Homeಅಂತರಾಷ್ಟ್ರೀಯಸುಡಾನ್‌ನ ಅಲ್‌-ಪಾಶೆರ್ ನಿಯಂತ್ರಣಕ್ಕೆ ಪಡೆದ ಅರೆಸೈನಿಕ ಪಡೆ ಆರ್‌ಎಸ್‌ಎಫ್‌ : ವ್ಯಾಪಕ ಹಿಂಸಾಚಾರದ ವರದಿ

ಸುಡಾನ್‌ನ ಅಲ್‌-ಪಾಶೆರ್ ನಿಯಂತ್ರಣಕ್ಕೆ ಪಡೆದ ಅರೆಸೈನಿಕ ಪಡೆ ಆರ್‌ಎಸ್‌ಎಫ್‌ : ವ್ಯಾಪಕ ಹಿಂಸಾಚಾರದ ವರದಿ

- Advertisement -
- Advertisement -

ಸುಡಾನ್‌ನ ಉತ್ತರ ದಾರ್ಫರ್ ರಾಜ್ಯದ ರಾಜಧಾನಿ ಅಲ್- ಫಾಶೆರ್‌ ಅನ್ನು ರ‍್ಯಾಪಿಡ್ ಸಪೋರ್ಟ್ ಫೋರ್ಸಸ್ (ಆರ್‌ಎಸ್‌ಎಫ್) ಸಂಪೂರ್ಣವಾಗಿ ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದೆ ಎಂದು ವರದಿಯಾಗಿದೆ.

ಆರ್‌ಎಸ್‌ಎಫ್ ಸೂಡಾನ್‌ನ ಒಂದು ಶಕ್ತಿಶಾಲಿ ಪ್ಯಾರಾ ಮಿಲಿಟರಿ ದಳವಾಗಿದ್ದು, ಇದು ಸಾಮಾನ್ಯ ಸೇನೆಯಾದ ಸೂಡಾನೀಸ್ ಆರ್ಮ್ಡ್ ಫೋರ್ಸಸ್ (ಎಸ್‌ಎಎಫ್‌) ಗಿಂತ ಸಂಪೂರ್ಣವಾಗಿ ಭಿನ್ನವಾಗಿ ಕಾರ್ಯನಿರ್ವಹಿಸುತ್ತದೆ.

2003ರಲ್ಲಿ ದಾರ್ಫರ್‌ನಲ್ಲಿ ನಡೆದ ಜನಾಂಗೀಯ ದಬ್ಬಾಳಿಕೆಯ ಸಮಯದಲ್ಲಿ ಸರ್ಕಾರಿ ಬೆಂಬಲಿತ ಜಂಜಾವೀದ್ ಮಿಲೀಷ್ಯಾಗಳಿಂದ ಉಗಮವಾದ ಈ ಗುಂಪನ್ನು 2013ರಲ್ಲಿ ಔಪಚಾರಿಕವಾಗಿ ಆರ್‌ಎಸ್‌ಎಫ್‌ ಘೋಷಿಸಲಾಯಿತು.

ಇದರ ನಾಯಕ ಮೊಹಮ್ಮದ್ ಹಮದಾನ್ ದಗಾಲೋ (ಹೆಮೆದ್ತಿ) ಚಿನ್ನದ ಗಣಿಗಳು ಮತ್ತು ಯುಎಇ ಒಡಂಬಡಿಕೆಗಳ ಮೂಲಕ ಭಾರೀ ಆರ್ಥಿಕ ಶಕ್ತಿಯನ್ನು ಸಂಗ್ರಹಿಸಿದ್ದಾನೆ. 2023ರಲ್ಲಿ ಆರಂಭವಾದ ಸೂಡಾನ್ ಆಂತರಿಕ ಯುದ್ಧದಲ್ಲಿ ಆರ್‌ಎಸ್‌ಎಫ್‌ ಮತ್ತು ಸರ್ಕಾರಿ ಸೇನೆ ನಡುವೆ ಘೋರ ಸಂಘರ್ಷ ನಡೆಯುತ್ತಿದ್ದು, ಅಕ್ಟೋಬರ್ 26,2025ರಂದು ಅಲ್‌ ಫಾಶೆರ್ ನಗರವನ್ನು ವಶಪಡಿಸಿಕೊಂಡು ದಾರ್ಫರ್‌ನ ಐದೂ ರಾಜ್ಯಗಳನ್ನು ಆರ್‌ಎಸ್‌ಎಫ್‌ ಸಂಪೂರ್ಣವಾಗಿ ತನ್ನ ನಿಯಂತ್ರಣಕ್ಕೆ ತಂದುಕೊಂಡಿದೆ.

