Homeಅಂತರಾಷ್ಟ್ರೀಯಸುಡಾನ್‌ನ ಅಲ್‌-ಪಾಶೆರ್ ನಿಯಂತ್ರಣಕ್ಕೆ ಪಡೆದ ಅರೆಸೈನಿಕ ಪಡೆ ಆರ್‌ಎಸ್‌ಎಫ್‌ : ವ್ಯಾಪಕ ಹಿಂಸಾಚಾರದ ವರದಿ

ಸುಡಾನ್‌ನ ಅಲ್‌-ಪಾಶೆರ್ ನಿಯಂತ್ರಣಕ್ಕೆ ಪಡೆದ ಅರೆಸೈನಿಕ ಪಡೆ ಆರ್‌ಎಸ್‌ಎಫ್‌ : ವ್ಯಾಪಕ ಹಿಂಸಾಚಾರದ ವರದಿ

- Advertisement -
- Advertisement -

ಸುಡಾನ್‌ನ ಉತ್ತರ ದಾರ್ಫರ್ ರಾಜ್ಯದ ರಾಜಧಾನಿ ಅಲ್- ಫಾಶೆರ್‌ ಅನ್ನು ರ‍್ಯಾಪಿಡ್ ಸಪೋರ್ಟ್ ಫೋರ್ಸಸ್ (ಆರ್‌ಎಸ್‌ಎಫ್) ಸಂಪೂರ್ಣವಾಗಿ ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದೆ ಎಂದು ವರದಿಯಾಗಿದೆ.

ಆರ್‌ಎಸ್‌ಎಫ್ ಸೂಡಾನ್‌ನ ಒಂದು ಶಕ್ತಿಶಾಲಿ ಪ್ಯಾರಾ ಮಿಲಿಟರಿ ದಳವಾಗಿದ್ದು, ಇದು ಸಾಮಾನ್ಯ ಸೇನೆಯಾದ ಸೂಡಾನೀಸ್ ಆರ್ಮ್ಡ್ ಫೋರ್ಸಸ್ (ಎಸ್‌ಎಎಫ್‌) ಗಿಂತ ಸಂಪೂರ್ಣವಾಗಿ ಭಿನ್ನವಾಗಿ ಕಾರ್ಯನಿರ್ವಹಿಸುತ್ತದೆ.

2003ರಲ್ಲಿ ದಾರ್ಫರ್‌ನಲ್ಲಿ ನಡೆದ ಜನಾಂಗೀಯ ದಬ್ಬಾಳಿಕೆಯ ಸಮಯದಲ್ಲಿ ಸರ್ಕಾರಿ ಬೆಂಬಲಿತ ಜಂಜಾವೀದ್ ಮಿಲೀಷ್ಯಾಗಳಿಂದ ಉಗಮವಾದ ಈ ಗುಂಪನ್ನು 2013ರಲ್ಲಿ ಔಪಚಾರಿಕವಾಗಿ ಆರ್‌ಎಸ್‌ಎಫ್‌ ಘೋಷಿಸಲಾಯಿತು.

ಇದರ ನಾಯಕ ಮೊಹಮ್ಮದ್ ಹಮದಾನ್ ದಗಾಲೋ (ಹೆಮೆದ್ತಿ) ಚಿನ್ನದ ಗಣಿಗಳು ಮತ್ತು ಯುಎಇ ಒಡಂಬಡಿಕೆಗಳ ಮೂಲಕ ಭಾರೀ ಆರ್ಥಿಕ ಶಕ್ತಿಯನ್ನು ಸಂಗ್ರಹಿಸಿದ್ದಾನೆ. 2023ರಲ್ಲಿ ಆರಂಭವಾದ ಸೂಡಾನ್ ಆಂತರಿಕ ಯುದ್ಧದಲ್ಲಿ ಆರ್‌ಎಸ್‌ಎಫ್‌ ಮತ್ತು ಸರ್ಕಾರಿ ಸೇನೆ ನಡುವೆ ಘೋರ ಸಂಘರ್ಷ ನಡೆಯುತ್ತಿದ್ದು, ಅಕ್ಟೋಬರ್ 26,2025ರಂದು ಅಲ್‌ ಫಾಶೆರ್ ನಗರವನ್ನು ವಶಪಡಿಸಿಕೊಂಡು ದಾರ್ಫರ್‌ನ ಐದೂ ರಾಜ್ಯಗಳನ್ನು ಆರ್‌ಎಸ್‌ಎಫ್‌ ಸಂಪೂರ್ಣವಾಗಿ ತನ್ನ ನಿಯಂತ್ರಣಕ್ಕೆ ತಂದುಕೊಂಡಿದೆ.

