Homeಅಂತರಾಷ್ಟ್ರೀಯಸುಡಾನ್‌ನ ಅಲ್‌-ಪಾಶೆರ್ ನಿಯಂತ್ರಣಕ್ಕೆ ಪಡೆದ ಅರೆಸೈನಿಕ ಪಡೆ ಆರ್‌ಎಸ್‌ಎಫ್‌ : ವ್ಯಾಪಕ ಹಿಂಸಾಚಾರದ ವರದಿ

ಸುಡಾನ್‌ನ ಅಲ್‌-ಪಾಶೆರ್ ನಿಯಂತ್ರಣಕ್ಕೆ ಪಡೆದ ಅರೆಸೈನಿಕ ಪಡೆ ಆರ್‌ಎಸ್‌ಎಫ್‌ : ವ್ಯಾಪಕ ಹಿಂಸಾಚಾರದ ವರದಿ

- Advertisement -
- Advertisement -

ಸುಡಾನ್‌ನ ಉತ್ತರ ದಾರ್ಫರ್ ರಾಜ್ಯದ ರಾಜಧಾನಿ ಅಲ್- ಫಾಶೆರ್‌ ಅನ್ನು ರ‍್ಯಾಪಿಡ್ ಸಪೋರ್ಟ್ ಫೋರ್ಸಸ್ (ಆರ್‌ಎಸ್‌ಎಫ್) ಸಂಪೂರ್ಣವಾಗಿ ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದೆ ಎಂದು ವರದಿಯಾಗಿದೆ.

ಆರ್‌ಎಸ್‌ಎಫ್ ಸೂಡಾನ್‌ನ ಒಂದು ಶಕ್ತಿಶಾಲಿ ಪ್ಯಾರಾ ಮಿಲಿಟರಿ ದಳವಾಗಿದ್ದು, ಇದು ಸಾಮಾನ್ಯ ಸೇನೆಯಾದ ಸೂಡಾನೀಸ್ ಆರ್ಮ್ಡ್ ಫೋರ್ಸಸ್ (ಎಸ್‌ಎಎಫ್‌) ಗಿಂತ ಸಂಪೂರ್ಣವಾಗಿ ಭಿನ್ನವಾಗಿ ಕಾರ್ಯನಿರ್ವಹಿಸುತ್ತದೆ.

2003ರಲ್ಲಿ ದಾರ್ಫರ್‌ನಲ್ಲಿ ನಡೆದ ಜನಾಂಗೀಯ ದಬ್ಬಾಳಿಕೆಯ ಸಮಯದಲ್ಲಿ ಸರ್ಕಾರಿ ಬೆಂಬಲಿತ ಜಂಜಾವೀದ್ ಮಿಲೀಷ್ಯಾಗಳಿಂದ ಉಗಮವಾದ ಈ ಗುಂಪನ್ನು 2013ರಲ್ಲಿ ಔಪಚಾರಿಕವಾಗಿ ಆರ್‌ಎಸ್‌ಎಫ್‌ ಘೋಷಿಸಲಾಯಿತು.

ಇದರ ನಾಯಕ ಮೊಹಮ್ಮದ್ ಹಮದಾನ್ ದಗಾಲೋ (ಹೆಮೆದ್ತಿ) ಚಿನ್ನದ ಗಣಿಗಳು ಮತ್ತು ಯುಎಇ ಒಡಂಬಡಿಕೆಗಳ ಮೂಲಕ ಭಾರೀ ಆರ್ಥಿಕ ಶಕ್ತಿಯನ್ನು ಸಂಗ್ರಹಿಸಿದ್ದಾನೆ. 2023ರಲ್ಲಿ ಆರಂಭವಾದ ಸೂಡಾನ್ ಆಂತರಿಕ ಯುದ್ಧದಲ್ಲಿ ಆರ್‌ಎಸ್‌ಎಫ್‌ ಮತ್ತು ಸರ್ಕಾರಿ ಸೇನೆ ನಡುವೆ ಘೋರ ಸಂಘರ್ಷ ನಡೆಯುತ್ತಿದ್ದು, ಅಕ್ಟೋಬರ್ 26,2025ರಂದು ಅಲ್‌ ಫಾಶೆರ್ ನಗರವನ್ನು ವಶಪಡಿಸಿಕೊಂಡು ದಾರ್ಫರ್‌ನ ಐದೂ ರಾಜ್ಯಗಳನ್ನು ಆರ್‌ಎಸ್‌ಎಫ್‌ ಸಂಪೂರ್ಣವಾಗಿ ತನ್ನ ನಿಯಂತ್ರಣಕ್ಕೆ ತಂದುಕೊಂಡಿದೆ.

