Homeಕರ್ನಾಟಕಪರಶುರಾಮ ಪ್ರತಿಮೆ | ಕಂಚಿಗೆ ಬದಲಾಗಿ ಹಿತ್ತಾಳೆ, ತಾಮ್ರ ಬಳಕೆ : ಜನರ ಹಣ ಲೂಟಿ...

ಪರಶುರಾಮ ಪ್ರತಿಮೆ | ಕಂಚಿಗೆ ಬದಲಾಗಿ ಹಿತ್ತಾಳೆ, ತಾಮ್ರ ಬಳಕೆ : ಜನರ ಹಣ ಲೂಟಿ ಹೊಡೆಯಲಾಗಿದೆ ಎಂದ ಹೈಕೋರ್ಟ್‌

- Advertisement -
- Advertisement -

ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಹಿಂದಿನ ಬಿಜೆಪಿ ಸರ್ಕಾರದ ಆಡಳಿತದಲ್ಲಿ ಕಂಚಿನ ಪರಶುರಾಮ ಪ್ರತಿಮೆಗೆ ಬದಲಾಗಿ ಹಿತ್ತಾಳೆ, ತಾಮ್ರ ಮತ್ತು ಸತು ಬಳಸಿ ಕಳಪೆ ಕಾಮಗಾರಿ ನಡೆಸಲಾಗಿದೆ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಕರ್ನಾಟಕ ಹೈಕೋರ್ಟ್‌, ಜನರ ಹಣವನ್ನು ಲೂಟಿ ಮಾಡಲಾಗಿದೆ ಎಂದು ಕಿಡಿಕಾರಿದೆ.

ಬೆಂಗಳೂರಿನ ಸರ್. ಎಂ ವಿಶ್ವೇಶ್ವರಯ್ಯ ಬಡಾವಣೆ ನಿವಾಸಿಯಾಗಿರುವ ಕಲಾವಿದ ಕೃಷ್ಣ ನಾಯಕ್‌ ಅವರು ತಮ್ಮ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಆದೇಶ ಕಾಯ್ದಿರಿಸಿದೆ.

ಕಳಪೆ ಕಾಮಗಾರಿ ನಡೆಸಲಾಗಿದೆ ಎಂದು ಖಚಿತಪಡಿಸಿರು ಪೀಠ, “ನಿಮಗೆ ಕೊಟ್ಟಿರುವುದು ನಿರ್ಮಿತಿ ಕೇಂದ್ರ ಅಥವಾ ದೂರುದಾರರಿಗೆ ಸೇರಿದ ದುಡ್ಡಲ್ಲ, ಅದು ಜನರ ದುಡ್ಡು. ನೀವು ಜನರ ಹಣದಲ್ಲಿ ಆಟವಾಡಲಾಗದು” ಎಂದು ಖಾರವಾಗಿ ನುಡಿದಿರುವುದಾಗಿ ಬಾರ್ & ಬೆಂಚ್ ವರದಿ ಮಾಡಿದೆ.

“ಪ್ರತಿಮೆಗೆ ಕಂಚು ಬಳಸುವ ಬದಲು ಹಿತ್ತಾಳೆ ಮತ್ತು ಸತುವನ್ನೇಕೆ ಬಳಸಲಾಗಿದೆ? ಪ್ರತಿಮೆ ಹೆಸರಿನಲ್ಲಿ ಕಳಪೆ ಕಾಮಗಾರಿ ನಡೆಸಿ ಸಾರ್ವಜನಿಕರ ಹಣವನ್ನು ಲೂಟಿ ಮಾಡಲಾಗಿದೆ. 1.83 ಕೋಟಿ ರೂಪಾಯಿ ಪೈಕಿ ಈಗಾಗಲೇ ನಿಮಗೆ 1.20 ಕೋಟಿ ರೂಪಾಯಿ ಪಾವತಿಯಾಗಿದೆ. ಇದು ಸಾರ್ವಜನಿಕರ ಹಣ. ಎಲ್ಲವೂ ದಾಖಲೆಯಲ್ಲಿರುವುದರಿಂದ ಯಾವುದೇ ಸೂಚನೆ ಪಡೆಯುವ ಅಗತ್ಯವೇ ಇಲ್ಲ. ಜನರ ಹಣದ ಜೊತೆ ಆಟ ಆಡುವವರನ್ನು ಬಿಡಲಾಗದು. ಪುಣ್ಯಕ್ಕೆ ಪ್ರತಿಮೆ ಮಾರನೇಯ ದಿನ ಕುಸಿದಿಲ್ಲ. ಅದು ಬೀಳುವ ಮುಂಚೆಯೇ ತೆರವು ಮಾಡಲಾಗಿದೆ” ಎಂದು ನ್ಯಾಯಮೂರ್ತಿ ನಾಗಪ್ರಸನ್ನ ಅವರು ಅರ್ಜಿದಾರರ ವಿರುದ್ಧ ಮೌಖಿಕವಾಗಿ ಕಿಡಿಕಾರಿದ್ದಾರೆ