ಆರ್‌ಎಸ್‌ಎಫ್‌ ಮೇಲೆ ಜನಾಂಗೀಯ ಶುದ್ಧೀಕರಣ, ಅತ್ಯಾಚಾರ, ನಾಗರಿಕರ ಹತ್ಯೆ, ಆಹಾರ ಸರಬರಾಜಿಗೆ ತಡೆ ಮತ್ತು ಮಾನವೀಯತೆ ವಿರೋಧಿ ಕೃತ್ಯಗಳ ಆರೋಪಗಳಿವೆ. ಇದು ಸರ್ಕಾರಿ ಸೇನೆಯ ಭಾಗವಲ್ಲದಿದ್ದರೂ, ಹಿಂದೆ ಸರ್ಕಾರದ ಪರವಾಗಿ ಕಾರ್ಯನಿರ್ವಹಿಸುತ್ತಿತ್ತು. ಈಗ ಸಂಪೂರ್ಣ ದಂಗೆಗಾರ ಶಕ್ತಿಯಾಗಿ ಪರಿಣಮಿಸಿದೆ.

ಆರ್‌ಎಸ್‌ಎಫ್‌ ಅಲ್‌-ಪಾಶೆರ್‌ ಅನ್ನು ವಶಪಡಿಸಿಕೊಂಡ ಬಳಿಕ ದಾರ್ಫರ್‌ ಪ್ರದೇಶದಲ್ಲಿ ಭಯಾನಕ ಮಾನವೀಯ ಸಂಕಷ್ಟಗಳು ಮತ್ತು ರಾಜಕೀಯ ಬದಲಾವಣೆಗಳು ಸಂಭವಿಸಿವೆ ಎಂದು ವರದಿಯಾಗಿದೆ. ಸೂಡಾನ್ ಸೇನೆಯ ನಾಯಕ ಅಬ್ದುಲ್ ಫತ್ಹ್ ಅಲ್-ಬುರ್ಹಾನ್ ಅವರು ಅಕ್ಟೋಬರ್ 27ರಂದು ಸೇನೆಯನ್ನು ‘ಸುರಕ್ಷಿತ ಸ್ಥಳಗಳಿಗೆ’ ಕರೆಸಿಕೊಂಡಿರುವುದಾಗಿ ಘೋಷಿಸಿದ್ದಾರೆ.

ಆರ್‌ಎಸ್‌ಎಫ್‌ ದೇಶವನ್ನು ವಿಭಜಿಸುವ ಆಂತಕ ಶುರುವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಅಂತಾರಾಷ್ಟ್ರೀಯ ಮಾಧ್ಯಮಗಳಲ್ಲಿ ಪ್ರಸಾರವಾದ ವಿಡಿಯೋಗಳಲ್ಲಿ ಆರ್‌ಎಸ್‌ಎಫ್‌ನವರು ಕೈಯಲ್ಲಿ ಶಸ್ತ್ರಾಸ್ತ್ರಗಳನ್ನು ಹಿಡಿದುಕೊಂಡು ಘೋಷಣೆಗಳನ್ನು ಕೂಗುವ, ನಾಗರಿಕರು ಜೀವ ಉಳಿಸಿಕೊಳ್ಳಲು ಓಡುವ ಮತ್ತು ಆರ್‌ಎಸ್‌ಎಫ್‌ನವರು ಅವರನ್ನು ಹಿಡಿದು ಬೇಕಾಬಿಟ್ಟಿ ಹತ್ಯೆ ಮಾಡಿ ಸಂಭ್ರಮಿಸಿದ ಭಯಾನಕರ ದೃಶ್ಯಗಳಿವೆ.