ಆರ್‌ಎಸ್‌ಎಫ್‌ ಮೇಲೆ ಜನಾಂಗೀಯ ಶುದ್ಧೀಕರಣ, ಅತ್ಯಾಚಾರ, ನಾಗರಿಕರ ಹತ್ಯೆ, ಆಹಾರ ಸರಬರಾಜಿಗೆ ತಡೆ ಮತ್ತು ಮಾನವೀಯತೆ ವಿರೋಧಿ ಕೃತ್ಯಗಳ ಆರೋಪಗಳಿವೆ. ಇದು ಸರ್ಕಾರಿ ಸೇನೆಯ ಭಾಗವಲ್ಲದಿದ್ದರೂ, ಹಿಂದೆ ಸರ್ಕಾರದ ಪರವಾಗಿ ಕಾರ್ಯನಿರ್ವಹಿಸುತ್ತಿತ್ತು. ಈಗ ಸಂಪೂರ್ಣ ದಂಗೆಗಾರ ಶಕ್ತಿಯಾಗಿ ಪರಿಣಮಿಸಿದೆ.

ಆರ್‌ಎಸ್‌ಎಫ್‌ ಅಲ್‌-ಪಾಶೆರ್‌ ಅನ್ನು ವಶಪಡಿಸಿಕೊಂಡ ಬಳಿಕ ದಾರ್ಫರ್‌ ಪ್ರದೇಶದಲ್ಲಿ ಭಯಾನಕ ಮಾನವೀಯ ಸಂಕಷ್ಟಗಳು ಮತ್ತು ರಾಜಕೀಯ ಬದಲಾವಣೆಗಳು ಸಂಭವಿಸಿವೆ ಎಂದು ವರದಿಯಾಗಿದೆ. ಸೂಡಾನ್ ಸೇನೆಯ ನಾಯಕ ಅಬ್ದುಲ್ ಫತ್ಹ್ ಅಲ್-ಬುರ್ಹಾನ್ ಅವರು ಅಕ್ಟೋಬರ್ 27ರಂದು ಸೇನೆಯನ್ನು ‘ಸುರಕ್ಷಿತ ಸ್ಥಳಗಳಿಗೆ’ ಕರೆಸಿಕೊಂಡಿರುವುದಾಗಿ ಘೋಷಿಸಿದ್ದಾರೆ.

ಆರ್‌ಎಸ್‌ಎಫ್‌ ದೇಶವನ್ನು ವಿಭಜಿಸುವ ಆಂತಕ ಶುರುವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಅಂತಾರಾಷ್ಟ್ರೀಯ ಮಾಧ್ಯಮಗಳಲ್ಲಿ ಪ್ರಸಾರವಾದ ವಿಡಿಯೋಗಳಲ್ಲಿ ಆರ್‌ಎಸ್‌ಎಫ್‌ನವರು ಕೈಯಲ್ಲಿ ಶಸ್ತ್ರಾಸ್ತ್ರಗಳನ್ನು ಹಿಡಿದುಕೊಂಡು ಘೋಷಣೆಗಳನ್ನು ಕೂಗುವ, ನಾಗರಿಕರು ಜೀವ ಉಳಿಸಿಕೊಳ್ಳಲು ಓಡುವ ಮತ್ತು ಆರ್‌ಎಸ್‌ಎಫ್‌ನವರು ಅವರನ್ನು ಹಿಡಿದು ಬೇಕಾಬಿಟ್ಟಿ ಹತ್ಯೆ ಮಾಡಿ ಸಂಭ್ರಮಿಸಿದ ಭಯಾನಕರ ದೃಶ್ಯಗಳಿವೆ.

