Homeಅಂತರಾಷ್ಟ್ರೀಯಸುಡಾನ್‌ನ ಅಲ್‌-ಪಾಶೆರ್ ನಿಯಂತ್ರಣಕ್ಕೆ ಪಡೆದ ಅರೆಸೈನಿಕ ಪಡೆ ಆರ್‌ಎಸ್‌ಎಫ್‌ : ವ್ಯಾಪಕ ಹಿಂಸಾಚಾರದ ವರದಿ

ಸುಡಾನ್‌ನ ಅಲ್‌-ಪಾಶೆರ್ ನಿಯಂತ್ರಣಕ್ಕೆ ಪಡೆದ ಅರೆಸೈನಿಕ ಪಡೆ ಆರ್‌ಎಸ್‌ಎಫ್‌ : ವ್ಯಾಪಕ ಹಿಂಸಾಚಾರದ ವರದಿ

- Advertisement -
- Advertisement -

ಸುಡಾನ್‌ನ ಉತ್ತರ ದಾರ್ಫರ್ ರಾಜ್ಯದ ರಾಜಧಾನಿ ಅಲ್- ಫಾಶೆರ್‌ ಅನ್ನು ರ‍್ಯಾಪಿಡ್ ಸಪೋರ್ಟ್ ಫೋರ್ಸಸ್ (ಆರ್‌ಎಸ್‌ಎಫ್) ಸಂಪೂರ್ಣವಾಗಿ ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದೆ ಎಂದು ವರದಿಯಾಗಿದೆ.

ಆರ್‌ಎಸ್‌ಎಫ್ ಸೂಡಾನ್‌ನ ಒಂದು ಶಕ್ತಿಶಾಲಿ ಪ್ಯಾರಾ ಮಿಲಿಟರಿ ದಳವಾಗಿದ್ದು, ಇದು ಸಾಮಾನ್ಯ ಸೇನೆಯಾದ ಸೂಡಾನೀಸ್ ಆರ್ಮ್ಡ್ ಫೋರ್ಸಸ್ (ಎಸ್‌ಎಎಫ್‌) ಗಿಂತ ಸಂಪೂರ್ಣವಾಗಿ ಭಿನ್ನವಾಗಿ ಕಾರ್ಯನಿರ್ವಹಿಸುತ್ತದೆ.

2003ರಲ್ಲಿ ದಾರ್ಫರ್‌ನಲ್ಲಿ ನಡೆದ ಜನಾಂಗೀಯ ದಬ್ಬಾಳಿಕೆಯ ಸಮಯದಲ್ಲಿ ಸರ್ಕಾರಿ ಬೆಂಬಲಿತ ಜಂಜಾವೀದ್ ಮಿಲೀಷ್ಯಾಗಳಿಂದ ಉಗಮವಾದ ಈ ಗುಂಪನ್ನು 2013ರಲ್ಲಿ ಔಪಚಾರಿಕವಾಗಿ ಆರ್‌ಎಸ್‌ಎಫ್‌ ಘೋಷಿಸಲಾಯಿತು.

ಇದರ ನಾಯಕ ಮೊಹಮ್ಮದ್ ಹಮದಾನ್ ದಗಾಲೋ (ಹೆಮೆದ್ತಿ) ಚಿನ್ನದ ಗಣಿಗಳು ಮತ್ತು ಯುಎಇ ಒಡಂಬಡಿಕೆಗಳ ಮೂಲಕ ಭಾರೀ ಆರ್ಥಿಕ ಶಕ್ತಿಯನ್ನು ಸಂಗ್ರಹಿಸಿದ್ದಾನೆ. 2023ರಲ್ಲಿ ಆರಂಭವಾದ ಸೂಡಾನ್ ಆಂತರಿಕ ಯುದ್ಧದಲ್ಲಿ ಆರ್‌ಎಸ್‌ಎಫ್‌ ಮತ್ತು ಸರ್ಕಾರಿ ಸೇನೆ ನಡುವೆ ಘೋರ ಸಂಘರ್ಷ ನಡೆಯುತ್ತಿದ್ದು, ಅಕ್ಟೋಬರ್ 26,2025ರಂದು ಅಲ್‌ ಫಾಶೆರ್ ನಗರವನ್ನು ವಶಪಡಿಸಿಕೊಂಡು ದಾರ್ಫರ್‌ನ ಐದೂ ರಾಜ್ಯಗಳನ್ನು ಆರ್‌ಎಸ್‌ಎಫ್‌ ಸಂಪೂರ್ಣವಾಗಿ ತನ್ನ ನಿಯಂತ್ರಣಕ್ಕೆ ತಂದುಕೊಂಡಿದೆ.