ಆರ್‌ಎಸ್‌ಎಫ್‌ ಅಲ್‌-ಫಾಶೆರ್‌ ಅನ್ನು ವಶಪಡಿಸಿಕೊಂಡು ದಾರ್ಫರ್ ಅನ್ನು ನಿಯಂತ್ರಣಕ್ಕೆ ಪಡೆದ ಬಳಿಕ 2,000ಕ್ಕೂ ಹೆಚ್ಚು ನಾಗರಿಕರನ್ನು (ಮಹಿಳೆಯರು ಮತ್ತು ಮಕ್ಕಳು ಸೇರಿ) ನಿರ್ದಯವಾಗಿ ಕೊಂದಿದೆ ಎಂದು ಐರೋಪಾ ಸಂಸ್ಥೆಯ ಒಂದು ವರದಿಯ ಆರೋಪಿಸಿದೆ.

ಯೇಲ್ ಹ್ಯೂಮನಿಟೇರಿಯನ್ ರಿಸರ್ಚ್ ಲ್ಯಾಬ್‌ನ ಸ್ಯಾಟೆಲೈಟ್ ಚಿತ್ರಗಳು ದಾರ್ಫರ್‌ನಲ್ಲಿ ಶವಗಳ ರಾಶಿ ಮತ್ತು ಜನರು ಜೀವ ಉಳಿಸಿಕೊಳ್ಳು ಓಡುತ್ತಿರುವುದನ್ನು ತೋರಿಸಿವೆ ಎಂದು ವರದಿಯಾಗಿದೆ.

ವಿಶ್ವ ಸಂಸ್ಥೆ (ಯುಎನ್‌) ಮತ್ತು ಆಫ್ರಿಕನ್ ಯೂನಿಯನ್ (ಎಯು) ನಾಗರಿಕರ ರಕ್ಷಣೆ ಮತ್ತು ತಕ್ಷಣದ ಶಾಂತಿ ಘೋಷಣೆಗೆ ಕರೆ ನೀಡಿವೆ. ಯುಎನ್‌ ಅಧ್ಯಕ್ಷ ಅಂಟೊನಿಯೋ ಗುಟೆರೆಸ್ ಅಲ್- ಪಾಶೆರ್ ವಶಪಡಿಸಿಕೊಂಡ ಬಳಿಕದ ಬೆಳವಣಿಗಯನ್ನು ‘ಅತ್ಯಂತ ಭೀಕರ’ ಎಂದಿದ್ದಾರೆ.

ದಾರ್ಫರ್ ಗವರ್ನರ್ ಮಿನ್ನಿ ಅರ್ಕೋ ಮಿನಾವಿ ವಿದೇಶಿ ಗೌಪ್ಯ ಸೇವೆಗಳು (ಯುಎಇ ಸೇರಿ) ಆರ್‌ಎಸ್‌ಎಫ್‌ಗೆ ಸಹಾಯ ಮಾಡಿವೆ ಎಂದು ಆರೋಪಿಸಿದ್ದಾರೆ. ಅಮೆರಿಕದ ಕಾನೂನುಸಭಾ ಸದಸ್ಯರು ಯುಎಇಯನ್ನು ಹೊಣೆ ಮಾಡಲು ಆಗ್ರಹಿಸಿದ್ದಾರೆ.

ಸುಡಾನ್‌ನ ರಾಜಕೀಯ ಮತ್ತು ಮಾನವ ಹಕ್ಕು ಸಂಘಟನೆಗಳು ಮಾನವೀಯತೆ ಮೇಲಿನ ಈ ಭೀಕರ ಹಿಂಸಾಚಾರಕ್ಕೆ ಆರ್‌ಎಸ್‌ಎಫ್‌ ಮತ್ತು ಎಸ್‌ಎಎಫ್‌ ಇಬ್ಬರನ್ನೂ ಯುದ್ಧಪರಾಧದ ಹೊಣೆ ಮಾಡುವಂತೆ ಒತ್ತಾಯಿಸಿವೆ.