ಆರ್‌ಎಸ್‌ಎಫ್‌ ಮೇಲೆ ಜನಾಂಗೀಯ ಶುದ್ಧೀಕರಣ, ಅತ್ಯಾಚಾರ, ನಾಗರಿಕರ ಹತ್ಯೆ, ಆಹಾರ ಸರಬರಾಜಿಗೆ ತಡೆ ಮತ್ತು ಮಾನವೀಯತೆ ವಿರೋಧಿ ಕೃತ್ಯಗಳ ಆರೋಪಗಳಿವೆ. ಇದು ಸರ್ಕಾರಿ ಸೇನೆಯ ಭಾಗವಲ್ಲದಿದ್ದರೂ, ಹಿಂದೆ ಸರ್ಕಾರದ ಪರವಾಗಿ ಕಾರ್ಯನಿರ್ವಹಿಸುತ್ತಿತ್ತು. ಈಗ ಸಂಪೂರ್ಣ ದಂಗೆಗಾರ ಶಕ್ತಿಯಾಗಿ ಪರಿಣಮಿಸಿದೆ.

ಆರ್‌ಎಸ್‌ಎಫ್‌ ಅಲ್‌-ಪಾಶೆರ್‌ ಅನ್ನು ವಶಪಡಿಸಿಕೊಂಡ ಬಳಿಕ ದಾರ್ಫರ್‌ ಪ್ರದೇಶದಲ್ಲಿ ಭಯಾನಕ ಮಾನವೀಯ ಸಂಕಷ್ಟಗಳು ಮತ್ತು ರಾಜಕೀಯ ಬದಲಾವಣೆಗಳು ಸಂಭವಿಸಿವೆ ಎಂದು ವರದಿಯಾಗಿದೆ. ಸೂಡಾನ್ ಸೇನೆಯ ನಾಯಕ ಅಬ್ದುಲ್ ಫತ್ಹ್ ಅಲ್-ಬುರ್ಹಾನ್ ಅವರು ಅಕ್ಟೋಬರ್ 27ರಂದು ಸೇನೆಯನ್ನು ‘ಸುರಕ್ಷಿತ ಸ್ಥಳಗಳಿಗೆ’ ಕರೆಸಿಕೊಂಡಿರುವುದಾಗಿ ಘೋಷಿಸಿದ್ದಾರೆ.

ಆರ್‌ಎಸ್‌ಎಫ್‌ ದೇಶವನ್ನು ವಿಭಜಿಸುವ ಆಂತಕ ಶುರುವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಅಂತಾರಾಷ್ಟ್ರೀಯ ಮಾಧ್ಯಮಗಳಲ್ಲಿ ಪ್ರಸಾರವಾದ ವಿಡಿಯೋಗಳಲ್ಲಿ ಆರ್‌ಎಸ್‌ಎಫ್‌ನವರು ಕೈಯಲ್ಲಿ ಶಸ್ತ್ರಾಸ್ತ್ರಗಳನ್ನು ಹಿಡಿದುಕೊಂಡು ಘೋಷಣೆಗಳನ್ನು ಕೂಗುವ, ನಾಗರಿಕರು ಜೀವ ಉಳಿಸಿಕೊಳ್ಳಲು ಓಡುವ ಮತ್ತು ಆರ್‌ಎಸ್‌ಎಫ್‌ನವರು ಅವರನ್ನು ಹಿಡಿದು ಬೇಕಾಬಿಟ್ಟಿ ಹತ್ಯೆ ಮಾಡಿ ಸಂಭ್ರಮಿಸಿದ ಭಯಾನಕರ ದೃಶ್ಯಗಳಿವೆ.