“35 ಅಡಿ ಎತ್ತರದ ಪ್ರತಿಮೆಯ ಭಾರವನ್ನು ಹಿತ್ತಾಳೆ ಮತ್ತು ಸತು ತಾಳುತ್ತದೆಯೇ? ಪ್ರತಿಮೆಗೆ ಕಂಚನ್ನೇ ಬಳಸಬೇಕು ಎಂದು ಹೇಳಿರುವುದಕ್ಕೆ ನಿಖರ ಕಾರಣವಿದೆ. ಹಿತ್ತಾಳೆ ಮತ್ತು ಸತು ಬಳಸಿ ಪ್ರತಿಮೆ ನಿರ್ಮಿಸಲು 1.20 ಕೋಟಿ ರೂಪಾಯಿ ಏಕೆ ಪಡೆದಿರಿ? ಕಂಚು ಬಳಕೆ ಮಾಡದಿರುವುದು ಕ್ರಿಮಿನಲ್‌ ಅಪರಾಧ. ನಿರ್ಮಿತಿ ಕೇಂದ್ರದ ಬಗ್ಗೆ ಚೆನ್ನಾಗಿ ತಿಳಿದಿದೆ. ಅದರ ಬಗ್ಗೆ ಕಡಿಮೆ ಮಾತನಾಡಿದಷ್ಟು ಒಳ್ಳೆಯದು” ಎಂದು ಹೈಕೋರ್ಟ್ ಚಾಟಿ ಬೀಸಿದೆ.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಎಂ ಅರುಣ್‌ ಶ್ಯಾಮ್‌ “ಪರಶುರಾಮ ಪ್ರತಿಮೆ ತಲೆಯ ಭಾಗ ಭಾರ ತಾಳಲಾರದ್ದರಿಂದ ಅದರ ಜೋಡಣೆ ಬದಲಿಸಲಾಗಿದೆ. ಕಂಚಿನಲ್ಲಿ ಪ್ರತಿಮೆ ನಿರ್ಮಿಸಬೇಕು ಎಂದು ಹೇಳಿದ್ದು, ನಾವು ತಾಮ್ರ, ಸತು ಮತ್ತು ಹಿತ್ತಾಳೆಯನ್ನು ಬಳಕೆ ಮಾಡಿದ್ದೇವೆ. ಸತು ಮತ್ತು ಹಿತ್ತಾಳೆಯು ಕಂಚಿಗೆ ಸಮನಾಗುತ್ತದೆ” ಎಂದು ಸಮಜಾಯಿಷಿ ನೀಡಿದ್ದಾರೆ.

“ಕೆಲಸದ ಭಾಗವಾಗಿ 1.20 ಕೋಟಿ ರೂಪಾಯಿ ಸ್ವೀಕರಿಸಿದ್ದೇವೆ. ನಮ್ಮ ಕೆಲಸವನ್ನು ಪೂರ್ಣಗೊಳಿಸುತ್ತೇವೆ. ಆಮೇಲೆ ಅದನ್ನು ಪರಿಶೀಲಿಸಬಹುದು. ಪರಶುರಾಮ ಥೀಮ್‌ ಪಾರ್ಕ್‌ನಲ್ಲಿ ಪರಶುರಾಮ ಪ್ರತಿಮೆ ನಿರ್ಮಾಣವೂ ಒಂದಾಗಿತ್ತು. ಉದ್ಘಾಟನೆಯ ಹಿನ್ನೆಲೆಯಲ್ಲಿ ಬೇಗ ಮಾಡಿ ಮುಗಿಸಲಾಗಿತ್ತು. ಆನಂತರ ಜಿಲ್ಲಾಧಿಕಾರಿಯು ಅದನ್ನು ಪುನರ್‌ ನಿರ್ಮಾಣ ಮಾಡುವಂತೆ ಸೂಚಿಸಿದ್ದಾರೆ. ಈಗ ಸರ್ಕಾರ ಇಡೀ ಪ್ರಕರಣವನ್ನು ತನಿಖೆಗೆ ಒಪ್ಪಿಸಿದ್ದರಿಂದ ಅಲ್ಲಿಗೆ ತೆರಳಿ ಕೆಲಸ ಮಾಡಲಾಗುತ್ತಿಲ್ಲ. ಅವಕಾಶ ನೀಡಿದರೆ ಕಂಚಿನಲ್ಲೇ ಕಾಲಮಿತಿಯಲ್ಲಿ ಕೆಲಸ ಪೂರ್ಣಗೊಳಿಸಲಾಗುವುದು” ಎಂದಿದ್ದಾರೆ.