ಗಾಝಾ ಮೇಲೆ ‘ಪ್ರಬಲ ದಾಳಿ’ಗೆ ನೆತನ್ಯಾಹು ಆದೇಶ : 30 ಪ್ಯಾಲೆಸ್ತೀನಿಯರನ್ನು ಹತ್ಯೆಗೈದ ಇಸ್ರೇಲ್ ಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದತ್ತಾಂಶ ಸಂರಕ್ಷಣಾ ಕಾನೂನಿನಡಿಯಲ್ಲಿ ಆರ್‌ಟಿಐ ತಿದ್ದುಪಡಿಗೆ ತಡೆ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್

ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಕಾಯ್ದೆಯ ಮೂಲಕ ಪರಿಚಯಿಸಲಾದ ಮಾಹಿತಿ ಹಕ್ಕು ಕಾಯ್ದೆಗೆ ತಿದ್ದುಪಡಿಯನ್ನು ತಡೆಹಿಡಿಯಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ ಎಂದು 'ಬಾರ್ ಮತ್ತು ಬೆಂಚ್' ವರದಿ ಮಾಡಿದೆ. ಸಾರ್ವಜನಿಕ ಹಿತಾಸಕ್ತಿಯ ಆಧಾರದ...

ಅಜಿತ್ ಪವಾರ್ ಸಾವು : ಎರಡೂ ಫ್ಲೈಟ್ ರೆಕಾರ್ಡರ್‌ಗಳು ಹಾನಿಗೊಳಗಾಗಿವೆ ಎಂದ ವಿಮಾನಯಾನ ಸಚಿವಾಲಯ

ಬಾರಾಮತಿಯಲ್ಲಿ ಜನವರಿ 28 ರಂದು ಅಜಿತ್ ಪವಾರ್ ಅವರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಅಪಘಾತಕ್ಕೀಡಾದ ಬಗ್ಗೆ ನಾಗರಿಕ ವಿಮಾನಯಾನ ಸಚಿವಾಲಯವು ಮಂಗಳವಾರ (ಫೆ.17) ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ವಿಮಾನದ ಎರಡೂ ಸ್ವತಂತ್ರ ಫ್ಲೈಟ್...

ರಾಜಸ್ಥಾನ| ಮೊದಲ ಬಜೆಟ್‌ನಲ್ಲಿ ಪಕ್ಷವು ‘ಗಂಡು ಮಗುವಿಗೆ ಜನ್ಮ ನೀಡಿದೆ’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಶಾಸಕ

ರಾಜಸ್ಥಾನದ ಬಿಜೆಪಿ ಶಾಸಕ ಬಹದ್ದೂರ್ ಸಿಂಗ್ ಕೋಲಿ, ತಮ್ಮ ಪಕ್ಷ ಮತ್ತು ಕಾಂಗ್ರೆಸ್ ಮಂಡಿಸಿದ ಬಜೆಟ್‌ಗಳನ್ನು ಗಂಡು ಮತ್ತು ಹೆಣ್ಣು ಮಗುವಿನ ಜನನಕ್ಕೆ ಹೋಲಿಸಿದ ಬಳಿಕ ವಿಧಾನಸಭೆಯಲ್ಲಿ ವಿವಾದ ಭುಗಿಲೆದ್ದಿತು. ರಾಜ್ಯ ಬಜೆಟ್ ಮೇಲಿನ...

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ತಾರಿಖ್ ರೆಹಮಾನ್ ಪ್ರಮಾಣವಚನ ಸ್ವೀಕಾರ

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ನಾಯಕ ತಾರಿಖ್ ರೆಹಮಾನ್ ಅವರು ಮಂಗಳವಾರ (ಫೆ.17) ಪ್ರಮಾಣ ವಚನ ಸ್ವೀಕರಿಸಿದರು. ಪದಗ್ರಹಣ ಕಾರ್ಯಕ್ರಮವು ಸಂಪ್ರದಾಯದಂತೆ ಅಧ್ಯಕ್ಷೀಯ ಅರಮನೆಯಲ್ಲಿ ನಡೆಯುವ ಬದಲು, ಢಾಕಾದ ರಾಷ್ಟ್ರೀಯ...

ಮಹಾರಾಷ್ಟ್ರ| ಪರೀಕ್ಷೆಯ ಸಮಯದಲ್ಲಿ ಸಾಮೂಹಿಕ ನಕಲಿಗೆ ಬೆಂಬಲಿಸಿದ 5 ಜನ ಶಿಕ್ಷಕರ ಅಮಾನತು

ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೇಂದ್ರವೊಂದರಲ್ಲಿ ನಡೆದ 12 ನೇ ತರಗತಿಯ ಹೆಚ್‌ಎಸ್‌ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಸಮಯದಲ್ಲಿ ದೊಡ್ಡ ಪ್ರಮಾಣದಲ್ಲಿ ನಕಲು ಮಾಡಲು ಅನುಕೂಲ ಮಾಡಿಕೊಟ್ಟ ಆರೋಪದ ಮೇಲೆ ಸಿಕ್ಕಿಬಿದ್ದ ಐದು ಶಿಕ್ಷಕರನ್ನು...