ಆರ್‌ಎಸ್‌ಎಫ್‌ ಅಲ್‌-ಫಾಶೆರ್‌ ಅನ್ನು ವಶಪಡಿಸಿಕೊಂಡು ದಾರ್ಫರ್ ಅನ್ನು ನಿಯಂತ್ರಣಕ್ಕೆ ಪಡೆದ ಬಳಿಕ 2,000ಕ್ಕೂ ಹೆಚ್ಚು ನಾಗರಿಕರನ್ನು (ಮಹಿಳೆಯರು ಮತ್ತು ಮಕ್ಕಳು ಸೇರಿ) ನಿರ್ದಯವಾಗಿ ಕೊಂದಿದೆ ಎಂದು ಐರೋಪಾ ಸಂಸ್ಥೆಯ ಒಂದು ವರದಿಯ ಆರೋಪಿಸಿದೆ.

ಯೇಲ್ ಹ್ಯೂಮನಿಟೇರಿಯನ್ ರಿಸರ್ಚ್ ಲ್ಯಾಬ್‌ನ ಸ್ಯಾಟೆಲೈಟ್ ಚಿತ್ರಗಳು ದಾರ್ಫರ್‌ನಲ್ಲಿ ಶವಗಳ ರಾಶಿ ಮತ್ತು ಜನರು ಜೀವ ಉಳಿಸಿಕೊಳ್ಳು ಓಡುತ್ತಿರುವುದನ್ನು ತೋರಿಸಿವೆ ಎಂದು ವರದಿಯಾಗಿದೆ.

ವಿಶ್ವ ಸಂಸ್ಥೆ (ಯುಎನ್‌) ಮತ್ತು ಆಫ್ರಿಕನ್ ಯೂನಿಯನ್ (ಎಯು) ನಾಗರಿಕರ ರಕ್ಷಣೆ ಮತ್ತು ತಕ್ಷಣದ ಶಾಂತಿ ಘೋಷಣೆಗೆ ಕರೆ ನೀಡಿವೆ. ಯುಎನ್‌ ಅಧ್ಯಕ್ಷ ಅಂಟೊನಿಯೋ ಗುಟೆರೆಸ್ ಅಲ್- ಪಾಶೆರ್ ವಶಪಡಿಸಿಕೊಂಡ ಬಳಿಕದ ಬೆಳವಣಿಗಯನ್ನು ‘ಅತ್ಯಂತ ಭೀಕರ’ ಎಂದಿದ್ದಾರೆ.

ದಾರ್ಫರ್ ಗವರ್ನರ್ ಮಿನ್ನಿ ಅರ್ಕೋ ಮಿನಾವಿ ವಿದೇಶಿ ಗೌಪ್ಯ ಸೇವೆಗಳು (ಯುಎಇ ಸೇರಿ) ಆರ್‌ಎಸ್‌ಎಫ್‌ಗೆ ಸಹಾಯ ಮಾಡಿವೆ ಎಂದು ಆರೋಪಿಸಿದ್ದಾರೆ. ಅಮೆರಿಕದ ಕಾನೂನುಸಭಾ ಸದಸ್ಯರು ಯುಎಇಯನ್ನು ಹೊಣೆ ಮಾಡಲು ಆಗ್ರಹಿಸಿದ್ದಾರೆ.

ಸುಡಾನ್‌ನ ರಾಜಕೀಯ ಮತ್ತು ಮಾನವ ಹಕ್ಕು ಸಂಘಟನೆಗಳು ಮಾನವೀಯತೆ ಮೇಲಿನ ಈ ಭೀಕರ ಹಿಂಸಾಚಾರಕ್ಕೆ ಆರ್‌ಎಸ್‌ಎಫ್‌ ಮತ್ತು ಎಸ್‌ಎಎಫ್‌ ಇಬ್ಬರನ್ನೂ ಯುದ್ಧಪರಾಧದ ಹೊಣೆ ಮಾಡುವಂತೆ ಒತ್ತಾಯಿಸಿವೆ.

ಗಾಝಾ ಮೇಲೆ ‘ಪ್ರಬಲ ದಾಳಿ’ಗೆ ನೆತನ್ಯಾಹು ಆದೇಶ : 30 ಪ್ಯಾಲೆಸ್ತೀನಿಯರನ್ನು ಹತ್ಯೆಗೈದ ಇಸ್ರೇಲ್ ಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...