ಆರ್‌ಎಸ್‌ಎಫ್‌ ಮೇಲೆ ಜನಾಂಗೀಯ ಶುದ್ಧೀಕರಣ, ಅತ್ಯಾಚಾರ, ನಾಗರಿಕರ ಹತ್ಯೆ, ಆಹಾರ ಸರಬರಾಜಿಗೆ ತಡೆ ಮತ್ತು ಮಾನವೀಯತೆ ವಿರೋಧಿ ಕೃತ್ಯಗಳ ಆರೋಪಗಳಿವೆ. ಇದು ಸರ್ಕಾರಿ ಸೇನೆಯ ಭಾಗವಲ್ಲದಿದ್ದರೂ, ಹಿಂದೆ ಸರ್ಕಾರದ ಪರವಾಗಿ ಕಾರ್ಯನಿರ್ವಹಿಸುತ್ತಿತ್ತು. ಈಗ ಸಂಪೂರ್ಣ ದಂಗೆಗಾರ ಶಕ್ತಿಯಾಗಿ ಪರಿಣಮಿಸಿದೆ.

ಆರ್‌ಎಸ್‌ಎಫ್‌ ಅಲ್‌-ಪಾಶೆರ್‌ ಅನ್ನು ವಶಪಡಿಸಿಕೊಂಡ ಬಳಿಕ ದಾರ್ಫರ್‌ ಪ್ರದೇಶದಲ್ಲಿ ಭಯಾನಕ ಮಾನವೀಯ ಸಂಕಷ್ಟಗಳು ಮತ್ತು ರಾಜಕೀಯ ಬದಲಾವಣೆಗಳು ಸಂಭವಿಸಿವೆ ಎಂದು ವರದಿಯಾಗಿದೆ. ಸೂಡಾನ್ ಸೇನೆಯ ನಾಯಕ ಅಬ್ದುಲ್ ಫತ್ಹ್ ಅಲ್-ಬುರ್ಹಾನ್ ಅವರು ಅಕ್ಟೋಬರ್ 27ರಂದು ಸೇನೆಯನ್ನು ‘ಸುರಕ್ಷಿತ ಸ್ಥಳಗಳಿಗೆ’ ಕರೆಸಿಕೊಂಡಿರುವುದಾಗಿ ಘೋಷಿಸಿದ್ದಾರೆ.

ಆರ್‌ಎಸ್‌ಎಫ್‌ ದೇಶವನ್ನು ವಿಭಜಿಸುವ ಆಂತಕ ಶುರುವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಅಂತಾರಾಷ್ಟ್ರೀಯ ಮಾಧ್ಯಮಗಳಲ್ಲಿ ಪ್ರಸಾರವಾದ ವಿಡಿಯೋಗಳಲ್ಲಿ ಆರ್‌ಎಸ್‌ಎಫ್‌ನವರು ಕೈಯಲ್ಲಿ ಶಸ್ತ್ರಾಸ್ತ್ರಗಳನ್ನು ಹಿಡಿದುಕೊಂಡು ಘೋಷಣೆಗಳನ್ನು ಕೂಗುವ, ನಾಗರಿಕರು ಜೀವ ಉಳಿಸಿಕೊಳ್ಳಲು ಓಡುವ ಮತ್ತು ಆರ್‌ಎಸ್‌ಎಫ್‌ನವರು ಅವರನ್ನು ಹಿಡಿದು ಬೇಕಾಬಿಟ್ಟಿ ಹತ್ಯೆ ಮಾಡಿ ಸಂಭ್ರಮಿಸಿದ ಭಯಾನಕರ ದೃಶ್ಯಗಳಿವೆ.

