Homeಕರ್ನಾಟಕಪರಶುರಾಮ ಪ್ರತಿಮೆ | ಕಂಚಿಗೆ ಬದಲಾಗಿ ಹಿತ್ತಾಳೆ, ತಾಮ್ರ ಬಳಕೆ : ಜನರ ಹಣ ಲೂಟಿ...

ಪರಶುರಾಮ ಪ್ರತಿಮೆ | ಕಂಚಿಗೆ ಬದಲಾಗಿ ಹಿತ್ತಾಳೆ, ತಾಮ್ರ ಬಳಕೆ : ಜನರ ಹಣ ಲೂಟಿ ಹೊಡೆಯಲಾಗಿದೆ ಎಂದ ಹೈಕೋರ್ಟ್‌

- Advertisement -
- Advertisement -

ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಹಿಂದಿನ ಬಿಜೆಪಿ ಸರ್ಕಾರದ ಆಡಳಿತದಲ್ಲಿ ಕಂಚಿನ ಪರಶುರಾಮ ಪ್ರತಿಮೆಗೆ ಬದಲಾಗಿ ಹಿತ್ತಾಳೆ, ತಾಮ್ರ ಮತ್ತು ಸತು ಬಳಸಿ ಕಳಪೆ ಕಾಮಗಾರಿ ನಡೆಸಲಾಗಿದೆ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಕರ್ನಾಟಕ ಹೈಕೋರ್ಟ್‌, ಜನರ ಹಣವನ್ನು ಲೂಟಿ ಮಾಡಲಾಗಿದೆ ಎಂದು ಕಿಡಿಕಾರಿದೆ.

ಬೆಂಗಳೂರಿನ ಸರ್. ಎಂ ವಿಶ್ವೇಶ್ವರಯ್ಯ ಬಡಾವಣೆ ನಿವಾಸಿಯಾಗಿರುವ ಕಲಾವಿದ ಕೃಷ್ಣ ನಾಯಕ್‌ ಅವರು ತಮ್ಮ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಆದೇಶ ಕಾಯ್ದಿರಿಸಿದೆ.

ಕಳಪೆ ಕಾಮಗಾರಿ ನಡೆಸಲಾಗಿದೆ ಎಂದು ಖಚಿತಪಡಿಸಿರು ಪೀಠ, “ನಿಮಗೆ ಕೊಟ್ಟಿರುವುದು ನಿರ್ಮಿತಿ ಕೇಂದ್ರ ಅಥವಾ ದೂರುದಾರರಿಗೆ ಸೇರಿದ ದುಡ್ಡಲ್ಲ, ಅದು ಜನರ ದುಡ್ಡು. ನೀವು ಜನರ ಹಣದಲ್ಲಿ ಆಟವಾಡಲಾಗದು” ಎಂದು ಖಾರವಾಗಿ ನುಡಿದಿರುವುದಾಗಿ ಬಾರ್ & ಬೆಂಚ್ ವರದಿ ಮಾಡಿದೆ.

“ಪ್ರತಿಮೆಗೆ ಕಂಚು ಬಳಸುವ ಬದಲು ಹಿತ್ತಾಳೆ ಮತ್ತು ಸತುವನ್ನೇಕೆ ಬಳಸಲಾಗಿದೆ? ಪ್ರತಿಮೆ ಹೆಸರಿನಲ್ಲಿ ಕಳಪೆ ಕಾಮಗಾರಿ ನಡೆಸಿ ಸಾರ್ವಜನಿಕರ ಹಣವನ್ನು ಲೂಟಿ ಮಾಡಲಾಗಿದೆ. 1.83 ಕೋಟಿ ರೂಪಾಯಿ ಪೈಕಿ ಈಗಾಗಲೇ ನಿಮಗೆ 1.20 ಕೋಟಿ ರೂಪಾಯಿ ಪಾವತಿಯಾಗಿದೆ. ಇದು ಸಾರ್ವಜನಿಕರ ಹಣ. ಎಲ್ಲವೂ ದಾಖಲೆಯಲ್ಲಿರುವುದರಿಂದ ಯಾವುದೇ ಸೂಚನೆ ಪಡೆಯುವ ಅಗತ್ಯವೇ ಇಲ್ಲ. ಜನರ ಹಣದ ಜೊತೆ ಆಟ ಆಡುವವರನ್ನು ಬಿಡಲಾಗದು. ಪುಣ್ಯಕ್ಕೆ ಪ್ರತಿಮೆ ಮಾರನೇಯ ದಿನ ಕುಸಿದಿಲ್ಲ. ಅದು ಬೀಳುವ ಮುಂಚೆಯೇ ತೆರವು ಮಾಡಲಾಗಿದೆ” ಎಂದು ನ್ಯಾಯಮೂರ್ತಿ ನಾಗಪ್ರಸನ್ನ ಅವರು ಅರ್ಜಿದಾರರ ವಿರುದ್ಧ ಮೌಖಿಕವಾಗಿ ಕಿಡಿಕಾರಿದ್ದಾರೆ