ಆರ್‌ಎಸ್‌ಎಫ್‌ ಅಲ್‌-ಫಾಶೆರ್‌ ಅನ್ನು ವಶಪಡಿಸಿಕೊಂಡು ದಾರ್ಫರ್ ಅನ್ನು ನಿಯಂತ್ರಣಕ್ಕೆ ಪಡೆದ ಬಳಿಕ 2,000ಕ್ಕೂ ಹೆಚ್ಚು ನಾಗರಿಕರನ್ನು (ಮಹಿಳೆಯರು ಮತ್ತು ಮಕ್ಕಳು ಸೇರಿ) ನಿರ್ದಯವಾಗಿ ಕೊಂದಿದೆ ಎಂದು ಐರೋಪಾ ಸಂಸ್ಥೆಯ ಒಂದು ವರದಿಯ ಆರೋಪಿಸಿದೆ.

ಯೇಲ್ ಹ್ಯೂಮನಿಟೇರಿಯನ್ ರಿಸರ್ಚ್ ಲ್ಯಾಬ್‌ನ ಸ್ಯಾಟೆಲೈಟ್ ಚಿತ್ರಗಳು ದಾರ್ಫರ್‌ನಲ್ಲಿ ಶವಗಳ ರಾಶಿ ಮತ್ತು ಜನರು ಜೀವ ಉಳಿಸಿಕೊಳ್ಳು ಓಡುತ್ತಿರುವುದನ್ನು ತೋರಿಸಿವೆ ಎಂದು ವರದಿಯಾಗಿದೆ.

ವಿಶ್ವ ಸಂಸ್ಥೆ (ಯುಎನ್‌) ಮತ್ತು ಆಫ್ರಿಕನ್ ಯೂನಿಯನ್ (ಎಯು) ನಾಗರಿಕರ ರಕ್ಷಣೆ ಮತ್ತು ತಕ್ಷಣದ ಶಾಂತಿ ಘೋಷಣೆಗೆ ಕರೆ ನೀಡಿವೆ. ಯುಎನ್‌ ಅಧ್ಯಕ್ಷ ಅಂಟೊನಿಯೋ ಗುಟೆರೆಸ್ ಅಲ್- ಪಾಶೆರ್ ವಶಪಡಿಸಿಕೊಂಡ ಬಳಿಕದ ಬೆಳವಣಿಗಯನ್ನು ‘ಅತ್ಯಂತ ಭೀಕರ’ ಎಂದಿದ್ದಾರೆ.

ದಾರ್ಫರ್ ಗವರ್ನರ್ ಮಿನ್ನಿ ಅರ್ಕೋ ಮಿನಾವಿ ವಿದೇಶಿ ಗೌಪ್ಯ ಸೇವೆಗಳು (ಯುಎಇ ಸೇರಿ) ಆರ್‌ಎಸ್‌ಎಫ್‌ಗೆ ಸಹಾಯ ಮಾಡಿವೆ ಎಂದು ಆರೋಪಿಸಿದ್ದಾರೆ. ಅಮೆರಿಕದ ಕಾನೂನುಸಭಾ ಸದಸ್ಯರು ಯುಎಇಯನ್ನು ಹೊಣೆ ಮಾಡಲು ಆಗ್ರಹಿಸಿದ್ದಾರೆ.

ಸುಡಾನ್‌ನ ರಾಜಕೀಯ ಮತ್ತು ಮಾನವ ಹಕ್ಕು ಸಂಘಟನೆಗಳು ಮಾನವೀಯತೆ ಮೇಲಿನ ಈ ಭೀಕರ ಹಿಂಸಾಚಾರಕ್ಕೆ ಆರ್‌ಎಸ್‌ಎಫ್‌ ಮತ್ತು ಎಸ್‌ಎಎಫ್‌ ಇಬ್ಬರನ್ನೂ ಯುದ್ಧಪರಾಧದ ಹೊಣೆ ಮಾಡುವಂತೆ ಒತ್ತಾಯಿಸಿವೆ.

ಗಾಝಾ ಮೇಲೆ ‘ಪ್ರಬಲ ದಾಳಿ’ಗೆ ನೆತನ್ಯಾಹು ಆದೇಶ : 30 ಪ್ಯಾಲೆಸ್ತೀನಿಯರನ್ನು ಹತ್ಯೆಗೈದ ಇಸ್ರೇಲ್ ಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...