ಆರ್‌ಎಸ್‌ಎಫ್‌ ಅಲ್‌-ಫಾಶೆರ್‌ ಅನ್ನು ವಶಪಡಿಸಿಕೊಂಡು ದಾರ್ಫರ್ ಅನ್ನು ನಿಯಂತ್ರಣಕ್ಕೆ ಪಡೆದ ಬಳಿಕ 2,000ಕ್ಕೂ ಹೆಚ್ಚು ನಾಗರಿಕರನ್ನು (ಮಹಿಳೆಯರು ಮತ್ತು ಮಕ್ಕಳು ಸೇರಿ) ನಿರ್ದಯವಾಗಿ ಕೊಂದಿದೆ ಎಂದು ಐರೋಪಾ ಸಂಸ್ಥೆಯ ಒಂದು ವರದಿಯ ಆರೋಪಿಸಿದೆ.

ಯೇಲ್ ಹ್ಯೂಮನಿಟೇರಿಯನ್ ರಿಸರ್ಚ್ ಲ್ಯಾಬ್‌ನ ಸ್ಯಾಟೆಲೈಟ್ ಚಿತ್ರಗಳು ದಾರ್ಫರ್‌ನಲ್ಲಿ ಶವಗಳ ರಾಶಿ ಮತ್ತು ಜನರು ಜೀವ ಉಳಿಸಿಕೊಳ್ಳು ಓಡುತ್ತಿರುವುದನ್ನು ತೋರಿಸಿವೆ ಎಂದು ವರದಿಯಾಗಿದೆ.

ವಿಶ್ವ ಸಂಸ್ಥೆ (ಯುಎನ್‌) ಮತ್ತು ಆಫ್ರಿಕನ್ ಯೂನಿಯನ್ (ಎಯು) ನಾಗರಿಕರ ರಕ್ಷಣೆ ಮತ್ತು ತಕ್ಷಣದ ಶಾಂತಿ ಘೋಷಣೆಗೆ ಕರೆ ನೀಡಿವೆ. ಯುಎನ್‌ ಅಧ್ಯಕ್ಷ ಅಂಟೊನಿಯೋ ಗುಟೆರೆಸ್ ಅಲ್- ಪಾಶೆರ್ ವಶಪಡಿಸಿಕೊಂಡ ಬಳಿಕದ ಬೆಳವಣಿಗಯನ್ನು ‘ಅತ್ಯಂತ ಭೀಕರ’ ಎಂದಿದ್ದಾರೆ.

ದಾರ್ಫರ್ ಗವರ್ನರ್ ಮಿನ್ನಿ ಅರ್ಕೋ ಮಿನಾವಿ ವಿದೇಶಿ ಗೌಪ್ಯ ಸೇವೆಗಳು (ಯುಎಇ ಸೇರಿ) ಆರ್‌ಎಸ್‌ಎಫ್‌ಗೆ ಸಹಾಯ ಮಾಡಿವೆ ಎಂದು ಆರೋಪಿಸಿದ್ದಾರೆ. ಅಮೆರಿಕದ ಕಾನೂನುಸಭಾ ಸದಸ್ಯರು ಯುಎಇಯನ್ನು ಹೊಣೆ ಮಾಡಲು ಆಗ್ರಹಿಸಿದ್ದಾರೆ.

ಸುಡಾನ್‌ನ ರಾಜಕೀಯ ಮತ್ತು ಮಾನವ ಹಕ್ಕು ಸಂಘಟನೆಗಳು ಮಾನವೀಯತೆ ಮೇಲಿನ ಈ ಭೀಕರ ಹಿಂಸಾಚಾರಕ್ಕೆ ಆರ್‌ಎಸ್‌ಎಫ್‌ ಮತ್ತು ಎಸ್‌ಎಎಫ್‌ ಇಬ್ಬರನ್ನೂ ಯುದ್ಧಪರಾಧದ ಹೊಣೆ ಮಾಡುವಂತೆ ಒತ್ತಾಯಿಸಿವೆ.