“35 ಅಡಿ ಎತ್ತರದ ಪ್ರತಿಮೆಯ ಭಾರವನ್ನು ಹಿತ್ತಾಳೆ ಮತ್ತು ಸತು ತಾಳುತ್ತದೆಯೇ? ಪ್ರತಿಮೆಗೆ ಕಂಚನ್ನೇ ಬಳಸಬೇಕು ಎಂದು ಹೇಳಿರುವುದಕ್ಕೆ ನಿಖರ ಕಾರಣವಿದೆ. ಹಿತ್ತಾಳೆ ಮತ್ತು ಸತು ಬಳಸಿ ಪ್ರತಿಮೆ ನಿರ್ಮಿಸಲು 1.20 ಕೋಟಿ ರೂಪಾಯಿ ಏಕೆ ಪಡೆದಿರಿ? ಕಂಚು ಬಳಕೆ ಮಾಡದಿರುವುದು ಕ್ರಿಮಿನಲ್‌ ಅಪರಾಧ. ನಿರ್ಮಿತಿ ಕೇಂದ್ರದ ಬಗ್ಗೆ ಚೆನ್ನಾಗಿ ತಿಳಿದಿದೆ. ಅದರ ಬಗ್ಗೆ ಕಡಿಮೆ ಮಾತನಾಡಿದಷ್ಟು ಒಳ್ಳೆಯದು” ಎಂದು ಹೈಕೋರ್ಟ್ ಚಾಟಿ ಬೀಸಿದೆ.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಎಂ ಅರುಣ್‌ ಶ್ಯಾಮ್‌ “ಪರಶುರಾಮ ಪ್ರತಿಮೆ ತಲೆಯ ಭಾಗ ಭಾರ ತಾಳಲಾರದ್ದರಿಂದ ಅದರ ಜೋಡಣೆ ಬದಲಿಸಲಾಗಿದೆ. ಕಂಚಿನಲ್ಲಿ ಪ್ರತಿಮೆ ನಿರ್ಮಿಸಬೇಕು ಎಂದು ಹೇಳಿದ್ದು, ನಾವು ತಾಮ್ರ, ಸತು ಮತ್ತು ಹಿತ್ತಾಳೆಯನ್ನು ಬಳಕೆ ಮಾಡಿದ್ದೇವೆ. ಸತು ಮತ್ತು ಹಿತ್ತಾಳೆಯು ಕಂಚಿಗೆ ಸಮನಾಗುತ್ತದೆ” ಎಂದು ಸಮಜಾಯಿಷಿ ನೀಡಿದ್ದಾರೆ.

“ಕೆಲಸದ ಭಾಗವಾಗಿ 1.20 ಕೋಟಿ ರೂಪಾಯಿ ಸ್ವೀಕರಿಸಿದ್ದೇವೆ. ನಮ್ಮ ಕೆಲಸವನ್ನು ಪೂರ್ಣಗೊಳಿಸುತ್ತೇವೆ. ಆಮೇಲೆ ಅದನ್ನು ಪರಿಶೀಲಿಸಬಹುದು. ಪರಶುರಾಮ ಥೀಮ್‌ ಪಾರ್ಕ್‌ನಲ್ಲಿ ಪರಶುರಾಮ ಪ್ರತಿಮೆ ನಿರ್ಮಾಣವೂ ಒಂದಾಗಿತ್ತು. ಉದ್ಘಾಟನೆಯ ಹಿನ್ನೆಲೆಯಲ್ಲಿ ಬೇಗ ಮಾಡಿ ಮುಗಿಸಲಾಗಿತ್ತು. ಆನಂತರ ಜಿಲ್ಲಾಧಿಕಾರಿಯು ಅದನ್ನು ಪುನರ್‌ ನಿರ್ಮಾಣ ಮಾಡುವಂತೆ ಸೂಚಿಸಿದ್ದಾರೆ. ಈಗ ಸರ್ಕಾರ ಇಡೀ ಪ್ರಕರಣವನ್ನು ತನಿಖೆಗೆ ಒಪ್ಪಿಸಿದ್ದರಿಂದ ಅಲ್ಲಿಗೆ ತೆರಳಿ ಕೆಲಸ ಮಾಡಲಾಗುತ್ತಿಲ್ಲ. ಅವಕಾಶ ನೀಡಿದರೆ ಕಂಚಿನಲ್ಲೇ ಕಾಲಮಿತಿಯಲ್ಲಿ ಕೆಲಸ ಪೂರ್ಣಗೊಳಿಸಲಾಗುವುದು” ಎಂದಿದ್ದಾರೆ.

