು. ಚಾರ್ ಧಾಮ್ ತೀರ್ಥಯಾತ್ರೆಯ ಭಾಗವಾಗಿರುವ ಎರಡು ದೇವಾಲಯಗಳಿಗೆ ಹಿಂದೂಯೇತರರನ್ನು ಪ್ರವೇಶಿಸುವುದನ್ನು ನಿಷೇಧಿಸಲಾಗುವುದು...

ವಿಬಿ-ಜಿ ರಾಮ್ ಜಿ ರದ್ದಾಗಿ ನರೇಗಾ ಪುನಃಸ್ಥಾಪನೆಯಾಗುವವರೆಗೆ ಹೋರಾಟ: ಸಿಎಂ ಸಿದ್ದರಾಮಯ್ಯ

ಕೇಂದ್ರ ಸರ್ಕಾರದ ಜನವಿರೋಧಿ ನೀತಿಯನ್ನು ಕಾಂಗ್ರೆಸ್ ಪಕ್ಷ ವಿರೋಧಿಸುತ್ತಿದ್ದು, ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗಿ ನರೇಗಾ ಪುನಃಸ್ಥಾಪನೆಯಾಗುವವರೆಗೆ ಹೋರಾಟ ಮುಂದುವರೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಂಗಳವಾರ (ಜ.27) ಬೆಂಗಳೂರಿನ ಫ್ರೀಡಂ...

ಯುಸಿಸಿಯಲ್ಲಿ 18 ಬದಲಾವಣೆ ಮಾಡಿದ ಉತ್ತರಾಖಂಡ್ ಸರ್ಕಾರ; ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ಜಾರಿಗೆ

ವಿವಾಹ, ವಿಚ್ಛೇದನ, ಲಿವ್-ಇನ್ ಸಂಬಂಧಗಳು ಮತ್ತು ಉತ್ತರಾಧಿಕಾರಕ್ಕೆ ಸಂಬಂಧಿಸಿದ ನಿಯಮಗಳನ್ನು ಬಿಗಿಗೊಳಿಸುವ ಗುರಿಯನ್ನು ಹೊಂದಿರುವ ಸುಮಾರು ಹದಿನೆಂಟು ಬದಲಾವಣೆಗಳನ್ನು ಪರಿಚಯಿಸುವ ಮೂಲಕ ಏಕರೂಪ ನಾಗರಿಕ ಸಂಹಿತೆಯ ಹಲವಾರು ನಿಬಂಧನೆಗಳನ್ನು ಮಾರ್ಪಡಿಸಲು ಉತ್ತರಾಖಂಡ ಸರ್ಕಾರ...

ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್‌ಗಳಿಗೆ ಮಹಾತ್ಮಗಾಂಧಿ ಹೆಸರು: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್‌ಗಳಿಗೆ ಮಹಾತ್ಮ ಗಾಂಧಿಯವರ ಹೆಸರಿಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಕೇಂದ್ರ ಸರ್ಕಾರ ನರೇಗಾ ಬದಲಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್‌ ಜಿ ಕಾಯ್ದೆ ವಿರುದ್ದ ಬೆಂಗಳೂರಿನ ಸ್ವಾತಂತ್ರ್ಯ...

ಜಾರ್ಖಂಡ್‌ನ ಗಿರಿದಿಹ್‌ನಲ್ಲಿ ಇಬ್ಬರು ಬುಡಕಟ್ಟು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ

ಗಿರಿದಿಹ್: ಜಾರ್ಖಂಡ್‌ನ ಗಿರಿದಿಹ್ ಜಿಲ್ಲೆಯಲ್ಲಿ ಇಬ್ಬರು ಬುಡಕಟ್ಟು ಹುಡುಗಿಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಭಾನುವಾರ ರಾತ್ರಿ ಪಿರ್ತಾಂಡ್ ಪೊಲೀಸ್ ಠಾಣೆ ವ್ಯಾಪ್ತಿಯ ಹರ್ಲಾದಿಹ್ ಪ್ರದೇಶದಲ್ಲಿ ಈ ಘಟನೆ...

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ : ಪ್ರಬಲ ಜಾತಿಯವರಿಂದ ತೀವ್ರ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯನ್ನು ಉತ್ತೇಜಿಸುವ ಉದ್ದೇಶದಿಂದ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಪ್ರಬಲ ಜಾತಿಯವರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಹೊಸ ನಿಯಮಗಳ 'ಜಾತಿ ಆಧಾರಿತ ತಾರತಮ್ಯ' ಎಂಬುವುದರ...