ಬಿಜೆಪಿ ವಿರುದ್ಧ 40% ಕಮಿಷನ್ ಜಾಹೀರಾತು : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್‌

ಜಾಹೀರಾತಿಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಹೈಕೋರ್ಟ್ ಮಂಗಳವಾರ (ಫೆ.17) ರದ್ದುಗೊಳಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಬಾರ್ & ಬೆಂಚ್ ವರದಿ ಮಾಡಿದೆ. ಪ್ರಕರಣ ರದ್ದುಕೋರಿ...

‘ನಾವು ಎಐ ಯುಗದಲ್ಲಿದ್ದೇವೆ..’; ಸೋನಮ್ ವಾಂಗ್‌ಚುಕ್ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಅಸಮಾಧಾನ

ಲಡಾಖ್ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ವಿರುದ್ಧ ಸಲ್ಲಿಸಿದ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರವನ್ನು ಪ್ರಶ್ನಿಸಿದೆ. ಕೃತಕ ಬುದ್ಧಿಮತ್ತೆ (ಎಐ) ಕಾಲದಲ್ಲಿ ಅನುವಾದ ನಿಖರವಾಗಿರಬೇಕು ಎಂದು ಹೇಳಿದೆ. ನ್ಯಾಯಮೂರ್ತಿಗಳಾದ...

ಬಜೆಟ್ ಅಧಿವೇಶನದಲ್ಲಿ ‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ದೌರ್ಜನ್ಯವನ್ನು ತಡೆಯುವ ಸಲುವಾಗಿ ತುರ್ತಾಗಿ 'ರೋಹಿತ್ ವೇಮುಲ ಕಾಯ್ದೆ'ಯನ್ನು ಜಾರಿಗೊಳಿಸಬೇಕು ಎಂದು 'ರೋಹಿತ್ ವೇಮುಲ ಕಾಯ್ದೆಗಾಗಿ ಜನಾಂದೋಲನ' ತಂಡ ರಾಜ್ಯ ಸರ್ಕಾರವನ್ನು ಆಗ್ರಹಿಸಿತು. ಮಂಗಳವಾರ (ಫೆ.17) ಬೆಂಗಳೂರಿನ ಪ್ರೆಸ್‌...

ಖಾಸಗಿ ಜಾಗದಲ್ಲಿ ನಮಾಝ್ ತಡೆದ ಅಧಿಕಾರಿಗಳು: ನ್ಯಾಯಾಂಗ ನಿಂದನೆ ನೋಟಿಸ್ ನೀಡಿದ ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮೊಹಮ್ಮದ್‌ಗಂಜ್ ಗ್ರಾಮದ ಖಾಲಿ ಮನೆಯೊಂದರಲ್ಲಿ ಮುಸ್ಲಿಂ ಸಮುದಾಯದವರು ನಮಾಝ್ ಮಾಡುವುದನ್ನು ತಡೆದ ಜಿಲ್ಲಾಧಿಕಾರಿ ಅವಿನಾಶ್ ಸಿಂಗ್ ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ಅವರಿಗೆ ಅಲಹಾಬಾದ್...

ರೂ. 80 ಸಾವಿರ ಕೋಟಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ಎನ್‌ಜಿಟಿ ಹಸಿರು ನಿಶಾನೆ

ತೀವ್ರ ವಿರೋಧಗಳ ನಡುವೆಯೇ 80 ಸಾವಿರ ಕೋಟಿ ರೂಪಾಯಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್‌ಜಿಟಿ) ಸೋಮವಾರ (ಫೆ.16) ಹಸಿರು ನಿಶಾನೆ ತೋರಿದೆ. ಆರು ಸದಸ್ಯರ ಎನ್‌ಜಿಟಿಯ ವಿಶೇಷ...