“ದೂರುದಾರರು ರಾಜಕೀಯ ಪಕ್ಷದ ಪ್ರತಿನಿಧಿ. ಅವರು, ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸದೇ ಹೈಕೋರ್ಟ್‌ನ ವಿಭಾಗೀಯ ಪೀಠವು ವಜಾ ಮಾಡಿದೆ. ಹಿಂದಿನ ಸರ್ಕಾರ ಮತ್ತು ಮಾಜಿ ಸಚಿವರ ವರ್ಚಸ್ಸು ಹಾಳು ಮಾಡುವ ಉದ್ದೇಶದಿಂದ ಈ ಕೆಲಸ ಮಾಡಲಾಗುತ್ತಿದೆ. ದೂರುದಾರರು ಕಾರ್ಕಳ ಶಾಸಕ ಸುನಿಲ್‌ ಕುಮಾರ್‌ ವಿರುದ್ಧ ಚುನಾವಣೆಯಲ್ಲಿ ಸೋಲನುಭವಿಸಿದ್ದಾರೆ. ಹಾಗಾಗಿ, ಈ ರೀತಿ ಮಾಡುತ್ತಿದ್ದಾರೆ” ಎಂದು ಹೇಳಿದ್ದಾರೆ.

ಇದಕ್ಕೂ ಮುನ್ನ, ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕ ಬಿ ಎನ್‌ ಜಗದೀಶ್‌ ಅವರು “ಸುರತ್ಕಲ್‌ನಲ್ಲಿರುವ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ (ಎನ್‌ಐಟಿ) ನೀಡಿರುವ ವರದಿಯ ಪ್ರಕಾರ ಅರ್ಜಿದಾರರು ಪರಶುರಾಮ ಪ್ರತಿಮೆಗೆ ಕಂಚು ಬಳಸಿಲ್ಲ. ಶೇ. 80ರಷ್ಟು ಹಿತ್ತಾಳೆ ಮತ್ತು ಶೇ.20ರಷ್ಟು ಸತು ಬಳಕೆ ಮಾಡಿದ್ದಾರೆ ಎಂದು ವರದಿ ನೀಡಿದೆ. ಆದರೆ, ನಿರ್ಮಿತಿ ಕೇಂದ್ರ ಮತ್ತು ಅರ್ಜಿದಾರರು ಕಂಚು ಬಳಕೆ ಮಾಡಿದೆ ಎಂದು ಹೇಳಿದೆ. ನಿರ್ಮಿತಿ ಕೇಂದ್ರ ಹೇಳುತ್ತಿರುವುದನ್ನು ನೋಡಿದರೆ ಇನ್ನಷ್ಟು ತನಿಖೆಯಾಗಬೇಕಿದೆ. ಜಿಲ್ಲಾಧಿಕಾರಿ ಪ್ರತಿಮೆ ತೆರವು ಮಾಡಿ ಎಂದು ಆದೇಶ ಮಾಡಿದ್ದಾರೆ. ಈ ಆದೇಶವನ್ನು ನಿರ್ಮಿತಿ ಕೇಂದ್ರವು ನ್ಯಾಯಾಲಯಕ್ಕೆ ಸಲ್ಲಿಸಿಲ್ಲ. ತನಿಖೆ ಪ್ರಗತಿಯಲ್ಲಿರುವುದರಿಂದ ತೆರವು ಮಾಡುವಂತೆ ಆದೇಶಿಸಿದ್ದನ್ನು ತಡೆಯಿರಿ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ. ತನಿಖೆ ನಡೆಯಲಿ, ಅರ್ಜಿದಾರರಿಗೂ ಹಣ ತಲುಪಿದೆಯೋ ಗೊತ್ತಿಲ್ಲ. ಅವರ ಪಾತ್ರವೂ ಬಹಿರಂಗವಾಗಬೇಕಿದೆ. ಇದರಲ್ಲಿ ನಿಜವಾದ ಅಪರಾಧಿ ಯಾರು ಎಂಬುವುದು ತಿಳಿಯಬೇಕಿದೆ” ಎಂದಿದ್ದಾರೆ.

ಇದನ್ನೂ ಓದಿ : ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ : ‘ಕರಾಳ ದಿನ’ ಆಚರಣೆಗೆ ಕರವೇ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...