ಗಾಝಾ ಮೇಲೆ ‘ಪ್ರಬಲ ದಾಳಿ’ಗೆ ನೆತನ್ಯಾಹು ಆದೇಶ : 30 ಪ್ಯಾಲೆಸ್ತೀನಿಯರನ್ನು ಹತ್ಯೆಗೈದ ಇಸ್ರೇಲ್ ಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...

ಬಿಜೆಪಿಯೊಂದಿಗೆ ಕೈಜೋಡಿಸಿದ ಗೌಡರೊಂದಿಗಿನ ಸಂಬಂಧ ಕಡಿದುಕೊಳ್ಳಲು ನಿರ್ಧರಿಸಿದ ಕೇರಳ ಜೆಡಿಎಸ್; ಹೊಸ ಪಕ್ಷದೊಂದಿಗೆ ವಿಲೀನ

ಜನತಾ ದಳ (ಜಾತ್ಯತೀತ) ದ ಕೇರಳ ಘಟಕವು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನೇತೃತ್ವದ ರಾಷ್ಟ್ರೀಯ ನಾಯಕತ್ವದೊಂದಿಗೆ ಸಂಬಂಧವನ್ನು ಕಡಿದುಕೊಂಡು ಹೊಸ ರಾಜಕೀಯ ಪಕ್ಷದೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದೆ. ಈ ನಿರ್ಧಾರದ ಕುರಿತು ಶೀಘ್ರದಲ್ಲೇ ಅಧಿಕೃತ...

‘ಚೀನಾ, ರಷ್ಯಾ, ಕ್ಯೂಬಾ, ಇರಾನ್‌ಗಳನ್ನು ಹೊರಗಿಡಿ’: ವೆನೆಜುವೆಲಾಗೆ ಟ್ರಂಪ್ ತಂಡದ ಹೊಸ ತೈಲ ಎಚ್ಚರಿಕೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ವೆನೆಜುವೆಲಾದ ಮಧ್ಯಂತರ ಅಧ್ಯಕ್ಷ ಡೆಲ್ಸಿ ರೊಡ್ರಿಗಸ್ ನೇತೃತ್ವದ ಹೊಸ ಆಡಳಿತಕ್ಕೆ ಚೀನಾ, ರಷ್ಯಾ, ಇರಾನ್ ಮತ್ತು ಕ್ಯೂಬಾ ಜೊತೆಗಿನ ಆರ್ಥಿಕ ಸಂಬಂಧಗಳನ್ನು "ಕಿತ್ತುಹಾಕಬೇಕು" ಮತ್ತು "ಕಡಿತಗೊಳಿಸಬೇಕು" ಎಂದು...

ದೆಹಲಿ ಫೈಜ್-ಎ-ಇಲಾಹಿ ಮಸೀದಿ ಬಳಿ ತೆರವು ಕಾರ್ಯಾಚರಣೆಗೆ ಸ್ಥಳೀಯರಿಂದ ವಿರೋಧ, ಉದ್ವಿಗ್ನತೆ; ಅಶ್ರುವಾಯು ಪ್ರಯೋಗ, 10 ಜನರ ಬಂಧನ

ದೆಹಲಿಯ ತುರ್ಕಮನ್ ಗೇಟ್-ರಾಮ್ಲೀಲಾ ಮೈದಾನ ಪ್ರದೇಶದಲ್ಲಿರುವ ಶತಮಾನಗಳಷ್ಟು ಹಳೆಯದಾದ ಫೈಜ್-ಎ-ಇಲಾಹಿ ಮಸೀದಿಯ ಬಳಿ ಬುಧವಾರ ಮುಂಜಾನೆ ನಡೆದ ತೆರವು ಕಾರ್ಯಾಚರಣೆಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದು, ಆ ನಂತರ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿದೆ, ಇದು...