“ದೂರುದಾರರು ರಾಜಕೀಯ ಪಕ್ಷದ ಪ್ರತಿನಿಧಿ. ಅವರು, ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸದೇ ಹೈಕೋರ್ಟ್‌ನ ವಿಭಾಗೀಯ ಪೀಠವು ವಜಾ ಮಾಡಿದೆ. ಹಿಂದಿನ ಸರ್ಕಾರ ಮತ್ತು ಮಾಜಿ ಸಚಿವರ ವರ್ಚಸ್ಸು ಹಾಳು ಮಾಡುವ ಉದ್ದೇಶದಿಂದ ಈ ಕೆಲಸ ಮಾಡಲಾಗುತ್ತಿದೆ. ದೂರುದಾರರು ಕಾರ್ಕಳ ಶಾಸಕ ಸುನಿಲ್‌ ಕುಮಾರ್‌ ವಿರುದ್ಧ ಚುನಾವಣೆಯಲ್ಲಿ ಸೋಲನುಭವಿಸಿದ್ದಾರೆ. ಹಾಗಾಗಿ, ಈ ರೀತಿ ಮಾಡುತ್ತಿದ್ದಾರೆ” ಎಂದು ಹೇಳಿದ್ದಾರೆ.

ಇದಕ್ಕೂ ಮುನ್ನ, ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕ ಬಿ ಎನ್‌ ಜಗದೀಶ್‌ ಅವರು “ಸುರತ್ಕಲ್‌ನಲ್ಲಿರುವ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ (ಎನ್‌ಐಟಿ) ನೀಡಿರುವ ವರದಿಯ ಪ್ರಕಾರ ಅರ್ಜಿದಾರರು ಪರಶುರಾಮ ಪ್ರತಿಮೆಗೆ ಕಂಚು ಬಳಸಿಲ್ಲ. ಶೇ. 80ರಷ್ಟು ಹಿತ್ತಾಳೆ ಮತ್ತು ಶೇ.20ರಷ್ಟು ಸತು ಬಳಕೆ ಮಾಡಿದ್ದಾರೆ ಎಂದು ವರದಿ ನೀಡಿದೆ. ಆದರೆ, ನಿರ್ಮಿತಿ ಕೇಂದ್ರ ಮತ್ತು ಅರ್ಜಿದಾರರು ಕಂಚು ಬಳಕೆ ಮಾಡಿದೆ ಎಂದು ಹೇಳಿದೆ. ನಿರ್ಮಿತಿ ಕೇಂದ್ರ ಹೇಳುತ್ತಿರುವುದನ್ನು ನೋಡಿದರೆ ಇನ್ನಷ್ಟು ತನಿಖೆಯಾಗಬೇಕಿದೆ. ಜಿಲ್ಲಾಧಿಕಾರಿ ಪ್ರತಿಮೆ ತೆರವು ಮಾಡಿ ಎಂದು ಆದೇಶ ಮಾಡಿದ್ದಾರೆ. ಈ ಆದೇಶವನ್ನು ನಿರ್ಮಿತಿ ಕೇಂದ್ರವು ನ್ಯಾಯಾಲಯಕ್ಕೆ ಸಲ್ಲಿಸಿಲ್ಲ. ತನಿಖೆ ಪ್ರಗತಿಯಲ್ಲಿರುವುದರಿಂದ ತೆರವು ಮಾಡುವಂತೆ ಆದೇಶಿಸಿದ್ದನ್ನು ತಡೆಯಿರಿ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ. ತನಿಖೆ ನಡೆಯಲಿ, ಅರ್ಜಿದಾರರಿಗೂ ಹಣ ತಲುಪಿದೆಯೋ ಗೊತ್ತಿಲ್ಲ. ಅವರ ಪಾತ್ರವೂ ಬಹಿರಂಗವಾಗಬೇಕಿದೆ. ಇದರಲ್ಲಿ ನಿಜವಾದ ಅಪರಾಧಿ ಯಾರು ಎಂಬುವುದು ತಿಳಿಯಬೇಕಿದೆ” ಎಂದಿದ್ದಾರೆ.

ಇದನ್ನೂ ಓದಿ : ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ : ‘ಕರಾಳ ದಿನ’ ಆಚರಣೆಗೆ ಕರವೇ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...